ನೈತಿಕತೆಗೂ ಕಾನೂನಿಗೂ ವ್ಯತ್ಯಾಸ ಇದೆ : ರೇಣುಕಾಚಾರ್ಯ

ಲಂಚದ ಆರೋಪ ಹೊತ್ತಿರುವ ಕೆಜಿಎಫ್ ಶಾಸಕ ವೈ ಸಂಪಂಗಿಯವರನ್ನು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಭೇಟಿ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ರೇಣುಕಾಚಾರ್ಯ ಅವರು "ನೈತಿಕತೆ ಮತ್ತು ಕಾನೂನು ಎರಡೂ ಬೇರೆ ಬೇರೆ. ಅವೆರಡರ ನಡುವೆ ತುಂಬಾ ವ್ಯತ್ಯಾಸ ಇದೆ. ಸಂಪಂಗಿ ಎರಡನ್ನೂ ಮುರಿದಿರಬಹುದು. ಆದರೆ, ನೈತಿಕತೆ ಮತ್ತು ಕಾನೂನುಗಳ ನಡುವೆ ವ್ಯತ್ಯಾಸ ಇದೆ ಎನ್ನುವುದನ್ನು ಮಾತ್ರ ಯಾರೂ ಅಲ್ಲಗೆಳೆಯಲು ಸಾಧ್ಯವಿಲ್ಲ" ಎಂದರು.
***
ಸಂಪಂಗಿ ಪ್ರಕರಣದ ಬಗೆಗೆ ಜನರ ಸಂತಸ
ಸಂಪಂಗಿ ಪ್ರಕರಣದ ಬಗೆಗೆ ರಾಜ್ಯದ ಜನರಲ್ಲಿ ವಿವಿಧ ಬಗೆಯ ಅಭಿಪ್ರಾಯಗಳು ಮನೆ ಮಾಡಿದ್ದು ಹಲವರು ಈ ಬಗ್ಗೆ ತಮ್ಮ ಸಂತಸವನ್ನು ವ್ಯಕ್ತ ಪಡಿಸಿದ್ದಾರೆ.

ಆದರೆ ಶಾಸಕ ಸಂಪಂಗಿಯವರ ಸ್ವಕ್ಷೇತ್ರದಲ್ಲಿ ಈಬಗೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೆಜಿಎಫ್ ಹೈಸ್ಕೂಲ್ ಶಿಕ್ಷಕಿ ಮರಗತಂ ಶಾಸಕ ಸಂಪಂಗಿಯವರನ್ನು ಬಂಧಿಸಿರುವ ಲೋಕಾಯುಕ್ತರ ಕ್ರಮವನ್ನು ಮುಕ್ತಕಂಠದಿಂದ ಪ್ರಶಂಸಿಸುತ್ತಾರೆ. "ಇದು ತುಂಬಾನೇ ಒಳ್ಳೆಯದು" ಎನ್ನುವ ಮರಗತಂ "ಸಂಪಂಗಿ ಲಂಚ ಸ್ವೀಕಾರ ಮಾಡಿದ್ದಕ್ಕಿಂತ, ವಾವ್! ನಮ್ಮೂರಿಗೂ ಒಬ್ಬರು ಎಂಎಲ್ಎ ಇದ್ದಾರೆ ಅಂತಾ ತಿಳಿದು ನಿಜಕ್ಕೂ ಆಶ್ಚರ್ಯ, ಸಂತೋಷ ಆಯ್ತು. ಲೋಕಾಯುಕ್ತರು ಹೀಗೇ ಎಲ್ಲಾ ಊರಿನ ಶಾಸಕರನ್ನೂ ಬಂಧಿಸುತ್ತಿದ್ದರೆ, ಯಾವ ಯಾವ ಊರಿಗೆ ಶಾಸಕರಿದ್ದಾರೆ? ಅವರ ಹೆಸರು ಏನು? ಅಂತಾ ಒಂದು ವರ್ಷದಲ್ಲಿ ಇಡೀ ರಾಜ್ಯಕ್ಕೇ ಗೊತ್ತಾಗುತ್ತೆ" ಎನ್ನುತ್ತಾರೆ.
ಆದರೆ ಸಂಪಂಗಿಯವರ ಅಭಿಮಾನಿಗಳ ಪ್ರಕಾರ ಲೋಕಾಯುಕ್ತರ ಕ್ರಮ ದೊಡ್ಡ ಸಾಧನೆ ಏನೂ ಅಲ್ಲ. ಉದಾಹರಣೆಗೆ ಕೆಜಿಎಫ್ ರಿಯಲ್ ಎಸ್ಟೇಟ್ ಉದ್ಯೋಗಿ ಮತ್ತು ಸಮಾಜ ಸೇವಕ ವೇಲಾಯುಧಂ ಪ್ರಕಾರ ತಪ್ಪು ಮಾಡುವವರನ್ನ ಲಂಚ ಪಡೆಯುತ್ತಿದ್ದಾಗ ಹಿಡಿದು ಬಂಧಿಸುವುದು ದೊಡ್ಡದೇನೂ ಅಲ್ಲ. "ಲೋಕಾಯುಕ್ತರು ಅಷ್ಟೊಂದು ಬುದ್ಧಿವಂತರಿದ್ದರೆ ಏನೂ ತಪ್ಪು ಮಾಡದ ಶಾಸಕರು ಯಾರಾದರೂ ಇದ್ದರೆ ಅವರನ್ನು ಮೊದಲು ಗುರುತಿಸಲಿ. ಆಮೇಲೆ ಅವರಿಗೆ ಲಂಚದ ಮೇಲೆ ಆಸೆ ಹುಟ್ಟುವಂತೆ ಮಾಡಲಿ. ಅನಂತರ ಅವರು ಲಂಚ ಸ್ವೀಕರಿಸುತ್ತಿದ್ದಾಗ ಮಾರು ವೇಷದಲ್ಲಿ ಹೋಗಿ ಹಿಡಿಯಲಿ. ಸಾಧನೆ ಎಂದರೆ ಅದು" ಎನ್ನುತ್ತಾರೆ ಅವರು.
(ಮಜಾವಾಣಿ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications