ವಿಕ್ಷನರಿಯಲ್ಲಿ ಕನ್ನಡ ಪದಗಳ ಭರ್ಜರಿ ಬೆಳೆ

ವಿಕ್ಷನರಿಯ ಮಹತ್ವ : ಇದು ಅಂತರ್ಜಾಲ ನಿಘಂಟು ಎನ್ನುವಂತೆ ಮೇಲುನೋಟಕ್ಕೆ ತೋರಿದರೂ ಬುಡಮಟ್ಟದಲ್ಲೇ ನಿಘಂಟಿಗೂ ಕೆಲವು ವ್ಯತ್ಯಾಸಗಳಿವೆ. ಇಲ್ಲಿನ ನುಡಿಕಡಲಿಗೆ ಯಾರು ಬೇಕಾದರೂ ಪದ ಸೇರಿಸಬಹುದು. ಪ್ರತಿಯೊಂದು ಪದಕ್ಕೂ ಒಂದೊಂದು ಪುಟ ಹುಟ್ಟುಹಾಕಿ ಪದದ ಬಗ್ಗೆ ಅನೇಕ ಮಾಹಿತಿ ನೀಡಬಹುದು. ಪ್ರತಿ ಪದಕ್ಕೂ ಯಾವ ಭಾಷೆಯಲ್ಲಿ ಬೇಕಾದರೂ ಅರ್ಥ ನೀಡಬಹುದು. ಅಂದರೆ ಒಂದು ಕನ್ನಡ ಪದಕ್ಕೆ ಜಗತ್ತಿನ ಬೇರೆ ಬೇರೆ ಭಾಷೆಗಳಲ್ಲಿ ಏನಂತಾರೆ ಅಂತ ಬರೀಬಹುದು.
ಮುಂದಿನ ದಿನಗಳಲ್ಲಿ ನಮ್ಮ ಅಂತರ್ಜಾಲದ ಮೇಲಿನ ಅವಲಂಬನೆ ಹೆಚ್ಚಾಗುವ ಸಾಧ್ಯತೆಗಳೇ ಇದ್ದು ಇಂತಹ ಅಂತರ್ಜಾಲ ನಿಘಂಟಿನ/ ನುಡಿಕಡಲಿನ ಪಾತ್ರ ಮಹತ್ವದ್ದೂ ಹೆಚ್ಚಿನದ್ದೂ ಆಗಲಿದೆ. ಆ ದೃಷ್ಟಿಯಿಂದ ನೋಡಿದಾಗ ವಿಕ್ಷನರಿಯಲ್ಲಿ ಕನ್ನಡ ಪದಗಳು ಹೆಚ್ಚು ಹೆಚ್ಚು ಇರಬೇಕಾದ ಅಗತ್ಯ ಮತ್ತು ಇದ್ದರೆ ಆಗುವ ಉಪಯೋಗಗಳು ಮನದಟ್ಟಾಗುತ್ತವೆ.
ಕನ್ನಡ ವಿಕ್ಷನರಿ ಅಂದು -ಇಂದು: ಸುಮಾರು ಒಂದು ವರ್ಷದ ಹಿಂದೆ (ಜೂನ್ 2009) ಕನ್ನಡ ವಿಕ್ಷನರಿಯಲ್ಲಿ ಇದ್ದ ಪದಗಳ ಮೊತ್ತ ಮುನ್ನೂರಕ್ಕಿಂತ ಕಮ್ಮಿ. ಇನ್ನೂರೈವತ್ತರ ಆಸುಪಾಸು. ಇಂತಹ ಸಂದರ್ಭದಲ್ಲಿ ಬನವಾಸಿ ಬಳಗವು ಕನ್ನಡ ವಿಕ್ಷನರಿಯನ್ನು ಬಲಗೊಳಿಸುವ ಕೆಲಸಕ್ಕೆ ಕೈ ಹಾಕಿತು. ಸಮಾನ ಮನಸ್ಕರನ್ನು ಒಗ್ಗೂಡಿಸುವ, ಅಗತ್ಯ ಇರುವವರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡುವ, ವಿಕ್ಷನರಿಯಲ್ಲಿ ಪದಗಳನ್ನು ತುಂಬುವ ಯೋಜನೆಯನ್ನು ರೂಪಿಸಿತು. ಕನ್ನಡಮ್ಮನ ಕೈಂಕರ್ಯಕ್ಕೆ ಕಂದಮ್ಮಗಳ ಕೊರತೆಯೇ? ಹತ್ತಾರು ಆಸಕ್ತರು ಈ ಕೆಲಸದಲ್ಲಿ ಕೈ ಜೋಡಿಸಿದರು. ಈ ಎಲ್ಲರ ಶ್ರಮದ ಫಲವಾಗಿ ಇಂದು ವಿಕ್ಷನರಿಯಲ್ಲಿ ಸುಮಾರು ಅರವತ್ತಾರು ಸಾವಿರದ ನೂರಾ ನಲವತ್ನಾಲ್ಕು(66,144) ಪದಗಳಿವೆ!
ಸಂಖ್ಯಾಬಲದಲ್ಲಿ ಕನ್ನಡವು ಜೂನ್ 2009ರಲ್ಲಿ ಭಾರತೀಯ ಭಾಷೆಗಳ ಪಟ್ಟಿಯಲ್ಲಿ ಕೊಟ್ಟಕೊನೆಯಲ್ಲಿತ್ತು. ಇದೀಗ ಎರಡನೇ ಸ್ಥಾನಕ್ಕೇರಿದೆ. ಅತಿಹೆಚ್ಚು ಪದಗಳನ್ನು ಹೊಂದಿರುವ ಭಾರತೀಯ ಭಾಷೆ ತಮಿಳು. ಇದರಲ್ಲಿ ಒಂದು ಲಕ್ಷದ ಹತ್ತೊಂಬತ್ತು ಸಾವಿರದ ಎಂಟುನೂರಾ ಎಪ್ಪತ್ತೈದು (1,19,875) ಪದಗಳಿವೆ. ಕನ್ನಡದ ನಂತರದ ಸ್ಥಾನ ಮಲಯಾಳಮ್ದು. ಇದರಲ್ಲಿ ಐವತ್ತೊಂಬತ್ತು ಸಾವಿರದ ಒಂಬೈನೂರಾ ಐವತ್ತೊಂಬತ್ತು (59,959) ಪದಗಳಿವೆ. ನಂತರದ್ದು ತೆಲುಗಿನದ್ದು. ಇದರಲ್ಲಿ ಒಟ್ಟು ಮೂವತ್ನಾಲ್ಕು ಸಾವಿರದ ಏಳುನೂರಾ ಇಪ್ಪತ್ನಾಲ್ಕು (34, 724) ಪದಗಳಿವೆ. ಇಡೀ ವಿಶ್ವದಲ್ಲಿರೋ ಭಾಷೆಗಳನ್ನೆಲ್ಲಾ ಲೆಕ್ಕಕ್ಕೆ ತೆಗೆದುಕೊಂಡರೆ ಕನ್ನಡದ ಸ್ಥಾನ ಇಪ್ಪತ್ತೊಂದನೇದು.
ಬಹಳ ಚುರುಕಾಗಿ, ವೇಗವಾಗಿ ನಾವು ಮುಂದುವರೀತಾ ಇದೀವಿ ಗುರೂ! ಆದರೆ ಅಂತರ್ಜಾಲ ತಾಣದಲ್ಲಿ ಕನ್ನಡದ ನುಡಿಗುಡಿಯ ಈ ತೇರು ಎಳೆಯೋಕೆ ನಿಮ್ಮದೂ ಎರಡು ಕೈ ಸೇರಿದರೆ ಬೊಂಬಾಟಾಗಿರುತ್ತೆ. ನಿಮಗೂ ವಿಕ್ಷನರಿಗೆ ಕನ್ನಡ ಪದಗಳನ್ನು ಸೇರಿಸೋ ಮನಸ್ಸಿದ್ದಲ್ಲಿ ವಿಕ್ಷನರಿಯ ತಾಣಕ್ಕೆ ಭೇಟಿ ಕೊಡಿ. ಅಲ್ಲಿರೋ ಸಮುದಾಯ ಪುಟದಲ್ಲಿ ಹೇಗೆ ಪದ ಸೇರಿಸಬೇಕು ಅಂತಾ ಇದೆ. ಅದರಲ್ಲಿ ಬರೆದಿರೋ ರೀತೀಲಿ ಪದ ಸೇರಿಸಿದರೆ ಆಯ್ತು. ನಿಮಗೆ ನಮ್ಮೊಂದಿಗೆ ಕೈಜೋಡಿಸೋಕೆ ಆಸಕ್ತಿ ಇದ್ದಲ್ಲಿ [email protected] ಗೆ ಒಂದು ಮಿಂಚೆ ಹಾಕಿ...ಗುರೂ!! (ಏನು ಗುರು?)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications