5 ರಾಜ್ಯಗಳ ಚುನಾವಣೆ: ಎಲ್ಲಿ ಯಾರ ಸರಕಾರ, ಖ್ಯಾತ ಜ್ಯೋತಿಷಿಯ ಭವಿಷ್ಯ
ಐದು ರಾಜ್ಯಗಳ ಮತದಾನ ಮುಗಿದಿದ್ದು, ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ (ಮೇ 2) ಸಂಜೆಯ ಹೊತ್ತಿಗೆ ಎಲ್ಲಿ ಯಾವ ಪಕ್ಷ ಅಧಿಕಾರಕ್ಕೇರಲಿದೆ ಎನ್ನುವುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲು ಮದ್ರಾಸ್ ಹೈಕೋರ್ಟ್ ಸೂಚಿಸಿರುವುದರಿಂದ, ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಹಲವು ಷರತ್ತನ್ನು ವಿಧಿಸಿದೆ. ವಿಜಯೋತ್ಸವ ಮಾಡ ಕೂಡದು ಎಂದು ಹೇಳಿದೆ.
ಮತಗಟ್ಟೆ ಸಮೀಕ್ಷೆಯಲ್ಲಿ ತಮಿಳುನಾಡಿನಲ್ಲಿ ಡಿಎಂಕೆ, ಪುದುಚೇರಿಯಲ್ಲಿ ಬಿಜೆಪಿ, ಕೇರಳದಲ್ಲಿ ಎಲ್ಡಿಎಫ್, ಅಸ್ಸಾಂನಲ್ಲಿ ಬಿಜೆಪಿ ಮತ್ತು ಪಶ್ಚಿಮ ಬಂಗಾಳದಲ್ಲಿ ಬಹುತೇಕ ಟಿಎಂಸಿ ಗೆಲುವು ಸಾಧಿಸಲಿದೆ ಎನ್ನುವ ಫಲಿತಾಂಶ ಹೊರಬಿದ್ದಿದೆ.
ಉತ್ತರ ಭಾರತ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಐದು ರಾಜ್ಯಗಳ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಗೆಲುವು ಸಿಗಬಹುದು ಎನ್ನುವುದರ ಬಗ್ಗೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಭವಿಷ್ಯ ನುಡಿದಿದ್ದಾರೆ. ಕೋವಿಡ್ ವಿಚಾರದಲ್ಲಿ ಇವರ ಭವಿಷ್ಯ ನಿಜವಾದ ಉದಾಹರಣೆಗಳಿವೆ:

140-160 ಸೀಟ್ ಅನ್ನು ಬಿಜೆಪಿ ಗೆಲ್ಲಲಿದೆ. ಈ ಮಾತನ್ನು ಮತ್ತೆ ಪುನರುಚ್ಚಿಸುತ್ತೇನೆ
ಪಶ್ಚಿಮ ಬಂಗಾಳದ ಎಕ್ಸಿಟ್ ಪೋಲ್ ಯಾವುದೇ ರೀತಿ ಇರಲಿ, ಅಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಯ ಸರಕಾರ. 140-160 ಸೀಟ್ ಅನ್ನು ಬಿಜೆಪಿ ಗೆಲ್ಲಲಿದೆ. ಈ ಮಾತನ್ನು ಮತ್ತೆಮತ್ತೆ ನಾನು ಪುನರುಚ್ಚಿಸುತ್ತೇನೆ. ನಂದಿಗ್ರಾಮದಲ್ಲಿ ಒಂದು ವೇಳೆ ಮಮತಾ ಬ್ಯಾನರ್ಜಿ ಸೋತರೆ, ಟಿಎಂಸಿ ಐವತ್ತರಿಂದ ಅರವತ್ತು ಸ್ಥಾನಕ್ಕೆ ಸೀಮಿತವಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದಾರೆ.

ನನ್ನ ಭವಿಷ್ಯ ಸತ್ಯವಾಗಲಿ, ಸುಳ್ಳಾಗಲಿ, ಪಲಾಯನ ಮಾಡುವುದಿಲ್ಲ
"ಪಶ್ಚಿಮ ಬಂಗಾಳಕ್ಕೆ ಹಲವು ಬಾರಿ ಭೇಟಿ ನೀಡಿದ್ದೇನೆ, ಅಲ್ಲಿನ ಜನರು ಮಮತಾ ಸರಕಾರದ ವಿರುದ್ದ ಆಕ್ರೋಶವನ್ನು ಹೊಂದಿದ್ದಾರೆ. ಮೇ ಎರಡರಂದು ಮತ್ತೆ ನಾನು ನಿಮ್ಮ ಮುಂದೆ ಬರುತ್ತೇನೆ. ನನ್ನ ಭವಿಷ್ಯ ಸತ್ಯವಾಗಲಿ, ಸುಳ್ಳಾಗಲಿ, ಪಲಾಯನ ಮಾಡುವುದಿಲ್ಲ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ" ಎಂದು ಕೆ.ಎಂ.ಸಿನ್ಹಾ ಹೇಳಿದ್ದಾರೆ. (ಚಿತ್ರದಲ್ಲಿ : ಕೆ.ಎಂ.ಸಿನ್ಹಾ)

ಕೇರಳದಲ್ಲಿ ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಮತ್ತೆ ಗೆಲುವು
ಇನ್ನು ಕೇರಳದಲ್ಲಿ ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಮತ್ತೆ ಗೆಲುವು ಸಾಧಿಸಲಿದೆ. ಮತಗಟ್ಟೆ ಸಮೀಕ್ಷೆಯ ಪ್ರಕಾರ ಇಲ್ಲಿ ಎಡಪಕ್ಷಗಳು ಗೆಲ್ಲಲಿದೆ. ಇನ್ನು, ಪುದುಚೇರಿಯಲ್ಲಿ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಕೆ.ಎಂ.ಸಿನ್ಹಾ ತಮ್ಮ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಭವಿಷ್ಯ ನುಡಿದಿದ್ದಾರೆ.

ಎಐಎಡಿಎಂಕೆ ನೇತೃತ್ವದ ಎನ್ಡಿಕೆ ಮೈತ್ರಿಕೂಟದ ಮೇಲೆ ಜನರಿಗೆ ಒಲವಿಲ್ಲ
ಅಸ್ಸಾಂನಲ್ಲಿ ಬಿಜೆಪಿ ಗೆಲ್ಲಲಿದೆ ಮತ್ತು ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ ಗೆಲುವು ಸಾಧಿಸಲಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ನೇತೃತ್ವದ ಎನ್ಡಿಎ ಮೈತ್ರಿಕೂಟದ ಮೇಲೆ ಜನರಿಗೆ ಒಲವಿಲ್ಲ. ಹಾಗಾಗಿ, ಇಲ್ಲಿ ಜಯಲಲಿತಾ ಅವರ ಪಕ್ಷ ಅಧಿಕಾರದಿಂದ ಇಳಿಯಬೇಕಾಗಿದೆ ಎಂದು ತಮ್ಮ ಕುಂಡಲಿ ಎಕ್ಸ್ ಪರ್ಟ್ ಯೂಟ್ಯೂಬ್ ಚಾನೆಲ್ ಮೂಲಕ ಸಿನ್ಹಾ ಭವಿಷ್ಯ ನುಡಿದಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications