ಟಾರೋ ಕಾರ್ಡ್ ಭವಿಷ್ಯ: ಮಾಗಡಿ ಲಡಾಯಿಯಲ್ಲಿ ಗೆಲುವು ಯಾರಿಗೆ?
Recommended Video

ಟಾರೋ ಕಾರ್ಡ್ ರೀಡಿಂಗ್ ಬಹಳ ಕುತೂಹಲಕರವಾದ ಭವಿಷ್ಯ ನುಡಿಯುವ ಪದ್ಧತಿ. ಇದರ ಪ್ರಕಾರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಿದ್ದಾಜಿದ್ದಿ ಪೈಪೋಟಿ ಇರುವಂಥ ಕೆಲವು ಕ್ಷೇತ್ರಗಳಲ್ಲಿ ಯಾರಿಗೆ ಗೆಲ್ಲುವ ಅವಕಾಶ ಹೆಚ್ಚಿದೆ ಎಂಬುದನ್ನು ಟಾರೋ ಕಾರ್ಡ್ ರೀಡಿಂಗ್ ಮೂಲಕ ಮುಂಬೈ ಮೂಲದ ಪ್ರಕಾಶ್ ದಳವಿ ತಿಳಿಸಲಿದ್ದಾರೆ.
ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಕ್ಕೆ ಒನ್ಇಂಡಿಯಾ ಕನ್ನಡ ಜವಾಬ್ದಾರ ಅಲ್ಲ. -ಸಂಪಾದಕ
ಜೆಡಿಎಸ್ ನಿಂದ ಹೊರಬಂದು, ಕಾಂಗ್ರೆಸ್ ಗೆ ಸೇರಿ ಸ್ಪರ್ಧೆ ಮಾಡಿರುವಂಥ ಏಳು ಶಾಸಕರ ಪೈಕಿ ರಾಮನಗರ ಜಿಲ್ಲೆ ಮಾಗಡಿಯ ಬಾಲಕೃಷ್ಣ ಅವರ ಬಗ್ಗೆ ಟಾರೋ ಕಾರ್ಡ್ ರೀಡಿಂಗ್ ಏನು ಹೇಳುತ್ತದೆ? ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಲಡಾಯಿಯಲ್ಲಿ ಜೆಡಿಎಸ್ ನ ಎ.ಮಂಜು ಹಾಗೂ ಕಾಂಗ್ರೆಸ್ ನ ಎಚ್.ಸಿ.ಬಾಲಕೃಷ್ಣ ಎದ್ದು ಕಾಣುತ್ತಿದ್ದಾರೆ.
ಈ ಸ್ಪರ್ಧೆ ಕೂಡ ಸ್ವಲ್ಪ ವಿಚಿತ್ರವಾದದ್ದು. ಹೋದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಯಾಚಿಸಿದ್ದ ಎ.ಮಂಜು ಈ ಸಲ ಜೆಡಿಎಸ್ ನ ಅಭ್ಯರ್ಥಿ. ಇನ್ನು ಕಳೆದ ಬಾರಿ ಜೆಡಿಎಸ್ ನಿಂದ ಸ್ಪರ್ಧಿಸಿ, ವಿಜಯಿಯಾಗಿದ್ದ ಎಚ್.ಸಿ.ಬಾಲಕೃಷ್ಣ ಈ ಸಲ ಕಾಂಗ್ರೆಸ್ ನ ಹುರಿಯಾಳು. ಜತೆಗೆ ಶತಾಯಗತಾಯ ಬಾಲಕೃಷ್ಣರನ್ನು ಮಣಿಸಲು ಜೆಡಿಎಸ್ ನ ಅತಿರಥ- ಮಹಾರಥರೆಲ್ಲ ಟೊಂಕ ಕಟ್ಟಿ ನಿಂತಿದ್ದಾರೆ.

ಈ ಸಲ ವಿಪರೀತವಾದಂಥ ಸ್ಪರ್ಧೆ ಕಾಣಬಹುದಾದ ಕ್ಷೇತ್ರ ಇದು. ಗೆಲುವಿನ ಅಂತರ ಕೆಲವು ನೂರುಗಳಲ್ಲಿ ಇರುತ್ತದೆ. ಅಥವಾ ಅದಕ್ಕಿಂತ ಕಡಿಮೆ ಆದರೂ ಅಚ್ಚರಿಯಿಲ್ಲ. ಆದರೆ ಈ ಗೆಲುವು ಯಾರದಾಗಬಹುದು ಎಂಬ ಪ್ರಶ್ನೆ ಕೇಳಿದರೆ, ಎಚ್.ಸಿ.ಬಾಲಕೃಷ್ಣ ಅವರ ಕಡೆಗೆ ತೂಕದ ಬಟ್ಟು ಹೆಚ್ಚು ತೂಗುತ್ತದೆ. ಅದೆಂಥ ಪೈಪೋಟಿ ಕಂಡುಬಂದರೂ ಬಾಲಕೃಷ್ಣ ಪರವಾಗಿ ಜನತೆಯ ತೀರ್ಪು ಬರುವ ಸಾಧ್ಯತೆ ಹೆಚ್ಚಿದೆ.
ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಎಚ್.ಸಿ.ಬಾಲಕೃಷ್ಣ 74,821 ಮತ ಗಳಿಸಿ, ವಿಜಯಿಯಾಗಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಎ.ಮಂಜು 60,462 ಮತ ಪಡೆದಿದ್ದರು.
-
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?












Click it and Unblock the Notifications