153697political satireಕನ್ನಡಕ್ಕೆ ಸ್ಥಾನಮಾನ:ವಿನಿವಿಂಕ್ ಸಂತಸ /column/majavani/2009/0112-viniv-inc-sastry-majavani-interview.htmlಬೆಂಗಳೂರು, ಜ.11:ಕೇಂದ್ರ ಸರ್ಕಾರ ಕನ್ನಡವನ್ನು ಶಾಸ್ತ್ರಿಯ ಭಾಷೆ ಎಂದು ಘೋಷಿಸಿರುವುದನ್ನು ಕರ್ನಾಟಕದ ಸುಪ್ರಸಿದ್ಧ ಖೈದಿ ವಿನಿವಿಂಕ್ ಶಾಸ್ತ್ರಿಯವರು ಸ್ವಾಗತಿಸಿದ್ದಾರೆ. ನಗರದ ಕೇಂದ್ರ ಕಾರಾಗಾರದಲ್ಲಿ ಮಜಾವಾಣಿ ಪತ್ರಿಕೆಯ ವರದಿಗಾರರೊಂದಿಗೆ ಮಾತನಾಡಿದ ಶಾಸ್ತ್ರಿಯವರು, "ಸುದ್ದಿ ಮತ್ತು ಸ್ವಾರಸ್ಯ ಎರಡೂ ಹಳತಾದರೂ ನಿರ್ಭಿಡೆಯಿಂದ ವರದಿಮಾಡುವ ಮಜಾವಾಣಿ ಪತ್ರಿಕೆ ಈಗಲಾದರೂ ನನ್ನನ್ನು ಸಂಪರ್ಕಿಸಿರುವುದು ಶ್ಲಾಘನೀಯ. ಎಷ್ಟೋ ವರ್ಷಗಳ ಹೋರಾಟದ ನಂತರ ಕನ್ನಡವನ್ನು ಶಾಸ್ತ್ರಿಯ 34017http://kannada.oneindia.com/img/2009/01/12-vinivinc-shastri1e.jpg153697political satireದೇವೇಗೌಡರ ಹೊಸಾ ಡೀಲು/column/humor/2009/0401-deve-gowdas-new-political-game.html* ವೆಂಕಟೇಶ್ ದೊಡ್ಡಮನೆಆಗಲೇ, ದೇಶಪಾಂಡೆ ಕಾಂಗ್ರೆಸ್ ಅಧ್ಯಕ್ಷ ಅಂತ ನ್ಯೂಸ್ ಗೊತ್ತಾಗಿ ಕುಣುದಾಡ್ಬುಡೊ ಅಷ್ಟು ಸಂತೋಷ ಆಗಿತ್ತು ಗೌಡ್ರಿಗೆ. ಕುಮಾರ, ರೇವೂ ಪಾರ್ಟಿ ಆಪೀಸ್ನಾಗೆ ಪಟಾಕಿ ಹಚ್ಚಿ ಕುಸಿ ಮಾಡಿರ್ತಾರೆ ಅಂದ್ಕೊತನೆ ಇದ್ದವಾಗ, ಪರ್ಸನಲ್ ಶೆಕೆಟ್ರಿ YSV ದತ್ತು, "ಸಾರ್ ಮಸೀದಿ ಕಮಿಟಿಯವರು ನಿಮ್ಮನ್ನ ಇಫ್ತಾರ್ ಕೂಟಕ್ಕೆ ಕರೆಯೊದಕ್ಕೆ ಬಂದಿದಾರೆ" ಮುಂದಿನ ಡೆಸ್ಕಿಂದ ಫೋನ್ ಮಾಡಿ ಅಂದರು. 35649http://kannada.oneindia.com/img/2009/04/01-venkatesh-dodmane2.jpg153697political satireಇದೀಗ ತಾನೇ ಬಂದಂತಹ ನಗೆ ಸುದ್ದಿಗಳು/column/humor/2009/0401-humorous-political-news-bytes.htmlರಾಜಕೀಯದಲ್ಲಿ ಕಾಲು ಎಳೆಯುವುದು, ಕೆಸರೆರಚಾಟವಾಡುವುದು, ಕಟಕಿಯಾಡುವುದು ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿದಷ್ಟೇ ಸಹಜ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾವೂ ನಮ್ಮ ರಾಷ್ಟ್ರೀಯ ಪ್ರತಿನಿಧಿಗಳ ಕಾಲೆಳಿಯೋಣ, ಮಿತಿ ಮೀರದಂತೆ. ಇಲ್ಲಿವೆ ನೋಡಿ ಎಚ್. ಆನಂದರಾಮ ಶಾಸ್ತ್ರೀಯವರ ಹಾಸ್ಯಲೇಪಿತ ರಾಜಕೀಯ ಸುದ್ದಿ ಸ್ವಾರಸ್ಯಗಳು.ವರುಣ್‌ಗೆ ಒಂದು ವರ್ಷ ಶಿಕ್ಷೆವರುಣ್ ಗಾಂಧಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 35655http://kannada.oneindia.com/img/2009/04/01-anandram-shastri1.jpg153697political satireನ್ನನ್ನತ್ರ ಇನ್ನೂ ಐನಾತಿ ಟೈಲಾಗ್‌ಗಳಿವೆ/column/humor/2009/0402-political-satire-by-natesh-babu.htmlಮೇ ಮುಗ್ಯೋ ತನ್ಕ ನಮ್ ರಾಜ್‌ಕಾರುಣಿಗುಳ್ಗೆ ನಿದ್ದಿಲ್ಲ. ನಮುಗಿಲ್ಲದ್ ನಿದ್ದಿ ನಿಮಗ್ಯಾಕೆ ಅಂಥ, ಮತುದಾರುರ ನಿದ್ದಿಗೂ ಭಂಗ ತಂದವ್ರೆ. ಮತುದಾರ್ರಿಗೆ ಮೊಂಕುಬೂದಿ ಎರಚೋದು ಹೆಂಗೆ ಅಂಬೋ ಸಂಶೋದ್ನೆಗೆ ಇರೋಬರೊ ರಾಜ್ಕೀಯ ಪಕ್ಸುಗುಳು ಕಾಸು ಸುರಿದಿವ್ಯಂತೆ. ಚುನಾವಣೆ ಟೇಮಲ್ಲಿ ಬಿಸಿಬಿಸಿ ಸುದ್ದಿ ಮಧ್ಯೆ ಲೋಡುಗಟ್ಟಲೇ ಜಾಹೀರಾತು(ಥೂ) ಮಾರಿ ಜೇಬು ತುಂಬ್ಸಿಕೊಳ್ಳೋಕೆ ಪೇಪರ್‌ನೋರು, ಟೀವಿನೋರು ಐನಾತಿ ಪಿಲಾನು ಮಾಡವ್ರೆ ಅಂಬುತಾ 35674http://kannada.oneindia.com/img/2009/04/02-varun-gandhi1.jpg153697political satireಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg83806humorಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg83806humorಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg83806humorಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg83806humorಶರಶೈಯೆಯಲ್ಲಿ ಪವಡಿಸಿದ ಭೀಷ್ಮ ಪ್ರತಿಜ್ಞೆ/column/humor/2009/0102-i-just-broke-my-new-year-resolution-2009.htmlಹೊಸವರ್ಷ ಉದಯವಾಗುವ ವೇಳೆ ಅನೇಕ ಜನ, ಥರಹೇವಾರಿ ಪ್ರತಿಜ್ಞೆಗಳನ್ನು ಮಾಡುವುದು ರೂಢಿ. ತಪ್ಪೇನಿಲ್ಲ ಬಿಡಿ. ಎಷ್ಟೋ ಜನ 2009ಕ್ಕೆ ಹೊಸ ರೆಸಲ್ಯೂಷನ್ ಗಳನ್ನು ಕೈಗೊಂಡಿದ್ದನ್ನು ನೀವು ಕೇಳಿರಬಹುದು. ಆ ಭೀಷ್ಮ ಪ್ರತಿಜ್ಞೆಗಳು ಇಷ್ಟುಹೊತ್ತಿಗಾಗಲೇ ಶರಶೈಯೆಯಲ್ಲಿ ಅಂಗಾತ ಮಲಗಿದ್ದರೆ ಖಂಡಿತ ಆಶ್ಚರ್ಯವಿಲ್ಲ * ರೇಖಾ ಹೆಗಡೆ ಬಾಳೇಸರ, ಓಲ್ಡ್‌ಸ್ಮಾರ್; ಫ್ಲಾರಿಡಾನೋಡನೋಡುತ್ತ ನೂತನ ವರ್ಷ ಬಂದಿದೆ. ನಿನ್ನಿನ ದಿನಕ್ಕೂ, ಇಂದಿನದಕ್ಕೂ 33835http://kannada.oneindia.com/img/2009/01/02-new-year-resolutions1e.jpg83806humorತಿರುಪತಿ ತಿಮ್ಮಪ್ಪನೂ, ಉಡುಪಿಯ ಹೋಟೆಲೂ/column/humor/2009/0130-tirupathi-timmappa-and-udupi-hotel.htmlಶಂಕರಪುರಂನಲ್ಲಿರುವ ಬ್ರಾಹ್ಮಣರ ಕಾಫಿ ಬಾರ್ ಯಡಿಯೂರಪ್ಪನವರ ಭೇಟಿಯಿಂದಾಗಿ ಇವತ್ತು ಸುದ್ದಿ ಕೇಂದ್ರಕ್ಕೆ ಬಂದಿರಬಹುದು, ವಿಶ್ವೇಶ್ವರ ಭಟ್ ಅವರು ಬರೆದ ಎಂಟಿಆರ್ ಹೋಟೆಲಿನ ಇತಿಹಾಸ ಮತ್ತು ಪರಂಪರೆಯ ಬಗೆಗೆ ಕನ್ನಡಿಗರು ಬೆನ್ನು ತಟ್ಟಿಕೊಳ್ಳುತ್ತಿರಬಹುದು, ತಟ್ಟಿಕೊಳ್ಳಿರಿ ತಟ್ಟಿಕೊಳ್ಳಿರಿ. ಆದರೆ ಕನ್ನಡಿಗರೇ ಒಂದು ವಿಷಯ ತಿಳಿಯಿರಿ. ಐದಾರು ಶತಮಾನಗಳ ಹಿಂದೆಯೇ ನಮ್ಮಲ್ಲಿ ಉಡುಪಿ ಹೋಟೆಲುಗಳಿದ್ದವು, ಅಲ್ಲಿ ರುಚಿರುಚಿಯಾದ ಇಡ್ಲಿ ದೋಸೆಗಳು ಬಿಕರಿಯಾಗುತ್ತಿದ್ದವು. 34371http://kannada.oneindia.com/img/2009/01/30-balaji3.jpg156621bangarappaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156621bangarappaಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156621bangarappaಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156621bangarappaದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156621bangarappaಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpgnews"> ಬಂಗಾರ-ಕುಮಾರ-ಮಧು-ಚಂದ್ರ-ಯಾನ | Madhu | Kumar | Bangarappa | Political humor - ಬಂಗಾರ-ಕುಮಾರ-ಮಧು-ಚಂದ್ರ-ಯಾನ - Kannada Oneindia

ಬಂಗಾರ-ಕುಮಾರ-ಮಧು-ಚಂದ್ರ-ಯಾನ

Political satire by H Anandarama Shastri
ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ ಬಂಗಾರಪ್ಪ!

* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು

ಇದು 'ಬಂಕುಮ'ಚಂದ್ರರ ಕಥೆ. ಒಂದಾನೊಂದು ಕಾಲದಲ್ಲಿ, 'ನಮ್ಮ ಸಂಸಾರ, ಆನಂದಸಾಗರ', ಎನ್ನುತ್ತಾ ಚಂದಾಗಿ ಬಾಳುತ್ತಿದ್ದರು 'ಬಂ(ಗಾರಪ್ಪ) ಕು(ಮಾರ) ಮ(ಧು)'ಚಂದ್ರರು. ಪಸಂದಾಗಿ ಆಳುತ್ತಿದ್ದರು.

ಅದೊಂದು ಕೆಟ್ಟ ಗಳಿಗೆಯಲ್ಲಿ 'ಬಂ-ಕು' ಮಧ್ಯೆ ದ್ವೇಷ ಅಂಕುರಿಸಿತು. 'ಹೋದರೆಹೋಗು, ನನಗೇನು? ಕೋಪದಿ ತಾಪದಿ ಫಲವೇನು?' ಎಂದು ಒಬ್ಬರಿಂದೊಬ್ಬರು ದೂರಾದರು. 'ಮಾತೊಂದ ಹೇಳುವೆನು, ಹತ್ತಿರ ಹತ್ತಿರ ಬಾ', ಎಂದು 'ಬಂ' ಪಿತನು ಕಿರಿ(ಕಿರಿ) 'ಮ'ಗನನ್ನು ಹತ್ತಿರಕ್ಕೆ ಸೆಳೆಯಲಾಗಿ 'ಬಂ-ಮ' 'ಜೊತೆಯಲಿ, ಜೊತೆಜೊತೆಯಲಿ' ಸಾಗತೊಡಗಿದರು.

'ಮಧು'ಮಯ ಚಂದ್ರನ 'ಮಧು'ಮಯ ಹಾಸವೆ ಮೈತಳೆದಂತೆ ನೀ ಕಂಡೆ', ಎಂದು 'ಬಂ'ಪಿತನು ಕಿರಿ(ಕಿರಿ) 'ಮ'ಗನನ್ನು ಹೊಗಳಿದರೆ, ಆ 'ಮ'ಗನು 'ಬಂ'ಪಿತನನ್ನು, 'ಬಾಳಿನ ಹಿರಿಯಾ, ಎನ್ನಯ ಒಡೆಯಾ, ಕನ್ನಡ ಕುಲವರಾ ನೀ 'ಬಂ'ದೇ', ಎಂದು ಹಾಡಿ ಹೊಗಳತೊಡಗಿದನು.

ಅತ್ತ, ಹಿರಿ(ಹಿರಿ 'ಹಿಗ್ಗಿ'ದ) 'ಕು'ಮಾರನೋ, 'ಮದನೋ ಮನ್ಮಥೋ ಮಾರಃ ಪ್ರದ್ಯುಮ್ನೋ ಮೀನಕೇತನಃ ಕಂದರ್ಪೋ ದರ್ಪಕೋ ಅನಂಗಃ ಕಾಮಃ ಪಂಚಶರಸ್ಮರಃ' ಎಂಬ 'ಮ-ದನ-ಕು-ಮಾರ-ಅಭಿಧಾನ ಲಕ್ಷಣ'ಗಳನ್ನೆಲ್ಲ ತನ್ನ ಪೂರ್ವವೃತ್ತಿಯ 'ನಟನಾಚಾತುರ್ಯ'ದಿಂದ ಬಳಸಿಕೊಂಡು ಜನನಾಯಕನಾಗಿಬಿಟ್ಟನು. ಇತ್ತ 'ಬಂ'ಗಾರ ಹೊಳಪು ಕಳಕೊಳ್ಳತೊಡಗಿತು. 'ಮ'ಧುಚಂದ್ರಕ್ಕೆ ಅಮಾವಾಸ್ಯೆ ಆವರಿಸಿತು.

'ಅಮರಾ 'ಮಧು'ರಾ ಪ್ರೇಮಾ; 'ಮಧು'ರ'ಮಧು'ರವೀ ಮಂಜುಳಗಾನ', ಎಂಬಿತ್ಯಾದಿಯಾಗಿ ಪ್ರವಹಿಸುತ್ತಿದ್ದ 'ಬಂ-ಮ'ಹಾನದಿಯೀಗ ನಿಂತ ನೀರಾಯಿತು. ಜೊತೆಗೆ, 'ಅಪರಾಧಿ ನಾನಲ್ಲ ಅಪರಾಧ ಎನಗಿಲ್ಲ, ಕಪಟನಾಟಕ ಸೂತ್ರಧಾರಿ ನೀನೇ', ಎಂದು (ಹಿರಿ)'ಕು'ಮಾರನು 'ಬಂ'ಪಿತನನ್ನು ಹೀಗಳೆಯುತ್ತಿರಲಾಗಿ, ನಾನಾ ವೇಷ ಧರಿಸಿ ಅದಾಗಲೇ ಸುಸ್ತಾಗಿದ್ದ 'ಬಂ'ಪಿತನಿಗೆ, 'ಮೋಸಹೋದೆನಲ್ಲಾ, ತಿಳಿಯದೆ ಮೋಸಹೋದೆನಲ್ಲಾ; ಕ್ಲೇಶನಾಶವನು ಮಾಡುವಂಥ ಈ ಶ್ರೀ'ಕು'ಮಾರನನು ಸ್ಮರಿಸದೆಯೇ', ಅಂತ ಅನ್ನಿಸತೊಡಗಿತು. ಜೊತೆಗೆ, ಎಪ್ಪತ್ತೈದರಲ್ಲೂ ಇಪ್ಪತ್ತೈದರಂಥ ಅಧಿಕಾರದ ಆಸೆ ಬೇರೆ! ಪರಿಣಾಮ, 'ಬಾ ಬೇಗ ಮನಮೋಹನಾ, ಸು'ಕುಮಾರಾ!' ಎಂದು 'ಬಂ'ಪಿತನು ಹಾಡತೊಡಗಿದನು. (ಯಾವ ಮೋಹನ ಮುರಲಿ ಕರೆಯಿತೊ ಪಿತನ ಪಕ್ಕಕೆ ಸುತನನು!)

'ಹಿಡಕೋ, ಬಿಡಬೇಡಾ, ರಂಗನ ಪಾದ', ಎಂಬ ಪದವು 'ಬಂ'ಪಿತನಿಗೆ, 'ಹಿಡಕೋ, ಬಿಡಬೇಡಾ, ಮಗನ ಪಾದ', ಎಂದು ಭಾಸವಾಗಿ, ಆತ, 'ಒಂದಾಗಿ ಬಾಳುವಾ; ಒಲವಿಂದ ಆಳುವಾ. ಸಹಜೀವನ ಸವಿಜೇನಿನ ಸದನಾ', ಎಂದು ಹಾಡುತ್ತ (ಹಿರಿ)'ಕು'ಮಾರನೆಡೆಗೆ (ಯಾರಿಗೂ ಗೊತ್ತಾಗದಂತೆ ತಂಪು ಕಣ್ಣಡಕದೊಳಗಿಂದ) ಕಣ್ಣು ಹಾಯಿಸಿದ. ಜನರ ಕಣ್ಣೆದುರಿಗೆ ಆತ 'ಕುಮಾರ'ನಿಗೆ, 'ಮನೆಯೊಳಗಾಡೋ (ಕುಮಾರ್) ಗೋವಿಂದ, ನೆರೆ-ಮನೆಗಳಿಗೇಕೆ ಪೋಗುವೆಯೋ ಮುಕುಂದ: ಪೋಗದಿರೆಲೊ ರಂಗ ಬಾಗಿಲಿಂದಾಚೆಗೆ', ಎನ್ನುತ್ತಿದ್ದರೂ, ಪ್ರೈವೇಟಿನಲ್ಲಿ, 'ಯಾರು ಬಿಟ್ಟರು 'ಕೈ'ಯ ನೀ ಬಿಡದಿರು ಕಂಡ್ಯ', ಎಂದು ಪ್ರಾರ್ಥಿಸತೊಡಗಿದ. 'ಹೂವ ತರುವರ ಮನೆಗೆ ಹುಲ್ಲು ತರುವ' 'ಕು'ಮಾರನೋ, 'ನಾನಿರುವುದೆ ನಿಮಗಾಗಿ, ನಾಡಿರುವುದು ನಮಗಾಗಿ', ಎಂದೆನ್ನುತ್ತ ಪುನಃ ಪಿತೃ-ಭ್ರಾತೃ-ಪಕ್ಷ-ಪಾತಿ ಆದ.

ಹೀಗೆ,
ಪುನರ್ಮಿಲನ ಆಯಿತು.
ಪುನಃ ಈಗ, 'ಬಂ-ಮ ಸಂಸಾರ, ಆನಂದಸಾಗರ.'

'ಮೂವರೂ ಒಟ್ಟಾಗಿ ಈಗ, 'ಬಂಗಾರ'ದೊಡವೆ ಬೇಕೇ, ಜನರೇ, 'ಬಂಗಾರ'ದೊಡವೆ ಬೇಕೇ?' ಎಂದು ಮತದಾರ ಪ್ರಜೆಗಳನ್ನು ಕೇಳುತ್ತಿದ್ದಾರೆ. 'ನಾಡಿರುವುದು ನಮಗಾಗಿ', ಎಂದು ಕ್ಲೈಮ್ ಮಾಡುತ್ತ ಈ (ತಾಪ)ತ್ರಯರು ಇದೀಗ ಮತ್ತೆ, 'ಒಂದಾಗಿ ಬಾಳುವಾ; ಒಲವಿಂದ (ಈ ನಾಡನ್ನು) ಆಳುವಾ', ಎಂದು ಹಾ(ರಾ)ಡುತ್ತಿದ್ದಾರೆ. ಆಳುವರೋ, ಅಳುವರೋ, ಚುನಾವಣೆಯ ಫಲಿತಾಂಶದ ದಿನ ಗೊತ್ತಾಗುತ್ತದೆ.

ನೀತಿ : ಪುರಂದರದಾಸರ ಪದಗಳ ಮತ್ತು ಕನ್ನಡದ ಹಳೆಯ ಚಿತ್ರಗೀತೆಗಳ ಸೂಕ್ತ ಬಳಕೆಯು ಸಂಸಾರಕ್ಕೆ ಹಿತಕರ; ಅಸೂಕ್ತ ಬಳಕೆಯು ಹಾನಿಕರ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+