ಪರಿಪರಿ ಪ್ರಯತ್ನಿಸಿದರೂ ಕರಿಯಾಗದ ಕೂದಲು

ಯಾರು ಎಂದು ಕೇಳಿದಳು ನನ್ನ ಮಡದಿ. ಅದೇ ಪ್ರಿಯಾ ಪೇಪರ್ ನವನಿಗೆ ಹೇಳಬೇಕಂತೆ ಎಂದೆ. ಮನದಲ್ಲಿ ಮತ್ತೆ ಅದೇ ಯೋಚನೆ... ಅಂಕಲ್...? ಹೋಗಿ ಕನ್ನಡಿ ಮುಂದೆ ನಿಂತೆ. ಪೂರ್ತಿಯಾಗಿ ಎಲ್ಲಡೆ ಕಣ್ಣು ಹಾಯಿಸಿ ನೋಡಿದೆ. ತಲೆ ಒಂದು ಬಿಟ್ಟು ಎಲ್ಲವೂ ಸರಿ ಇತ್ತು(ತಲೆ.. ಐ ಮೀನ್ ಕೂದಲು!) ಈ ಕೂದಲಿಗೆ ಏನು ಮಾಡುವುದು ಎಂದು ಯೋಚಿಸುತ್ತಿದ್ದೆ. ಅಲ್ಲೇ ಬಿದ್ದ ಏಶಿಯನ್ ಕರಿ ಪೈಂಟ್ ನನ್ನ ನೋಡಿ "ಬಣ್ಣ ನನ್ನ ಒಲವಿನ ಬಣ್ಣ" ಎಂದು ಹಾಡುತ್ತಿದ್ದ ಹಾಗೇ ಅನ್ನಿಸಿತು. ಪೈಂಟ್ ಡಬ್ಬಿ ತೆಗೆದೆ ಸೀಮೆ ಎಣ್ಣೆ ವಾಸನೆ. ಒಯಿಕ... ಒಯಿಕ... ಎಂದು ಎರಡು ಸಾರಿ ಹೊಟ್ಟೆ ತೊಳಿಸುವ ಹಾಗೆ ಅನ್ನಿಸಿತು. ಎತ್ತಿ ಪಕ್ಕಕ್ಕೆ ಇಟ್ಟೆ. ನೀರು ಕಾಯಿಸಲು ಹೋದಾಗ ಇದ್ದಿಲು ಕಾಣಿಸಿತು. ಆ "ಯುರೇಕಾ....." ಎಂದು ಕಿರುಚೋಣ ಎಂದು ಕೊಂಡೆ. ಮಗ ಇನ್ನೂ ಎದ್ದಿರಲಿಲ್ಲ. ಕಿರುಚಿದರೆ ಅಷ್ಟೇ ನನ್ನ ಮಡದಿ ಪರಚಿ ಬಿಡುತ್ತಾಳೆ ಎಂದು ಸುಮ್ಮನಾದೆ. ಆದರೆ ಇದನ್ನು ಹಚ್ಚಿಕೊಂಡರೆ ಮಳೆ ಬಂದರೆ ಕಷ್ಟ. ಮತ್ತೆ ಆ ಐಡಿಯಾ ಕೂಡ ತಲೆ ಕೆಳಗಾಯಿತು.
ಸ್ನಾನ ಮುಗಿಸಿ ಬಂದ ಕೂಡಲೇ... ಕಾಣಿಸಿದ್ದು ಕಾಡಿಗೆ ಡಬ್ಬಿ. ತೆಗೆದೆ ಅದು ಪೂರ್ತಿ ಖಾಲಿ ಆಗಿತ್ತು. ಮತ್ತೆ ನಿರಾಸೆಯ ಅಲೆಯಲ್ಲಿ ತೇಲುತ್ತ ತಿಂಡಿ ತಿಂದು ಆಫೀಸ್ ಹೋಗಲು ಅನುವಾದೆ. ಬೂಟ್ ಹಾಕಿಕೊಳ್ಳುವಾಗ ಕಾಣಿಸಿತು ನೋಡಿ. ನನ್ನ ಬೂಟ್ ಪಾಲಿಷ್. ಅದನ್ನೇ ಹಚ್ಚಿಕೊಳ್ಳೋಣ ಎಂದು ಬ್ರಶ್ ಎತ್ತಿದೆ. ನನ್ನ ಮಡದಿ ಒಳಗಿನಿಂದ ಬಂದು ರೀ ಹಾಲು ಕುಡಿದು ಹೋಗಿ ಎಂದಳು. ಮೊದಲೇ ಆ ಬಿಳಿ ಬಣ್ಣದ ಮೇಲೆ ಕೋಪವಿದ್ದಿದರಿಂದ. ಇವತ್ತು ನನಗೆ ಹಾಲುಬೇಡ ಕಣೆ ಎಂದೆ. ಏನು ಮಾಡುತ್ತಾ ಇದ್ದೀರ? ಎಂದು ಕೇಳಿದಳು ಮಡದಿ. ಏನು ಇಲ್ಲ, ಕಣೆ ಬೂಟ್ ಪಾಲಿಷ್ ಮಾಡುತ್ತಾ ಇದ್ದೇನೆ ಎಂದೆ. ಬೂಟ್ ತೆಗೆದು ಕೊಂಡೆ. ರೀ ನಾನು ಆಗಲೇ ಪಾಲಿಷ್ ಮಾಡಿ ಆಗಿದೆ ಎಂದಳು. ನೋಡು ಎಷ್ಟು ಕೊಳೆಯಾಗಿದೆ ಎಂದು ಪಾಲಿಷ್ ಮಾಡಲು ಅನುವಾದೆ. ನನ್ನನ್ನು ನೋಡಿ ಜೋರಾಗಿ ನಗಲು ಶುರು ಹಚ್ಚಿಕೊಂಡಳು. ನಾನು ಅರಿವಿಲ್ಲದೇ ಏಕೆ? ಎಂದು ದಬಾಯಿಸಿ ಕೇಳಿದಾಗ. ಮತ್ತೆ ಏನು ಬ್ರೌನ್ ಬೂಟ್ ಗೆ ಕರಿ ಪಾಲಿಷ್ ಎಂದು ಕುಹಕವಾಡಿದಳು. ನಾನು ಅದನ್ನು ನೋಡಿ ನನ್ನ ಬುದ್ದಿಗೆ ಮಲ.. ಮಲ.. ಮರುಗಿ, ಅವಳು ಪಾಲಿಷ್ ಮಾಡಿದ ಕರಿ ಬೂಟ್ ಹಾಕಿಕೊಂಡು ಆಫೀಸ್ ಹೋಗಲು ಬಸ್ ಸ್ಟಾಪ್ಗೆ ಹೋದೆ. ಅಷ್ಟರಲ್ಲಿ ಒಬ್ಬ ಶಾಲೆಗೆ ಹೋಗುತ್ತಿದ್ದ ಒಂದು ಹುಡುಗಿ "ಅಂಕಲ್ ಟೈಮ್ ಎಷ್ಟು" ಎಂದು ಕೇಳಿದಳು. ಅವಳಿಗೆ ಟೈಮ್ ಹೇಳಿ ನಿಂತ ಎರಡೇ ನಿಮಿಷದಲ್ಲಿ ಬಸ್ ಬಂತು.
![]() | |
| ಕೂದಲು ಕಪ್ಪು ಮಾಡೋಕೆ ಮತ್ಯಾವುದಾದರೂ ಉಪಾಯವಿದ್ದರೆ ತಿಳಿಸಿ | |
![]() | |
ಆ ನಾಟಿ ಔಷಧಿ ಡಾಕ್ಟರ್ ಅಡ್ರೆಸ್ ಹುಡುಕಿ... ಹುಡುಕಿ... ಅರ್ಧ ಬೆಂಗಳೂರು ತಿರುಗಿದ್ದೆ. ಏಕೆಂದರೆ ಆ ಆಸಾಮಿ ತನ್ನ ಔಷಧಿ ಅಂಗಡಿಯನ್ನು ಒಂದು ಜಾಗದಲ್ಲಿ ಇಡುವದಿಲ್ಲ ಎಂದು ಎಲ್ಲರೂ ಹೇಳಿದರು. ಕಡೆಗೆ ಮನೆಗೆ ಹೋಗುವ ಮನಸಿಲ್ಲದೇ ಕಡೆಯ ಪ್ರಯತ್ನ ಎಂದು ಒಬ್ಬರು ಹೇಳಿದ ಅಡ್ರೆಸ್ ಬಳಿ ಹೋದೆ. ಆಸಾಮಿ ಸಿಕ್ಕೇ ಬಿಟ್ಟ. ಸರ್... ಎಂದು ಒಳಗೆ ಹೋದ ಕೂಡಲೇ ನಿಮ್ಮ ಸಮಸ್ಯೆ ಏನು ಎಂದು ಕೇಳದೇ. ಒಂದಿಷ್ಟು ಎಣ್ಣೆ ಕೈಗೆ ಕೊಟ್ಟ. ಸರ್ ಇದು ಏನು? ಎಂದೆ. ನಿಮ್ಮ ತಲೆ ನೋಡಿ ಗೊತ್ತಾಗುತ್ತೆ? ನೀವು ಏತಕ್ಕೆ ಬಂದಿದ್ದೀರಿ ಎಂದ. ಹೇಗಾದರೂ ಮಾಡಿ ಈ ಬಿಳಿ ಕೂದಲಿಗೆ ಅಂತ್ಯ ಕಾಣಿಸಿ ಎಂದೆ. ಡಾಕ್ಟರ್ ತಲೆ ಕೆರೆದುಕೊಳ್ಳಲು ಶುರು ಮಾಡಿದರು. ಪಾಪ ಏನೋ ಸಮಾಧಾನ ಆಗಲಿಲ್ಲ ಅಂತ ಕಾಣುತ್ತೆ. ನೋಡ.. ನೋಡುತ್ತಲೇ.. ವೀಗ್ ತೆಗೆದು ಕೆರೆದುಕೊಂಡರು. ನಾನು ಘಾಬರಿ. ಏನು ಹೆದರಬೇಡಿ ಎಂದು ಹೇಳಿದರು. ಕೂದಲು ನನಗೆ ಹುಟ್ಟಾ ಇಲ್ಲ ಎಂದರು. ಅದಕ್ಕೆ ಇರಬೇಕು ಇಷ್ಟು ಜಾಣ ಡಾಕ್ಟರ್ ಎಂದು ಮನದಲ್ಲೇ ಅಂದು ಕೊಳ್ಳುತ್ತಿದ್ದಾಗ, ಒಬ್ಬ ವೀಗ್ ವ್ಯಾಪಾರ ಮಾಡುವ ಆಸಾಮಿ ಬಂದು, ಸರ್ ಎಷ್ಟು ವೀಗ್ ಕೊಡಲಿ ಎಂದು ಡಾಕ್ಟರನ್ನು ಕೇಳಿದ. ಮತ್ತೆ ಡಾಕ್ಟರ್ ನನಗೆ ಸಮಾಧಾನ ಮಾಡಿ ಅದು ನಿಮಗೆ ಅಲ್ಲ ಎಂದು ಹೇಳಿ. ನನಗೆ ಫೀಸ್ ಕೊಡಲು ಹೇಳಿದರು. ಎಷ್ಟು ಎಂದಾಗ. ಬರಿ 2000 ರೂಪಾಯಿ!
ವಿಧಿ ಇಲ್ಲದೇ ಕೊಟ್ಟು ಮನೆಗೆ ಬಂದೆ. ದಿನವೂ ಔಷಧ ಲೇಪನ ಶುರು ಹಚ್ಚಿ ಕೊಂಡೆ. ನನ್ನ ಮಡದಿ ರೀ... ನಿಮ್ಮ ತಲೆ ವಾಸನೆ ಗೋಮೂತ್ರ ಹಾಗೆ ಬರುತ್ತೆ ಎಂದಳು. ಲೇ ಅದು ಫೇಮಸ್ ಡಾಕ್ಟರ್ ಕೊಟ್ಟ ಔಷಧಿ ಎಂದು ಹೇಳಿ ಸಮಾಧಾನ ಮಾಡಿದೆ. ಅಪ್ಪ ನೀನು ಹೊರಗೆ ಬಿದ್ದುಕೊ ಎಂದು ಮಗ ದುಂಬಾಲು ಬಿದ್ದ. ವಿಧಿ ಇಲ್ಲ ಎಂದು ಹೊರಗೆ ಮಲಗಿಕೊಂಡೆ. ಹತ್ತು ದಿನ ಹಾಗೆ ಲೇಪನ ಮಾಡಿದ್ದೆ ಮಾಡಿದ್ದು. ಮಡದಿ, ರೀ... ಮೇಹಂದಿ ಹಚ್ಚಿಕೊಳ್ಳಬಾರದೇ ಎಂದು ಹೇಳಿದರೂ ಕೇಳಲಿಲ್ಲ. ನೋಡಿ, ಒಂದು ತಿಂಗಳು ಆದರೂ ಒಂದು ಕೂದಲು ಕೂಡ ಕರಿ ಆಗಲಿಲ್ಲ ಎಂದು ಅಪಹಾಸ್ಯ ಮಾಡಿದಳು.
ಕಡೆಗೆ ಒಂದು ದಿನ ನನ್ನ ಗೆಳೆಯ ಕೇಶವ್ ಕುಲ್ಕರ್ಣಿ ಕರೆ ಮಾಡಿದ್ದ. ನನ್ನ ಸಮಸ್ಯೆ ಹೇಳಿದೆ. ಅವನು ನೋಡು ಗೋಪಿ ದಿನಾಲೂ ರಾಗಿ ಹಿಟ್ಟು ಹಚ್ಚು ಎಂದು ಹೇಳಿದ. ಕಡೆಗೆ ದಿನವೂ ರಾಗಿ ಹಿಟ್ಟು. ಒಂದು ದಿನ ರಾಗಿ ಹಿಟ್ಟು ಹಚ್ಚಿ ಮಲಗಿ ಕೊಂಡಾಗ, ತಲೆಯಲ್ಲ ಕೆರೆತ ಮತ್ತು ಉರಿ ಎದ್ದು ನೋಡುತ್ತೇನೆ. ತಲೆ ತುಂಬಾ ಇರುವೆ. ನನ್ನ ಮಡದಿ ಸಿಹಿ ತಿಂಡಿಗೆ ಮಾಡಿದ ಸಿಹಿ ರಾಗಿ ಬಳಿದುಕೊಂಡಿದ್ದೆ!
ಮತ್ತೊಂದು ತಿಂಗಳು ಕಳೆಯಿತೇ ಹೊರತು ಬಿಳಿ ಕೂದಲು ಕರಿ ಆಗಲಿಲ್ಲ. ಮತ್ತೆ ಅದೇ ನಾಟಿ ಡಾಕ್ಟರ್ ಹುಡುಕಿ ಹೋದೆ. ಮತ್ತೆ ಒಂದು ಸಾವಿರ ರೂಪಾಯಿ ಕೊಟ್ಟು ಮತ್ತೊಂದು ಔಷಧ ತಂದೆ. ಮತ್ತೆ ದಿನವೂ ಅದನ್ನು ಹಚ್ಚಿಕೊಂಡು ಮಲಗಿದೆ. ಒಂದೇ ತಿಂಗಳ ಪ್ರಯೋಗದ ನಂತರ ನನ್ನ ತಲೆಯಲ್ಲಿ ಎಲ್ಲ ಕೂದಲು ಕರಿ.... :-) ಆದರೆ ಇದ್ದ ಬಿಳಿ ಕೂದಲು ಎಲ್ಲವೂ ಬಿದ್ದು ಹೋಗಿದ್ದವು... :-(. ಈಗ ನನ್ನ ತಲೆ ನೋಡಿದರೆ ಬೆಂಗಳೂರಿನಿಂದ ಧಾರವಾಡದ ನಡುವೆ ಸಿಗುವ ಸ್ಟಾಪ್ ಗಳ ಹಾಗೆ 20-30 ಕಿಲೋ ಮೀಟರ್ ದೂರ.. ದೂರ ಇವೆ.
ಈಗ ನಾನು ಯಾರಾದರೂ ಮತ್ತೆ ಕೂದಲು ಬರುವ ಹಾಗೇ ಮಾಡುವ ವೈದ್ಯರನ್ನು ಹುಡುಕುತ್ತಾ ಇದ್ದೇನೆ. ಬಿಳಿ ಕೂದಲು ಆದರೂ ಪರವಾಗಿಲ್ಲ. ಏಳು ಬಣ್ಣ ಸೇರಿ ತಾನೇ ಬಿಳಿ ಬಣ್ಣ ಆಗುವದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ














Click it and Unblock the Notifications