ದರ್ಶನ್ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಡು ಹಿಡಿದು ಜಾಲಾಡುತ್ತಿರುವ ಪೊಲೀಸರಿಗೆ ದಿನವೂ ಹೊಸ ಹೊಸ ಸಾಕ್ಷಿಗಳು ಕೈಗೆ ಸಿಗುತ್ತಿವೆ. ಈ ಸಾಕ್ಷಿಗಳನ್ನು ಈಗಾಗಲೇ ನ್ಯಾಯಾಧಿಶರ ಮುಂದೆ ಪ್ರಸ್ತುತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಸಾಕ್ಷ್ಯಗಳ ಹೇಳಿಕೆಗಳನ್ನು ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ.
ದರ್ಶನ್ ಕನ್ನಡ ಚಿತ್ರ ರಂಗ ಸ್ಟಾರ್ ನಟ. ದೊಡ್ಡ ಸೆಲಿಬ್ರಿಟಿ. ಪ್ರಭಾವ ಶಾಲಿ ಕೂಡ ಹೌದು. ಹೀಗಾಗಿ ತಾನು ಮಾಡಿದ ಕೃತ್ಯದ ಸಾಕ್ಷ್ಯಗಳನ್ನು ಏಳು ಸುತ್ತಿನ ಕೋಟೆಯಂತಹ ರಕ್ಷಣೆ ನೀಡಲಾಗಿದೆ. ಈ ಕೋಟೆಯ ಒಂದೊಂದೆ ಬಾಗಿಲುಗಳನ್ನು ತೆರೆದು ಪ್ರಕರಣ ಸಾಕ್ಷಿಗಳನ್ನು ವಶಕ್ಕೆ ಪಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಈಗಾಗಲೇ ಇಂಚಿಂಚು ಬಿಡದ ಪೊಲೀಸರು, ಸಾಕ್ಷ್ಯಗಳ ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಸಾಕ್ಷಿಗಳನ್ನು ಈಗಾಗಲೇ 164 ವಿಧಿಯಡಿ ಹೇಳಿಕೆ ದಾಖಲಿಸಲಾಗಿದೆ.

ಹಲವರಿಗೆ ನೋಟಿಸ್
ಪೊಲೀಸರು ಸಣ್ಣ ಎಳೆ ಸಿಕ್ಕರೂ ಅದನ್ನು ಹಿಡಿದುಕೊಂಡು ಮುಂದೆ ನಡೆಯಲು ಪೊಲೀಸರು ಪ್ಲ್ಯಾನ್ ಮಾಡಿದ್ದಾರೆ. ಈ ಪ್ರಕರಣದಲ್ಲಿ ಯಾರ ಮೇಲೆ ಎಲ್ಲಾ ಸಂಶಯ ಬಂದಿದೇಯೋ ಅವರಿಗೆಲ್ಲಾ ಖಾಕಿ ಪಡೆ ನೊಟೀಸ್ ನೀಡಿದೆ. ಇನ್ನು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಆಪ್ತಿ ಸಮತಾಳಿಗೂ ನೊಟೀಸ್ ನೀಡಲಾಗಿದೆ. ಇವರು ಪವಿತ್ರಾಗೆ ಬರುತ್ತಿದ್ದ ಕಮೆಂಟ್ಗಳಿಗೆ ಉತ್ತರಿಸುವ ಕೆಲಸವನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮೋಹನ್ ರಾಜ್ ಸೇರಿದಂತೆ 3 ಜನರಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಖುದ್ದು ಪಲೋಸ್ ಠಾಣೆಗೆ ಹಾಜರಾಗುವಂತೆ ತಿಳಿಸಿದ್ದರು. ಪೊಲೀಸ್ಟ್ ಕಸ್ಟಡಿಯಲ್ಲಿದ್ದಾಗ ದರ್ಶನ್ 40 ಲಕ್ಷ ಹಣವನ್ನು ಪಡೆದ ಬಗ್ಗೆ ತಿಳಿಸಿದ್ದರು. ಈ ಕುರಿತಾಗಿ ಮೋಹನ್ ರಾಜ್ ವಿಚಾರಣೆ ಎದುರಿಸಬೇಕಾಗಿದೆ. ಹಣ ನೀಡಿದ್ದರ ಹಿಂದಿನ ನಿಖರ ಕಾರಣವನ್ನು ತಿಳಿಯಲು ಪೊಲೀಸರು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಹಣದ ಮೂಲದ ಹಿಂದೆ ಬಿದ್ದಿರುವ ಪೊಲೀಸರು
ಪವಿತ್ರಾ ಗೌಡ ಸ್ನೇಹಿತ ಸಮತಾ ಎಲೆಕ್ಟ್ರಿಕಲ್ ಮೆಗ್ಗರ್ ಮಶೀನ್ ತರಲು ಸಹಾಯ ಮಾಡಿದ್ದರು ಎಂದು ತಿಳಿದು ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಲನ ಪ್ರಕಾಶ್, ಪಬ್ ಕೆಲಸಗಾರ ಪವನ್, ದರ್ಶನ್ ಕೆಲಸಗಾರರಿಗೂ ಪೊಲೀಸ್ ನೋಟಿಸ್ ನೀಡಿದ್ದಾರೆ. ಇನ್ನು ರೇಣುಕಾಸ್ವಾಮಿ ಕೊಲೆ ಆರೋಪಿಗಳೆಲ್ಲಾ ಬೇರೆಯವರ ಸಿಮ್ ಖರೀದಿಸಿದ್ದರಿಂದ, ಸೀಮ್ ಮಾಲೀಕರಿಗೂ ನೋಟಿಸ್ ನೀಡಲಾಗಿದೆ.

ದರ್ಶನ್ಗೆ 40 ಲಕ್ಷ ನೀಡಿದ್ದ ಮಾಜಿ ಉಪಮೇಯರ್ 40 ಲಕ್ಷ ಹಣ ನೀಡಿದ್ದರು ಎನ್ನಲಾಗಿದೆ. ಈ ಹಣವನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಇದೇ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಮೋಹನ್ ರಾಜ್, ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಅಲ್ಲದೆ ಹಣದ ಬಗ್ಗೆ ಹಲವು ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications