ತುಲಾ ರಾಶಿ ವರ್ಷ ಭವಿಷ್ಯ ಮತ್ತು ಪರಿಹಾರೋಪಾಯ
ಹೊಸ ವರ್ಷ 2016 ತುಲಾ ರಾಶಿಯವರಿಗೆ ಅರ್ಧ ಸಿಹಿ ಅರ್ಧ ಕಹಿ ಎನ್ನಬಹುದು. ಏಕೆಂದರೆ ಮೊದಲೇ ಬಳಲಿ ಬೆಂಡಾಗಿರುವ ಈ ರಾಶಿಯವರು ಆಗಸ್ಟ್ ವರೆಗೂ ಸುಮ್ಮನಿದ್ದರೆ ಒಳ್ಳೆಯದು. ಯಾಕೆಂದರೆ 32 ವರ್ಷಗಳ ನಂತರ ಗ್ರಹಕೂಟ ಒಂದೇ ತೆರನಾಗಿ ಬಂದಿದೆ. 32 ವರ್ಷಗಳ ಹಿಂದೆ ಇಂದಿರಾ ಗಾಂಧಿ ಹತ್ಯೆಯಾಗಿತ್ತು. ಭೂಪಾಲ್ ಅನಿಲ ದುರಂತ ಸಂಭವಿಸಿತ್ತು. ಇರಾನ್ ಇರಾಕ್ ಯುದ್ಧ ನಡೆದಿತ್ತು.
ಅದೇ ರೀತಿ ಈ ಬಾರಿಯೂ ಹಲವಾರು ದುರ್ಘಟನೆಗಳು ಜರುಗುವ ಸಂಭವವಿರುವುದರಿಂದ, ಅಂದರೆ ಸೆಪ್ಟೆಂಬರ್ ತಿಂಗಳಿನವರೆಗಂತೂ ತುಲಾ ರಾಶಿಯವರು ಇದ್ದುದರಲ್ಲಿಯೇ ಸಂಭಾಳಿಸಿಕೊಂಡು ಹೋಗಬೇಕು.
ತುಲಾ ರಾಶಿಯವರು ಹೆಚ್ಚಾಗಿ ನೀಲಿ, ಹಸಿರು, ಬಿಳಿ ಮತ್ತು ತಿಳಿ ಬಣ್ಣದ ವಸ್ತುಗಳನ್ನು ಮತ್ತು ವಸ್ತ್ರಗಳನ್ನು ಈ ವರ್ಷ ಉಪಯೋಗಿಸಿಕೊಳ್ಳಬೇಕು. ಸಾಡೇಸಾತಿಯ ಕೊನೆಯ ಹಂತದಲ್ಲಿರುವುದರಿಂದ ಹೆಚ್ಚಿನ ಜಾಗೃತೆ ವಹಿಸಬೇಕು. ನೈಋತ್ಯ, ಉತ್ತರ ಮತ್ತು ಪೂರ್ವ ದಿಕ್ಕಿಗೆ ಪ್ರಾಶಸ್ತ್ಯ ಕೊಡಬೇಕು. ಕುಂಭ, ಕನ್ಯಾ, ತುಲಾ, ಮಕರ ಮತ್ತು ಮಿಥುನ ರಾಶಿಯವರರೊಂದಿಗೆ ಹೊಂದಾಣಿಕೆ ಇರಬೇಕು. [ಕನ್ಯಾ ರಾಶಿಯ ವರ್ಷಫಲ ಮತ್ತು ಪರಿಹಾರೋಪಾಯ]

ಮಹಾಲಕ್ಷ್ಮೀಯನ್ನು ಪ್ರತಿ ಶುಕ್ರವಾರ ಮತ್ತು ಮಂಗಳವಾರ ಆರಾಧಿಸುತ್ತಲೇ ಇರಬೇಕು. ಶುಕ್ರವಾರ ಮತ್ತು ಬುಧವಾರ ಮುಖ್ಯವಾದ ಕೆಲಸಗಳನ್ನು ಇಟ್ಟುಕೊಳ್ಳಬೇಕು. ಅನುಕೂಲವಿದ್ದಾಗ ಅವರೇಕಾಳು, ಅವರೇಬೇಳೆ ಜಂಗಮರಿಗೆ ದಾನ ಕೊಡಬೇಕು. ಅತ್ತಿ (ಔದುಂಬರ) ಗಿಡವನ್ನು ಪೂಜಿಸಬೇಕು. ಸಿಂಹ ಮತ್ತು ಕರ್ಕ ರಾಶಿಯವರೊಂದಿಗೆ ವ್ಯವಹಾರ ಹೆಚ್ಚಿನ ಪ್ರಮಾಣದಲ್ಲಿರಬಾರದು.
ಕಾಲಿನ ನೋವಿಗೆ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು. ಆಗಸ್ಟ್ ನಂತರ ಶುಭಸಮಯ ಶುರುವಾಗುವುದರಿಂದ ಅಲ್ಲಿಯವರೆಗೂ ಯಾವುದೇ ಮುಖ್ಯವಾದ ಯೋಜನೆಗಳನ್ನು ಮಾಡುವುದು ಬೇಡ. ಮಾಡಲೇಬೇಕು ಎನ್ನುವಂತಿದ್ದರೆ ಸಾಮೇರನ್ನು ಕೇಳಿ ಮಾಡೋದು ಒಳ್ಳೆಯದು.
ಪರಿಹಾರೋಪಾಯಗಳು : ಶಂಭೋಲಿಂಗನ ಆಲಯದಲ್ಲಿ ಸಾಧ್ಯವಾದರೆ ತುಪ್ಪದಾರತಿ ಬೆಳಗಿ. ಶನೈಶ್ಚರನಿಗೆ ಎಳ್ಳೆಣ್ಣೆ ಅರ್ಪಿಸಿ. ರುದ್ರಾಭಿಷೇಕ ಮಾಡಿಸಲು ಮರೆಯಬೇಡಿ. ಹನುಮನಿಗೆ ಆವಾಗಾವಾಗ ಕುಂಕುಮಾರ್ಚನೆ ಮಾಡಿಸಿದರೊಳ್ಳೆಯದು.
ಮುಂದಿನ ಲೇಖನದಲ್ಲಿ : ವೃಶ್ಚಿಕ ರಾಶಿಯವರ ವರ್ಷಫಲ ಮತ್ತು ಪರಿಹಾರೋಪಾಯಗಳು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications