536267ayurvedaಧೂಮಲೀಲೆ ತಡೆಗೆ ಮನೆಮದ್ದು/mixed-bag/health/2009/0713-ayurveda-home-medicine-helps-quit-smoking.htmlಸಿಗರೇಟು ಬೀಡಿ ಸೇದುವುದನ್ನು ಬಿಡಿ ಎಂದು ಚಟ ಅಂಟಿಸಿಕೊಂಡವರಿಗೆ ತಿಳಿಯಹೇಳುವುದು ಕಷ್ಟಸಾಧ್ಯ. ಬುದ್ದಿ ಹೇಳಿದರೆ ಕೆಲವೊಮ್ಮೆ ಮಹಾಪರಾಧವೇ ಆಗುತ್ತದೆ!ಯಾಕೆಂದರೆ, ತಂಬಾಕು ಬುದ್ದಿ ಹೇಳುವವರಿಗಿಂತ ಹೆಚ್ಚು ಬುದ್ದಿವಂತ. ಧೂಮಪಾನದ ಚಟ ದೆವ್ವ ಹಿಡಿದಹಾಗೆ. ಮಾವು ಬೇವು ನಿಂಬೆ ಸೊಪ್ಪಿಗೆ ಅದು ಬೆದರುವುದಿಲ್ಲ. ತಾನೇ ತಾನಾಗಿ ಕಾಲಿಗೆ ಬುದ್ದಿಹೇಳಿ ಹೋಗುವವವರೆಗೂ ಚಟ ಬೆಳೆಸಿಕೊಂಡವರ ಬೆನ್ನು ಹತ್ತಿದ ಬೇತಾಳನಾಗಿ 37946http://kannada.oneindia.com/img/2009/07/13-smoking1.gif536267ayurvedaಆಹಾರ ಮತ್ತು ಆರೋಗ್ಯ : ಡಾ. ವಸುಂಧರಾ ಭೂಪತಿ/column/gv/2009/0725-food-and-health-book-by-vasundhara-bhupathi.htmlಆಯುರ್ವೇದ ತಜ್ಞರಾದ ಡಾ. ವಸುಂಧರಾ ಭೂಪತಿ ಬರೆದಿರುವ 'ಆಹಾರ ಮತ್ತು ಆರೋಗ್ಯ' ಪುಸ್ತಕ ಪರಿಚಯ ಇಲ್ಲಿದೆ. ವಸುಂಧರಾ ಹೇಳುವಂತೆ, ಆಹಾರದಲ್ಲಿ ಬರಿ ಸಿಹಿರಸ ಆರೋಗ್ಯಕ್ಕೆ ಒಳ್ಳೆಯದಲ್ಲ. ನಮ್ಮ ಆಹಾರ ಸಂತುಲಿತವಾಗಿರಬೇಕು, ಅಂದರೆ ಷಡ್ರಸದಿಂದ ಕೂಡಿರಬೇಕು. ಮಧುರ, ಆಮ್ಲ, ಲವಣ, ಕಟು, ತಿಕ್ತ, ಕಷಾಯ (ಸಿಹಿ, ಹುಳಿ, ಉಪ್ಪು, ಖಾರ, ಒಗರು, ಕಹಿ) ಇವೇ ಆರು ರಸಗಳು.* ಡಾ. 38208http://kannada.oneindia.com/img/2009/08/01-vasundhara-bhupathi1.jpg536267ayurvedaಆರೋಗ್ಯವರ್ಧಕ ಹಣ್ಣು ಮತ್ತು ಸೊಪ್ಪುಗಳು/column/gv/2009/0801-food-for-good-health-vasundhara-bhupathi.htmlನಾವು ಸೇವಿಸುವ ಆಹಾರ ಮತ್ತು ಮನಸ್ಸಿಗೆ ಒಂದು ಅನ್ಯೋನ್ಯ ಸಂಬಂಧವಿದೆ. ಮನಸ್ಸು ಸೂಕ್ಷ್ಮ ಹಾಗೂ ಸರ್ವವ್ಯಾಪಿ. ಮನಸ್ಸು ಆತ್ಮ ಹಾಗೂ ಶರೀರಗಳ ಮಧ್ಯದ ಸೇತುವೆ. ಮನಸ್ಸು ತನ್ನ ಅಧೀನವಾದ ದೇಹವನ್ನು ನಿಷ್ಕಾಳಜಿ ಮಾಡಿದರೆ ಅದು ತನಗಾದ ನೋವನ್ನು ಕ್ಷಮಿಸುವುದಿಲ್ಲ. ಮನಸ್ಸು ರೋಗಗಳನ್ನು ಸೃಷ್ಟಿಸಬಲ್ಲದು ಹಾಗೂ ಗುಣಪಡಿಸಬಲ್ಲದು. ನೀನೇನು ತಿನ್ನುವಿಯೋ ಅದರಿಂದ ಹೊಟ್ಟೆ ಹುಣ್ಣು ಬರುವುದಿಲ್ಲ; ನಿನ್ನನ್ನೇನು ತಿನ್ನುತ್ತದೆಯೋ 38361http://kannada.oneindia.com/img/2009/08/01-vasundhara-bhupathi1.jpg536267ayurvedaಅಂತಾರಾಷ್ಟ್ರೀಯ ಔಷಧ ಮಾರುಕಟ್ಟೆಯಲ್ಲಿ ಭಾರತ ನಾಪತ್ತೆ!/mixed-bag/health/2009/0805-india-way-behind-world-drug-corridor.html1961ನೇ ಇಸ್ವಿಯಲ್ಲಿ ಪ್ರಪಂಚದಾದ್ಯಂತ ಲಕ್ಷಾಂತರ ಗರ್ಭಿಣಿ ಸ್ತ್ರೀಯರು ಗರ್ಭವತಿಯಾಗಿದ್ದಾಗ ಸಹಜವಾಗಿರುವ ವಾಂತಿ ಮತ್ತು ಸುಸ್ತನ್ನು ನಿಯಂತ್ರಿಸಲು ಪಲಿಡೋ ಮೈಡ್ ಎಂಬ ಔಷಧಿಯನ್ನು ಸೇವಿಸಿದರು. ಪರಿಣಾಮ ಸಹಸ್ರಾರು ಮುದ್ದು ಕಂದಮ್ಮಗಳು ಅಂಗಾಂಗ ನ್ಯೂನತೆಯಿಂದ ಬಳಲುವಂತಾಯಿತು. ಇದರಿಂದಾಗಿ ವಿಶ್ವದ ಔಷಧ ತಯಾರಿಕಾ ಕಾರ್ಖಾನೆಗಳ ಮೇಲೆ ಫಾರ್ಮಕೊ ವಿಜಿಲೆನ್ಸ್ ಅಥವಾ ಔಷಧಿ ನಿಯಂತ್ರಣ ಕಾಯಿದೆ ಕಟುವಾಯಿತು. ಹಾಗೆಂದು ಔಷಧಗಳ ಬಳಕೆಯಿಂದಾಗಿ ಉದ್ಭವಿಸುವ 38432http://kannada.oneindia.com/img/2009/08/05-kumar-kuntikanamata1.jpg536267ayurvedaಹುಟ್ಟಿದ ಮಗುವಿಗೆ ತಾಯಿಯ ಹಾಲೇ ಸರ್ವಶ್ರೇಷ್ಠ/column/gv/2009/0808-the-importance-of-breast-feeding.html"ಮಕ್ಕಳ ಆಹಾರ"ದ ಬಗ್ಗೆ ಡಾ|| ಎಸ್. ಪಾರ್ವತಿ ನಾಗೇಂದ್ರ ಅವರು ವಿವರವಾಗಿ ಬರೆದಿದ್ದಾರೆ. ಅವರು ಹೇಳುವ ಮಹತ್ವದ ಮಾತುಗಳು ಹೀಗಿವೆ:"ಹುಟ್ಟಿದ ಮಗುವಿಗೆ ತಾಯಿಯ ಹಾಲು ಎಲ್ಲ ರೀತಿಯಿಂದಲೂ ಸರ್ವೋತ್ತಮ ಆಹಾರ. ತಾಯಿಯ ಹಾಲು ಅಮೃತವಿದ್ದಂತೆ, ಅದು ಮಧುರಸವುಳ್ಳದ್ದು. ಪೌಷ್ಟಿಕವಾಗಿಯೂ, ಶಕ್ತಿದಾಯಕವಾಗಿಯೂ ಮತ್ತು ಜೀರ್ಣಕ್ಕೆ ಸುಲಭವೂ ಆಗಿದೆ. ತಾಯಿ ತನ್ನ ಮಗುವಿಗೆ ಹಾಲು ಕೊಡುವುದರಿಂದ ತನ್ನ ಆರೋಗ್ಯಕ್ಕೆ ಹಾನಿ 38514http://kannada.oneindia.com/img/2009/08/08-breast-feeding1.jpg542406food and healthಆಹಾರ ಮತ್ತು ಆರೋಗ್ಯ : ಡಾ. ವಸುಂಧರಾ ಭೂಪತಿ/column/gv/2009/0725-food-and-health-book-by-vasundhara-bhupathi.htmlಆಯುರ್ವೇದ ತಜ್ಞರಾದ ಡಾ. ವಸುಂಧರಾ ಭೂಪತಿ ಬರೆದಿರುವ 'ಆಹಾರ ಮತ್ತು ಆರೋಗ್ಯ' ಪುಸ್ತಕ ಪರಿಚಯ ಇಲ್ಲಿದೆ. ವಸುಂಧರಾ ಹೇಳುವಂತೆ, ಆಹಾರದಲ್ಲಿ ಬರಿ ಸಿಹಿರಸ ಆರೋಗ್ಯಕ್ಕೆ ಒಳ್ಳೆಯದಲ್ಲ. ನಮ್ಮ ಆಹಾರ ಸಂತುಲಿತವಾಗಿರಬೇಕು, ಅಂದರೆ ಷಡ್ರಸದಿಂದ ಕೂಡಿರಬೇಕು. ಮಧುರ, ಆಮ್ಲ, ಲವಣ, ಕಟು, ತಿಕ್ತ, ಕಷಾಯ (ಸಿಹಿ, ಹುಳಿ, ಉಪ್ಪು, ಖಾರ, ಒಗರು, ಕಹಿ) ಇವೇ ಆರು ರಸಗಳು.* ಡಾ. 38208http://kannada.oneindia.com/img/2009/08/01-vasundhara-bhupathi1.jpg542406food and healthಆರೋಗ್ಯವರ್ಧಕ ಹಣ್ಣು ಮತ್ತು ಸೊಪ್ಪುಗಳು/column/gv/2009/0801-food-for-good-health-vasundhara-bhupathi.htmlನಾವು ಸೇವಿಸುವ ಆಹಾರ ಮತ್ತು ಮನಸ್ಸಿಗೆ ಒಂದು ಅನ್ಯೋನ್ಯ ಸಂಬಂಧವಿದೆ. ಮನಸ್ಸು ಸೂಕ್ಷ್ಮ ಹಾಗೂ ಸರ್ವವ್ಯಾಪಿ. ಮನಸ್ಸು ಆತ್ಮ ಹಾಗೂ ಶರೀರಗಳ ಮಧ್ಯದ ಸೇತುವೆ. ಮನಸ್ಸು ತನ್ನ ಅಧೀನವಾದ ದೇಹವನ್ನು ನಿಷ್ಕಾಳಜಿ ಮಾಡಿದರೆ ಅದು ತನಗಾದ ನೋವನ್ನು ಕ್ಷಮಿಸುವುದಿಲ್ಲ. ಮನಸ್ಸು ರೋಗಗಳನ್ನು ಸೃಷ್ಟಿಸಬಲ್ಲದು ಹಾಗೂ ಗುಣಪಡಿಸಬಲ್ಲದು. ನೀನೇನು ತಿನ್ನುವಿಯೋ ಅದರಿಂದ ಹೊಟ್ಟೆ ಹುಣ್ಣು ಬರುವುದಿಲ್ಲ; ನಿನ್ನನ್ನೇನು ತಿನ್ನುತ್ತದೆಯೋ 38361http://kannada.oneindia.com/img/2009/08/01-vasundhara-bhupathi1.jpg542406food and healthಹುಟ್ಟಿದ ಮಗುವಿಗೆ ತಾಯಿಯ ಹಾಲೇ ಸರ್ವಶ್ರೇಷ್ಠ/column/gv/2009/0808-the-importance-of-breast-feeding.html"ಮಕ್ಕಳ ಆಹಾರ"ದ ಬಗ್ಗೆ ಡಾ|| ಎಸ್. ಪಾರ್ವತಿ ನಾಗೇಂದ್ರ ಅವರು ವಿವರವಾಗಿ ಬರೆದಿದ್ದಾರೆ. ಅವರು ಹೇಳುವ ಮಹತ್ವದ ಮಾತುಗಳು ಹೀಗಿವೆ:"ಹುಟ್ಟಿದ ಮಗುವಿಗೆ ತಾಯಿಯ ಹಾಲು ಎಲ್ಲ ರೀತಿಯಿಂದಲೂ ಸರ್ವೋತ್ತಮ ಆಹಾರ. ತಾಯಿಯ ಹಾಲು ಅಮೃತವಿದ್ದಂತೆ, ಅದು ಮಧುರಸವುಳ್ಳದ್ದು. ಪೌಷ್ಟಿಕವಾಗಿಯೂ, ಶಕ್ತಿದಾಯಕವಾಗಿಯೂ ಮತ್ತು ಜೀರ್ಣಕ್ಕೆ ಸುಲಭವೂ ಆಗಿದೆ. ತಾಯಿ ತನ್ನ ಮಗುವಿಗೆ ಹಾಲು ಕೊಡುವುದರಿಂದ ತನ್ನ ಆರೋಗ್ಯಕ್ಕೆ ಹಾನಿ 38514http://kannada.oneindia.com/img/2009/08/08-breast-feeding1.jpg542406food and healthಆಹಾರ ಮತ್ತು ಆರೋಗ್ಯ:ಊಟ ಬಲ್ಲವನಿಗೆ ರೋಗವಿಲ್ಲ-4/column/gv/2009/0815-food-and-health-books-by-various-authors.html"ಮಧುಮೇಹಿಗಳಿಗೆ ಆರೋಗ್ಯಕರ ಆಹಾರ" ಎಂಬ ಪ್ರಬಂಧವನ್ನು ಡಾ.ಸುನೀತಾ ಜಗನ್ನಾಥ್ ಬರೆದಿದ್ದಾರೆ. ಮಧುಮೇಹ ಅರ್ಥಾತ್ ಸಕ್ಕರೆ ಕಾಯಿಲೆ ಸಾವಿರಾರು ವರ್ಷಗಳಿಂದ ಮನುಷ್ಯನನ್ನು ಬಾಧಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ರೋಗದಿಂದ ಬಳಲುವವರ ಸಂಖ್ಯೆ ಹೆಚ್ಚಾಗಲು ಕಾರಣ- ಬದಲಾಗುತ್ತಿರುವ ನಮ್ಮ ಜೀವನಶೈಲಿ, ಮಾನಸಿಕ ಒತ್ತಡ, ದೇಹಕ್ಕೆ ಅವಶ್ಯಕವಾಗಿರುವುದಕ್ಕಿಂತ ಹೆಚ್ಚಾಗಿ ಆಹಾರ ಸೇವಿಸುವುದು, ಪರಿಶ್ರಮವಿಲ್ಲದ ಕೆಲಸ, ಬಾಯಿಚಪಲ 38641http://kannada.oneindia.com/img/2009/08/15-healthy-food1.jpg194439healthy foodಸುರತ ಕ್ರೀಡೆಗೆ ಬೇಕು ಸಮತೂಕದ ಆಹಾರ/lifestyle/kamasutra/2008/0806-diet-for-healthy-sex.htmlಸಾಮಾನ್ಯವಾಗಿ ನಿಮ್ಮ ಪರಿಪೂರ್ಣ ಲೈಂಗಿಕ ಆರೋಗ್ಯಕ್ಕೆ ಈ ಮಾತ್ರೆ ನುಂಗಿ, ಈ ಪಾನೀಯ ಕುಡಿಯಿರಿ ಎಂದೆಲ್ಲಾ ಜಾಹೀರಾತು ನೋಡಿರುತ್ತೀರಾ. ಆದ್ರೆ ಈ ರೀತಿ ಮಾತ್ರೆ, ಜ್ಯೂಸುಗಳು ಹಾಗೂ ಚಾಕಲೋಟುಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಹಾನಿಯಾಗುವುದರ ಜೊತೆಗೆ ನಿದ್ರೆಯ ಜೋಂಪು ಹೆಚ್ಚಾಗುವುದು ಸಾಮಾನ್ಯ. ನಿದ್ರೆಗೆ ಶರಣಾದರೆ ಇನ್ನು ಪ್ರಣಯದ ಮಾತೆಲ್ಲಿ? ಶತಶತಮಾನಗಳಿಂದಲೂ ಪ್ರಣಯಕ್ಕಾಗಿ ಆರೋಗ್ಯವರ್ಧನೆ, ದೈಹಿಕ ಕಸರತ್ತು ನಡೆಸಿಕೊಂಡು ಬಂದಿದ್ದಾರೆ 1479http://kannada.oneindia.com/img/2009/07/24-healthy-food1.jpg194439healthy foodಸಂಜಿಮುಂದ ತಟ್ಟಿ ಸಜ್ಜೆ ರೊಟ್ಟಿ/recipe/breakfast/2009/0123-sajje-rotti-recipe-by-aditya-nadig.htmlಹೆಚ್ಚಿನ ಸಾಮನು ಕೇಳದ ಆದರೆ ಸಹನೆ ಮತ್ತು ಸಮಯ ಎರಡನ್ನೂ ಬಯಸುವ ಸಜ್ಜೆ ರೊಟ್ಟಿ ಮಾಡುವ ವಿಧಾನ. ಎಣ್ಣೆಯ ಹನಿ ಕೂಡ ಸೋಕದ ಈ ತಿನಿಸು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ಸಜ್ಜೆ ರೊಟ್ಟಿ ಅಥವಾ ಸಜ್ಜಿ ರೊಟ್ಟಿಯನ್ನು ಸಂಕ್ರಾಂತಿಯಂದು ವಿಶೇಷವಾಗಿ ತಯಾರಿಸುತ್ತಾರೆ.* ಆದಿತ್ಯ ನಾಡಿಗ್, ನೀಚಡಿ, ಸಾಗರಬೇಕಾಗುವ ಸಾಮಾನುಗಳು:ಸಜ್ಜೆ ಹಿಟ್ಟು – 2 ಬಟ್ಟಲುಉಪ್ಪು – 34258http://kannada.oneindia.com/img/2009/01/23-sajje-rotti1.jpg194439healthy foodಮಲ್ಲಿಗೆ ಹೂ ಅಲ್ಲವಿದು ಅಕ್ಕಿ ಇಡ್ಲಿ/recipe/breakfast/2009/0128-everybodys-favourite-breakfast-rice-idly.htmlಇಡ್ಲಿ ತಯಾರಿಸುವುದರಲ್ಲಿಯೂ ಅನೇಕ ವಿಧಾನಗಳಿವೆ. ಅಕ್ಕಿ ಇಡ್ಲಿ, ರವೆ ಇಡ್ಲಿ, ದಹಿ ಇಡ್ಲಿ, ಸೌತೆ ಇಡ್ಲಿ, ಮಸಾಲಾ ಬಾದಾಮಿ ಇಡ್ಲಿ... ಲಾಸ್ಟ್ ಬಟ್ ನಾಟ್ ದಿ ಲೀಸ್ಟ್ ತಟ್ಟೆ ಇಡ್ಲಿ. ಇಡ್ಲಿ ತಯಾರಿಸುವುದೂ ಒಂದು ಕಲೆ. ಎಲ್ಲ ಪದಾರ್ಥಗಳು ಸರಿಯಾಗಿ ಇದ್ದರೇನೇ ಮಲ್ಲಿಗೆ ಹೂವಿನಂಥ ಇಡ್ಲಿ ಅರಳಿ ಬರುತ್ತವೆ. ಅದರಲ್ಲೂ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಶಂಕರಪುರದ ಬ್ರಾಹ್ಮಣರ 34332http://kannada.oneindia.com/img/2009/01/28-idly1.jpg194439healthy foodಕರಿಬೇವಿನ ಹಸಿ ಹಸಿ ಚಟ್ನಿ ರೆಸಿಪಿ/recipe/sirsi-bhavana/2009/0213-good-food-curry-leaves-chutney.htmlಕರಿಬೇವು (curry leaf) ಬಹೂಪಯೋಗಿ. ಅದಿಲ್ಲದೆ ನಮ್ಮ ಅಡುಗೆ ಮನೆಗಳು ಭಣಭಣ. ಏನೇ ಅಡುಗೆ ಕಾರ್ಯಕ್ರಮವಿದ್ದರೂ ಚಟಪಟ ಒಗ್ಗರಣೆಗೆ ಕರಿಬೇವು ಹಾಜರಿರಲೇಬೇಕು. ಸಾಮಾನ್ಯವಾಗಿ ನಾವು ಅದನ್ನು ಒಂದು ಪೂರಕ ಸಾಮಗ್ರಿಯಾಗಿ ಬಳಸುವುದು ರೂಢಿ. ಆದರೆ ಅದನ್ನೇ ಮುಖ್ಯ ವಸ್ತು ಮಾಡಿಕೊಂಡು ಇತರ ಆರೋಗ್ಯಕರ ಅಡುಗೆ ಪದಾರ್ಥಗಳನ್ನು ತಯಾರಿಸಬಹುದು. ಈ ವಾರ ಕರಿಬೇವಿನ ಚಟ್ನಿ ಮಾಡಿದರೆ ಹೇಗೆ?* ತೇಜಸ್ವಿನಿ 34624http://kannada.oneindia.com/img/2009/02/13-curry-leaves-chutney1.jpg194439healthy foodಹುಚ್ಚೆಳ್ ಚಟ್ನಿ ಇಲ್ಲದ ರಾಗಿರೊಟ್ಟಿ/recipe/breakfast/2009/0217-ragi-rotti-recipe.htmlರಾಗಿ ರೊಟ್ಟಿ ಹುಚ್ಚೆಳ್ ಚಟ್ನಿ ತಂದಿವ್ನಿ ನನ್ ಮಗನೆ ಎಂದು ಹಾಡುವ ಹಾಗೇ ಇಲ್ಲ. ಯಾಕೆಂದರೆ, ನಮಗೆ ಹುಚ್ಚೆಳ್ ಚಟ್ನಿ ಮಾಡುವ ವಿಧಾನ ಇನ್ನೂ ಗೊತ್ತಿಲ್ಲ. ನಿಮಗೆ ಗೊತ್ತೇನು?* ಅಸೀಮಾ ನೂರ್, ಆನೇಕಲ್ರಾಗಿರೊಟ್ಟಿಗೆ ಬೇಕಾದ ಸಾಮಗ್ರಿಗಳುರಾಗಿ ಹಿಟ್ಟು - 2 ಲೋಟಸುಮಾರು ಗಾತ್ರದ ಈರುಳ್ಳಿ - 2ಹಸಿರು ಮೆಣಸಿನಕಾಯಿ - 4ಶುಂಠಿ - ಸಣ್ಣ ತುಂಡುಉಪ್ಪು - 34713http://kannada.oneindia.com/img/2009/02/17-ragi-rotti1.jpgnews"> ಆಹಾರ ಮತ್ತು ಆರೋಗ್ಯ:ಊಟ ಬಲ್ಲವನಿಗೆ ರೋಗವಿಲ್ಲ-4 | Dr Suneetha Jagannath | Ayurvedic consultant | Food and health | Ayurveda | ಆಹಾರ ಮತ್ತು ಆರೋಗ್ಯ:ಊಟ ಬಲ್ಲವನಿಗೆ ರೋಗವಿಲ್ಲ-4 - Kannada Oneindia

ಆಹಾರ ಮತ್ತು ಆರೋಗ್ಯ:ಊಟ ಬಲ್ಲವನಿಗೆ ರೋಗವಿಲ್ಲ-4

Health and Food
"ಮಧುಮೇಹಿಗಳಿಗೆ ಆರೋಗ್ಯಕರ ಆಹಾರ" ಎಂಬ ಪ್ರಬಂಧವನ್ನು ಡಾ.ಸುನೀತಾ ಜಗನ್ನಾಥ್ ಬರೆದಿದ್ದಾರೆ. ಮಧುಮೇಹ ಅರ್ಥಾತ್ ಸಕ್ಕರೆ ಕಾಯಿಲೆ ಸಾವಿರಾರು ವರ್ಷಗಳಿಂದ ಮನುಷ್ಯನನ್ನು ಬಾಧಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ರೋಗದಿಂದ ಬಳಲುವವರ ಸಂಖ್ಯೆ ಹೆಚ್ಚಾಗಲು ಕಾರಣ- ಬದಲಾಗುತ್ತಿರುವ ನಮ್ಮ ಜೀವನಶೈಲಿ, ಮಾನಸಿಕ ಒತ್ತಡ, ದೇಹಕ್ಕೆ ಅವಶ್ಯಕವಾಗಿರುವುದಕ್ಕಿಂತ ಹೆಚ್ಚಾಗಿ ಆಹಾರ ಸೇವಿಸುವುದು, ಪರಿಶ್ರಮವಿಲ್ಲದ ಕೆಲಸ, ಬಾಯಿಚಪಲ (ಫಾಸ್ಟ್‌ಫುಡ್, ಜಂಕ್‌ಫುಡ್) ಎನ್ನುತ್ತಾರೆ.

* ಡಾ. 'ಜೀವಿ' ಕುಲಕರ್ಣಿ, ಮುಂಬಯಿ

ಮಧುಮೇಹ ರೋಗಕ್ಕೆ ಮುಖ್ಯ ಕಾರಣಗಳನ್ನು ಪಟ್ಟಿಮಾಡುತ್ತಾರೆ: (1) ಆನುವಂಶೀಯತೆ (ತಂದೆ-ತಾಯಿಯಲ್ಲಿ ಯಾರಾದರೂ ಒಬ್ಬರಿಗೆ ಈ ಕಾಯಿಲೆ ಇದ್ದರೆ ಅದು ಮಕ್ಕಳಿಗೆ ಬರುವ ಸಾಧ್ಯತೆ ಹೆಚ್ಚು.) (2) ಬೊಜ್ಜು (ವ್ಯಾಯಾಮರಹಿತ ಜೀವನ, ಸೋಮಾರಿತನದ ಫಲ) (3) ಒತ್ತಡ (ಮಾನಸಿಕ ಒತ್ತಡ, ಕ್ರೋಧ, ಚಿಂತೆ, ದ್ವೇಷ, ದುಃಖ ಇವುಗಳಿಂದ ಅಡ್ರಿನಾಲ್ ಗ್ರಂಥಿ ಉತ್ತೇಜಿತವಾಗಿ ರಕ್ತದಲ್ಲಿ ಸಕ್ಕರೆಯ ಅಂಶ ಹೆಚ್ಚಾಗುವ ಸಾಧ್ಯತೆ ಇದೆ.) (4) ದ್ವಿತೀಯ ವಿಧದ ಮಧುಮೇಹ (ಬೇರೆ ರೋಗಗಳ ಕಾರಣದಿಂದ ಮಧುಮೇಹ ಕಾಣಿಸಿಕೊಳ್ಳುತ್ತದೆ.)

ರೋಗ ಲಕ್ಷಣಗಳು: ಅತಿಯಾದ ಮೂತ್ರ ವಿಸರ್ಜನೆ, ಅತಿಯಾದ ಬಾಯಾರಿಕೆ, ಹೆಚ್ಚಾದ ಹಸಿವು, ಕಾರಣವಿಲ್ಲದೆ ತೂಕ ಕಡಿಮೆಯಾಗುವುದು, ದೌರ್ಬಲ್ಯ, ಸುಸ್ತು. (ಎಚ್ಚರಿಕೆ: ಅನುವಂಶೀಯ ಸಾಧ್ಯತೆ ಇರುವವರು, 45-45 ವರ್ಷ ಆದವರು, ವರ್ಷಕ್ಕೆ ಒಂದು ಸಾರಿ ರಕ್ತಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ಬೇಗ ಗುರುತಿಸಿದರೆ ವಾಸಿಮಾಡುವುದು ಸುಲಭ.)

ಮಧುಮೇಹ ಪೀಡಿತರು ಸೇವಿಸಬೇಕಾದ ಆಹಾರದ ವಿವರಗಳು ಲೇಖನದಲ್ಲಿವೆ: (ಪಥ್ಯಾಹಾರ ಸೇವಿಸಬೇಕು, ಅಪಥ್ಯ ಆಹಾರ ಬಿಡಬೇಕು, ತಾಜಾ ಹಣ್ಣು ತರಕಾರಿ ತಿನ್ನಬೇಕು, ನಾರಿನ ಅಂಶವುಳ್ಳ ಆಹಾರ ಸಕ್ಕರೆ ನಿಯಂತ್ರಿಸುವಲ್ಲಿ ಸಹಕಾರಿ.)

"ರೋಗಿಗಳಿಗೆ ಪಥ್ಯದ ಆಹಾರ" ಎಂಬ ಪ್ರಬಂಧವನ್ನು ಡಾ.ಸುಚಿತ್ರಾ ಆರ್ ಅವರು ಬರೆದಿದ್ದಾರೆ. ಪಥ್ಯ ಎಂದೊಡನೆ ಜನಸಾಮಾನ್ಯರಲ್ಲಿ ಕಾಯಿಲೆ ಬಂದಿರುವುದಕ್ಕಿಂತ ಹೆಚ್ಚು ವ್ಯಥೆ ಹಾಗೂ ಬೇಸರ ಉಂಟಾಗುತ್ತದೆ. ಆಯುರ್ವೇದ ವೈದ್ಯರೆಂದರೆ ಹೆಚ್ಚಿನ ಭಯ. ಏಕೆಂದರೆ ಅವರು ಪಥ್ಯವನ್ನು ಹೇಳುತ್ತಾರೆ. ಪಥ್ಯವೆಂದರೆ ನಮಗೆ ಇಷ್ಟವಾದ ಆಹಾರ ನಿಷಿದ್ಧ ಎಂದು ಅರ್ಥವಲ್ಲ, ಆರ್ಯುವೇದದ ದೃಷ್ಟಿಯಲ್ಲಿ ಪಥ್ಯಾಹಾರವೆಂದರೆ “ಕಾಯಿಲೆಗೆ ತಕ್ಕಂತೆ, ಯಾವ ಯಾವ ಪದಾರ್ಥಗಳನ್ನು ಬಳಸಲು ಸೂಚಿಸಲಾಗುತ್ತದೋ ಅವುಗಳನ್ನು ಉಪಯೋಗಿಸಿ ರುಚಿಕರವಾದ ಆಹಾರ ವ್ಯಂಜನಗಳನ್ನು ತಯಾರಿಸಿ ರೋಗಿಗಳು ಸೇವಿಸಬೇಕು" ಎಂದರ್ಥ. ಪಥ್ಯಾಹಾರ ಹೇಗೆ ರುಚಿಕರಮಾಡಿ ಸೇವಿಸಬೇಕು ಎಂಬ ವಿಧಾನ ಹಾಗೂ ವಿವರಗಳು ಇಲ್ಲಿವೆ.

"ಆರೋಗ್ಯಕರ ಅಡುಗೆ" ಎಂಬ ಪ್ರಬಂಧವನ್ನು ಶ್ರೀಮತಿ ವನಜಾಕ್ಷಿ ಶರಣಪ್ಪ ಅವರು ಬರೆದಿದ್ದಾರೆ. ಹೆಸರುಬೇಳೆ ಇಡ್ಲಿ, ಗೋದಿ ಕಡುಬು, ರಾಗಿ, ಮೆಂಥ್ಯ ರೊಟ್ಟಿ, ಗೋದಿ ಪಾಯಸ, ಮಾವಿನ ಹಣ್ಣಿನ ಶಿರಾ, ರಾಗಿ ಮತ್ತು ಆಲೂಗಡ್ಡೆ ದೋಸೆ, ಅಣಬೆ ಪಲಾವ್, ಮಿಶ್ರ ಹಣ್ಣುಗಳ ಸಲಾಡ್ ಮೊದಲಾದವುಗಳನ್ನು ತಯಾರಿಸುವ ವಿಧಾನದ ಬಗ್ಗೆ ಬರೆದಿದ್ದಾರೆ.

"ವೃದ್ಧಾಪ್ಯದ ಆಹಾರ" ಎಂಬ ಪ್ರಬಂಧವನ್ನು ಡಾ. ಪುಷ್ಪಾ ಬಸವರಾಜು ಬರೆದಿದ್ದಾರೆ. ಸಾಮಾನ್ಯವಾಗಿ ರಕ್ತದ ಏರೊತ್ತಡ (ಹೈಬಿಪಿ), ಸಕ್ಕರೆ ಕಾಯಿಲೆ, ಹೃದಯರೋಗ, ಕೀಲುನೋವು, ಬೊಜ್ಜು, ಖಿನ್ನತೆ (ಡಿಪ್ರೆಶನ್), ನ್ಯೂನಪೋಷಣೆ, ಶ್ವಾಸಕೋಶದ ಸೋಂಕು, ಕಣ್ಣಿನ ಪೊರೆ ಮುಂತಾದವುಗಳನ್ನು ವೃದ್ಧರಲ್ಲಿ ಕಾಣುತ್ತೇವೆ. ಕಾಯಿಲೆ ನಮ್ಮ ಕೈಯಲ್ಲಿ ಇರಲಿಕ್ಕಿಲ್ಲ, ಆದರೆ ಆಹಾರ ಸೇವನೆ ನಮ್ಮ ಕೈಯಲ್ಲಿದೆ. "ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ" ಎಂಬ ಗಾದೆ ಇದೆ.

ಊಟ ಹಾಗು ಮಾತಿನ ಮೇಲೆ ನಮ್ಮ ನಿಯಂತ್ರಣ ಸಾಧ್ಯ ಎಂಬ ಪರಿಜ್ಞಾನ ಹೆಚ್ಚಿನ ಜನರಿಗೆ ಇರುವುದಿಲ್ಲ. ವೃದ್ಧರು ನಿಯಮಿತ ವೇಳೆಗೆ ಆಹಾರ ಸೇವಿಸಬೇಕು. ಹಳಸಿದ, ತಂಗಳ ಪದಾರ್ಥಗಳನ್ನು ತಿನ್ನಬಾರದು. ಬಾಯಿಚಪಲಕ್ಕಾಗಿ ಎಣ್ಣೆಯ ತಿಂಡಿ, ಮಸಾಲೆ ಪದಾರ್ಥ ತಿನ್ನಬಾರದು. ಊಟದ ಮಧ್ಯೆ ನೀರು ಕುಡಿಯಬೇಕು. ಉಪ್ಪಿನ ಅಂಶ ಕಡಿಮೆಮಾಡಬೇಕು. ದಿನಕ್ಕೆ 6-8 ಲೋಟ ನೀರು ಕುಡಿಯಬೇಕು. ಮುಪ್ಪನ್ನು ಕೊಂಚಮಟ್ಟಿಗೆ ಮುಂದೂಡುವ ವಿಟಮಿನ್ "ಸಿ" ಇರುವ ಹುಳಿಹಣ್ಣು, ಸೊಪ್ಪು, ವಿಟಮಿನ್ "ಇ" ಇರುವ ಎಣ್ಣೆಕಾಳು, ಮೊಳಕೆಬಂದ ಕಾಳು, ಬಿಟಾ ಕೆರೋಟಿನ್ ಇರುವ ಹಸಿರು ಸೊಪ್ಪು, ತರಕಾರಿ, ಹಳದಿ ಬಣ್ಣದ ಹಣ್ಣುಗಳು (ಪಪ್ಪಾಯ, ಮಾವು, ಕಿತ್ತಳೆ), ಕ್ಯಾರೆಟ್ ಸೇವಿಸಬೇಕು. ಪಪ್ಪಾಯಿಯನ್ನು ಜೇನುಸೇರಿಸಿ ತಿಂದು ಹಾಲು ಕುಡಿದರೆ ವಯಸ್ಸನ್ನು ಮುಂದೂಡಬಹುದು. ಗೋಡಂಬಿ, ಒಣದ್ರಾಕ್ಷಿ, ಖರ್ಜೂರ, ಅಂಜೂರವನ್ನು ಜೀರ್ಣಶಕ್ತಿಗನುಗುಣವಾಗಿ ಬೆಳಿಗ್ಗೆ ತಿನ್ನಬೇಕು.

"ಮಾರಕ ಆಹಾರ ಪದಾರ್ಥಗಳು" - ಎಂಬ ಪ್ರಬಂಧವನ್ನು ಡಾ. ಸುಮಿತ್ರಾ ಆರ್ ಅವರು ಬರೆದಿದ್ದಾರೆ. ಬಿಳಿಸಕ್ಕರೆ ಎಲ್ಲರಿಗೂ ಇಷ್ಟ. ಇದು ಪಿಷ್ಠ (ಕಾರ್ಬೊಹೈಡ್ರೇಟ್) ಗುಂಪಿಗೆ ಸೇರುವ ಆಹಾರ. ಶಕ್ತಿಗೆ, ದೇಹದ ಎಲ್ಲ ಚಟುವಟಿಕೆಗಳಿಗೆ ಅವಶ್ಯವಾಗಿರುವುದು ಸಕ್ಕರೆ. ಇದಕ್ಕೆ ಬಿಳಿಯ ರೂಪುಕೊಡುವ ರಿಫೈನಿಂಗ್ ಕ್ರಿಯೆಯಿಂದ ಇದರಲ್ಲಿ ಲಾಭವಿರುವ ವಿಟಮಿನ್, ಖನಿಜ ಹಾಗೂ ನಾರಿನ ಅಂಶಗಳು ನಶಿಶಿ ಕೇವಲ ಕ್ಯಾಲೊರಿ ಮಾತ್ರ ನೀಡುವ ಸ್ಥಿತಿಯನ್ನು ತಲುಪುತ್ತದೆ. ಸಾಮಾನ್ಯವಾಗಿ ಆರೋಗ್ಯವಂತರು ದಿನಕ್ಕೆ 20 ಗ್ರಾಮಿನಷ್ಟು ಸಕ್ಕರೆ ಸೇವಿಸಬೇಕು. ವಿಟಮಿನ್ ಬಿ, ಸಿ ಹಾಗೂ ಖನಿಯುಕ್ತ ಕಬ್ಬಿನಹಾಲು ಒಳ್ಳೆಯದು. ಗ್ಲೂಕೋಸ್ ಹೆಚ್ಚಾಗಿರುವ ದ್ರಾಕ್ಷಿ ಒಳ್ಳೆಯದು. ಜೇನುತುಪ್ಪ ರಕ್ತವನ್ನು ಶುದ್ಧಗೊಳಿಸುತ್ತದೆ.

ಮೈದಾ ಹಿಟ್ಟಿನಲ್ಲಿ ವಿಟಮಿನ್, ಖನಿಜ ಹಾಗೂ ನಾರಿನ ಅಂಶ ನಶಿಸಿಹೋಗಿರುವುದರಿಂದ ಅವುಗಳಿಂದ ತಯಾರಾದ ಭಕ್ಷ್ಯಗಳಿಂದ ಮಲಬದ್ಧತೆ ಉಂಟಾಗುತ್ತದೆ. ಅತಿ ಸೇವನೆಯಿಂದ ರಕ್ತದಲ್ಲಿ ಸಕ್ಕರೆಯ ಅಂಶ ಹೆಚ್ಚಾಗುತ್ತದೆ. ಕರಿದ ಪದಾರ್ಥ ಸೇವಿಸುವುದರಿಂದ, ನಿಯಮಿತ ವ್ಯಾಯಾಮದ ಅಭಾವದಿಂದ ಕೊಬ್ಬಿನ ಅಂಶ ಹೃದಯಕ್ಕೆ ತೊಂದರೆಯನ್ನುಂಟು ಮಾಡುತ್ತದೆ. ಕಾಫಿಯ ಅಧಿಕ ಸೇವನೆ ಒಳ್ಳೆಯದಲ್ಲ. ಮೂತ್ರದ ಪ್ರಮಾಣ ಹೆಚ್ಚಿಸುತ್ತದೆ. ಹೊಟ್ಟೆಯಲ್ಲಿ ಉರಿ ಉಂಟುಮಾಡುತ್ತದೆ. ಅಲ್ಸರ್ ಕೆರಳಿಸುತ್ತದೆ. ಕಾಫಿಗೆ ಬದಲಾಗಿ ಕೊತ್ತಂಬರಿ ಕಾಫಿಯ ಬಳಕೆ ಒಳ್ಳೆಯದು. ಉಪ್ಪು ಇಲ್ಲದ ಆಹಾರ ಯಾರಿಗೂ ಸೇರುವುದಿಲ್ಲ. ಅತಿ ಸೇವನೆ ಒಳಿತಲ್ಲ. ಇದು ಬಿ.ಪಿ ಹೆಚ್ಚಿಸುತ್ತದೆ, ದೇಹದ ತೂಕ ಹೆಚ್ಚಿಸುತ್ತದೆ.

ಕೊಲೆಸ್ಟ್ರಾಲ್ ಎಂದರೇನು? ಎಲ್ಲರನ್ನೂ ಕಾಡುವ ಪ್ರಶ್ನೆ. ಇದು ಕೊಬ್ಬಿನ ಅಂಶವಲ್ಲ. ಮೃದುವಾದ, ಮೇಣದ ಹಾಗಿರುವ ಪದಾರ್ಥ. ಸ್ವಾಭಾವಿಕವಾಗಿ ಯಕೃತ್ ಇದನ್ನು ಬೇಕಾಗುವ ಪ್ರಮಾಣದಲ್ಲಿ ತಯಾರಿಸುತ್ತದೆ. ದೇಹದಲ್ಲಾಗುವ ಕೆಲವು ಕ್ರಿಯೆಗಳಿಗೆ ಇದು ಅವಶ್ಯಕ. ಇದರ ಅಂಶ ಹೆಚ್ಚಾದರೆ ತೊಂದರೆಯುಂಟಾಗುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾಗದಂತೆ ನೋಡಿಕೊಳ್ಳಲು: (1) ನಿಯಮಿತ ವ್ಯಾಯಾಮ (2) ವನಸ್ಪತಿ ತುಪ್ಪದ ಕಡಿಮೆ ಬಳಕೆ (3) ಟೀ, ಕಾಫಿ, ಚಾಕಲೇಟ್ ಸೇವನೆ ಕಡಿಮೆ ಮಾಡುವುದು (4) ಅಡಿಗೆಗೆ ಉಪಯೋಗಿಸುವ ಎಣ್ಣೆಯ ಬಗ್ಗೆ ಕಾಳಜಿ ಹಾಗೂ ಎಚ್ಚರ.

"ಆಹಾರ ಮತ್ತು ಆರೋಗ್ಯ" ಒಂಭತ್ತು ಡಾಕ್ಟರರು ಕಷ್ಟಪಟ್ಟು ತಯಾರಿಸಿದ ಉದ್ಬೋಧಕವಾದ, ಉಪಯುಕ್ತವಾದ ಪುಸ್ತಕ. ಇದನ್ನು ಸಂಪಾದಿಸಿದ, ಸಹಲೇಖಕಿಯರಿಂದ ಲೇಖನ ಬರೆಯಿಸಿದ ಶ್ರೇಯ ಡಾ. ವಸುಂಧರಾ ಭೂಪತಿಯವರಿಗೆ ಸಲ್ಲುತ್ತದೆ. ಈ ಉಪಯುಕ್ತ ಪುಸ್ತಕದ ಪ್ರತಿಗಳು ಮುಗಿದಿವೆ. ಪುಸ್ತಕ ಪ್ರಾಧಿಕಾರ ಇದರ ಮರುಮುದ್ರಣ ಮಾಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+