5 ರಾಜ್ಯಗಳ ಚುನಾವಣೆ: ಎಲ್ಲಿ ಯಾರ ಸರಕಾರ, ಖ್ಯಾತ ಜ್ಯೋತಿಷಿಯ ಭವಿಷ್ಯ
ಐದು ರಾಜ್ಯಗಳ ಮತದಾನ ಮುಗಿದಿದ್ದು, ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ (ಮೇ 2) ಸಂಜೆಯ ಹೊತ್ತಿಗೆ ಎಲ್ಲಿ ಯಾವ ಪಕ್ಷ ಅಧಿಕಾರಕ್ಕೇರಲಿದೆ ಎನ್ನುವುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲು ಮದ್ರಾಸ್ ಹೈಕೋರ್ಟ್ ಸೂಚಿಸಿರುವುದರಿಂದ, ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಹಲವು ಷರತ್ತನ್ನು ವಿಧಿಸಿದೆ. ವಿಜಯೋತ್ಸವ ಮಾಡ ಕೂಡದು ಎಂದು ಹೇಳಿದೆ.
ಮತಗಟ್ಟೆ ಸಮೀಕ್ಷೆಯಲ್ಲಿ ತಮಿಳುನಾಡಿನಲ್ಲಿ ಡಿಎಂಕೆ, ಪುದುಚೇರಿಯಲ್ಲಿ ಬಿಜೆಪಿ, ಕೇರಳದಲ್ಲಿ ಎಲ್ಡಿಎಫ್, ಅಸ್ಸಾಂನಲ್ಲಿ ಬಿಜೆಪಿ ಮತ್ತು ಪಶ್ಚಿಮ ಬಂಗಾಳದಲ್ಲಿ ಬಹುತೇಕ ಟಿಎಂಸಿ ಗೆಲುವು ಸಾಧಿಸಲಿದೆ ಎನ್ನುವ ಫಲಿತಾಂಶ ಹೊರಬಿದ್ದಿದೆ.
ಉತ್ತರ ಭಾರತ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಐದು ರಾಜ್ಯಗಳ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಗೆಲುವು ಸಿಗಬಹುದು ಎನ್ನುವುದರ ಬಗ್ಗೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಭವಿಷ್ಯ ನುಡಿದಿದ್ದಾರೆ. ಕೋವಿಡ್ ವಿಚಾರದಲ್ಲಿ ಇವರ ಭವಿಷ್ಯ ನಿಜವಾದ ಉದಾಹರಣೆಗಳಿವೆ:

140-160 ಸೀಟ್ ಅನ್ನು ಬಿಜೆಪಿ ಗೆಲ್ಲಲಿದೆ. ಈ ಮಾತನ್ನು ಮತ್ತೆ ಪುನರುಚ್ಚಿಸುತ್ತೇನೆ
ಪಶ್ಚಿಮ ಬಂಗಾಳದ ಎಕ್ಸಿಟ್ ಪೋಲ್ ಯಾವುದೇ ರೀತಿ ಇರಲಿ, ಅಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಯ ಸರಕಾರ. 140-160 ಸೀಟ್ ಅನ್ನು ಬಿಜೆಪಿ ಗೆಲ್ಲಲಿದೆ. ಈ ಮಾತನ್ನು ಮತ್ತೆಮತ್ತೆ ನಾನು ಪುನರುಚ್ಚಿಸುತ್ತೇನೆ. ನಂದಿಗ್ರಾಮದಲ್ಲಿ ಒಂದು ವೇಳೆ ಮಮತಾ ಬ್ಯಾನರ್ಜಿ ಸೋತರೆ, ಟಿಎಂಸಿ ಐವತ್ತರಿಂದ ಅರವತ್ತು ಸ್ಥಾನಕ್ಕೆ ಸೀಮಿತವಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದಾರೆ.

ನನ್ನ ಭವಿಷ್ಯ ಸತ್ಯವಾಗಲಿ, ಸುಳ್ಳಾಗಲಿ, ಪಲಾಯನ ಮಾಡುವುದಿಲ್ಲ
"ಪಶ್ಚಿಮ ಬಂಗಾಳಕ್ಕೆ ಹಲವು ಬಾರಿ ಭೇಟಿ ನೀಡಿದ್ದೇನೆ, ಅಲ್ಲಿನ ಜನರು ಮಮತಾ ಸರಕಾರದ ವಿರುದ್ದ ಆಕ್ರೋಶವನ್ನು ಹೊಂದಿದ್ದಾರೆ. ಮೇ ಎರಡರಂದು ಮತ್ತೆ ನಾನು ನಿಮ್ಮ ಮುಂದೆ ಬರುತ್ತೇನೆ. ನನ್ನ ಭವಿಷ್ಯ ಸತ್ಯವಾಗಲಿ, ಸುಳ್ಳಾಗಲಿ, ಪಲಾಯನ ಮಾಡುವುದಿಲ್ಲ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ" ಎಂದು ಕೆ.ಎಂ.ಸಿನ್ಹಾ ಹೇಳಿದ್ದಾರೆ. (ಚಿತ್ರದಲ್ಲಿ : ಕೆ.ಎಂ.ಸಿನ್ಹಾ)

ಕೇರಳದಲ್ಲಿ ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಮತ್ತೆ ಗೆಲುವು
ಇನ್ನು ಕೇರಳದಲ್ಲಿ ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಮತ್ತೆ ಗೆಲುವು ಸಾಧಿಸಲಿದೆ. ಮತಗಟ್ಟೆ ಸಮೀಕ್ಷೆಯ ಪ್ರಕಾರ ಇಲ್ಲಿ ಎಡಪಕ್ಷಗಳು ಗೆಲ್ಲಲಿದೆ. ಇನ್ನು, ಪುದುಚೇರಿಯಲ್ಲಿ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಕೆ.ಎಂ.ಸಿನ್ಹಾ ತಮ್ಮ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಭವಿಷ್ಯ ನುಡಿದಿದ್ದಾರೆ.

ಎಐಎಡಿಎಂಕೆ ನೇತೃತ್ವದ ಎನ್ಡಿಕೆ ಮೈತ್ರಿಕೂಟದ ಮೇಲೆ ಜನರಿಗೆ ಒಲವಿಲ್ಲ
ಅಸ್ಸಾಂನಲ್ಲಿ ಬಿಜೆಪಿ ಗೆಲ್ಲಲಿದೆ ಮತ್ತು ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ ಗೆಲುವು ಸಾಧಿಸಲಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ನೇತೃತ್ವದ ಎನ್ಡಿಎ ಮೈತ್ರಿಕೂಟದ ಮೇಲೆ ಜನರಿಗೆ ಒಲವಿಲ್ಲ. ಹಾಗಾಗಿ, ಇಲ್ಲಿ ಜಯಲಲಿತಾ ಅವರ ಪಕ್ಷ ಅಧಿಕಾರದಿಂದ ಇಳಿಯಬೇಕಾಗಿದೆ ಎಂದು ತಮ್ಮ ಕುಂಡಲಿ ಎಕ್ಸ್ ಪರ್ಟ್ ಯೂಟ್ಯೂಬ್ ಚಾನೆಲ್ ಮೂಲಕ ಸಿನ್ಹಾ ಭವಿಷ್ಯ ನುಡಿದಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications