ತಾಯ್ನುಡಿಯಲ್ಲಿನ ಮನರಂಜನೆ ಹಕ್ಕಿಗಾಗಿ ದನಿ ಎತ್ತಿ

ಇವೆಲ್ಲವೂ ಮಾರುಕಟ್ಟೆಯಲ್ಲಿ ಹೇಗೆ ತಮ್ಮನ್ನು ತಾವು ಜನರ ಮುಂದೆ ನಿಂತು ಪರೀಕ್ಷೆಗೆ ಒಡ್ಡಿಕೊಂಡು ಜನರ ಮೆಚ್ಚುಗೆಗೆ ಅಥವಾ ತಿರಸ್ಕಾರಕ್ಕೆ ಎದೆಯೊಡ್ಡುತ್ತಾವೋ ಅಂಥದ್ದೇ ಅವಕಾಶ ಡಬ್ ಆಗಿರೋ ಸಿನಿಮಾಗಳಿಗೂ ಇರಬೇಕು. ಇದೇ ಸರಿಯಾದ ಮಾರ್ಗ. ಹಾಗಾದ್ರೆ ಬ್ಲೂಫಿಲಂ ತೆಗೀಬೋದಾ ಅನ್ನೋ ಮೊಂಡುವಾದವೂ ಬರುತ್ತೆ! ಸ್ವಾಮೀ... 'ಅದು ಕಾನೂನು ಬಾಹಿರವಾಗಿದ್ದರೆ ತೆಗೆಯುವಂತಿಲ್ಲ! ಕಾನೂನು ಬಾಹಿರವಾಗಿಲ್ಲದಿದ್ದರೆ ತೆಗೆಯಬಹುದು’ ಎನ್ನುವುದು ಕಾನೂನಿನ ಪ್ರಾಥಮಿಕ ಜ್ಞಾನವಿರುವವರಿಗೆ ಅರ್ಥವಾಗೋ ವಿಷಯವಾಗಿದೆ. ಗ್ರಾಹಕನೇ ಬೇಕು ಬೇಡಾ ನಿರ್ಧಾರ ಮಾಡೋ ಅತಿದೊಡ್ಡ ವ್ಯಕ್ತಿ, ಶಕ್ತಿ. ಇದನ್ನು ಕೃತಕವಾಗಿ ನಿಷೇಧಗಳ ಮೂಲಕ ಕಟ್ಟಿ ಹಾಕೋದನ್ನು ಪ್ರಜಾಪ್ರಭುತ್ವವಾದಿಗಳು ಎಂದು ಹೇಳಿಕೊಳ್ಳುವವರೇ ಒಪ್ಪುವುದಾದರೆ ಸಾಮಾನ್ಯ ಜನರೂ ಸುಮ್ಮನಿರಲಾದೀತೇ?
ಈ ಪಿಟಿಶನ್ ಮೂಲಕ ದನಿ ಎತ್ತೋಣ!
ಮತದಾನವಲ್ಲದ ದಾರಿಯ ಮೂಲಕ ನಾವು ಎಚ್ಚೆತ್ತ ಗ್ರಾಹಕರು ಎನ್ನುವ ಸಂದೇಶವನ್ನು ನೀಡಲು... ನಮ್ಮ ಹಕ್ಕುಗಳನ್ನು ಇನ್ನು ದಮನಿಸಲಾಗದು ಎನ್ನುವುದನ್ನು ಸಾರಲು... ಎಲ್ಲಕ್ಕಿಂತಾ ಮುಖ್ಯವಾಗಿ ಸುವರ್ಣ/ ಸ್ಟಾರ್ ಸಮೂಹದವರಿಗೆ ಪ್ರೇಕ್ಷಕರಾದ ನಮ್ಮ ನಿಲುವು ತಿಳಿಸಲು, 'ಪಟ್ಟಭದ್ರರ ಬೆದರಿಕೆಗೆ ಬಾಗಬೇಡಿರೆಂದೂ ನಿಮ್ಮೊಂದಿಗೆ ನಾವಿದ್ದೇವೆಂದೂ’ ಸಾರಲು ಈ ಒಂದು ಮಿಂಬಲೆ ಮನವಿ("ಆನ್ಲೈನ್ ಪಿಟಿಶನ್")ಯನ್ನು ಸಮಾನ ಮನಸ್ಕರು ಆರಂಭಿಸಿದ್ದೇವೆ. ಜಾಗೃತ ಗ್ರಾಹಕರು ಎನ್ನುವ ಹೆಸರಿನಲ್ಲಿ ನಾವು ಇದನ್ನು ಮಿಂಬಲೆ ತಾಣದಲ್ಲಿ ಹಾಕಿದ್ದೇವೆ.
ದೂರದರ್ಶನ/ ಚಿತ್ರರಂಗದ ಕೆಲಸಂಘಟನೆಗಳ ಜನವಿರೋಧಿ ಹಾಗೂ ಸರ್ವಾಧಿಕಾರಿ ಧೋರಣೆಯನ್ನೂ ಖಂಡಿಸುತ್ತಾ, ನಮ್ಮ 'ತಾಯ್ನುಡಿಯಲ್ಲಿನ ಮನರಂಜನೆಯ ಹಕ್ಕಿ’ಗಾಗಿ ದನಿ ಎತ್ತೋಣ. ಈ ಮನವಿಗೆ ನೀವೂ ಸಹಿ ಹಾಕಿ, ನಿಮ್ಮ ಗೆಳೆಯರಿಗೂ ಸಹಿ ಹಾಕಲು ಹೇಳಿ. ಇದನ್ನು ಸಂಬಂಧಪಟ್ಟವರಿಗೆ ತಲುಪಿಸುವ ಕೆಲಸವನ್ನು ನಾವು ಮಾಡುತ್ತೇವೆ. ಕನ್ನಡ ಕನ್ನಡಿಗ ಕರ್ನಾಟಕಗಳ ಒಳಿತಿಗೆ ಡಬ್ಬಿಂಗ್ ಚಿತ್ರಗಳು ಪೂರಕವಲ್ಲವಾಗಬಲ್ಲುವೇ ಹೊರತು ಮಾರಕವಲ್ಲಾ ಎನ್ನುವ ದಿಟವೇ ಗೆಲ್ಲಲಿ. [ಸ್ನೇಹಸೇತು : ಏನ್ ಗುರು?]
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications