ಕತೆ ಜತೆ ಗೆಳೆತನ, ಓಡುತ್ತದೆ ಒಂಟಿತನ (ಭಾಗ 2)
ಒಂದೂರಿನಲ್ಲಿ ಇಬ್ಬರು ಪ್ರಾಣಸ್ನೇಹಿತರಿದ್ದರು. ಒಬ್ಬರನ್ನೊಬ್ಬರು ಬಿಟ್ಟಿರಲಾರರು. ಅವರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವುಂಟಾಯಿತು. ಮಾತು ಬಿಟ್ಟುಕೊಂಡರು. ಅನಂತರ ಇಬ್ಬರೂ ಪರಮಶತ್ರುಗಳಂತೆ ಪರಸ್ಪರರನ್ನು ದೂರುತ್ತಾ ದೂರವುಳಿದರು. ಸುಮಾರು ಮೂವತ್ತು ವರ್ಷ ಸಂಪರ್ಕವೇ ಇಲ್ಲ. ಅವರ ಪೈಕಿ ಒಬ್ಬ ಕಾಯಿಲೆ ಬಿದ್ದು ಆಸ್ಪತ್ರೆ ಸೇರಿದ. ಈ ಸಂಗತಿ ಆತನ ಸ್ನೇಹಿತನಿಗೆ ಗೊತ್ತಾಯಿತು. ಆಸ್ಪತ್ರೆಗೆ ಹೋದ. ಮೂವತ್ತು ವರ್ಷಗಳ ನಂತರದ ಮಿಲನ. ಇಬ್ಬರೂ ಗಂಟೆಗಟ್ಟಲೆ ಮಾತಾಡಿದರು. ಒಬ್ಬರನ್ನೊಬ್ಬರು ಬಿಗಿದಪ್ಪಿಕೊಂಡರು. ಸ್ನೇಹಿತ ಹೊರಡಲು ಮೇಲೆದ್ದಾಗ ಇಬ್ಬರ ಕೆನ್ನೆಗಳೂ ಒದ್ದೆ. ಸ್ನೇಹಿತ ಇನ್ನೇನು ಹೊರಡಲಿದ್ದಾಗ ಕಾಯಿಲೆಪೀಡಿತ ಸ್ನೇಹಿತ ಹೇಳಿದ - ಒಮ್ಮೆ ನಾನು ಸತ್ತರೆ, ನೀನು ಬಂದಿದ್ದು ಒಳ್ಳೆಯದಾಯಿತೆಂದು ತಿಳಿಯುತ್ತೇನೆ. ಸಾಯದಿದ್ದರೆ ನಿನ್ನೊಂದಿಗಿನ ವೈರತ್ವ ಮುಂದುವರಿಯುತ್ತದೆ."
***
ಹಡಗನ್ನು ಇಬ್ಬರು ನಾವಿಕರು ಚಲಾಯಿಸುತ್ತಿದ್ದರು. ರಾತ್ರಿ ಮಲಗುವ ಮೊದಲು ಅವರು ಪಾಳಿಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ಬರೆದಿಡಬೇಕಾಗಿತ್ತು. ಅದು ನಿಯಮ. ಎಂದೂ ಮದ್ಯ ಸೇವಿಸದ ಮೊದಲ ನಾವಿಕ ಅಂದು ಸ್ವಲ್ಪ ಏರಿಸಿದ. ಅದನ್ನು ಕಂಡು ಎರಡನೆಯವ ಪಾಳಿಪುಸ್ತಕದಲ್ಲಿ ಬರೆದ - ಇಂದು ಆತ ಸ್ವಲ್ಪ ಮದ್ಯ ಸೇವಿಸಿದ." ಇದನ್ನು ಓದಿದ ಮೊದಲನೆಯವನಿಗೆ ಕೋಪ ಬಂತು. ಹಾಗಂತ ಅವನು ಕುಡಿದಿದ್ದು ನಿಜ. ಕ್ಯಾಪ್ಟನ್ಗೆ ಗೊತ್ತಾದರೆ ಕೆಲಸಕ್ಕೆ ಕುತ್ತು ಬಂದೀತೆಂದು ಭಯಪಟ್ಟ. ಮರುದಿನ ಎರಡನೆಯವನಿಗೆ ಪಾಳಿ ಕೊಡುವ ಮೊದಲು ಪಾಳಿ ಪುಸ್ತಕದಲ್ಲಿ ಮೊದಲನೆಯವ ಬರೆದ - ಇಂದು ಆತ ಮದ್ಯ ಸೇವಿಸಿಲ್ಲ."
***
ಒಬ್ಬ ವ್ಯಕ್ತಿತ್ವ ವಿಕಸನ ಗುರು ಪಾಠ ಮಾಡುತ್ತಿದ್ದ - ಚಾರ್ಲ್ಸ್ ಸ್ವಾಬ್ ಎಂಬಾತನಿದ್ದ. ಜಗತ್ತಿನ ಅತಿ ದೊಡ್ಡ ಸ್ಟೀಲ್ ಕಂಪನಿ ಮಾಲೀಕ. ಕೊನೆಯಲ್ಲಿ ದಿವಾಳಿಯಾಗಿ ಹುಚ್ಚನಾದ. ವಿಶ್ವದ ಅತಿದೊಡ್ಡ ಗ್ಯಾಸ್ ಕಂಪನಿ ಮುಖ್ಯಸ್ಥ ಹೋವಾರ್ಡ್ ಹನ್ಸ್ ಕೂಡ ಹುಚ್ಚನಾಗಿ ಸತ್ತ. ನ್ಯೂಯಾರ್ಕ್ ಸ್ಟಾಕ್ ಎಕ್ಸ್ಚೇಂಜ್ ಅಧ್ಯಕ್ಷ ಸಾಯುವಾಗ ಭಿಕಾರಿಯಾದ. ಇಟಲಿಯ ಶ್ರೀಮಂತ ವಜ್ರ ವ್ಯಾಪಾರಿ ಸಾಯುವಾಗ ಅರೆಹುಚ್ಚನಾಗಿದ್ದ." ಅರ್ಧಗಂಟೆ ಪಾಠ ಮುಗಿಸಿದ ಗುರು, ಈ ಎಲ್ಲ ಕತೆಗಳನ್ನು ಕೇಳಿದರೆ ಏನನಿಸುತ್ತದೆ?" ಎಂದು ಕೇಳಿದ. ವಿದ್ಯಾರ್ಥಿಗಳು ಹೇಳಿದರು-ಶ್ರೀಮಂತರಾದರೆ ಹುಚ್ಚರಾಗುತ್ತಾರೆ." ಅದಕ್ಕೆ ಗುರು ಹೇಳಿದ-ಶ್ರೀಮಂತಿಕೆ ಹಾಗೂ ಶ್ರೀಮಂತನಾಗಬೇಕೆಂಬ ಹುಚ್ಚು ಬಿಡಿ'
***
ಎಲ್ಲರೂ ನನ್ನನ್ನೇ ನೋಡುತ್ತಿರಬೇಕು. ಆಗಲೇ ನನಗೆ ಖುಷಿ. ಒಂದು ಮೋಡ ಇನ್ನೊಂದಕ್ಕೆ ಹೇಳಿತು. ನಿನ್ನನ್ನು ಎಲ್ಲರೂ ನೋಡ್ತಾರೆ. ಆದರೆ ನೀನು ನಾಲ್ಕು ಹನಿ ಚೆಲ್ಲಬಾರದಾ?" ಎಂದು ಇನ್ನೊಂದು ಮೋಡ ಬುದ್ಧಿ ಹೇಳಿತು. ಅದಕ್ಕೆ ಮೊದಲ ಮೋಡ ಹೇಳಿತು - ಚೆಲ್ಲಿದರೆ ಯಾರೂ ನೋಡಲ್ಲ. ಅದಕ್ಕಾಗಿ ಮರುಭೂಮಿಯ ಮೇಲೆ ನಾನು ಇನ್ನೂ ತನಕ ಹನಿಗಳನ್ನು ಚೆಲ್ಲಿಲ್ಲ."
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications