ಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!

* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರು
ಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು ಏನು ಮಾಡಿದರು ಗೊತ್ತೆ? ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಬಿ ನಡೆಸಿ ಕಾನೂನಿನ ಅಡೆತಡೆಗಳನ್ನು ನಿವಾರಿಸಿಕೊಂಡು, ಕೇಂದ್ರ ಸರ್ಕಾರದೊಡನೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಶ್ಯಕ ಒಪ್ಪಂದಗಳನ್ನು ಮಾಡಿಕೊಂಡು ಚಂದ್ರನ ಒಂದಷ್ಟು ನೆಲವನ್ನು ಖರೀದಿಸಿ ತಮ್ಮ ಸಂಸ್ಥೆಗಳ ಹೆಸರುಗಳಲ್ಲಿ ರಿಜಿಸ್ಟರ್ ಮಾಡಿಸಿಕೊಂಡರು. ಅನಂತರ ಆ ನೆಲದಲ್ಲಿ ನಿವೇಶನ ಇತ್ಯಾದಿಗಳನ್ನು ಗಣಕಯಂತ್ರದ ಸಹಾಯದಿಂದ 'ನಿರ್ಮಿಸಿ' ಮಾಧ್ಯಮಗಳಲ್ಲಿ ಆಕರ್ಷಕ ಜಾಹಿರಾತುಗಳನ್ನು ನೀಡಿ ಸಾರ್ವಜನಿಕರಿಗೆ ಮಾರತೊಡಗಿದರು. ವಿವಿಧ ವಿಸ್ತೀರ್ಣಗಳ ಸೈಟುಗಳು ಅಲ್ಲಿ ಲಭ್ಯ.
'ಡೂ ಯೂ ವಾಂಟ್ ಎ ಸೈಟ್ ಆನ್ ಮೂನ್? ಚಾಂದ್ ಕೇ ಊಪರ್ ಸೈಟ್ ಹೋನಾ?' ಎಂದು ಕೇಳಿಕೊಂಡು ಈ ರಿಯಲ್ ಎಸ್ಟೇಟ್ ಉದ್ಯಮಗಳ ಏಜಂಟರು ಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್, ಟಿ.ಕೆ.ಅಲೆಕ್ಸ್ ಇವರುಗಳ ಮನೆಬಾಗಿಲನ್ನೂ ಬಡಿದು ಬೈಸಿಕೊಂಡು ವಾಪಸಾದರು.
ಕೈಯಲ್ಲಿ ಕಾಸು ಓಡಾಡುತ್ತಿದ್ದ ಕಾಲ, ಭಾರತದ ಸಾಫ್ಟ್ವೇರ್ ಉದ್ಯೋಗಿಗಳು ಮುಗಿಬಿದ್ದು ಚಂದ್ರನಮೇಲೆ ಸೈಟುಗಳನ್ನು ಖರೀದಿಸಿದರು. ಹಾಗೆ ಖರೀದಿಸಿದವರಲ್ಲಿ ಸಹಜವಾಗಿಯೇ ಬೆಂಗಳೂರಿನ ಸಾಫ್ಟ್ವೇರ್ ಉದ್ಯೋಗಿಗಳದ್ದೇ ಸಿಂಹಪಾಲು.
ಇದೆಲ್ಲ ಹಳೆಯ ಕಥೆ. ಇದೀಗ ಒಬಾಮಾ, 'ಬ್ಯಾಂಗಲೋರ್ ನೋ, ಬಫೆಲೋ ಯೆಸ್', ಅಂದನಲ್ಲಾ, ಬಹಳಷ್ಟು ಸಾಫ್ಟ್ವೇರ್ ಉದ್ಯೋಗಿಗಳ ಉದ್ಯೋಗ ಹೊರಟುಹೋಗಿದೆ! ಅವರೀಗ ಜೀವನೋಪಾಯಕ್ಕಾಗಿ ಚಂದ್ರನಮೇಲಿನ ತಮ್ಮ ಸೈಟುಗಳನ್ನು ಮಾರಲು ಹೊರಟಿದ್ದಾರೆ. ಆದರೆ, ಕೊಳ್ಳಲು ಗಿರಾಕಿಯೇ ಇಲ್ಲ. ಕಾರಣ ಆರ್ಥಿಕ ಹಿಂಜರಿತ. ಎಲ್ಲಿಗೆ ಬಂತು ನೋಡಿ ಅವಸ್ಥೆ!
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications