Get Updates
Get notified of breaking news, exclusive insights, and must-see stories!

ಕನ್ಯಾ ಏನ ಗಿಡದಾಗ ಹುಟ್ಟತಾವ? ಮತ್ತಿನ್ನೇನ! ಬೇಕೇನ?

ಒಮ್ಮೆ ನೈಮಿಷಾರಣ್ಯದಲ್ಲಿ ವಾಸಿಸುವ ಶೌನಕರು, ಋಷಿ-ಮುನಿಗಳು ಭರತಖಂಡದ ಪ್ರಸ್ತುತ ಬ್ರಾಹ್ಮಣ ವರಗಳ ದಯನೀಯ ಸ್ಥಿತಿಯನ್ನು ಕುರಿತು, ಪುರಾಣಗಳನ್ನು ಬಲ್ಲ ಮಹಾ ತೇಜಸ್ವಿಯೂ, ಮಹಾಕೀರ್ತಿವಂತನೂ, ಶ್ರೀಮನ್ ನಾರಾಯಣನ ಭಕ್ತನೂ ಆದ ನನ್ನನ್ನು ಕುರಿತು ಬ್ರಾಹ್ಮಣ ವರಗಳ ಹಿತಾರ್ಥವಾಗಿ ಪ್ರಶ್ನೆ ಮಾಡಿದರು.

"ಎಲೈ ಪ್ರಶಾಂತನೇ! ಈ ಮೃತ್ಯು ಲೋಕದಲ್ಲಿ ಬ್ರಾಹ್ಮಣ ವರಗಳು ಕನ್ಯೆಗಳಿಗಾಗಿ ಬಹು ದುಃಖದಿಂದ ಬಳಲುತ್ತಿದ್ದಾರೆ. ಆದಾವ ವ್ರತದಿಂದ ಇಲ್ಲವೇ ಆದಾವ ತಪಸ್ಸಿನಿಂದ ಅವರಿಗೆ ಕನ್ಯಾ ಪ್ರಾಪ್ತವಾಗುವದೆಂದು ನೀವು ದಯವಿಟ್ಟು ಶ್ರೀಮನ್ ನಾರಾಯಣನನ್ನು ಕೇಳಿ ಈ ವರಗಳ ದುಃಖವನ್ನು ಶಮನ ಮಾಡಬೇಕು" ಎಂದು ನನ್ನಲ್ಲಿ ಕಳಕಳಿಯಿಂದ ಕೋರಿಕೊಂಡರು.

"ಸಜ್ಜನಸ್ಯ ಹೃದಯ ನವನೀತಂ" ಬೆಣ್ಣೆಯಂತಿರುವ ನನ್ನ ಹೃದಯವು ಕರಗಿ ಕಳವಳಗೊಂಡಿತು. 'ಪರವರಾನುಗ್ರಹ ಕಾಂಕ್ಷಯಾ' ಪರ ವರಗಳಿಗೆ ಹಿತಮಾಡಬೇಕೆಂಬ ಬಯಕೆಯಿಂದ (ನಾ ಸ್ವತಃ ಲಗ್ನಾ ಮಾಡ್ಕೊಂಡ ಹಳ್ಳಾ ಹಿಡದಿದ್ದರು) ಶ್ರೀಮನ್ ನಾರಾಯಣನನ್ನು ಕೇಳಲು ವಿಷ್ಣು ಲೋಕಕ್ಕೆ ತೆರಳಿ ವಿಷ್ಣುವನ್ನು ಕುರಿತು... [ಬ್ರಾಹ್ಮಣರೆಂಬ ರೋಮನ್ ಕ್ಯಾಥೋಲಿಕ್ಕರು]

Brides are growing in tree in Himalaya, go get them

"ಒಡೆಯನೆ! ಮೃತ್ಯುಲೋಕದಲ್ಲಿ ಕನ್ಯೆಗಳು ಕಾಣೆಯಾಗಿದ್ದು, ಬ್ರಾಹ್ಮಣ ವರಗಳೆಲ್ಲಾ ಕನ್ಯಾ ಕ್ಷಾಮದಿಂದ ಬಳಲುತ್ತಿದ್ದಾರೆ. ಕನ್ಯಾ ಪಿತೃಗಳು ತಮ್ಮ-ತಮ್ಮ ಕನ್ಯೆಯರ ಹರಾಜು ಮಾಡುವ ಪರಿಸ್ಥಿತಿ ಬಂದಿದೆ. ಆ ವರಗಳ ಕನ್ಯಾ ಪೈಪೋಟಿಯೂ ದೂರಾಗುವುದಕ್ಕೆ ಇಂದು ಕನ್ಯೆಗಳನ್ನು ಗಿಡದಲ್ಲಿ ಬೆಳೆಯುವ ಸಂದರ್ಭ ಬಂದಿದೆ. ದಯಮಾಡಿ ನೀನು ಕನ್ಯೆಗಳನ್ನು ಮರದಲ್ಲಿ ಸೃಷ್ಟಿಸಿ ವರಗಳನ್ನು ಅನುಗ್ರಹಿಸು" ಎಂದು ಕೇಳಿದೆನು.

ಶ್ರೀ ವಿಷ್ಣುವು ನನ್ನ 'ಪರ-ವರಹಿತ'ದ ಸಲುವಾಗಿ ಯತಾರ್ಥವು, ಭಾವ್ ಪೂರ್ಣವೂ ಆದ ಸ್ತುತಿಯನ್ನು ಕೇಳಿ... [ನಮ್ಮ ಮನೆಯವರಿಗೆ Ig Nobel ಅವಾರ್ಡ ಕೊಡರಿ]

"ವತ್ಸಾ! ಜೀವನದಲ್ಲಿ ಮದುವೆ ಮಾಡಿಕೊಂಡು ಪತ್ನಿ ಪೀಡಿತನಾಗಿಯೂ ಉಳಿದ ಬ್ರಾಹ್ಮಣ ವರಗಳ ಮೇಲೆ ಅನುಗ್ರಹ ಮಾಡಬೇಕೆಂಬ ಬಯಕೆಯಿಂದ ಒಳ್ಳೆಯ ಪ್ರಶ್ನೆ ಮಾಡಿದೆ. ನಾನೂ ಅವರ ಶೋಚನೀಯ ಸ್ಥಿತಿಯನ್ನು ಕೇಳಿರುವೆ. ಈ ಒಂದು ಸಮಸ್ಯೆ ಬಗೆಹರಿಯಬೇಕಾದರೆ ನೀ ಹೇಳಿದ ಹಾಗೆ ಮರಗಳಲ್ಲಿ ಕನ್ಯೆಯನ್ನು ಸೃಷ್ಟಿ ಮಾಡದೆ ಬೇರೆ ಉಪಾಯವಿಲ್ಲಾ. ಹೀಗಾಗಿ ಇನ್ನು ಮುಂದೆ ಹಿಮಾಲಯದ ಅರಣ್ಯದ ಮರದಲ್ಲಿ ಕನ್ಯೆಯನ್ನು ಸೃಷ್ಟಿಸುವೆ, ನೀನು ಚಿಂತಿಸಬೇಡಾ, ತಥಾಸ್ತು" ಎಂದು ಹೇಳಿ ಕಳುಹಿದನು.

ಈ ಮಾತಿಗೆ ಈಗ ಹತ್ತ ಹನ್ನೆರಡ ವರ್ಷ ಆಗಲಿಕ್ಕೆ ಬಂತ. ನಂದ ಹೆಂಗ ಇದ್ದರೂ ಲಗ್ನ ಆಗಿತ್ತು. ಹಿಂಗಾಗಿ ನಾ ವಿಷ್ಣುನ ಮಾತ ಭಾಳ ಸೀರಿಯಸ್ ತೊಗೊಳ್ಳಿಲ್ಲಾ. ಅಂವಾ ಹೇಳಿದಂಗ ಗಿಡದಾಗ ಕನ್ಯಾ ಹುಟ್ಟೋದ ಖರೇನೊ ಸುಳ್ಳು ಅಂತ ನೋಡಲಿಕ್ಕೂ ಹೋಗಲಿಲ್ಲಾ. ಹಂಗ ಯಾರಿಗರ ಕನ್ಯಾ ಬೇಕಾಗಿದ್ದರ ಹಿಮಾಲಕ್ಕ ಹೋಗರಿ ಅಲ್ಲೆ 'ನಾರಿಲತಾ' ಅಂತ ಒಂದ ಗಿಡದಾಗ ಕನ್ಯಾ ಬೆಳೀತಾವ ಅಂತ (ಕನ್ಯಾದ್ದ ಶೇಪನಾಗ ಹೂ ಬಿಡ್ತಾವ). ಅದು ಇಪ್ಪತ್ತ ವರ್ಷಕ್ಕೊಮ್ಮೆ ಇಷ್ಟನ ಮತ್ತ...

ಹೌದ ಮತ್ತ್ ಡೈರೆಕ್ಟ ಕನ್ಯಾನ ಬೇಕಂದರ ಇಪ್ಪತ್ತ ವರ್ಷ ಕಾಯಿಬೇಕಲಾ. ಈಗ ನಾಳೆ ಬರೋ 2015ಕ್ಕ ಈ ಗಿಡದಾಗ ಕನ್ಯಾ ಬಿಡೊ ಪಾಳೆ ಅದ ಅಂತ. ಯಾರಾರಿಗೆ ಕನ್ಯಾ ಬೇಕ ಅವರ ಹಿಮಾಲಯಕ್ಕ ಹೋಗಿ ನಾರಿಲತಾ ಗಿಡದ ಮುಂದ ಪಾಳೆ ಹಚ್ಚರಿ. [ಮಿಡ್ ವೈಫ್ ಅಂದ್ರೇನ್ರೀ?]

ಅದೇನೊ ಅಂತಿದ್ದರಿ ಅಲಾ, ಕನ್ಯಾ ಏನ ಗಿಡದಾಗ ಬೆಳೀತಾವನ ಅಂತ.... ತೊಗೋರಿ ಈಗ ಖರೇನ ಕನ್ಯಾ ಗಿಡದಾಗ ಬೆಳೀಲಿಕತ್ತಾವ, ಹೋಗಿ ಹರಕೋರಿ... ಒಬ್ಬರಿಗೆ ಒಂದsನ ಮತ್ತ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+