ಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!

ದಿನಕ್ಕೆ ನಾಲ್ಕು ಶೆಡ್ಯೂಲ್ಗಳಲ್ಲಿ ದುಡಿಯುವ ಪ್ರಕಾಶ್ ರೈ ಅವರಂಥ ಬಿಜಿ ನಟ ಆಫ್ಟರಾಲ್ ಒಂದು ಪುಸ್ತಕ ಬಿಡುಗಡೆಯ ಕಾರಣಕ್ಕೇ ಬೆಂಗಳೂರಿಗೆ ಬರುತ್ತಾರೆಂಬ ನಿರೀಕ್ಷೆ ಯಾರಿಗೂ ಇರಲಿಲ್ಲ. ಅವರು ಬರುವುದಿಲ್ಲ ಎಂಬ ನಂಬಿಕೆ ಎಲ್ಲರಿಗೂ ಇತ್ತು. ಆದರೆ, ಎಲ್ಲ ನಿರೀಕ್ಷೆಗಳನ್ನು ಸುಳ್ಳು ಮಾಡಿದ ಪ್ರಕಾಶ್ ರೈ ಬೆಳ್ಳಂಬೆಳಗ್ಗೆ 9.40ಕ್ಕೇ ರವೀಂದ್ರ ಕಲಾಕ್ಷೇತ್ರದ ಅಂಗಳಕ್ಕೆ ಬಂದೇ ಬಿಟ್ಟರು! ಕಾರ್ಯಕ್ರಮವಿರುವುದು ಹನ್ನೊಂದು ಗಂಟೆಗೆ ಎಂದು ತಿಳಿದಾಗ ಅಲ್ಲಿನ ಕ್ಯಾಂಟೀನ್ ಕಟ್ಟೆಯ ಮೇಲೆ ಥೇಟ್ ಕಾಲೇಜು ಹುಡುಗನ ಥರಾ ಕೂತುಕೊಂಡರು.
ಹದಿನೈದು ವರ್ಷದ ಹಿಂದೆ, ಇದೇ ಜಾಗದಲ್ಲಿ ಕೂತಿರುತ್ತಿದ್ದೆ. ಆಗ ಜೇಬಲ್ಲಿ ಕಾಸಿರುತ್ತಿರಲಿಲ್ಲ' ಎಂಬುದನ್ನೆಲ್ಲ ನೆನಪು ಮಾಡಿಕೊಳ್ಳುವ ವೇಳೆಗೇ ಅವರ ಹಳೆಯ ಗೆಳೆಯರ ಹಿಂಡು ಬಂದೇ ಬಂತು. ಹಾಗೆ ಬಂದವರೆಲ್ಲ ಪದೇ ಪದೆ ಕಣ್ಣುಜ್ಜಿಕೊಂಡು ತನ್ನನ್ನೇ ಬೆರಗಿನಿಂದ ನೋಡುವುದನ್ನು ಕಂಡ ಪ್ರಕಾಶ್ ರೈ ತುಂಟತನದಿಂದ ಹೇಳಿದರು: ತಡವಾಗಿ ಬಂದ್ರೆ ಕಲಾಕ್ಷೇತ್ರದಲ್ಲಿ ಜಾಗ ಸಿಗಲ್ಲ ಅನ್ನಿಸ್ತು. ಅದಕ್ಕೇ ಬೇಗ ಬಂದುಬಿಟ್ಟೆ...'
***
ಹದಿನೈದು ವರ್ಷಗಳ ಹಿಂದೆ ಕಲಾಕ್ಷೇತ್ರಕ್ಕೇ ಅಪರಿಚಿತ'ರಾಗಿದ್ದರಲ್ಲ ರೈ? ಆಗಲೂ ಇವರ ಸವಾರಿ ಟೌನ್ಹಾಲ್ ಸಮೀಪದ ಕಾಮತ್ ಹೋಟೆಲ್ಗೆ ಹೋಗುತ್ತಿತ್ತು. ಜತೆಗೆ ಗೆಳೆಯರಿರುತ್ತಿದ್ದರು. ಹಾಗೆ ಹೋದವರು, ಒಂದು ಮೂಲೆ ಟೇಬಲ್ನಲ್ಲಿ ಕೂತು ಸಿಗರೇಟು ಹಚ್ಚುತ್ತಿದ್ದರು. ಆ ಟೇಬಲ್ಗೆ ಸರ್ವ್ ಮಾಡುತ್ತಿದ್ದ ಮಾಣಿಗೆ, ರೈ ಸಾಹೇಬರ ಮೇಲೆ ಅದೇನೋ ಅಕ್ಕರೆ, ಪ್ರೀತಿ, ಮಮಕಾರ. ಇವರ ಪಟ್ಟಾಂಗವೆಲ್ಲ ಮುಗಿದ ನಂತರ ಆತ ಬೈಟು ಕಾಫಿ ತಂದಿಡುತ್ತಿದ್ದ.
ಮೊನ್ನೆ ಕಲಾಕ್ಷೇತ್ರದ ಎದುರು ಕೂತಾಗ ಕಾಮತ್ ಹೋಟೆಲಿನ ತಿಂಡಿ ನೆನಪಾಯಿತು. ತಕ್ಷಣವೇ ಹಳೆಯ ಗೆಳತಿಯ ಮನೆ ಹುಡುಕುವ ಹುಡುಗನಂತೆ ಪ್ರಕಾಶ್ ರೈ ಸಾಹೇಬರು, ಗೆಳೆಯ ಬಿ. ಸುರೇಶ್ರನ್ನೂ ಜತೆಗಿಟ್ಟುಕೊಂಡು ಕಾಮತ್ ಹೋಟೆಲ್ಗೆ ಹೋಗಿಯೇಬಿಟ್ಟರು. ಅದೇ ಹಳೆಯ ಟೇಬಲ್ನ ಮೂಲೆಯಲ್ಲಿ ಕೂತು ಮಸಾಲೆ ದೋಸೆಗೆ ಆರ್ಡರ್ ಮಾಡಿದರು. ನಂತರ ಸಹಜ ಕುತೂಹಲದಿಂದ, ತನ್ನ ಗೆಳೆಯನಂತಿದ್ದ ಹಳೆಯ ಮಾಣಿಯ ಬಗ್ಗೆ ವಿಚಾರಿಸಿದರು. ಆತ ಈಗಲೂ ಇಲ್ಲೇ ಇದ್ದರೆ, ಸ್ವಲ್ಪ ಕರೀತೀರಾ? ನಾನು ನೋಡ್ಬೇಕು' ಎಂದೂ ಕೇಳಿಕೊಂಡರು.
ಆ ಮಾಣಿ ಬೆರಗಿನಿಂದ ಬಂದವನೇ- ಓ ಪ್ರಕಾಶ್ ರೈ ಸಾರ್... ನೀವು ಈಗಲೂ ಹಾಗೇ ಇದೀರ. ಏನೇನೂ ಬದಲಾಗಿಲ್ಲ ನೋಡಿ, ಸ್ವಲ್ಪ ದಪ್ಪ ಆಗಿದೀರ ಅಷ್ಟೆ, ಅಂದ!'
ಹೌದಪ್ಪಾ ಹೌದು. ನಾನೂ ಹಾಗೇ ಇದೀನಿ. ನೀನೂ ಹಾಗೇ ಇದೀಯ. ನಾನು ಮೊದಲು ಕೂರ್ತಾ ಇದ್ದೆನಲ್ಲ? ಅದೇ ಜಾಗದಲ್ಲಿ ಈಗಲೂ ಕೂತಿದ್ದೀನಿ. ಎಲ್ಲಿ, ಬೇಗ ಮಸಾಲೆ ದೋಸೆ ಕೊಡು. ಹಸಿವಾಗ್ತಿದೆ' ಅಂದರು ರೈ.
ತಕ್ಷಣವೇ ಕರೆಕ್ಷನ್ ಹಾಕಿದ ಆತ- ದೋಸೆ ತಂದುಕೊಡ್ತೇನೆ. ಆದ್ರೆ ನೀವು ಟೇಬಲ್ನ ಈ ಕಡೆ ಕೂರ್ತಾ ಇರಲಿಲ್ಲ. ಆ ಕಡೆ ಕೂರ್ತಾ ಇದ್ರಿ' ಅಂದನಂತೆ! ತಕ್ಷಣವೇ ಆತ ತೋರಿಸಿದ ಜಾಗಕ್ಕೇ ಹೋಗಿ ಕೂತ ರೈ, ಪಟ್ಟಾಗಿ ಎರಡು ಮಸಾಲೆ ದೋಸೆ ಬಾರಿಸಿದರಂತೆ...
***
ಏಪ್ರಿಲ್ 26ರ ಸಂಜೆ ಇದಿಷ್ಟನ್ನೂ ಖುಷಿಯಿಂದ ಹೇಳಿಕೊಂಡರು ಪ್ರಕಾಶ್ ರೈ. ಅವರ ಕಂಗಳಲ್ಲಿ ಹಸುಳೆಗೆ ಆಗುವಂಥ ಆನಂದವಿತ್ತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications