109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg38243manikanthಅಮ್ಮ ಹೇಳಿದ ಎಂಟು ಸುಳ್ಳುಗಳು/column/manikanth/2008/0918-eight-lies-of-my-mothers.htmlಸೂಚನೆ : ಈ ಸುಳ್ಳುಗಳನ್ನು ಓದುವುದಕ್ಕೆ ಶುರುಮಾಡುವ ಮುನ್ನ ಕರವಸ್ತ್ರವನ್ನು ಕೈಯಲ್ಲಿಟ್ಟುಕೊಂಡಿದ್ದರೆ ಕ್ಷೇಮ. ಯಾಕೆಂದರೆ, ಇದು ತಾಯಿಯ ಪ್ರೀತಿ ಮತ್ತು ತ್ಯಾಗವನ್ನು ಕಂಡುಂಡು ಕಡುಬಡತನದಲ್ಲಿ ಬೆಳೆದ ಕನ್ನಡ ಮಕ್ಕಳಿಗೆ ಮಾತ್ರ. ಸಿರಿ ಉಕ್ಕಿ ಮದ ಹೊಕ್ಕಿದವರಿಗಿಲ್ಲ. ಅಂಕಣಕಾರ : ಎ.ಆರ್. ಮಣಿಕಾಂತ್ ತುಂಬಾ ದೂರ ಅಲ್ಲ ಸಾರ್, ಇಲ್ಲೇ, ಬೆಂಗಳೂರು ತುಮಕೂರಿನ ಮಧ್ಯೆ ನೆಲಮಂಗಲ 765http://kannada.oneindia.com/img/2009/10/24-manikanth1.jpg38243manikanthಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38243manikanthಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg38243manikanthಪ್ರೀತಿಯ ತಂದೆಗೆ ಮಗಳ ಪತ್ರ.../column/manikanth/2009/0109-letter-from-daughter-to-beloved-father.htmlಮಕ್ಕಳು ಜೀವನದಲ್ಲಿ ಎಡವದಿರಲೆಂದು ಮುದ್ದು ಮಾಡಿ ಬೆಳೆಸಿದ ಅಪ್ಪ ಅಮ್ಮಂದಿರು ಹೇಗೆ ಅಪೇಕ್ಷಿಸುತ್ತಾರೋ, ಅರಿವಿದ್ದೋ, ಅರಿವಿಲ್ಲದೆಯೋ ಎಡವಿ ಬಿದ್ದಾಗ ಮಕ್ಕಳು ಕೂಡ ಪ್ರೀತಿಯ ಅಪ್ಪ ಮತ್ತು ಅಮ್ಮ ತಮ್ಮ ಕಿರುಬೆರಳು ಹಿಡಿದು ಎಬ್ಬಿಸುತ್ತಾರೆಂದು ಅಪೇಕ್ಷಿಸುತ್ತವೆ. ಸೋತಾಗ ಕೈಹಿಡಿದು ಎಬ್ಬಿಸಿ, ಗೆದ್ದಾಗ ಬೆನ್ನುತಟ್ಟಿ ಪ್ರೋತ್ಸಾಹಿಸುವುದು ಪ್ರತಿ ಪಾಲಕರ ಕರ್ತವ್ಯ.* ಎ.ಆರ್. ಮಣಿಕಾಂತ್ಮಗಳ ವರ್ತನೆ ಯಾಕೋ ಸರಿಯಾಗಿಲ್ಲ. ಇಂಥದೊಂದು ಅನುಮಾನ 33978http://kannada.oneindia.com/img/2009/01/09-daughter-father-love1.jpg38243manikanthಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg192284kannada columnistಜಿಯಾಂಗ್-ಕ್ವಿನ್‌ರ ಅಮರ ಪ್ರೇಮದ ಕತೆ/column/manikanth/2009/0205-a-chinese-immoral-love-story.htmlಹತ್ತು ವರ್ಷ ದೊಡ್ಡವಳಾದ ಪ್ರಿಯತಮೆ ಬೆಟ್ಟ ಇಳಿಯಲು ಅನುವಾಗಲೆಂದು ಸಾವಿರಾರು ಮೆಟ್ಟಿಲುಗಳನ್ನು ಕಡಿದು ಎಲ್ಲ ವೈರುದ್ಧ್ಯಗಳನ್ನು ಮೆಟ್ಟಿನಿಂತ ಸಾಹಸಿಯ ಕಥೆಯಿದು. ಸಮಾಜದಿಂದ ದೂರವೇ ಉಳಿದು ಅರ್ಧ ಶತಮಾನ ಕಾಡಿನ ಗುಹೆಯಲ್ಲೇ ಪ್ರೇಮ ಜೀವನ ನಡೆಸಿದ ಅಮರ ಪ್ರೇಮಿಗಳ ಕಥಾನಕವಿದು. ಈ ಪ್ರೇಮಕ್ಕೆ ಸಾಕ್ಷಿಯಾಗಿ ಕಥಾನಾಯಕಿ ಇಂದಿಗೂ ಚೀನಾದಲ್ಲಿ ಜೀವಂತವಿದ್ದಾಳೆ. ಆಕೆಗೊಂದು ಪ್ರೇಮೋನ್ನಮಃ.* ಎಆರ್ ಮಣಿಕಾಂತ್ಪ್ರೀತಿಸಿದವಳಿಗಾಗಿ ಹೆತ್ತವರನ್ನು ತೊರೆದವರಿದ್ದಾರೆ. 34496http://kannada.oneindia.com/img/2009/02/05-guo-jiang-qu1.jpg192284kannada columnistಜಾಲತರಂಗದಿಂದ ಜಾಲತರಂಗಿಣಿಯವರೆಗೆ/column/nataraj/2009/0514-farewell-to-jaalataranga-columnist-ms-nataraj.htmlಅದುವೆಕನ್ನಡ ಬಿಂದು ಕಾಮ್! ಈ ಮುದ್ದಾದ ಹೆಸರನ್ನು ದಟ್ಸ್ ಕನ್ನಡ ಅಂತರ್ಜಾಲ ತಾಣಕ್ಕೆ ದಯಪಾಲಿಸಿದ 'ಜಾಲತರಂಗ' ಅಂಕಣಕಾರರಾದ ಆತ್ಮೀಯ ಡಾ. ಮೈ.ಶ್ರೀ. ನಟರಾಜ್ ಅವರ ಅಕ್ಷರ ಕೊಡುಗೆಯನ್ನು ಅಕ್ಷರಗಳಲ್ಲಿ ಹಿಡಿದಿಡುವುದು ಸಾಧ್ಯವೇ ಇಲ್ಲ. ಸತತ ಆರು ವರ್ಷಗಳ ಕಾಲ ವೈವಿಧ್ಯಮಯ, ಚಿಂತನಶೀಲ ಬರಹಗಳ ಮುಖಾಂತರ ತಮ್ಮ ಅನುಭವಗಳನ್ನು ಓದುಗರೊಡನೆ ಹಂಚಿಕೊಂಡಿದ್ದಾರೆ ಮತ್ತು ದಟ್ಸ್ ಕನ್ನಡವನ್ನು ಶ್ರೀಮಂತಗೊಳಿಸಿದ್ದಾರೆ. ಈಗ 36601http://kannada.oneindia.com/img/2009/05/14-ms-nataraj7.jpg192284kannada columnistಶಾಂತಿಗಾಗಿ ಹಂಬಲಿಸಿದ; ಅಶಾಂತಿಯೇ ಬದುಕಾಯಿತು!/column/manikanth/2009/0618-sad-love-story-of-alfred-nobel.htmlಶ್ರೀಮಂತಿಕೆಯೊಂದಿದ್ದರೆ ಸಾಕು; ಅದರಿಂದ ನಾವು ಬಯಸಿದ್ದನ್ನೆಲ್ಲ ಪಡೆಯಬಹುದು. ಖರೀದಿಸಬಹುದು, ಗೆಲ್ಲಬಹುದು! ಬಯಸಿದ್ದೆಲ್ಲ ಸಿಕ್ಕಿದ ಮೇಲೆ ಇನ್ನೇನಿದೆ? ನಂತರದ ದಿನಗಳಲ್ಲಿ ಸಂತೋಷವೆಂಬುದು ನಮ್ಮ ಬದುಕಾಗುತ್ತದೆ. ಸಂಭ್ರಮ ಜತೆಗಿರುತ್ತದೆ. ನೆಮ್ಮದಿ ಕೈ ಹಿಡಿಯುತ್ತದೆ. ಕೈ ತುಂಬ ಕಾಸಿದೆ ಎಂಬ ಕಾರಣದಿಂದಲೇ ಬಯಸಿದಂಥ ಮನೆ ಮಾತ್ರವಲ್ಲ, ಮನೆಯೊಡತಿ ಕೂಡ ಸಿಗುತ್ತಾಳೆ. ಹಣವಂತ' ಎಂಬ ಕಾರಣದಿಂದಲೇ ಸಮಾಜದಲ್ಲಿ ಗೌರವ ಸಿಗುತ್ತದೆ. ಬಂಧುಗಳ ಸಂಖ್ಯೆ 37443http://kannada.oneindia.com/img/2009/06/18-alfred-nobel1.jpg192284kannada columnistಸನಾತನ ವೇದಪಂಡಿತ ಆರ್.ಕೆ. ಶ್ರೀಕಂಠಕುಮಾರಸ್ವಾಮಿ/column/gv/2009/0620-scientist-veda-expert-rk-srikanthakumarswamy.htmlಮದ್ರಾಸ್ ಐಐಟಿಯಿಂದ ಎಂಎಸ್ ಡಿಗ್ರಿ ಪಡೆದು ಲೋಹಶಾಸ್ತ್ರ ವಿಭಾಗದಲ್ಲಿ ದುಡಿದ ಹೆಮ್ಮೆಯ ಕನ್ನಡಿಗ ಆರ್.ಕೆ. ಶ್ರೀಕಂಠಕುಮಾರಸ್ವಾಮಿಯವರು ನಿವೃತ್ತಿಯ ನಂತರ ಗುರುಕುಲ ನಡೆಸುವ ಮುಖಾಂತರ ವೇದಶಿಕ್ಷಣ ನೀಡುತ್ತಿದ್ದಾರೆ. ಅವರು ಬರೆದಿರುವ 'ಸಂಸ್ಕಾರಗಳು ಹಾಗೂ ಮಾನವೀಯ ಮೌಲ್ಯಗಳು' ಪುಸ್ತಕದಲ್ಲಿ ಧಾರ್ಮಿಕ ಆಚರಣೆಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿದ್ದಾರೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಕರ್ಣಾಟಕವು ಪ್ರತಿಭಾವಂತರ ನಾಡು ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ಇದಕ್ಕೆ 37475http://kannada.oneindia.com/img/2009/06/20-srikanthakumarswamy1.jpg192284kannada columnistಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯ/column/gv/2009/0627-scientist-veda-expert-rk-srikanthakumarswamy.htmlಹದಿನಾರು ಸಂಸ್ಕಾರಗಳ ಬಗ್ಗೆ ಬಹಳ ಜನ ಬರೆದಿದ್ದಾರೆ. ಇಂಟರ್‌ನೆಟ್‌ನಲ್ಲಿ ಸರ್ಫ್ ಮಾಡಿದರೆ ಸಾಕಷ್ಟು ಮಾಹಿತಿ ದೊರೆಯುತ್ತದೆ. ಆದರೆ ಶ್ರೀಕಂಠಕುಮಾರಸ್ವಾಮಿಯವರ 'ಸಂಸ್ಕಾರಗಳು ಹಾಗೂ ಮಾನವೀಯ ಮೌಲ್ಯಗಳು' ಪುಸ್ತಕದಲ್ಲಿ ದೊರೆಯುವ ವಿವರ ಇನ್ನೆಲ್ಲಿಯೂ ದೊರೆಯುವುದಿಲ್ಲ. ಅವರ ವೈಶಿಷ್ಟ್ಯವೆಂದರೆ ಅವರು ಮಾನವೀಯ ಮೌಲ್ಯಗಳ ಬಗ್ಗೆ ಮಾತಾಡುತ್ತಾರೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಶ್ರೀಕಂಠಕುಮಾರಸ್ವಾಮಿಯವರು ಪೀಠಿಕೆಯಲ್ಲಿ ಒಂದು ಮಹತ್ವದ ಮಾತು ಹೇಳುತ್ತಾರೆ. ಅವರು ವೇದಶಾಸ್ತ್ರಗಳಲ್ಲಿ 37620http://kannada.oneindia.com/img/2009/06/27-srikanthakumarswamy1.jpgnews"> ಸಂಗಮೇಶ್ ಉಪಾಸೆ : ಹಳ್ಳಿಗಾಡಿನ 'ಮುತ್ತಣ್ಣ'! | Sangamesh Upase | Silli Lalli compounder | KAS officer | Manikanth - ಕೆಎಎಸ್ ಅಧಿಕಾರಿಯಾದ ಸಿಲ್ಲಿಲಲ್ಲಿ ಕಾಂಪೌಂಡರ್! - Kannada Oneindia

ಸಂಗಮೇಶ್ ಉಪಾಸೆ : ಹಳ್ಳಿಗಾಡಿನ 'ಮುತ್ತಣ್ಣ'!

Sangamesh Upase of Silli Lalli fame
ಡಾ. ರಾಜ್‌ಕುಮಾರ್ ನಟಿಸಿದ ಮೇಯರ್ ಮುತ್ತಣ್ಣ' ಸಿನಿಮಾ ನೆನಪಿದೆ ತಾನೆ? ಹಳ್ಳಿಯಿಂದ ಬಂದ ಮುಗ್ಧನೊಬ್ಬ ಬೆಂಗಳೂರಿನ ಮೇಯರ್ ಆಗುವ ಕಥೆ ಅದು. ಇಲ್ಲಿಯೂ ಒಬ್ಬ ಸಾಧಕನಿದ್ದಾನೆ. ಅವನೂ ಹಳ್ಳಿಯಿಂದ ಬಂದವನು ಎಂಬುದು ವಿಶೇಷ. ಸಿಲ್ಲಿಲಲ್ಲಿ'ಯ ಕಾಂಪೌಂಡರ್ ಆಗಿದ್ದ ಈತ ನಡೆದು ಬಂದ ದಾರಿಯದ್ದೇ ಒಂದು ಸಾಹಸದ ಕಥೆ...

* ಎಆರ್ ಮಣಿಕಾಂತ್

ಇದು, ಹಳ್ಳಿಗಾಡಿನ ಮುತ್ತಣ್ಣ'ನೊಬ್ಬ ಬೆಂಗಳೂರಿನ ಮೇಯರ್' ಆದ ಕಥೆ! ಆಫ್‌ಕೋರ್ಸ್, ಈ ಮುತ್ತಣ್ಣ' ಮೇಯರ್ ಆಗಲಿಲ್ಲ ನಿಜ. ಆದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಕಂಟ್ರೋಲರ್ ಆದ ರೋಮಾಂಚಕ ಅನುಭವದ ಕಥೆ.

ಇವರ ಹೆಸರು: ಸಂಗಮೇಶ ಉಪಾಸೆ. ಎಸ್ಸೆಸ್ಸೆಲ್ಸಿ ಸರ್ಟಿಫಿಕೇಟಿನಲ್ಲಿ ಅವರ ಹೆಸರು ಸಂಗಪ್ಪ ಉಪಾಸೆ ಎಂದೇ ದಾಖಲಾಗಿರುವುದರಿಂದ ಅವರನ್ನೀಗ ಸಂಗಪ್ಪ ಉಪಾಸೆ ಎಂದೇ ಕರೆಯಲಾಗುತ್ತದೆ. ಬಿಬಿಎಂಪಿಯಲ್ಲಿ ಅಧಿಕಾರಿಯಾಗಿರುವ ಸಂಗಪ್ಪ ಉಪಾಸೆ ಅವರಿಗೆ ಅಂಜುಟಗಿಲು ಸಂಮಾರು ಎಂಬ ಕಾವ್ಯನಾಮವೂ ಇದೆ! ಕೆಎಎಸ್ ಮಾಡಿಕೊಂಡಿರುವ ಇವರು, ಮೂರು ವರ್ಷಗಳ ಹಿಂದೆ ಸಿಲ್ಲಿ ಲಲ್ಲಿ' ಧಾರಾವಾಹಿಯಲ್ಲಿ ಕಾಂಪೌಂಡರ್‌ನ ಪಾತ್ರ ಮಾಡಿಕೊಂಡಿದ್ದವರು ಅಂದರೆ ನಂಬುವುದು ಕಷ್ಟ. ಆದರೆ ಇದು ನಿಜ. ಹೊಟ್ಟೆಪಾಡಿಗಾಗಿ ಬಣ್ಣ ಹಚ್ಚಿ, ಕೋಡಂಗಿಯಂತೆ ಕ್ಯಾಮರಾ ಮುಂದೆ ಕಾಣಿಸಿಕೊಳ್ಳುತ್ತಿದ್ದ ಸಂಗಮೇಶ, ಈಗ ಹೆಸರಘಟ್ಟ ರಸ್ತೆಯಲ್ಲಿರುವ ಬಿಬಿಎಂಪಿಯಲ್ಲಿ ಹಣಕಾಸು ವಿಭಾಗದ ಅಸಿಸ್ಟೆಂಟ್ ಕಂಟ್ರೋಲರ್! ಮೂರು ವರ್ಷಗಳ ಹಿಂದೆ ಮೂರು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಸಂಗಮೇಶ, ಈಗ ಸರಕಾರದ ಗೌರವಾನ್ವಿತ ಅಧಿಕಾರಿ. ಓಡಾಡಲು ಸರಕಾರಿ ಕಾರ್ ಇದೆ. ವಾಸಕ್ಕೆ ಸರಕಾರದ ಮನೆಯಿದೆ. ಕೆಲಸ ಮಾಡಲು ಸರಕಾರಿ ಕಚೇರಿಯಿದೆ. ಜತೆಗೆ ಏಳೆಂಟು ಮಂದಿ ಸಹಾಯಕರಿದ್ದಾರೆ. ಬಿಬಿಎಂಪಿಯ ರಸ್ತೆ ಕಾಮಗಾರಿ, ನೀರು ಪೂರೈಕೆ, ಪಾರ್ಕ್ ನಿರ್ಮಾಣ ಹಾಗೂ ಸ್ವಚ್ಛತಾ ಕಾರ್ಯಗಳಿಗೆ ಈ ಸಂಗಪ್ಪ ಉಪಾಸೆಯವರೇ ಬಜೆಟ್ ಪೂರೈಸಬೇಕು!

ಹೇಳಲೇಬೇಕಾದ ಮಾತೆಂದರೆ, ಈ ಒಂದು ಹಂತಕ್ಕೆ ಬಂದು ನಿಲ್ಲಬೇಕಾದೆ ಸಂಗಮೇಶ ವಿಪರೀತ ಸೈಕಲ್ ಹೊಡೆದಿದ್ದಾರೆ. ಹತ್ತು ಜನ್ಮಕ್ಕೆ ಆಗುವಷ್ಟು ಕಷ್ಟಪಟ್ಟಿದ್ದಾರೆ. ಒಂದು ದೊಡ್ಡ ಎತ್ತರಕ್ಕೆ ತಂದು ನಿಲ್ಲಿಸುವುದಕ್ಕೂ ಮೊದಲು ಬದುಕೆಂಬುದು ಅವರನ್ನು ಕ್ಷಣಕ್ಷಣವೂ ಹೆದರಿಸಿದೆ. ಆಟ ಆಡಿಸಿದೆ. ಕಷ್ಟ ಕೊಟ್ಟಿದೆ. ಪರೀಕ್ಷೆಗೆ ಒಡ್ಡಿದೆ. ಅಳಿಸಿದೆ. ಅವಮಾನಕ್ಕೆ ಈಡು ಮಾಡಿದೆ. ಹಂಗಿಸಿದೆ. ಅಪಹಾಸ್ಯ ಮಾಡಿದೆ. ಒಂದರ ಹಿಂದೊಂದು ಸಂಕಟಗಳನ್ನು ತಂದಿಟ್ಟು ಮಜಾ ತೆಗೆದುಕೊಂಡಿದೆ. ಒಂದು ಸಂತೋಷವೆಂದರೆ, ಸಂಗಪ್ಪ ಎಲ್ಲವನ್ನೂ cool ಆಗಿಯೇ ತೆಗೆದುಕೊಂಡಿದ್ದಾರೆ. ಒಂದೊಂದು ಅವಮಾನ ಕೈ ಹಿಡಿದಾಗಲೂ ನಾಳೆ ಗೆಲ್ತೀನಿ' ಎನ್ನುತ್ತಲೇ ನೋವು ಮರೆತಿದ್ದಾರೆ. ಮತ್ತು ಇದೀಗ ನೂರಲ್ಲ, ಸಾವಿರ ಮಂದಿಗೂ ಮಾದರಿಯಾಗಬಲ್ಲ ಸಾಹಸವನ್ನೂ ಮಾಡಿ ತೋರಿಸಿದ್ದಾರೆ. ಹೇಳಿದರೆ, ಅವರ ಹೋರಾಟದ ಬದುಕಿನದ್ದು ನಂಬಲು ಸಾಧ್ಯವೇ ಇಲ್ಲದಂಥ ಸಾಹಸದ ಕಥೆ.

ಸಂಗಮೇಶ ಮೂಲತಃ ಬಿಜಾಪುರ ಜಿಲ್ಲೆ, ಇಂಡಿ ತಾಲೂಕಿನ ಅಂಜುಟಗಿ ಗ್ರಾಮದವರು. ಅವರ ತಂದೆ-ತಾಯಿ ಇಬ್ಬರೂ ಅನಕ್ಷರಸ್ಥರು. ಮಕ್ಕಳನ್ನು ಚೆನ್ನಾಗಿ ಓದಿಸಬೇಕು ಎಂಬ ಆಸೆ ಅವರಿಗಿತ್ತು ನಿಜ. ಆದರೆ ಓದಿಸುವಷ್ಟು ಆರ್ಥಿಕ ಚೈತನ್ಯ ಖಂಡಿತ ಇರಲಿಲ್ಲ. ನೇಯ್ಗೆ ಕೆಲಸ ಮಾಡುತ್ತಿದ್ದ ಅಪ್ಪನ ದುಡಿಮೆ ಕುಟುಂಬ ನಿರ್ವಹಣೆಗೆ ಸಾಲುತ್ತಿಲ್ಲ ಅನ್ನಿಸಿದಾಗ ತಾಯಿ, ತಂಗಿಯೊಂದಿಗೆ ಕೂಲಿ ಕೆಲಸಕ್ಕೆ ಹೆಗಲು ಕೊಟ್ಟರು ಸಂಗಮೇಶ. ಈ ಮಧ್ಯೆಯೇ ಅಂಜುಟಗಿಯ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ನಡೆಯುತ್ತಿತ್ತು. ಹೀಗಿರುವಾಗ ಭೀಕರ ಬರ ಬಂತೆಂದು ಅಂಜುಟಗಿಯಿಂದ ಗುಲಬರ್ಗಾ ಜಿಲ್ಲೆಯ ಭೀಮರಾಯನ ಗುಡಿಗೆ ಸಂಗಮೇಶರ ಕುಟುಂಬ ಗುಳೇ ಹೋಯಿತು. ಅಲ್ಲಿ ಹತ್ತಿರದ ಬಂಧುವೊಬ್ಬರು ಹೋಟೆಲ್ ಚಾಕರಿಯ ಕೆಲಸವನ್ನು ಕುಟುಂಬದ ಎಲ್ಲರಿಗೂ ಕೊಟ್ಟರು. ಸದ್ಯ, ಬದುಕಿಗೆ ಒಂದು ನೆಲೆ ಆಯ್ತು ಎಂದು ಸಂಗಮೇಶರ ತಂದೆ-ತಾಯಿ ನಿಟ್ಟುಸಿರು ಬಿಡುವ ಹೊತ್ತಿಗೇ, ಅದೇ ಬಂಧು ನಿಮ್ಮನ್ನು ಕೆಲಸದಿಂದ ತೆಗೆದಿದೀನಿ, ನಡೀರಿ ಇಲ್ಲಿಂದ!' ಅಂದರಂತೆ. ಪರಿಣಾಮ, ಅಪರಿಚಿತ ಊರಲ್ಲಿ ಮತ್ತೆ ಬೀದಿಪಾಲು!

ಹೀಗೇ ಒಂದೆರಡು ದಿನ ಫುಟ್‌ಪಾತ್ ವಾಸದಲ್ಲೇ ಕಳೆದು ಹೋದ ಮೇಲೆ ಆಕಸ್ಮಿಕವಾಗಿ ಸಿಕ್ಕ ಇನ್ನೊಬ್ಬರು ಪರಿಚಿತರು, ಈ ಕುಟುಂಬದ ಕಥೆ ಕೇಳಿ ಕರಗಿದರು. ಭೀಮರಾಯನ ಗುಡಿಯಿಂದ ಇಪ್ಪತ್ತು ಕಿ.ಮೀ. ದೂರದ ಗೂಗಿ ಎಂಬಲ್ಲಿ ಒಂದು ಪುಟ್ಟ ಮನೆ ಕೊಟ್ಟು ಇರುವಷ್ಟು ದಿನ ಇದ್ದು ಹೋಗಿ' ಅಂದರು. ಮತ್ತೆ ನೇಯ್ಗೆ ಕೆಲಸ ಆರಂಭಿಸಿದ ಸಂಗಮೇಶರ ತಂದೆ, ಮಗನನ್ನು ಶಾಲೆಗೆ ಸೇರಿಸಲೆಂದು ಹೋದರೆ ಅಧ್ಯಾಪಕರು ಹೇಳಿದರಂತೆ: ನಿನ್ನ ಮಗ ಹಿಂದೆ ಓದ್ತಾ ಇದ್ದನಲ್ಲ? ಅಲ್ಲಿಂದ ಟಿ.ಸಿ. ತಗೊಂಡು ಬಾ'.

ಅವತ್ತಿನ ಪರಿಸ್ಥಿತಿ ಎಷ್ಟು ದಾರುಣವಾಗಿತ್ತೆಂದರೆ, ತಮ್ಮ ಹುಟ್ಟೂರಿಗೆ ಹೋಗಿ ಮಗನ ಟಿ.ಸಿ. ತರುವ ತ್ರಾಣ ಕೂಡ ಸಂಗಮೇಶರ ತಂದೆಗಿರಲಿಲ್ಲ. ಪರಿಣಾಮ, ಶಾಲೆಗೆ ಒಂದಿಷ್ಟು ದಿನ ಗುಡ್‌ಬೈ ಹೇಳಿದ ಸಂಗಮೇಶ, ಕೂಲಿಗೆ ಹೋಗುವುದು, ಸ್ಮಶಾನದಿಂದ ಕಟ್ಟಿಗೆ ಕಡಿದು ತರುವುದು... ಇಂಥ ಕಾಯಕದಲ್ಲೇ ದಿನ ಕಳೆದರು. ಕಡೆಗೊಂದು ದಿನ ಚಿಕ್ಕಪ್ಪನ ನೆರವಿನಿಂದ ಸಂಗಮೇಶರ ಕುಟುಂಬ ಸ್ವಗ್ರಾಮಕ್ಕೆ ಮರಳಿತು. ತಕ್ಷಣದಿಂದಲೇ ಶಾಲೆಯ ಸಹವಾಸ ಆರಂಭಿಸಿದ ಸಂಗಮೇಶರನ್ನು ಅದೊಂದು ರಾತ್ರಿ ಪಕ್ಕ ಕೂರಿಸಿಕೊಂಡ ತಂದೆ-ತಾಯಿ ಇಬ್ಬರೂ ಏಕಕಾಲಕ್ಕೆ ಹೇಳಿದರಂತೆ: ಕಂದಾ, ನೀನು ದೊಡ್ಡ ಆಫೀಸರ್ ಆಗಬೇಕು. ನಮಗೆ ಬಂದ ಕಷ್ಟ ನಿನಗೆ ಬರಬಾರದು...'

ಈ ಮಾತು ಕೇಳಿಸಿಕೊಂಡಾಗ ಸಂಗಮೇಶ ಇನ್ನು ಏಳನೇ ಕ್ಲಾಸು ದಾಟಿರಲಿಲ್ಲ. ಅವತ್ತಿನ ಸಂದರ್ಭದಲ್ಲಿ ಅವರಿಗೆ ಭವಿಷ್ಯದ ದಿನ' ಎಂಬ ಪದಕ್ಕೆ ಅರ್ಥವೇ ಗೊತ್ತಿರಲಿಲ್ಲ. ಆದರೂ ಭಂಡ ಧೈರ್ಯದಿಂದ ತಮಗೆ ತಾವೇ ಹೇಳಿಕೊಂಡಂತೆ: ಮುಂದೊಂದು ದಿನ ನಾನೂ ಒಬ್ಬ ಆಫೀಸರ್ ಆಗೇ ಆಗ್ತೀನಿ!' ಈ ಮಾತು ಮುಂದೊಂದು ದಿನ ನಿಜವಾಗಬಹುದೆಂಬುದಕ್ಕೆ ಹಿನ್ನೆಲೆಯಾಗಿ, ಅವತ್ತು ಗೋಡೆಯ ಮೇಲೆ ಹಲ್ಲಿ ಲೊಚಗುಡಲಿಲ್ಲ. ದೇವರ ಪಟದ ಮೇಲಿಂದ ಹೂವೂ ಬೀಳಲಿಲ್ಲ.

ಹೀಗಿದ್ದಾಗಲೇ ಅಂಜುಟಗಿಯಿಂದ ಭರ್ತಿ ಹನ್ನೆರಡು ಕಿ.ಮೀ. ದೂರವಿದ್ದ ಬಳ್ಳೊಳ್ಳಿಯಲ್ಲಿ ಪ್ರೌಢಶಾಲೆಗೆ ಸೇರಿದ ಸಂಗಮೇಶ ನಂತರದ ಎರಡು ವರ್ಷ ಕಾಲ ದಿನಕ್ಕೆ ಇಪ್ಪತ್ನಾಲ್ಕು ಕಿ.ಮೀ. ನಡೆದು ಒಂಭತ್ತನೇ ತರಗತಿ ಮುಗಿಸಿದರು. ಈ ಸಂದರ್ಭದಲ್ಲಿ ನೆರವಿಗೆ ಬಂದವರು ಸಂಗಮೇಶರರ ಚಿಕ್ಕಪ್ಪ ಡಾ. ಪ್ರಭು ಉಪಾಸೆ. ಅವರು ಸಂಗಮೇಶನನ್ನು ಧಾರವಾಡಕ್ಕೆ ಕರೆತಂದು ಅಲ್ಲಿನ ಕರ್ನಾಟಕ ಹೈಸ್ಕೂಲ್‌ನಲ್ಲಿ ಹತ್ತನೇ ತರಗತಿಗೆ ಸೇರಿಸಿದರು. ಉಳಿಯಲಿಕ್ಕೆ ಒಂದು ಹಾಸ್ಟೆಲ್ ತೋರಿಸಿಕೊಟ್ಟರು. ಹಾಸ್ಟೆಲ್‌ನಲ್ಲಿ ಬೆಳಗ್ಗೆ, ರಾತ್ರಿ ಊಟದ ವ್ಯವಸ್ಥೆಯಿತ್ತು. ಅದಕ್ಕೆ ಮಾಸಿಕ ನೂರೈವತ್ತು ರೂ. ಶುಲ್ಕ! ಈ ಹಣವನ್ನು ಅಪ್ಪ-ಅಮ್ಮ ಕೂಲಿ ಮಾಡಿ ಕಳಿಸಬೇಕಿತ್ತು. ಒಂದು ವೇಳೆ ಹೆಚ್ಚು ಕಮ್ಮಿಯಾದರೆ ಹಾಸ್ಟೆಲ್‌ನಿಂದಲೇ ಗೇಟ್‌ಪಾಸ್ ಸಿಗಬಹುದು ಅನ್ನಿಸಿದಾಗ ಬೆಳಗ್ಗೆ ಹಾಗೂ ಸಂಜೆಯ ವೇಳೆ ಲಾಟರಿ ಟಿಕೆಟ್ ಮಾರಲು ನಿಂತರು ಸಂಗಮೇಶ. ಹೀಗೆ ಲಾಟರಿ ಟಿಕೆಟ್ ಮಾರಿದ್ದಕ್ಕೆ ಕಮಿಷನ್ ಹಣ ಸಿಗುತ್ತಿತ್ತಲ್ಲ? ಅದು ಹಾಸ್ಟೆಲಿನ ಫೀ ಆಗುತ್ತಿತ್ತು. ಹೇಳಿ ಕೇಳಿ ಅದು ಹರೆಯದ ವಯಸ್ಸು. ಆಗ ಮಧ್ಯಾಹ್ನದ ವೇಳೆ ಹಸಿವಾಗ್ತಾ ಇರಲಿಲ್ವ ಎಂದರೆ ಸಂಗಮೇಶ ಹೇಳುತ್ತಾರೆ: ಹಸಿವಾಗ್ದೇ ಇರುತ್ತಾ ಸಾರ್? ಆಗ್ತಿತ್ತು. ಆಗೆಲ್ಲ ಚಿಲ್ಲರೆ ಕಾಸಿಗೆ ಕಡ್ಲೆಬೀಜ ಖರೀದಿಸಿ ತಿಂದು ಹೊಟ್ಟೆ ತುಂಬ ನೀರು ಕುಡೀತಿದ್ದೆ. ಹತ್ತನೇ ತರಗತಿಯಿಂದ ಬಿ.ಎ. ಕಡೆಯ ವರ್ಷದವರೆಗೂ ಎರಡು ಹೊತ್ತು ಊಟ ಹಾಗೂ ಕಡಲೇಬೀಜವೇ ನನ್ನ ಕಾಪಾಡಿತು...'

ಹೇಳಿ ಕೇಳಿ ಅದು ಧಾರವಾಡದ ಪರಿಸರ. ಅದೇ ಕಾರಣದಿಂದ ಪಿಯೂಸಿ ದಾಟುವುದರೊಳಗೆ ಸಂಗಮೇಶರಲ್ಲಿ ಒಬ್ಬ ಕವಿ ಹುಟ್ಟಿಕೊಂಡಿದ್ದ. ನಾಟಕಕಾರ ಜತೆಯಾಗಿದ್ದ. ಲೇಖಕ ಕೈ ಹಿಡಿದಿದ್ದ. ಪರಿಣಾಮ, ಒಂದೊಂದೇ ವೈಚಾರಿಕ ಬರಹಗಳು ಹೊರಬಂದವು. ಅದನ್ನು ಕಂಡದ್ದೇ, ಒಂದು ಸಮುದಾಯಕ್ಕೆ ಮೀಸಲಾಗಿದ್ದ ಹಾಸ್ಟೆಲಿನ ಆಡಳಿತ ಮಂಡಳಿ ಸಿಟ್ಟಾಯಿತು. ಜಾತಿಯೇ ಬೇಡ ಅಂತ ಬರೀತೀಯೇನೋ ಹುಡುಗಾ' ಎಂದು ಗದರಿಸಿ ಸಂಗಮೇಶನನ್ನು ಹಾಸ್ಟೆಲಿನಿಂದ ಹೊರಹಾಕಿತು! ಉಹುಂ, ಆಗಲೂ ಸಂಗಮೇಶ ಜಗ್ಗಲಿಲ್ಲ. ಬದಲಿಗೆ, ಪುಟ್ಟ ಲಗ್ಗೇಜಿನೊಂದಿಗೆ ಧಾರವಾಡದ ವಿದ್ಯಾವರ್ಧಕ ಸಂಘಕ್ಕೆ ಬಂದ. ಸಂಘದ ಅಧ್ಯಕ್ಷರ ಒಪ್ಪಿಗೆ ಪಡೆದು ಒಂದಿಷ್ಟು ದಿನ ಅಲ್ಲೇ ಕಳೆದ. ಹಾಸ್ಟೆಲಿನ ಆಶ್ರಯ ಕೈ ತಪ್ಪಿದ್ದರಿಂದ ಊಟಕ್ಕೂ ಸಂಚಕಾರ ಬಂದಿತ್ತು. ಆಗ ಮತ್ತೆ ನೀರು ಕುಡಿದೇ ಹೊಟ್ಟೆ ತುಂಬಿಸಿಕೊಳ್ಳುತ್ತಾ, ಸಂಕಟ ಅನ್ನಿಸಿದಾಗೆಲ್ಲ ತನಗೆ ತಾನೇ ಹೇಳಿಕೊಳ್ಳುತ್ತಿದ್ದ: ಮುಂದೊಂದು ದಿನ ನಾನು ಆಫೀಸರ್ ಆಗ್ತೀನಲ್ಲ, ಆಗ ಈ ಸಂಕಟಗಳ ಮೇಲೆ ಸೇಡು ತೀರಿಸಿಕೊಳ್ತೇನೆ!'

ಹೀಗಿದ್ದಾಗಲೇ ಪರಿಚಿತರೊಬ್ಬರು ಉಳಿಯಲಿಕ್ಕೆ ಒಂದು ರೂಂ ಕೊಡಿಸ್ತೀನಿ ಬನ್ನಿ ಎಂದು ಕರೆದೊಯ್ದು ಒಂದು ಗೌಡಾನ್‌ಗೆ ತಲುಪಿಸಿದರಂತೆ. ಅದನ್ನು ಈಗಲೂ ಭಯದಿಂದಲೇ ನೆನಪು ಮಾಡಿಕೊಳ್ಳುವ ಸಂಗಮೇಶ ಹೇಳುತ್ತಾರೆ: ಅವರೇನೋ ಸದಾಶಯದಿಂದಲೇ ನನಗೆ ಉಳಿಯಲೊಂದು ಜಾಗ ತೋರಿಸಿದರು ನಿಜ. ಆದರೆ ಅದು ಥೇಟ್ ತಿಪ್ಪೆಗುಂಡಿ ಇದ್ದಂತಿತ್ತು. ಆ ಕಸದ ರಾಶಿಯ ಮಧ್ಯೆಯೇ ಪುಸ್ತಕಗಳೊಂದಿಗೆ, ಕನಸುಗಳೊಂದಿಗೆ ನಾನೂ ಉಳಿದುಕೊಂಡೆ. ರಾತ್ರಿಯ ವೇಳೆ ಇದ್ದಕ್ಕಿದ್ದಂತೆ ಗೋಡೆಯ ಮೇಲೆ ನಾಗರಹಾವು ಪ್ರತ್ಯಕ್ಷವಾಗುತ್ತಿತ್ತು. ಆಗೊಮ್ಮೆ ಈಗೊಮ್ಮೆ ಬುಸ್‌ಬುಸ್ ಎಂದು ಪೂತ್ಕರಿಸಿ ಹೆದರಿಸುತ್ತಿತ್ತು. ಈ ಸಂಕಟದ ಮಧ್ಯೆಯೇ ಓದಿದೆ. ಧಾರವಾಡದಲ್ಲೇ ಇದ್ದರೆ ಬದುಕೋದು ಕಷ್ಟವಾಗುತ್ತದೆ. ಅದರ ಬದಲು ಬೆಂಗಳೂರಿಗೆ ಹೋದರೆ ಟಿವಿ ಸೀರಿಯಲ್‌ಗಳಲ್ಲಿ ನಟಿಸಿಕೊಂಡಾದರೂ ಬದುಕಬಹುದು ಅನ್ನಿಸಿದಾಗ, ಎರಡನೇ ಯೊಚನೆ ಮಾಡದೆ ಒಂದು ಟ್ರಂಕಿಗೆ ಲಗೇಜು ತುಂಬಿಕೊಂಡು ಬೆಂಗಳೂರಿಗೆ ಬಂದೇಬಿಟ್ಟೆ...'

ಒಂದು ಭಂಡ ಧೈರ್ಯದೊಂದಿಗೆ ಈ ಸಂಗಮೇಶ ಅಲಿಯಾಸ್ ಸಂಗಪ್ಪ ಬೆಂಗಳೂರಿಗೆ ಬಂದದ್ದು 1998ರಲ್ಲಿ. ಅವತ್ತಿಗೆ ಯಾರೆಂದರೆ ಯಾರೂ ಇಲ್ಲದ ಬೆಂಗಳೂರಿನಲ್ಲಿ ಅವರದು ಫುಟ್‌ಪಾತ್ ಬದುಕು. ನಿಲ್ಲಲು ನೆಲೆಯಿಲ್ಲ, ಮಲಗಲು ಮನೆಯಿಲ್ಲ, ಹಸಿವು ಹಿಂಗಿಸಲು ಆಹಾರವಿಲ್ಲದ ಸಂದರ್ಭದಲ್ಲಿ ಅವರಿಗೆ ಕಾಣಿಸಿದ್ದು ಸಾಗರ್ ಚಿತ್ರಮಂದಿರದ ಪಕ್ಕವಿರುವ ಬ್ರಹ್ಮವಿದ್ಯಾಶ್ರಮದ ಕಟ್ಟಡ. ಒಂದು ಬೆರಗಿನಿಂದಲೇ ಅಲ್ಲಿಗೆ ಹೋದ ಸಂಗಮೇಶ, ಅಲ್ಲಿನ ಸ್ವಾಮೀಜಿಯ ಬಳಿ ಆಶ್ರಯ ಕೇಳಿದರು. ಅವರು ವಿಸಿದ ಎಲ್ಲ ಕಂಡೀಷನ್‌ಗಳಿಗೂ ಒಪ್ಪಿಕೊಂಡರು. ಆಶ್ರಮದಲ್ಲಿ ಕಸ ಗುಡಿಸಿದರು. ಮುಸುರೆ ತಿಕ್ಕಿದರು. ಈ ಸಂದರ್ಭದಲ್ಲೇ ಸಿನಿಮಾ ಡೈರೆಕ್ಟರಿಯೊಂದು ಸಿಕ್ಕಾಗ ಅದರಲ್ಲಿದ್ದ ನಟರು, ನಿರ್ದೇಶಕರ ಮನೆಗೆ ಹೊರಗಿನಿಂದ ಫೋನ್ ಮಾಡಿ- ಸರ್, ನನಗೊಂದು ಪಾತ್ರ ಕೊಡ್ರಿ' ಎಂದು ಕೇಳಲು ಆರಂಭಿಸಿದರು. ಹೀಗಿದ್ದಾಗಲೇ ಇವರ ಫೋನ್ ಕರೆಗೆ ಉತ್ತರಿಸುತ್ತಾ ನಟ ಕಾಶೀನಾಥ್ ಹೇಳಿದರಂತೆ: ಮಾರಾಯ, ನನಗೇ ಕೆಲ್ಸ ಇಲ್ಲ. ನಿನಗೆ ಹೇಗಪ್ಪಾ ಪಾತ್ರ ಕೊಡಲಿ?'

ಈ ಸಂದರ್ಭದಲ್ಲಿಯೇ ಸಂಗಮೇಶನ ಬದುಕು ಬ್ರಹ್ಮ ವಿದ್ಯಾಶ್ರಮದಿಂದ ಗುಬ್ಬಿ ತೋಟದಪ್ಪ ಹಾಸ್ಟೆಲ್‌ಗೆ ಶಿಫ್ಟಾಯಿತು. ಅಲ್ಲಿದ್ದುಕೊಂಡೇ ಎಂ.ಎ. ಮುಗಿಸಿದರು. ಹಿಂದೆಯೇ ಯುಜಿಸಿ ಪರೀಕ್ಷೆ ಬರೆದ ಸಂಗಮೇಶ, ಅದೇ ವೇಳೆಗೆ ಕೆಎಎಸ್ ಪರೀಕ್ಷೆಯನ್ನೂ ಬರೆದರು. ಈ ಮಧ್ಯೆ ಧಾರವಾಡದ ಆನಂದ ಪಾಟೀಲ ಎಂಬುವರ ಕಡೆಯಿಂದ ಪರಿಚಯವಾದ ಮೈಸೂರ್ ಬ್ಯಾಂಕ್ ಉದ್ಯೋಗಿ ಅಶ್ವತ್ಥ ಕುಲಕರ್ಣಿ, ತಕ್ಷಣವೇ ಈ ಹುಡುಗನನ್ನು ಕಿರುತೆರೆ ನಿರ್ದೇಶಕ ಬ.ಲ. ಸುರೇಶ್‌ಗೆ ಪರಿಚಯಿಸಿದರು. ಅವತ್ತು ಸುರೇಶ್ ಅವರು ಮನೆತನ' ಎಂಬ ಧಾರಾವಾಹಿಯ ಕಥೆ-ಚಿತ್ರಕಥೆ-ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದರು. ಆ ಕಾಲದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಮನೆತನ' ಧಾರಾವಾಹಿಗೆ ಸಂಭಾಷಣೆ ಬರೆಯಲು ನಿಂತ ಸಂಗಮೇಶ ನಂತರ ತಿರುಗಿ ನೋಡಲಿಲ್ಲ.

ಇಂಥದೊಂದು ಭರವಸೆಯ ಪ್ರಯಾಣದಲ್ಲಿ ಸಿಕ್ಕ ಸ್ಟೇಷನ್ನೇ- ಸಿಲ್ಲಿಲಲ್ಲಿ! ಸಿಹಿಕಹಿ ಚಂದ್ರು ನಿರ್ದೇಶನದ ಈ ಧಾರಾವಾಹಿಯಲ್ಲಿ ಸಂಗಮೇಶ್‌ಗೆ ದಕ್ಕಿದ್ದು ಕಾಂಪೌಂಡರ್ ಪಾತ್ರ. ಆರಂಭದಲ್ಲಿ ತಿಂಗಳಿಗೆ ಒಂದು ದಿನ ಮಾತ್ರ ನಿಂಗೆ ಕೆಲಸ ಅಂದಿದ್ದರಂತೆ ಚಂದ್ರು. ಆದರೆ ಮುಂದೆ ಈ ಸಂಗಮೇಶ ಅದೆಷ್ಟು ಖ್ಯಾತಿ ಪಡೆದರೆಂದರೆ, ತಿಂಗಳಿಡೀ ಅವರ ಪಾತ್ರ ಬೆಳೆಸಲೇಬೇಕಾದ ಅನಿವಾರ್‍ಯತೆ ಸಿಲ್ಲಿ ಲಲ್ಲಿ' ತಂಡಕ್ಕೆ ಬಂತು! ಈ ಮಧ್ಯೆ ಸಂಗಮೇಶರ ಕೆಎಎಸ್ ಪರೀಕ್ಷೆಯ ಫಲಿತಾಂಶ ಬಂದಿತ್ತು. ಇಂಗ್ಲಿಷಿನಲ್ಲಿ ಫೇಲ್ ಎಂದಿದ್ದ ಫಲಿತಾಂಶ ಕಂಡು ಸಂಗಮೇಶ್‌ಗೆ ಆಶ್ಚರ್ಯ. ಎಂ.ಎ. ಪಾಸಾಗಿರುವ ತಾನು ಕೆಎಎಸ್‌ನ ಇಂಗ್ಲಿಷ್‌ನಲ್ಲಿ ಫೇಲಾಗಲು ಸಾಧ್ಯವೇ ಇಲ್ಲ ಎಂಬುದು ಅಚ್ಚರಿಗೆ ಕಾರಣ. ತಕ್ಷಣವೇ ಅವರು ಕೋರ್ಟಿನ ಮೊರೆ ಹೋದರು. ಸ್ವಾರಸ್ಯವೆಂದರೆ, ಅವರಲ್ಲಿ ಲಾಯರ್‌ಗೆ ಕೊಡುವುದಕ್ಕೂ ಕಾಸಿರಲಿಲ್ಲವಂತೆ. ಅದನ್ನೂ ಗೆಳೆಯರಿಂದ ಸಾಲ ಮಾಡಿ ಪೂರೈಸಿದರಂತೆ. (ಅಷ್ಟೇ ಅಲ್ಲ, 5000 ರೂ. ಕೇಳಿದ ಲಾಯರ್‌ಗೆ 1500 ರೂ. ನೀಡಿ ನನ್ನಲ್ಲಿ ಇರೋದೇ ಇಷ್ಟು. ತಪ್ಪು ತಿಳೀಬೇಡಿ ಪ್ಲೀಸ್ ಅಂದರಂತೆ!) ಮುಂದೆ, ಸಂಗಪ್ಪನ ಉತ್ತರ ಪತ್ರಿಕೆ ನ್ಯಾಯಾಲಯದ ಮುಂದೆ ಬಂತು. ಪತ್ರಿಕೆಯ ಮರು ಪರಿಶೀಲನೆ ನಡೆದಾಗ, ಫೇಲಾಗಿದ್ದ ಸಂಗಪ್ಪ, ಫಸ್ಟ್‌ಕ್ಲಾಸ್‌ನಲ್ಲಿ ಪಾಸಾಗಿದ್ದರು! ನಂತರದ ಕೆಲವೇ ದಿನಗಳಲ್ಲಿ ಬಿಬಿಎಂಪಿಯ ಅಸಿಸ್ಟೆಂಟ್ ಕಂಟ್ರೋಲರ್ ಹುದ್ದೆಗೆ ಪೋಸ್ಟಿಂಗೂ ಆಯಿತು. ಈಗ ಹೇಗಿದ್ದಾರೆ ಈ ಸರಕಾರಿ ಅಧಿಕಾರಿ?

ಈ ಪ್ರಶ್ನೆಗೆ ಅವರಿಂದಲೇ ಉತ್ತರ ಕೇಳೋಣ. ಓವರ್ ಟು ಸಂಗಪ್ಪ ಉಪಾಸೆ: ಬದುಕು ಇಷ್ಟೊಂದು ಸುಂದರ ಅಂದ್ಕೊಂಡಿರಲಿಲ್ಲ. ಧಾರವಾಡದಿಂದ ಬೆಂಗಳೂರಿಗೆ ಬಂದಾಗ ಕಣ್ಣಿಗೆ ಬಟ್ಟೆ ಕತ್ತಲಲ್ಲಿ ಬಿಟ್ಟಂತಾಗಿತ್ತು. ಆ ದಿನಗಳಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದೆ, ಕಸ, ಕುಸುರೆ ತಿಕ್ಕಿದೆ. ಒಂದೇ ಹೊತ್ತು ಊಟ ಮಾಡಿದೆ. ನೀರು ಕುಡಿದೇ ಹೊಟ್ಟೆ ತುಂಬಿಸಿಕೊಂಡೆ. ಇದೆಲ್ಲವೂ ನಡೆದದ್ದು ಇದೇ ಬೃಹತ್ ಬೆಂಗಳೂರಿನ ಮಡಿಲಲ್ಲಿ. ಈಗ, ಅದೇ ಬೆಂಗಳೂರು ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಕಂಟ್ರೋಲರ್ ನಾನು. ನನ್ನದು ಅಹಂಕಾರದ ಮಾತಲ್ಲ, ಹೆಮ್ಮೆಯ ಮಾತು. ನಾನೀಗ ಏನಾಗಿದ್ದೀನೋ ಅದಕ್ಕೆ ಈ ಬೃಹತ್ ಬೆಂಗಳೂರೇ ಕಾರಣ. ಆಫೀಸರ್ ಆಗಬೇಕು ಎಂಬ ಕನಸಿತ್ತು. ಅದು ನನಸಾಗಿದೆ. ನಾನು ಅನುಭವಿಸಿದ ಕಷ್ಟ ನನ್ನ ಕಿರಿಯರಿಗೆ ಬರಬಾರದು ಅನ್ನೋದು ನನ್ನಾಸೆ. ಅದಕ್ಕಾಗಿ ನನ್ನಿಂದ ಸಾಧ್ಯವಾದ ಎಲ್ಲ ಸಹಾಯ ಮಾಡಲು ನಾನು ಯಾವತ್ತೂ ಸಿದ್ಧ. ನನ್ನ ಯಶಸ್ಸಿನ ಹಾದಿಯಲ್ಲಿ ನನಗೆ ಮೆಟ್ಟಿಲಾದ ಎಲ್ಲರಿಗೂ ನಾನು ಬದುಕಿಡೀ ಋಣಿ....'

ಅಂದಹಾಗೆ, ಸಂಗಮೇಶ ಉಪಾಸೆಯವರನ್ನು ಮಾತಾಡಿಸಬೇಕೆ? 98454 71514 ನಂಬರಿಗೆ ಕರೆ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+