ಈ ಗ್ರಂಥ ಓದಿ ಕನ್ನಡೇತರರೂ ಕನ್ನಡ ಕಲಿಯಬೇಕು

ಯಾವುದಾದರೂ ಮಹತ್ವದ ಕೃತಿಯನ್ನು, ದೊಡ್ಡ ಗ್ರಂಥವನ್ನು, ಹಿಂದಿಗೆ ಅನುವಾದಿಸಿರಿ ಎಂದು ಪೂರ್ಣಪ್ರಜ್ಞ ಸಂಶೋಧನಮಂದಿರದ ನಿರ್ದೇಶಕರಾದ ಡಾ| ಎ.ವಿ.ನಾಗಸಂಪಿಗೆಯವರು ಬಹಳ ಹಿಂದೆ ಕೃಷ್ಣ ಹಾರನಹಳ್ಳಿಯವರಿಗೆ ಸೂಚಿಸಿದ್ದರು. ಶ್ರೀ ರಾಘವೇಂದ್ರ ಸ್ವಾಮಿಗಳು ಗೀತೆಯ ಬಗ್ಗೆ ಬರೆದ ಅತ್ಯಂತ ಮಹತ್ವದ ಗ್ರಂಥ ಗೀತಾವಿವೃತಿ ಕನ್ನಡದಲ್ಲಿ ಅನುವಾದಿತವಾಗಿತ್ತು. ಇದನ್ನೇ ತಾವು ಹಿಂದಿಯಲ್ಲಿ ಅನುವಾದಿಸಲು ಪ್ರಾರಂಭಿಸಿದರು. ಭಗವದ್ಗೀತೆಯ ಬಗ್ಗೆ ಇರುವ ಇನ್ನೊಂದು ಮಹತ್ವದ ಗ್ರಂಥ ಗೀತಾಪ್ರತಿಪದಾರ್ಥಚಂದ್ರಿಕಾ. ಇದನ್ನು ರಚಿಸಿದವರು ಶ್ರೀಸತ್ಯಧ್ಯಾನತೀರ್ಥರು. ಇವೆರಡು ಗ್ರಂಥಗಳನ್ನು ಏಕಕಾಲಕ್ಕೆ ಸಮ್ಮಿಳಿಸಿ ಶ್ರೀಮದ್ಭಗವದ್ಗೀತಾ ಸಾರಸಂಗ್ರಹ ಎಂಬ ಗ್ರಂಥವನ್ನು ಹಿಂದಿಯಲ್ಲಿ ರಚಿಸಿದ್ದು ಒಂದು ಅಪೂರ್ವ ಸಾಧನೆ ಎಂದೇ ಹೇಳಬೇಕು.
ಆಚಾರ್ಯ ಮಧ್ವರು ಭಗವದ್ಗೀತೆಯ ಬಗ್ಗೆ ಎರಡು ಮಹತ್ವದ ಗ್ರಂಥಗಳನ್ನು ರಚಿಸಿದ್ದಾರೆ. ಗೀತಾಭಾಷ್ಯ ಹಾಗೂ ಗೀತಾತಾತ್ಪರ್ಯ. ಇವುಗಳಿಂದ ಪ್ರಭಾವಿತರಾದ ಶ್ರೀ ರಾಘವೇಂದ್ರ ಸ್ವಾಮಿಗಳು ಗೀತಾವಿವೃತ್ತಿ ಎಂಬ ಉದ್ಗ್ರಂಥವನ್ನು ರಚಿಸಿದ್ದಾರೆ. ಜನಸಾಮನ್ಯರು ತಿಳಿದಂತೆ ಶ್ರೀ ರಾಘವೇದ್ರ ಯತಿಗಳು ಬರಿ ಪವಾಡ ಪುರುಷರಾಗಿರಲಿಲ್ಲ. ಭಕ್ತರ ಕಲ್ಪವೃಕ್ಷ-ಕಾಮಧೇನು ಆಗುವುದರ ಜೊತೆಗೆ ಅವರು ಮಧ್ವಸಿದ್ಧಾಂತದ ಬಗ್ಗೆ 42 ಗ್ರಂಥಗಳನ್ನು ರಚಿಸಿದ್ದಾರೆ. ಯತಿವರೇಣ್ಯರ, ಮಹಾಮಹಿಮರ ಗುಣಗಾನ ಮಾಡುತ್ತೇವೆ, ಸೇವೆ ಮಾಡುತ್ತೇವೆ, ಅವರನ್ನು ಪೂಜಿಸುತ್ತೇವೆ. ನಾವು ಮಹಾಮಹಿಮರ ನಿಜವಾದ ಆರಾಧನೆ ಮಾಡಬೇಕಾದರೆ ನಾವು ಅವರ ಗ್ರಂಥಗಳ ಅಭ್ಯಾಸ ಮಾಡಬೇಕು. ಜ್ಞಾನಕಾರ್ಯಕ್ಕಿಂತ ಪವಿತ್ರವಾದ ಕಾರ್ಯ ಇನ್ನೊಂದಿಲ್ಲ.
ಹಾರನಹಳ್ಳಿಯವರು ನಿವೃತ್ತಿಯ ನಂತರ ಜ್ಞಾನಪ್ರಸಾರ ಕಾರ್ಯವನ್ನು ತಮ್ಮ ಜೀವನದ ಧ್ಯೇಯವನ್ನಾಗಿಸಿ, ಶ್ರೀಮಧ್ವಸಿದ್ಧಾಂತದ ಪರಿಚಯವನ್ನು ಉತ್ತರ ಭಾರತೀಯರಿಗೆ ಮಾಡಿಕೊಡುವ ಆಣತಿಯನ್ನು ಹೊತ್ತದ್ದು ಕೇವಲ ಶ್ಲಾಘನೀಯವಲ್ಲ, ಅನುಕರಣೀಯವೂ ಆಗಿದೆ. ಶ್ರೀರಾಘವೇಂದ್ರ ಯತಿಗಳ ಗ್ರಂಥದೊಡನೆ ಶ್ರೀ ಸತ್ಯಧ್ಯಾನರ ಪ್ರತಿದಾರ್ಥವನ್ನೂ ಸೂಕ್ತವಾಗಿ ಸೇರಿಸಿದ್ದು ಎಷ್ಟು ಮಹತ್ವಪೂರ್ಣವಾಗಿದೆ ಎಂಬುದು ಇವರ ಗ್ರಂಥವನ್ನು ಓದಿದಾಗ ಮನದಟ್ಟಾಗುತ್ತದೆ. ಈ ಗ್ರಂಥಕ್ಕೆ ಆಶಿರ್ವಚನ ಬರೆದ ಶ್ರೀ ಪೇಜಾವರ ಮಾಠಾಧೀಶರಾದ ವಿಶ್ವೇಶತೀರ್ಥರು ಹೀಗೆ ಬರೆಯುತ್ತಾರೆ:
ಮುಂಬೈಯಲ್ಲಿ ಅಭಿನವ ಮಂತ್ರಾಲಯವೆಂದು ರೂಪಗೊಳ್ಳುತ್ತಿರುವ ಜೋಗೇಶ್ವರಿಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ಅಷ್ಟೋತ್ತರ ಸೇವಾಮಂಡಲದ ಮುಖ್ಯಸ್ಥರಾದ ಶ್ರೀವತ್ಸ ಜೋಶಿಯವರು ಈ ಗ್ರಂಥದ ಮುಂಬೈ ಬಿಡುಗಡೆಯನ್ನು ಗುರುಸಾರ್ವಭೌಮರ ಸನ್ನಿಧಾನದಲ್ಲಿ, ಸೇವಾಮಂಡಲದ ಹನ್ನೆರಡನೆಯ ವರ್ಷದ ಶುಭ ಸಂದರ್ಭದಲ್ಲಿ ನೆರೆವೇರಿಸಿದರು. ಇದರ ಲಾಭ ಪ್ರತಿ ಸುಸಂಸ್ಕೃತ ವಿದ್ಯಾಪ್ರೇಮಿಗಳು ಪಡೆಯಬೇಕು.
ಪರಿಚಯ : ಕೃಷ್ಣ ಹಾರನಹಳ್ಳಿಯವರು ಜನಿಸಿದ್ದು ಧಾರವಾಡದಲ್ಲಿ (1943). ತಂದೆ ಅನಂತರಾವ್, ತಾಯಿ ರುಕ್ಮಿಣಿಬಾಯಿ. ಮೂರು ವರ್ಷದ ಬಾಲಕನಾಗಿದ್ದಾಗ ತಂದೆಯ ವಿಯೋಗ. ಹುಬ್ಬಳ್ಳಿಯಲ್ಲಿ ಸೋದರಮಾವನ (ಶ್ರೀನಿವಾಸರಾವ್ ತೊರವಿ) ಮನೆಯಲ್ಲಿ ಬೆಳೆದರು. ಹಿರಿಯ ಅಣ್ಣ ಶೇಷಗಿರಿಯವರಿಂದ ಸಹಾಯ ಪಡೆದರು. ಎರಡು ವರ್ಷ ಕಾಲೇಜು ಕಲಿಯುವಾಗ ರಿಸರ್ವ್ ಬ್ಯಾಂಕಿನಲ್ಲಿ ಕ್ಲರ್ಕ್ ಕೆಲಸ ದೊರೆತದ್ದರಿಂದ ಮುಂಬೈಗೆ ಆಗಮಿಸಿದರು. ಮುಂಜಾನೆಯ ಕಾಲೇಜು ಸೇರಿ ಪದವೀಧರರಾದರು. ರಿಸರ್ವ್ ಬ್ಯಾಂಕಿನಿಂದ 1973ಯಲ್ಲಿ ಐಡಿಬಿಐ ಬ್ಯಾಂಕಿಗೆ ವರ್ಗಾವಣೆಯಾಗಿತ್ತು. ಅಲ್ಲಿಯೇ 2002ರಲ್ಲಿ ಚೀಫ್ ಜನರಲ್ ಮೆನೆಜರ್ ಹುದ್ದೆ ಪಡೆದು ನಿವೃತ್ತರಾದರು. ಸಹಧರ್ಮಿಣಿ ರಾಧಾ. ಇಬ್ಬರು ಗಂಡು ಮಕ್ಕಳು, ಫಣಿರಾಜ, ನಾಗರಾಜ. ಇಬ್ಬರೂ ಕಾಮರ್ಸ್ ಪದವೀಧರರು. ಇಬ್ಬರಿಗೂ ಬ್ಯಾಂಕಿನಲ್ಲಿ ಕೆಲಸ. ಆಡಂಬರ ರಹಿತ ಜೀವನ ಸಾಗಿಸಿದ, ಪ್ರಸಿದ್ಧಿಯಿಂದ ದೂರ ಇದ್ದ, ಸದಾ ಹಸನ್ಮುಖಿಯಾದ ಕೃಷ್ಣ ಹಾರನಹಳ್ಳಿಯವರ ಸಾಧನೆ ಮಾತ್ರ ಕಲ್ಪನಾತೀತ, ಅನುಕರಣೀಯ.
ಬಾಲ್ಯದಿಂದಲೂ ಅಧ್ಯಾತ್ಮದಲ್ಲಿ ಒಲವು. ಸಾಂಪ್ರದಾಯಿಕ ಮಾಧ್ವ ಕುಟುಂಬದಲ್ಲಿ ಜನಿಸಿದ್ದರಿಂದ ವಾಯುಸ್ತುತಿ, ನೃಸಿಂಹಸ್ತುತಿ, ವಿಷ್ಣುಸಹಸ್ರನಾಮ ಕಂಠಸ್ಥವಾಗಿದ್ದವು. ಭಾರತೀಯ ತತ್ವಜ್ಞಾನದಲ್ಲಿ ಆಸಕ್ತಿಯಿದ್ದುದರಿಂದ ವ್ಯಾಪಕ ವಾಚನ. ಶ್ರೀಮಧ್ವರ ತತ್ವವಾದದಿಂದ ಪ್ರಭಾವಿತರಾಗಿ ಅವರ ಕೃತಿಗಳ ಪರಿಚಯವನ್ನು ಉತ್ತರ ಭಾರತೀಯರಿಗೆ ಮಾಡಿಕೊಡಬೇಕೆಂಬ ಒತ್ತಾಸೆಯಿಂದ ಹಿಂದಿ ಭಾಷೆಯಲ್ಲಿ ಪ್ರಾವೀಣ್ಯ ಪಡೆಯಲು ಯತ್ನಿಸಿದರು. ಮಹಾಮಹೋಪಾಧ್ಯಾಯ ಡಾ| ಬಿ.ಎನ್.ಕೆ. ಶರ್ಮಾ ಅವರು ಇಂಗ್ಲೀಷಿನಲ್ಲಿ ಬರೆದ ಪುಸ್ತಕಗಳಿಂದ ಪ್ರಭಾವಿತರಾಗಿ ಅವರ ಪ್ರಸಿದ್ಧ ಪುಸ್ತಕ Madhva"s Teachings in his own words ಹಿಂದಿ ಭಾಷೆಗೆ ಅನುವಾದಿಸಿದರು. ಇದನ್ನು ಬೆಂಗಳೂರಿನ ಪೂರ್ಣಪ್ರಜ್ಞ ಸಂಶೋಧನ ಮಂದಿರಂ, ಪೂರ್ಣಪ್ರಜ್ಞ ವಿದ್ಯಾಪೀಠದವರು 2007ರಲ್ಲಿ ಪ್ರಕಟಿಸಿದರು. ನಂತರ ಡಾ| ವ್ಯಾಸನಕೆರೆ ಪ್ರಭಂಜನಾಚಾರ್ಯರ ಭಾಗವತದ ಬೆಳಕು ಎಂಬ ಕಿರುಹೊತ್ತಿಗೆಯನ್ನು ಭಾಗವತ ಪ್ರಕಾಶ ಎಂಬ ಹೆಸರಿನಲ್ಲಿ ಹಿಂದಿಗೆ ಅನುವಾದಿಸಿದರು. ಅದನ್ನು ಐತರೇಯ ಪ್ರಕಾಶನದವರು 2010ರಲ್ಲಿ ಪ್ರಕಟಿಸಿದರು.
(ಶ್ರೀಮದ್ಭಗವದ್ಗೀತಾ ಸಾರಸಂಗ್ರಹ (ಹಿಂದಿ) ಉತ್ತಮ ಹಾರ್ಡ್ ಬೌಂಡ್ ಪ್ರತಿ, ಪುಟಗಳು 64+620, ಬೆಲೆ: ರೂ.200, ಪ್ರಕಾಶಕರು: ಪೂರ್ಣಪ್ರಜ್ಞ ಸಂಶೋಧನ ಮಂದಿರಂ, ಪೂರ್ಣಪ್ರಜ್ಞ ವಿದ್ಯಾಪೀಠ, ಬೆಂಗಳೂರು-560 028. ಪ್ರತಿಗಳಿಗಾಗಿ ಸಪರ್ಕಿಸಬಹುದು: 022-28491778/ 9920991778 ಇ-ಮೇಲ್: [email protected])
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications