ಮಹಿಳೆಯನ್ನೂ ಸೆಳೆದ ಸ್ತ್ರೀಪಾತ್ರ ರಹಿತ ನಾಟಕ

ಈ ನಾಟಕವನ್ನು ಅವರು ಬಹಳ ಮೆಚ್ಚಿ ಪತ್ರ ಬರೆದಿದ್ದರು. ಅವರು ಸ್ವತಃ ಉತ್ತಮ ನಾಟಕಕಾರರಾಗಿದ್ದರು. ಆದ್ದರಿಂದ ನನಗೆ ಹೆಚ್ಚಿನ ಸಂತೋಷ ಉಂಟಾಗಿತ್ತು. ಕರ್ನಾಟಕ ಸಂಘದ ಕಾರ್ಯದರ್ಶಿ ಇಮಾರತಿಯವರ ಮಗ ವೆಂಕಟೇಶ ಎಂಬವ ಈ ನಾಟಕ ನೋಡಲು ತಂದೆಯವರೊಡನೆ ಬಂದಿದ್ದ. ಅವನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದ. ನಾಟಕ ಪ್ರಯೋಗವಾದ ಕೆಲವೇ ದಿನಗಳ ತರುವಾಯ ನಾನು ಇಮಾರತಿಯವರ ಮನೆಗೆ ಹೋದಾಗ ಅವರ ಮಗ ನಾಟಕದ ಕೆಲವು ಸಂಭಾಷಣೆಗಳನ್ನು ಉದ್ಧರಿಸಿದ. ಇಡೀ ನಾಟಕವೇ ಅವನಿಗೆ ಕಂಠಸ್ಥವಾದಂತಿತ್ತು. ನಾಟಕ ಯಾವರೀತಿ ಪ್ರಭಾವ ಬೀರಬಲ್ಲದು ಎಂಬುದನ್ನು ಪ್ರತ್ಯಕ್ಷ ಕಂಡಾಗ ನನಗೆ ನಾಟಕ ಕಲೆಯ ಬಗ್ಗೆ ಅಭಿಮಾನವೆನಿಸಿತು. ನಾಟಕ ಮಾಡುವಾಗ ಪಡಬಾರದ ಕಷ್ಟ ಪಡುತ್ತೇವೆ. ಆದರೆ ನಂತರ ಅದು ನೀಡುವ ಸವಿನೆನಪಿನ ಸುಖವೇ ಬೇರೆ ರೀತಿಯದು. ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು ಎಂಬುದು ಒಂದು ಪ್ರಸಿದ್ಧ ಕನ್ನಡ ಗಾದೆ. ಇದಕ್ಕೆ ನಾಟಕ ಮಾಡಿ ನೋಡು ಎಂಬುದನ್ನೂ ಸೇರಿಸಬಹುದಾಗಿದೆ.
ಈ ನಾಟಕದ ರಿಹರ್ಸಲ್ ನಡೆದಾಗ ಕೆಲವು ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಜಯಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅಂದಳು, ಸರ್, ನಿಮ್ಮ ನಾಟಕದಲ್ಲಿ ನಮಗೆ(ಸ್ತ್ರೀಯರಿಗೆ) ಯಾಕೆ ಅಭಿನಯಿಸಲು ಚಾನ್ಸ್ ಕೊಡಬಾರದು?' ಎಂದು. ನಾನು ಬರೆದದ್ದು ಸ್ತ್ರೀಪಾತ್ರ-ರಹಿತ ನಾಟಕ. ಅದು ಪಶುವಿದ್ಯಾಲಯದ ವಿದ್ಯಾರ್ಥಿಗಳ ಅವಶ್ಯಕತೆಯನ್ನು ಪೂರೈಸಲು. ನಂತರ ಜಯಲಕ್ಷ್ಮಿಯ ವಿನಂತಿಯನ್ನು ಮನ್ನಿಸಿ ಕೊನೆಗೆ ನಾಟಕದಲ್ಲಿ ಪ್ರವೇಶಿಸಲು ಅವಳಿಗೆ ಅವಕಾಶ ಕಲ್ಪಿಸಿಕೊಟ್ಟೆ. ಮುಂದೆ ಈ ನಾಟಕ ನನ್ನ ಅತ್ಯಂತ ಪ್ರಖ್ಯಾತ ಏಕಾಂಕವಾಯಿತು.
ಧಾರವಾಡದ ಕರ್ನಾಟಕ ಕಾಲೇಜಿನ ಸುವರ್ಣ ಮಹೋತ್ಸವದಲ್ಲಿ ಈ ನಾಟಕವನ್ನು ಪ್ರಯೋಗಿಸಲು ಅನುಮತಿ ಕೇಳಿ ಪ್ರೊ.ಚಂದ್ರಶೇಖರ ಪಾಟೀಲರು ನನಗೊಂದು ತಂತಿ ಕಳಿಸಿದ್ದರು. ಹುಬ್ಬಳ್ಳಿಯ ಜೆ.ಜೆ. ಕಾಮರ್ಸ್ ಕಾಲೇಜಿನವರು ಇದನ್ನು ಪ್ರಯೋಗಿಸಿ ಅಂತರ್ ಕಾಲೇಜ್ ನಾಟಕ ಸ್ಪರ್ಧೆಯಲ್ಲಿ ಅತ್ಯಧಿಕ ಬಹುಮಾನಗಳನ್ನು ಗಳಿಸಿದರು. ಬೆಳಗಾವಿಯ ಒಂದು ಕಾನ್ವೆಂಟ್ ಶಾಲೆಯ 125ನೇ ವರ್ಷದ ಉತ್ಸವದಲ್ಲಿ ನಾಲ್ಕು ಭಾಷೆಯ ಏಕಾಂಕಗಳನ್ನು ಪ್ರಯೋಗಿಸಿದ್ದರು. ಗುಂಡನ ಮದುವೆ ನಾಟಕಕ್ಕೆ ಅತ್ಯಧಿಕ ಮೆಚ್ಚುಗೆ ಗಳಿಸಿತ್ತೆಂದು ಅಲ್ಲಿಯ ಶಿಕ್ಷರೊಬ್ಬರು (ಶ್ರೀ ಕತಕಡೆ)ನನಗೆ ಪತ್ರ ಬರೆದಿದ್ದರು. ನನ್ನ ವಿದ್ಯಾರ್ಥಿಯೊಬ್ಬರು ಇದನ್ನು ತುಳುಭಾಷೆಗೆ ಅನುವಾದಿಸಿ ಪುಣೆಯಲ್ಲಿ ಪ್ರಯೋಗಿಸಿದ್ದ. ಈ ನಾಟಕದ ಅನೇಕ ಸಂಸ್ಕರಣಗಳನ್ನು ಸಮಾಜ ಪುಸ್ತಕಾಲಯದವರು ಪ್ರಕಟಿಸಿದ್ದರು. ಇತ್ತೀಚೆ ಹವ್ಯಕ ಸಮಾಜದ ಮಹಿಳೆಯರು ಈ ನಾಟಕವನ್ನು ಬಹಳ ಯಶಸ್ವಿಯಾಗಿ ಪ್ರಯೋಗಿಸಿದರು. (ಇದು ಸ್ತ್ರೀಪಾತ್ರ ವಿರಹಿತ ನಾಟಕ. ಇದನ್ನು ಪ್ರಯೋಗಿಸಿದವರೆಲ್ಲ ಮಹಿಳೆಯರು. ಇದೊಂದು ನಾಟಕೀಯ ವಿರೋಧಾಭಾಸ!)
ಗುಂಡನ ಮದುವೆ ಇದು ಹಾಸ್ಯರಸಪ್ರಧಾನ ನಾಟಕ. ಇದರಲ್ಲಿ ಯಾರ ವಿಡಂಬನೆಯೂ ಇಲ್ಲ. ಇಲ್ಲಿ ಬರುವ ಪಾತ್ರಗಳು ಜೀವಂತವಾಗಿವೆ. ಪೆದ್ದ ಮಗ, ತನ್ನ ಏಕಮಾತ್ರ ಪುತ್ರನ ಮದುವೆ ಮಾಡಿಸಬೇಕೆಂದು ಒದ್ದಾಡುವ ಶ್ರೀಮಂತ ತಂದೆ, ತನ್ನ ಮಿತ್ರನಿಗೆ ಕೈಲಾದ ಸಹಾಯ ಮಾಡಲು ಮುಂದೆ ಬಂದ ಮಿತ್ರ, ವರನಿಗೆ ಸಹಾಯ ಮಾಡಲು ಬಂದ ಗೆಳೆಯ, ನೂರು ಸುಳ್ಳು ಹೇಳಿ ಕಲ್ಯಾಣ ಮಾಡಲು ಬಂದ ಜೋತಿಷಿ, ಮಗಳಿಗೊಂದು ವರ ಹುಡುಕಿ ಬಂದ ಬಡ ಕನ್ಯಾಪಿತೃ- ಇವರೆಲ್ಲರ ಮಧ್ಯೆ ನಾಟಕದ ಕ್ರಿಯೆಗೆ ಚಾಲನೆ ದೊರೆಯುತ್ತದೆ. ಉದ್ದಕ್ಕೂ ಹಾಸ್ಯದ ಸನ್ನಿವೇಶಗಳು. ಸುಳ್ಳಿನ ಗೋಪುರ ಕಟ್ಟಿ, ಆಗೋಪುರದ ಮೇಲೆ ತನ್ನ ಮಗ ಗುಂಡನನ್ನು ಕೂಡಿಸಿ, ಅವನ ಮದುವೆ ಮಾಡಲು ಭಗೀರಥ ಪ್ರಯತ್ನ ಮಾಡುವ ತಂದೆ ಶಿವರಾಯನ ಪ್ರಯತ್ನಗಳೆಲ್ಲಾ ಕೊನೆಗೆ ವಿಫಲಗೊಂಡಾಗ ಇವರೆಲ್ಲರ ಬಗ್ಗೆ ಒಂದು ಮರುಕ, ಸಹಾನುಭೂತಿ ಉಂಟಾಗುತ್ತದೆ. ಇಂಥ ಜನರನ್ನು ಕಂಡು ನಾವು ನಕ್ಕುಬಿಡುತ್ತೇವೆ, ಯಾಕೆಂದರೆ ಇಂಥ ಸಮಸ್ಯೆ ನಮ್ಮ ಮುಂದೆ ಇಲ್ಲ ಎಂಬುದೇ ಒಂದು ಸಮಾಧಾನ.
ಮುಂದಿನ ವಾರ : ಈ ನಾಟಕ ಬರೆದ ಕ್ರೆಡಿಟ್ ಯಾರಿಗೆ?
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications