ಕನ್ನಡ ಬೇಡ! ಕನ್ನಡದೋರ ಬೆಂಬಲ ಬೇಕನ್ನೋ ಮಲ್ಯ!

ಅಭಿಮಾನಿಗಳ ಕನ್ನಡ ಹಾಡು!
ನಮ್ಮ ತಂಡಾನ ಹುರಿದುಂಬಿಸೋಕೆ ತಂಡದ ಅಭಿಮಾನಿಗಳೇ ಸೇರಿ ಮಾಡಿರೋ ತಾಕತ್ತು ಅನ್ನೋ ಕನ್ನಡದ ಹಾಡು ಇವತ್ತು ಕರ್ನಾಟಕದ ಜನರ ನಾಲಿಗೆ ಮೇಲೆ ನಲೀತಿದೆ. ತಾಕತ್ತು ಅನ್ನೋ ಸಕ್ಕತ್ತು ಹಾಡು ರೇಡಿಯೊದಲ್ಲಿ, ಟಿವಿಯಲ್ಲಿ, ಇಂಟರ್ನೆಟ್ಟಲ್ಲಿ... ಹೀಗೆ ಎಲ್ಲ ಕಡೆ ಕೇಳ್ತಾ ಇದೀವಿ. ಅಷ್ಟೆ ಅಲ್ಲ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೀತಾ ಇರೋ ನಮ್ಮ ಪಂದ್ಯಗಳಲ್ಲಿ ತಾಕತ್ತು ಹಾಡು ಜೋರಾಗಿ ಕೇಳಿ ಬರ್ತಿದೆ!
ಅಭಿಮಾನಿಗಳನ್ನು ನೋಡಾದ್ರೂ ಕಲೀಬಾರ್ದಾ?
ಅಭಿಮಾನಿಗಳಿಗೆ ಇರೋ ಬುದ್ಧಿ ನಮ್ಮ ತಂಡದ ಮಾಲೀಕರಿಗೆ ಇಲ್ವಲ್ಲ ಗುರು! ಯಾರನ್ನ ಮೆಚ್ಚಸೋಕೆ ಹಿಂದೀಲಿ ಆ ಹಾಡು ಮಾಡಿದಾರೆ? ನಮ್ಮ ಜನರನ್ನ ಮೆಚ್ಚಿಸೋಕಾ? ಅದೇ ಉದ್ದೇಶ ಆಗಿದ್ದಿದ್ರೆ ಕನ್ನಡದಲ್ಲಿ ಮಾಡಿರೋರು. ಇಷ್ಟಕ್ಕೂ ಇವತ್ತು ಬೆಂಗಳೂರು ತಂಡಾನ ಹುರಿದುಂಬಿಸುತ್ತಿರೋರು ಯಾರು ಗುರು? ಕರ್ನಾಟಕದಲ್ಲಿರುವ ನಾವುಗಳು ತಾನೆ? ನಮ್ಮೂರ ತಂಡ ಅಂದ್ರೆ ನಮ್ಮ ತಂಡ ಅನ್ಕೊಂಡಿರೋ ನಮ್ಮ ಭಾಷೇಲಿ ಹಾಡು ಮಾಡೋದು ಬಿಟ್ಟು, ನಮಗೆ ಸಂಬಂಧವೇ ಇಲ್ಲದ ಹಿಂದೀಲಿ ಮಾಡೋ ಹುಂಬತನ ಯಾಕ್ ಗುರು?
ಹಿಂದಿ ಹಾಡು ಅಖಿಲ ಭಾರತದೋರ ಬೆಂಬಲ ಗಳ್ಸಕ್ಕಾ?
ಈ ಹಾಡು ಹಿಂದೀಲಿರೋದು ಬೇರೆಯವರ ಬೆಂಬಲ ಗೆಲ್ಲೋಕಾ? ಬೆಂಗಳೂರು ದಿಲ್ಲಿ ಮಧ್ಯೆ ಒಂದು ಪಂದ್ಯ ಆದ್ರೆ, ದಿಲ್ಲಿ ಜನತೆ ಯಾರನ್ನ ಬೆಂಬಲಿಸ್ತಾರೆ? ದಿಲ್ಲೀನ ತಾನೆ? ಬೆಂಗಳೂರೋರು ನಮ್ ಭಾಷೇಲಿ ಹಾಡು ಮಾಡಿದಾರೆ, ಅವ್ರು ಗೆಲ್ಲಲಿ ಅಂತಾರಾ? ಕೊನೆಗೆ ಬೆಂಗಳೂರು ತಂಡ ಗೆಲ್ಲಲಿ ಅಂತ ಚಪ್ಪಾಳೆ ತಟ್ಟೋರು ನಮ್ಮ ಜನಾ ತಾನೆ? ಹಾಗಿದ್ದಲ್ಲಿ ಇಲ್ಲಿನ ತಂಡಕ್ಕೆ ಒಳ್ಳೆದಾಗಲಿ ಅಂತ ಹಾರೈಸಿ ಮಾಡೋ ಹಾಡು ಕನ್ನಡದಲ್ಲಿ ತಾನೆ ಇರಬೇಕು? ಇನ್ನೂ ಅವ್ರುಗಳು "ಕನ್ನಡದವ್ರು ದಿಕ್ಕೆಟ್ಟ ಮುಂಡೇವು, ಅವರ ಭಾಷೇಲಿ ಒಂದು ಹಾಡು ಮಾಡಕ್ಕೂ ಆಗದೋರು" ಅಂತಾ ಆಡ್ಕೊಂಡು ನಗ್ತಾರೆ ಅಷ್ಟೆ!
ಅಂತಾಷ್ಟ್ರೀಯ ಆಟಗಾರರನ್ನು ಮೆಚ್ಚಿಸೋಕಾ?
ಹೋಗಲಿ, ಈ ಹಾಡು ಹಿಂದೀಲಿರೋದು ನಮ್ಮ ತಂಡದಲ್ಲಿರೋ ವಿದೇಶಿ ಆಟಗಾರರನ್ನು ಮೆಚ್ಚಿಸೋಕಾ? ಅಲ್ಲಾ ಜಾಕ್ ಕಾಲಿಸ್ ಆಗಲೀ, ಮಾರ್ಕ್ ಬೌಚರ್ ಆಗಲೀ ಅಥ್ವಾ ಟೇಲರ್ ಆಗಲಿ, ಅವರಿಗೆ ಹಿಂದೀನೂ ಒಂದೇ ಕನ್ನಡಾನೂ ಒಂದೇ ಅಲ್ವೇನ್ರಿ? ಅಷ್ಟ್ರ ಮೇಲೆ ಅವ್ರಿಗೆ ಇದೇನಾದ್ರೂ ಅರ್ಥ ಆದ್ರೂ, ಇಡೀ ಭಾರತಕ್ಕೆಲ್ಲಾ ಒಂದೇ ಭಾಷೆ ಅಂತ ತಪ್ಪು ತಿಳ್ಕಳಲ್ವಾ ಗುರು? ಹಾಗಿದ್ದಲ್ಲಿ ಯಾರನ್ನ ಮೆಚ್ಚಿಸೋಕೆ ಈ ಹಿಂದಿ ಹಾಡು?
ಮೊದ್ಲು ಮನೆ ಗೆದ್ದು ಆಮೇಲೆ ಊರು ಗೆಲ್ಲಬೇಕು!
ಮೊಹಾಲಿಯಂತ ತಂಡಗಳು ತಮ್ಮೋರನ್ನ ಪ್ರೋತ್ಸಾಹಿಸಲು ತಮ್ಮ ಮಣ್ಣಿನ ಸೋಗಡಿರೋ ಪಂಜಾಬಿ ಭಾಂಗ್ಡಾ ಶೈಲಿ ಹಾಡು ಮಾಡಿ ತಮ್ಮ ಭಾಷೆನ ಬಳುಸ್ತಿಲ್ವಾ? ಅಲ್ಲಿ ಹಂಗಿದ್ರೆ ಇಲ್ಲಿ ನಮ್ಮ ಮಲ್ಯ ಸಾಹೇಬರ ರಾಯಲ್ ಛಾಲೆಂಜರ್ಸ್ ತಂಡದೋರು ನಮಗೆ ಸಂಬಂಧವೇ ಇಲ್ಲದ ಹಿಂದೀಲಿ ಹಾಡು ಮಾಡಿ ನಮ್ಮ ತಲೆ ಮೇಲೆ ಹಾಕ್ತಾ ಇದಾರಲ್ಲ ಗುರು!
ಇವ್ರು ಏನೇ ತಿಪ್ಪರಲಾಗ ಹಾಕುದ್ರೂ ತಾಕತ್ತು ಹಾಡಿಗಿರೋ ಜನಪ್ರಿಯತೆ ಇವ್ರ ಹಿಂದಿ ಹಾಡಿಗೆ ಸಿಗಲ್ಲ. ಈ ತಾಕತ್ತಿನ ಹಾಡು ಬೆಂಗಳೂರಿನ ತಂಡಕ್ಕೆ ಬೆಂಬಲ ಹುಟ್ಸಕ್ಕೆ ಕನ್ನಡವೇ ಸಾಧನ ಅಂತ ಸಾರ್ತಿದೆಯಲ್ಲಾ ಗುರು! ತಾಕತ್ತು ಹಾಡಿಗೆ ಸಿಕ್ಕಿರೋ ಜನಪ್ರಿಯತೆ ನೋಡಾದ್ರು ರಾಯಲ್ ಛಾಲೆಂಜರ್ಸ್ ತಂಡದ ಎಲ್ಲ ಪ್ರಚಾರದ ವ್ಯವಸ್ಥೇಲಿ ಕನ್ನಡಕ್ಕೆ ಮಹತ್ವ ನೀಡಬೇಕು. ಇದ್ರಿಂದ ಅವ್ರಿಗೇ ಲಾಭ. ಇಷ್ಟಕ್ಕೂ ಕನ್ನಡ ಹಾಡು ಇರಬೇಕು ಅಂತಿರೋದು ನಮ್ಮ ಬೆಂಗಳೂರಿನ ತಂಡಕ್ಕೆ ತಾನೆ? ನಮ್ಮೂರಿನ ತಂಡದ ಹಾಡಲ್ಲದೆ ಇನ್ಯಾವ ತಂಡದ ಹಾಡು ಕನ್ನಡದಲ್ಲಿ ಇರಕ್ಕೆ ಸಾಧ್ಯಾ ಗುರು?
)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications