ಮಳೆಗಾಗಿ ಪೂಜೆ ಮಾಡಿಸಿದ್ದ ಡಿಕೆಶಿ, ಪಾಟೀಲರನ್ನು ಬೆಂಡೆತ್ತಿದ ಸಿದ್ದರಾಮಯ್ಯ
ರಾಜ್ಯಾದ್ಯಂತ ಉತ್ತಮ ಮಳೆಯಾಗಲಿ ಎಂದು ಪೂಜೆ, ಜಪ ಮಾಡಿಸಿದ್ದ ಸಚಿವ ಎಂ ಬಿ ಪಾಟೀಲರನ್ನು, ತಮ್ಮ ನಿವಾಸಕ್ಕೆ ಕರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಒಳ್ಳೆ ಆಕ್ಟೀವ್ ಮಿನಿಸ್ಟರ್ ನೀನು..ಇನ್ನು ಮುಂದೆಯಾದರೂ ಹೇಳಿದ ಮ
(ಕಾಲ್ಪನಿಕ ಲೇಖನ) ಅಲ್ಲ ಕಣಯ್ಯಾ.. ಬೇಡ ಬೇಡ ಎಂದರೂ ಮಳೆಗಾಗಿ ಪೂಜೆ ಮಾಡಿಸಿದ್ದೀಯಾ, ಈಗ ನೋಡು.. ಬೇಡ ಬೇಡ ಎಂದ್ರೂ ಮಳೆ ಉಯ್ತಾಇದೆ.. ರೋಡಾ.. ಕೆರೆನಾ ಗೊತ್ತಾಗದಂಗೆ ಕೋಡಿ ಹರಿತಾ ಇದೆ.. ಜನ್ರಿಗೆ ಯಾವನಯ್ಯಾ ಉತ್ತರ ಕೊಡೋದು, ಇದು ಸಚಿವ ಎಂ ಬಿ ಪಾಟೀಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ ಪರಿ..
ಬುಧವಾರ (ಅ 11) ಬೆಂಗಳೂರಿನಲ್ಲಿ ಮತ್ತೆ ಮಳೆ ಆವಾಂತರ ಮುಂದುವರಿದ ನಂತರ, ಮಂಡೆಬಿಸಿ ಮಾಡಿಕೊಂಡ ಮುಖ್ಯಮಂತ್ರಿಗಳು, ಸಚಿವ ಪಾಟೀಲರನ್ನು ತುರ್ತಾಗಿ ತನ್ನ ಅಧಿಕೃತ ನಿವಾಸಕ್ಕೆ ಕರೆಸಿಕೊಂಡು, ನಿಂಗೂ ಮತ್ತು ಶಿವಕುಮಾರಿಗೂ ಗಿಣಿಗೆ ಹೇಳ್ದಂಗೆ ಹೇಳ್ದೆ, ಪೂಜೆ ಮಾಡ್ಸಬೇಡ್ರಯ್ಯಾ ಅಂತಾ, ಕೇಳಿದ್ರಾ ನನ್ನ ಮಾತನ್ನಾ ಎಂದು ಸಿಎಂ, ಪಾಟೀಲರ ಮೇಲೆ ಮುಗಿಬಿದ್ದಿದ್ದಾರೆ.

ವಯಸ್ಸಾಗಿದೆ..ರಾಜಕೀಯ ಅನುಭವವಿದೆ ಹೇಳಿದ ಮಾತು ಕೇಳ್ಬೇಕ್ ಆನ್ನೋದು ಗೊತ್ತಾಗಲ್ವೇನಪ್ಪಾ ಎಂದು ಪಾಟೀಲರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಆ ಡಿಕೆಶಿ ಕಿಗ್ಗಾಗೆ ಹೋಗಿ ಪೂಜೆ ಬೇರೆ ಮಾಡಿಸ್ತಾರೆ,.ನೀವು ಭಾಗಮಂಡಲಕ್ಕೆ ಹೋಗ್ತೀರಾ..ಪರ್ಜನ್ಯ ಜಪ ಮಾಡಿಸ್ತೀರಾ, ಹೋಮ ಮಾಡಿಸ್ತೀರಾ ಎಂದು ಸಿಎಂ ಬೇಸರ ವ್ಯಕ್ತ ಪಡಿಸಿದ್ದಾರೆ.
ಅಲ್ಲೇ ಪಕ್ಕದಲ್ಲಿ ಕೂತಿದ್ದ ಬೆಂಗಳೂರು ನಗರಾಭಿವೃದ್ದಿ ಸಚಿವ ಕೆ ಜೆ ಜಾರ್ಜ್ ಕಡೆ ಕೈತೋರಿಸಿ ತರಾಟೆ ಮುಂದುವರಿಸಿದ ಸಿಎಂ, ನೋಡಯ್ಯಾ ಈವಯ್ಯಾನ ಮುಖನ್ನಾ.. ಅಯ್ಯೋ ಅನಿಸಲ್ವೇನಪ್ಪಾ.. ಅದು ಬೇರೆ ರಸ್ತೆಗುಂಡಿಗೆ ಜೀವಹಾನಿ ಬೇರೆ ಆಗ್ತಾ ಇದೆ.. ಎಲ್ಲಾ ಇವ್ನ ಮೇಲೆ ಗೂಬೆ ಕೂರಿಸ್ತಾವ್ರೆ.. ರಾಜಕೀಯ ಯಾವತ್ತಯ್ಯಾ ನಿಮಗೆಲ್ಲಾ ಅರ್ಥ ಆಗೋದು ಎಂದು ಸಿಎಂ ಗದರಿದ್ದಾರೆ..
ಇವತ್ತು ನಿಯತ್ತಾಗಿ ಗುಂಡಿ ಮುಚ್ಚೋಣ ಅಂದ್ರೂ ಮಳೆ ಬಿಡ್ತಾ ಇಲ್ಲಾ. ಇದೆಲ್ಲಾ ನಿನ್ನ ಮತ್ತು ಡಿ ಕೆ ಶಿವಕುಮಾರ್ ಪೂಜೆಯಿಂದ ಆಗಿರೋದು, ಚುನಾವಣೆಯ ವರ್ಷದಲ್ಲಿ ಯಾಕಯ್ಯಾ ತಲೆಬಿಸಿ ಮಾಡ್ತೀರಾ ಎಂದು ಸಿಎಂ, ಸಚಿವ ಪಾಟೀಲರಿಗೆ ಬೆಂಡೆತ್ತಿದ್ದಾರೆ.
ಅಲ್ಲಾ ಸಾರ್.. ನೀವು ಇದನ್ನೆಲ್ಲಾ ನಂಬೋಲ್ಲಾ ಅಂದ್ರಲ್ಲಾ ಸಾರ್ ಎನ್ನುವ ಪಾಟೀಲರ ಪ್ರಶ್ನೆಗೆ ಮತ್ತೆ ಕೆಂಡಾಮಂಡಲವಾದ ಸಿದ್ದರಾಮಯ್ಯ, ಪೇಪರ್ನವ್ರು ಏನೋ ಕೇಳ್ದ್ರು, ಏನೋ ಹೇಳ್ದೆ.. ಅದನ್ನೆಲ್ಲಾ ವಿಷಯಕ್ಕೆ ತರಬೇಡ. ನನ್ ಜೊತೆ ಆರ್ಗ್ಯುಮೆಂಟ್ ಮಾಡಬೇಡ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.
ಮೋಡಬಿತ್ತನಿಂದ ಮಳೆ ಆಗ್ತಾ ಇರ್ಬದು ಸರ್ ..ಎಂದು ಪಾಟೀಲರು ಸಮಜಾಯಿಷಿ ನೀಡಲು ಬಂದಾಗ, ಮೋಡ ಬಿತ್ತನೆ ಮಾಡಿರೋದು ಎಲ್ಲಿ..ಮಳೆ ಬರ್ತಾ ಇರೋದು ಎಲ್ಲಿ? ಚುನಾವಣೆಯ ವೇಳೆ ಜಾಗೃತೆಯಿಂದ ಇರಬೇಕು.
ಸರಕಾರಕ್ಕೂ ಪೂಜೆಗೂ ಸಂಬಂಧವಿಲ್ಲ ಎಂದು ನೀವೇ ಹೇಳಿದ್ದೀರಲ್ಲಾ ಸಾರ್..ಹೋಗ್ಲಿ ಬಿಡಿ ಸಾರ್.. ಅನ್ನೋ ಪಾಟೀಲರ ಮನವಿಗೆ, ಒಳ್ಳೆ ಆಕ್ಟೀವ್ ಮಿನಿಸ್ಟರ್ ನೀನು..ಇನ್ನು ಮುಂದೆಯಾದರೂ ಹೇಳಿದ ಮಾತು ಕೇಳು, ಆ ಶಿವಕುಮಾರನಿಗೂ ಹೇಳು ಎಂದು ಸಿಎಂ ಸಿದ್ದರಾಮಯ್ಯ, ಸಚಿವ ಪಾಟೀಲರಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ ಎನ್ನುವುದು ದೊಡ್ಡ ಸುಳ್ ಸುದ್ದಿ. (ಕಾಲ್ಪನಿಕ ಲೇಖನ)
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications