ಕಾಸು ಖರ್ಚಿಲ್ಲದೆ ಪ್ರಜೆಗಳಿಗೆ ಭರ್ಜರಿ ಮನೋರಂಜನೆ!

ಪ್ರಜೆಗಳು ನ್ಯೂಸ್ ನೋಡುವುದರಲ್ಲಿ ಬ್ಯುಸಿಯಾಗಿರುವುದರಿಂದಾಗಿ ಅವರಿಗೆ ತಮ್ಮೆಲ್ಲ ಸಮಸ್ಯೆಗಳೂ ಮರೆತೇಹೋಗಿವೆ. ಸರ್ಕಾರ ಉಳಿಯುವುದೇ, ಅಳಿಯುವುದೇ ಎಂಬ ಸಸ್ಪೆನ್ಸ್ ಅವರಿಗೆ ಒಂಥರಾ ಥ್ರಿಲ್ ನೀಡುತ್ತಿದೆ. ಈ ಥ್ರಿಲ್ನ ಮುಂದೆ ಸಮಸ್ಯೆಗಳೆಲ್ಲ ಡಲ್. ಇಷ್ಟಕ್ಕೆಲ್ಲ ಕಾರಣರಾದ ನಾಯಿಗಳಿಗೆ, ಕ್ಷಮಿಸಿ, ನಾಯಕರಿಗೆ ಧನ್ಯವಾದಗಳು.
ಆದದ್ದೆಲ್ಲ ಒಳ್ಳಿತೇ ಆಯಿತು
ನಮ್ಮ ಶಾಸಕರ ಸೇವೆಗೆ ಸಾಧನ ಸಂಪತ್ತಾಯಿತು
ಅಂಡಿಗೆ ಕುರ್ಚಿ ಬಲಪಡಿಸಲಿಕೆ
ಮಂಡೆಗಳನ್ನು ಎಣಿಸುತಲಿದ್ದರು
ಉಂಡು ತೇಗುವರ ಹೊಟ್ಟೆಯ ತುಂಬಿಸೆ
ಅಂಡಿಗೆ ಕುರ್ಚಿ ಬಲವಾಯ್ತಯ್ಯ
ಆದದ್ದೆಲ್ಲ ಒಳ್ಳಿತೇ ಆಯಿತು
ಈ ನಡುವೆ, 'ಅನರ್ಹ ಶಾಸಕರಿಗೆ ಅವರೇನು ಹುಣಿಸೆಬೀಜ ಕೊಟ್ರಾ?' ಅಂತ ಪ್ರತಿಪಕ್ಷಿಗಳ ಕುರಿತು ಸಾಮ್ರಾಟ್ ಚಕ್ರವರ್ತಿಯವರು ಸವಾಲ್ ಹಾಕಿದ್ದಾರೆ. ಪ್ರತಿಪಕ್ಷಿಗಳು ಹುಣಿಸೆಬೀಜ ಕೊಡಲಿಲ್ಲ, ಹುಣಿಸೆಮರ ಕೊಟ್ಟರು. ದೆವ್ವಗಳಿಗೆ ಹುಣಿಸೆಮರ ಬಲು ಇಷ್ಟ. ನಿಷ್ಠಾಂತರಿಗಳಿಗೆ ದುಡ್ಡಿನ ದೆವ್ವ ಹಿಡಿದಿದೆಯಷ್ಟೆ.
ದೆವ್ವ ಬಿಡಿಸಲು ಸಾಮ್ರಾಟ್ ಪಕ್ಷ ಬೇವಿನ ಮರ ಕೊಟ್ಟಿತು. ಅನರ್ಹತೆಯೆಂಬ ಕಹಿಬೇವು. ದೆವ್ವ ಬಿಡಿಸಲು ಬೇವಿನಸೊಪ್ಪು ಬಳಸುತ್ತಾರೆ. ಒಟ್ಟಾರೆ, ದುರ್ನಾಟಕದ ಪರಿಸ್ಥಿತಿ ಈಗ ಹೇಗಾಗಿದೆಯಪ್ಪಾ ಅಂದರೆ,
ಆಪರೇಷನ್ ಕಂಡು ಪ್ರತಿಪಕ್ಷ
ಪರೇಷಾನ್ ಆಗಿದೆ;
ರೇಷನ್ ಸಿಗದೆ ಬಡಜನತೆ
ಷನ್ಖ ಊದುತ್ತಿದೆ;
ಷನ್ಭೋ ಶಂಕರ
ಕೇಎಸ್ಸೀಶ್ವರ
ಎಂಥ ಗತಿ ಬಂತೋ
ಯಡಿಯೂರ!
ಇಂತಹ ಪರಿಸ್ಥಿತಿಯಲ್ಲೂ ಕೊರಡು ಕೊನರುವುದೆಂದರೆ ಆಶ್ಚರ್ಯವಲ್ಲವೆ? ಇಲ್ಲದಿದ್ದರೆ, ಕನಡಾ ಬಂದ್ಕೇಸಿ ಸರ್ಯಗೆ ಮಾಟ್ಲಾಡಾನಿಕಿ ಬರ್ದೇ ಇರೋ ಬಿಶ್ರೀರಾಮುಲು ಅವರು ವಿಕ ಪತ್ರಿಕೆಯಲ್ಲಿ ಕನ್ನಡದ ಲೇಖನ ಬರೆಯೋದಂದ್ರೆ ಏನು?! ನಾನು ಇನ್ನು ರಾಜಕೀಯ ಕಟಕಿಗಳ ಮಟ್ಟಿಗೆ ಶಸ್ತ್ರಸಂನ್ಯಾಸ ಸ್ವೀಕರಿಸುವುದೊಳ್ಳೆಯದು. ಆದರೇನು ಮಾಡುವುದು,
ಬಿಟ್ಟೆನೆಂದರೆ ಬಿಡದೀ ಮಾಯೆ
ಕೆಟ್ಟ ರಾಜಕಾರಣಿಗಳ ಛಾಯೆ
ಸೊಟ್ಟ ನುಡಿಯುವುದೆ ಗತಿಯಾಯ್ತೆನಗೆ
ಬಿಟ್ಟೆನಿದೋ ಈ ಚಟ ಈ ಘಳಿಗೆ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications