'ಒತ್ತಡ ಹೇರಿದರೆ ಹಿಂದಿ ಭಾಷೆ ಕಲಿಯಲಾರೆ'

ಭಾರತಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಅತಿಯಾಗಿ ಚರ್ಚೆಗೊಳಗಾದ ವಿಷಯಗಳಲ್ಲೊಂದು "ಭಾರತದ ಭಾಷಾನೀತಿ". ಸಂವಿಧಾನ ರಚಿಸುವಾಗ ಯಾವ ಭಾಷೆಯಲ್ಲಿ ಬರೆಯಬೇಕು ಎನ್ನುವುದರಿಂದ ಆರಂಭವಾದ ಈ ಚರ್ಚೆ ಭಾರತಕ್ಕೆ ಯಾವುದು ರಾಷ್ಟ್ರಭಾಷೆಯಾಗಬೇಕು ಎನ್ನುವವರೆಗೂ ಮುಂದುವರೆಯಿತು. ಭಾರತದ ಸಂವಿಧಾನವನ್ನು ರಚಿಸಿ, ಜಾರಿಗೆ ತರಲು ಸಂವಿಧಾನ ಸಮಿತಿಯನ್ನು (Constituent assembly) ರೂಪಿಸಲಾಯಿತು. ಇದರ ಅಧ್ಯಕ್ಷರಾಗಿ ಡಾ. ಬಾಬು ರಾಜೇಂದ್ರಪ್ರಸಾದ್ ನೇಮಕವಾದರು. ಡಾ. ಬಿ ಆರ್ ಅಂಬೇಡ್ಕರ್ ಅವರು ಕರಡು ಸಮಿತಿಯ ಅಧ್ಯಕ್ಷರಾದರು. ಡಿಸೆಂಬರ್ 11, 1946ರಂದು ಮೊದಲು ಸಭೆ ಸೇರಿದ ಸಮಿತಿಯು 1950ರ ಜನವರಿ, 26ರಂದು ಭಾರತದ ಸಂವಿಧಾನವು ಜಾರಿಯಾಗಿ, ನಂತರ ಮೊದಲ ಸಾರ್ವಜನಿಕ ಚುನಾವಣೆಗಳು ನಡೆದು ಹೊಸ ಸರ್ಕಾರ ರೂಪುಗೊಳ್ಳುವವರೆಗೂ ಅಸ್ತಿತ್ವದಲ್ಲಿತ್ತು. ಈ ಸಮಿತಿಯು ಹಿಂದೀಯನ್ನು ಭಾರತದ ರಾಷ್ಟ್ರಭಾಷೆಯಾಗಿಸಲು ಉತ್ಸುಕವಾಗಿತ್ತು. ಭಾರತಕ್ಕೆ ಹಿಂದೀಯನ್ನು ರಾಷ್ಟ್ರಭಾಷೆ ಮಾಡಬೇಕೆನ್ನುವ ಪ್ರಯತ್ನಗಳು ಆ ದಿನಗಳಲ್ಲಿ ನಡೆದರೂ ಹಿಂದೀಯೇತರ ಪ್ರದೇಶಗಳ ತೀವ್ರ ವಿರೋಧದ ಕಾರಣದಿಂದಾಗಿ ಸಾಧ್ಯವಾಗಲಿಲ್ಲ. ಸಂವಿಧಾನ ಸಮಿತಿಯಲ್ಲಿ/ ಅದಕ್ಕೆ ಮುನ್ನ ನಡೆದ ಚರ್ಚೆಗಳಲ್ಲಿ ಗಮನ ಸೆಳೆವ ಎರಡು ಹೇಳಿಕೆಗಳನ್ನು ನೋಡಿದರೆ ಹಿಂದೀ ಪರರ ಮತ್ತು ವಿರೋಧಿಗಳ ಮನಸ್ಥಿತಿ ಅರ್ಥವಾಗುತ್ತದೆ.
ಪ್ರಖರ ಹಿಂದೀವಾದಿ, ಆರ್.ವಿ. ಧುಲೇಕರ್ ಅವರು 10ನೇ ಡಿಸೆಂಬರ್ 1946ರಲ್ಲಿ 'ಹಿಂದಿಯನ್ನು ತಿಳಿಯದ ಯಾವೊಬ್ಬನಿಗೂ ಭಾರತದಲ್ಲಿ ಬದುಕುವ ಹಕ್ಕಿಲ್ಲ. ಭಾರತದ ಸಂಸತ್ತಿನಲ್ಲಿ ಭಾಗವಹಿಸುವ ಹಕ್ಕಿಲ್ಲ. ಅಂಥವರು ಭಾರತ ಬಿಟ್ಟು ತೊಲಗಲಿ" ಎನ್ನುವ ಹೇಳಿಕೆಯನ್ನು ನೀಡಿದರು. ಇದೊಂದು ಹೇಳಿಕೆ ಹಿಂದೀ ಪರವಾದವರ ಮನಸ್ಥಿತಿಯನ್ನು, ಹಿಂದೀಯೇತರರ ಬಗೆಗಿನ ಅಸಹನೆಯನ್ನೂ ತೋರುತ್ತದೆ. ಇದಕ್ಕುತ್ತರವಾಗಿ ಟಿ. ಟಿ ಕೃಷ್ಣಮಾಚಾರಿಯವರು “ಹಿಂದಿಯನ್ನು ನಾನು ಕಲಿಯಲಾರೆ. ಏಕೆಂದರೆ ಹಾಗೆ ಕಲಿಯಿರಿ ಎನ್ನುವ ಮೂಲಕ ನನ್ನ ಮೇಲೆ ನಾನಾ ಕಟ್ಟುಪಾಡುಗಳನ್ನು ಹೇರಲಾಗುತ್ತದೆ. ದೇಶ ಒಡೆಯಬೇಕೆನ್ನುವ ಕೂಗಿಗೆ ನಾವೂ ದನಿಗೂಡಿಸುವಂತೆ ನಿಮ್ಮ ಒತ್ತಾಯದ ನಡವಳಿಕೆ ಇರದಿರಲಿ. ನನ್ನ ಪ್ರೀತಿಯ ಉತ್ತರಪ್ರದೇಶದ ಮಿತ್ರರೇ, ನಿಮಗೆ ಒಗ್ಗೂಡಿದ ಭಾರತ ಬೇಕೋ? ಅಥವಾ ಹಿಂದೀಭಾರತ ಬೇಕೋ ತೀರ್ಮಾನಿಸಿ"ಎಂಬ ಹೇಳಿಕೆ ನೀಡಿದರು.
ಕೊನೆಗೆ ಎರಡೂ ಪಂಗಡಗಳ ನಡುವೆ 1949ರಲ್ಲಿ "ಅಯ್ಯಂಗಾರ್ - ಮುನ್ಶಿ ರಾಜಿ ಒಪ್ಪಂದ"ವುಂಟಾಗಿ ಹಿಂದೀಯನ್ನು ರಾಷ್ಟ್ರಭಾಷೆಯನ್ನಾಗಿಸದೆ ಆಡಳಿತ ಭಾಷೆಯನ್ನಾಗಿಸುವ ಪ್ರಯತ್ನಗಳಾದವು. ಭಾರತದ ಸಂವಿಧಾನದಲ್ಲಿ ಆಡಳಿತ ಭಾಷೆಯಾಗಿ ಹಿಂದೀ ಸ್ಥಾಪಿತವಾದ ದಿನ ಸೆಪ್ಟೆಂಬರ್ 14, 1949ರಂದು. ಹಾಗಾಗಿ ಪ್ರತಿವರ್ಷ ಸೆಪ್ಟೆಂಬರ್ 14ನ್ನು ಭಾರತದ ಎಲ್ಲಾ ಕೇಂದ್ರಸರ್ಕಾರಿ ಕಛೇರಿಗಳಲ್ಲಿ ಹಿಂದೀ ದಿವಸ್ ಎಂದು ಆಚರಿಸುವ ಪರಿಪಾಠ ಆರಂಭವಾಯಿತು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications