ಬಂಗಾರ-ಕುಮಾರ-ಮಧು-ಚಂದ್ರ-ಯಾನ

* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು
ಇದು 'ಬಂಕುಮ'ಚಂದ್ರರ ಕಥೆ. ಒಂದಾನೊಂದು ಕಾಲದಲ್ಲಿ, 'ನಮ್ಮ ಸಂಸಾರ, ಆನಂದಸಾಗರ', ಎನ್ನುತ್ತಾ ಚಂದಾಗಿ ಬಾಳುತ್ತಿದ್ದರು 'ಬಂ(ಗಾರಪ್ಪ) ಕು(ಮಾರ) ಮ(ಧು)'ಚಂದ್ರರು. ಪಸಂದಾಗಿ ಆಳುತ್ತಿದ್ದರು.
ಅದೊಂದು ಕೆಟ್ಟ ಗಳಿಗೆಯಲ್ಲಿ 'ಬಂ-ಕು' ಮಧ್ಯೆ ದ್ವೇಷ ಅಂಕುರಿಸಿತು. 'ಹೋದರೆಹೋಗು, ನನಗೇನು? ಕೋಪದಿ ತಾಪದಿ ಫಲವೇನು?' ಎಂದು ಒಬ್ಬರಿಂದೊಬ್ಬರು ದೂರಾದರು. 'ಮಾತೊಂದ ಹೇಳುವೆನು, ಹತ್ತಿರ ಹತ್ತಿರ ಬಾ', ಎಂದು 'ಬಂ' ಪಿತನು ಕಿರಿ(ಕಿರಿ) 'ಮ'ಗನನ್ನು ಹತ್ತಿರಕ್ಕೆ ಸೆಳೆಯಲಾಗಿ 'ಬಂ-ಮ' 'ಜೊತೆಯಲಿ, ಜೊತೆಜೊತೆಯಲಿ' ಸಾಗತೊಡಗಿದರು.
'ಮಧು'ಮಯ ಚಂದ್ರನ 'ಮಧು'ಮಯ ಹಾಸವೆ ಮೈತಳೆದಂತೆ ನೀ ಕಂಡೆ', ಎಂದು 'ಬಂ'ಪಿತನು ಕಿರಿ(ಕಿರಿ) 'ಮ'ಗನನ್ನು ಹೊಗಳಿದರೆ, ಆ 'ಮ'ಗನು 'ಬಂ'ಪಿತನನ್ನು, 'ಬಾಳಿನ ಹಿರಿಯಾ, ಎನ್ನಯ ಒಡೆಯಾ, ಕನ್ನಡ ಕುಲವರಾ ನೀ 'ಬಂ'ದೇ', ಎಂದು ಹಾಡಿ ಹೊಗಳತೊಡಗಿದನು.
ಅತ್ತ, ಹಿರಿ(ಹಿರಿ 'ಹಿಗ್ಗಿ'ದ) 'ಕು'ಮಾರನೋ, 'ಮದನೋ ಮನ್ಮಥೋ ಮಾರಃ ಪ್ರದ್ಯುಮ್ನೋ ಮೀನಕೇತನಃ ಕಂದರ್ಪೋ ದರ್ಪಕೋ ಅನಂಗಃ ಕಾಮಃ ಪಂಚಶರಸ್ಮರಃ' ಎಂಬ 'ಮ-ದನ-ಕು-ಮಾರ-ಅಭಿಧಾನ ಲಕ್ಷಣ'ಗಳನ್ನೆಲ್ಲ ತನ್ನ ಪೂರ್ವವೃತ್ತಿಯ 'ನಟನಾಚಾತುರ್ಯ'ದಿಂದ ಬಳಸಿಕೊಂಡು ಜನನಾಯಕನಾಗಿಬಿಟ್ಟನು. ಇತ್ತ 'ಬಂ'ಗಾರ ಹೊಳಪು ಕಳಕೊಳ್ಳತೊಡಗಿತು. 'ಮ'ಧುಚಂದ್ರಕ್ಕೆ ಅಮಾವಾಸ್ಯೆ ಆವರಿಸಿತು.
'ಅಮರಾ 'ಮಧು'ರಾ ಪ್ರೇಮಾ; 'ಮಧು'ರ'ಮಧು'ರವೀ ಮಂಜುಳಗಾನ', ಎಂಬಿತ್ಯಾದಿಯಾಗಿ ಪ್ರವಹಿಸುತ್ತಿದ್ದ 'ಬಂ-ಮ'ಹಾನದಿಯೀಗ ನಿಂತ ನೀರಾಯಿತು. ಜೊತೆಗೆ, 'ಅಪರಾಧಿ ನಾನಲ್ಲ ಅಪರಾಧ ಎನಗಿಲ್ಲ, ಕಪಟನಾಟಕ ಸೂತ್ರಧಾರಿ ನೀನೇ', ಎಂದು (ಹಿರಿ)'ಕು'ಮಾರನು 'ಬಂ'ಪಿತನನ್ನು ಹೀಗಳೆಯುತ್ತಿರಲಾಗಿ, ನಾನಾ ವೇಷ ಧರಿಸಿ ಅದಾಗಲೇ ಸುಸ್ತಾಗಿದ್ದ 'ಬಂ'ಪಿತನಿಗೆ, 'ಮೋಸಹೋದೆನಲ್ಲಾ, ತಿಳಿಯದೆ ಮೋಸಹೋದೆನಲ್ಲಾ; ಕ್ಲೇಶನಾಶವನು ಮಾಡುವಂಥ ಈ ಶ್ರೀ'ಕು'ಮಾರನನು ಸ್ಮರಿಸದೆಯೇ', ಅಂತ ಅನ್ನಿಸತೊಡಗಿತು. ಜೊತೆಗೆ, ಎಪ್ಪತ್ತೈದರಲ್ಲೂ ಇಪ್ಪತ್ತೈದರಂಥ ಅಧಿಕಾರದ ಆಸೆ ಬೇರೆ! ಪರಿಣಾಮ, 'ಬಾ ಬೇಗ ಮನಮೋಹನಾ, ಸು'ಕುಮಾರಾ!' ಎಂದು 'ಬಂ'ಪಿತನು ಹಾಡತೊಡಗಿದನು. (ಯಾವ ಮೋಹನ ಮುರಲಿ ಕರೆಯಿತೊ ಪಿತನ ಪಕ್ಕಕೆ ಸುತನನು!)
'ಹಿಡಕೋ, ಬಿಡಬೇಡಾ, ರಂಗನ ಪಾದ', ಎಂಬ ಪದವು 'ಬಂ'ಪಿತನಿಗೆ, 'ಹಿಡಕೋ, ಬಿಡಬೇಡಾ, ಮಗನ ಪಾದ', ಎಂದು ಭಾಸವಾಗಿ, ಆತ, 'ಒಂದಾಗಿ ಬಾಳುವಾ; ಒಲವಿಂದ ಆಳುವಾ. ಸಹಜೀವನ ಸವಿಜೇನಿನ ಸದನಾ', ಎಂದು ಹಾಡುತ್ತ (ಹಿರಿ)'ಕು'ಮಾರನೆಡೆಗೆ (ಯಾರಿಗೂ ಗೊತ್ತಾಗದಂತೆ ತಂಪು ಕಣ್ಣಡಕದೊಳಗಿಂದ) ಕಣ್ಣು ಹಾಯಿಸಿದ. ಜನರ ಕಣ್ಣೆದುರಿಗೆ ಆತ 'ಕುಮಾರ'ನಿಗೆ, 'ಮನೆಯೊಳಗಾಡೋ (ಕುಮಾರ್) ಗೋವಿಂದ, ನೆರೆ-ಮನೆಗಳಿಗೇಕೆ ಪೋಗುವೆಯೋ ಮುಕುಂದ: ಪೋಗದಿರೆಲೊ ರಂಗ ಬಾಗಿಲಿಂದಾಚೆಗೆ', ಎನ್ನುತ್ತಿದ್ದರೂ, ಪ್ರೈವೇಟಿನಲ್ಲಿ, 'ಯಾರು ಬಿಟ್ಟರು 'ಕೈ'ಯ ನೀ ಬಿಡದಿರು ಕಂಡ್ಯ', ಎಂದು ಪ್ರಾರ್ಥಿಸತೊಡಗಿದ. 'ಹೂವ ತರುವರ ಮನೆಗೆ ಹುಲ್ಲು ತರುವ' 'ಕು'ಮಾರನೋ, 'ನಾನಿರುವುದೆ ನಿಮಗಾಗಿ, ನಾಡಿರುವುದು ನಮಗಾಗಿ', ಎಂದೆನ್ನುತ್ತ ಪುನಃ ಪಿತೃ-ಭ್ರಾತೃ-ಪಕ್ಷ-ಪಾತಿ ಆದ.
ಹೀಗೆ,
ಪುನರ್ಮಿಲನ ಆಯಿತು.
ಪುನಃ ಈಗ, 'ಬಂ-ಮ ಸಂಸಾರ, ಆನಂದಸಾಗರ.'
'ಮೂವರೂ ಒಟ್ಟಾಗಿ ಈಗ, 'ಬಂಗಾರ'ದೊಡವೆ ಬೇಕೇ, ಜನರೇ, 'ಬಂಗಾರ'ದೊಡವೆ ಬೇಕೇ?' ಎಂದು ಮತದಾರ ಪ್ರಜೆಗಳನ್ನು ಕೇಳುತ್ತಿದ್ದಾರೆ. 'ನಾಡಿರುವುದು ನಮಗಾಗಿ', ಎಂದು ಕ್ಲೈಮ್ ಮಾಡುತ್ತ ಈ (ತಾಪ)ತ್ರಯರು ಇದೀಗ ಮತ್ತೆ, 'ಒಂದಾಗಿ ಬಾಳುವಾ; ಒಲವಿಂದ (ಈ ನಾಡನ್ನು) ಆಳುವಾ', ಎಂದು ಹಾ(ರಾ)ಡುತ್ತಿದ್ದಾರೆ. ಆಳುವರೋ, ಅಳುವರೋ, ಚುನಾವಣೆಯ ಫಲಿತಾಂಶದ ದಿನ ಗೊತ್ತಾಗುತ್ತದೆ.
ನೀತಿ : ಪುರಂದರದಾಸರ ಪದಗಳ ಮತ್ತು ಕನ್ನಡದ ಹಳೆಯ ಚಿತ್ರಗೀತೆಗಳ ಸೂಕ್ತ ಬಳಕೆಯು ಸಂಸಾರಕ್ಕೆ ಹಿತಕರ; ಅಸೂಕ್ತ ಬಳಕೆಯು ಹಾನಿಕರ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications