ಕಾಸು ಖರ್ಚಿಲ್ಲದೆ ಪ್ರಜೆಗಳಿಗೆ ಭರ್ಜರಿ ಮನೋರಂಜನೆ!

ಪ್ರಜೆಗಳು ನ್ಯೂಸ್ ನೋಡುವುದರಲ್ಲಿ ಬ್ಯುಸಿಯಾಗಿರುವುದರಿಂದಾಗಿ ಅವರಿಗೆ ತಮ್ಮೆಲ್ಲ ಸಮಸ್ಯೆಗಳೂ ಮರೆತೇಹೋಗಿವೆ. ಸರ್ಕಾರ ಉಳಿಯುವುದೇ, ಅಳಿಯುವುದೇ ಎಂಬ ಸಸ್ಪೆನ್ಸ್ ಅವರಿಗೆ ಒಂಥರಾ ಥ್ರಿಲ್ ನೀಡುತ್ತಿದೆ. ಈ ಥ್ರಿಲ್ನ ಮುಂದೆ ಸಮಸ್ಯೆಗಳೆಲ್ಲ ಡಲ್. ಇಷ್ಟಕ್ಕೆಲ್ಲ ಕಾರಣರಾದ ನಾಯಿಗಳಿಗೆ, ಕ್ಷಮಿಸಿ, ನಾಯಕರಿಗೆ ಧನ್ಯವಾದಗಳು.
ಆದದ್ದೆಲ್ಲ ಒಳ್ಳಿತೇ ಆಯಿತು
ನಮ್ಮ ಶಾಸಕರ ಸೇವೆಗೆ ಸಾಧನ ಸಂಪತ್ತಾಯಿತು
ಅಂಡಿಗೆ ಕುರ್ಚಿ ಬಲಪಡಿಸಲಿಕೆ
ಮಂಡೆಗಳನ್ನು ಎಣಿಸುತಲಿದ್ದರು
ಉಂಡು ತೇಗುವರ ಹೊಟ್ಟೆಯ ತುಂಬಿಸೆ
ಅಂಡಿಗೆ ಕುರ್ಚಿ ಬಲವಾಯ್ತಯ್ಯ
ಆದದ್ದೆಲ್ಲ ಒಳ್ಳಿತೇ ಆಯಿತು
ಈ ನಡುವೆ, 'ಅನರ್ಹ ಶಾಸಕರಿಗೆ ಅವರೇನು ಹುಣಿಸೆಬೀಜ ಕೊಟ್ರಾ?' ಅಂತ ಪ್ರತಿಪಕ್ಷಿಗಳ ಕುರಿತು ಸಾಮ್ರಾಟ್ ಚಕ್ರವರ್ತಿಯವರು ಸವಾಲ್ ಹಾಕಿದ್ದಾರೆ. ಪ್ರತಿಪಕ್ಷಿಗಳು ಹುಣಿಸೆಬೀಜ ಕೊಡಲಿಲ್ಲ, ಹುಣಿಸೆಮರ ಕೊಟ್ಟರು. ದೆವ್ವಗಳಿಗೆ ಹುಣಿಸೆಮರ ಬಲು ಇಷ್ಟ. ನಿಷ್ಠಾಂತರಿಗಳಿಗೆ ದುಡ್ಡಿನ ದೆವ್ವ ಹಿಡಿದಿದೆಯಷ್ಟೆ.
ದೆವ್ವ ಬಿಡಿಸಲು ಸಾಮ್ರಾಟ್ ಪಕ್ಷ ಬೇವಿನ ಮರ ಕೊಟ್ಟಿತು. ಅನರ್ಹತೆಯೆಂಬ ಕಹಿಬೇವು. ದೆವ್ವ ಬಿಡಿಸಲು ಬೇವಿನಸೊಪ್ಪು ಬಳಸುತ್ತಾರೆ. ಒಟ್ಟಾರೆ, ದುರ್ನಾಟಕದ ಪರಿಸ್ಥಿತಿ ಈಗ ಹೇಗಾಗಿದೆಯಪ್ಪಾ ಅಂದರೆ,
ಆಪರೇಷನ್ ಕಂಡು ಪ್ರತಿಪಕ್ಷ
ಪರೇಷಾನ್ ಆಗಿದೆ;
ರೇಷನ್ ಸಿಗದೆ ಬಡಜನತೆ
ಷನ್ಖ ಊದುತ್ತಿದೆ;
ಷನ್ಭೋ ಶಂಕರ
ಕೇಎಸ್ಸೀಶ್ವರ
ಎಂಥ ಗತಿ ಬಂತೋ
ಯಡಿಯೂರ!
ಇಂತಹ ಪರಿಸ್ಥಿತಿಯಲ್ಲೂ ಕೊರಡು ಕೊನರುವುದೆಂದರೆ ಆಶ್ಚರ್ಯವಲ್ಲವೆ? ಇಲ್ಲದಿದ್ದರೆ, ಕನಡಾ ಬಂದ್ಕೇಸಿ ಸರ್ಯಗೆ ಮಾಟ್ಲಾಡಾನಿಕಿ ಬರ್ದೇ ಇರೋ ಬಿಶ್ರೀರಾಮುಲು ಅವರು ವಿಕ ಪತ್ರಿಕೆಯಲ್ಲಿ ಕನ್ನಡದ ಲೇಖನ ಬರೆಯೋದಂದ್ರೆ ಏನು?! ನಾನು ಇನ್ನು ರಾಜಕೀಯ ಕಟಕಿಗಳ ಮಟ್ಟಿಗೆ ಶಸ್ತ್ರಸಂನ್ಯಾಸ ಸ್ವೀಕರಿಸುವುದೊಳ್ಳೆಯದು. ಆದರೇನು ಮಾಡುವುದು,
ಬಿಟ್ಟೆನೆಂದರೆ ಬಿಡದೀ ಮಾಯೆ
ಕೆಟ್ಟ ರಾಜಕಾರಣಿಗಳ ಛಾಯೆ
ಸೊಟ್ಟ ನುಡಿಯುವುದೆ ಗತಿಯಾಯ್ತೆನಗೆ
ಬಿಟ್ಟೆನಿದೋ ಈ ಚಟ ಈ ಘಳಿಗೆ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications