ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು: ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕುಸಿತ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 6: ಭಾನುವಾರ ಎಡೆಬಿಡದೆ ಸುರಿದ ಮಳೆಯಿಂದಾಗಿ ಸೇತುವೆ ಕುಸಿದಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರ ಸಮೀಪದ ಬಂಕೇನಹಳ್ಳಿಯಲ್ಲಿ ನಡೆದಿದೆ.

ಕಳೆದ ವರ್ಷ ಸುರಿದ ಭಾರೀ ಮಳೆಯಿಂದ ಬಂಕೇನಹಳ್ಳಿ ಕೊಚ್ಚಿ ಹೋಗಿತ್ತು. ಆ ವೇಳೆ ತಾತ್ಕಾಲಿಕವಾಗಿ ಸೇತುವೆ ನಿರ್ಮಾಣ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ಸೇತುವೆ ಕುಸಿದ ಪರಿಣಾಮ ಕೂಡಳ್ಳಿ, ಬಂಕೇನಹಳ್ಳಿ, ಚೇಗು ಮುಂತಾದ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಮಳೆಗಾಲದ ಪ್ರಾರಂಭದಲ್ಲೆ ಸೇತುವೆ ಕುಸಿದಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಚಾರ್ಮಾಡಿ ಘಾಟ್ ಮಧ್ಯೆ ವಾಹನ ನಿಲ್ಲಿಸಿದರೆ ಕೇಸ್ಚಾರ್ಮಾಡಿ ಘಾಟ್ ಮಧ್ಯೆ ವಾಹನ ನಿಲ್ಲಿಸಿದರೆ ಕೇಸ್

ಗ್ರಾಮಸ್ಥ ಬಿ.ಆರ್ ಭರತ್ ಮಾತನಾಡಿ, ಸೇತುವೆ ಕುಸಿದು ವರ್ಷ ಕಳೆದರೂ ನೂತನ ಸೇತುವೆ ಕಾಮಗಾರಿ ಇನ್ನೂ ಪ್ರಾರಂಭವಾಗಿಲ್ಲ. ತಾತ್ಕಾಲಿಕವಾಗಿ ಕಟ್ಟಿದ ಸೇತುವೆಯೂ ಮಳೆಗಾಲದ ಪ್ರಾರಂಭದಲ್ಲೇ ಕುಸಿದಿರುವುದು ತುರ್ತು ಸಂದರ್ಭದಲ್ಲಿ ಗ್ರಾಮಸ್ಥರಿಗೆ ಸಂಪರ್ಕ ಸಾಧ್ಯವಾಗದಂತಾಗಿದೆ ಎಂದು ಹೇಳಿದರು.

 Chikkamagaluru: Temporary Bridge Collapses Due To Heavy Rain

ದಿನನಿತ್ಯ ಈ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು, ಕಾರ್ಮಿಕರು ಜೀವದ ಹಂಗು ತೊರೆದು ಕುಸಿದ ಸೇತುವೆ ದಾಟಿ ಹೋಗಬೇಕಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮೂಡಿಗೆರೆ ತಹಶೀಲ್ದಾರ್ ಅವರ ಗಮನ ಸೆಳೆದಾಗ ಶೀಘ್ರವಾಗಿ ಸೇತುವೆ ನಿರ್ಮಿಸುವ ಭರವಸೆ ನೀಡಿದ್ದಾರೆ ಎಂದರು.

English summary
The Temporary bridge collapsed on Sunday due to continuous rain and the Disconnection of many villages took place at Bunkenahalli near Kottigehara in Chikkamagaluru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X