38243manikanthಅಮ್ಮ ಹೇಳಿದ ಎಂಟು ಸುಳ್ಳುಗಳು/column/manikanth/2008/0918-eight-lies-of-my-mothers.htmlಸೂಚನೆ : ಈ ಸುಳ್ಳುಗಳನ್ನು ಓದುವುದಕ್ಕೆ ಶುರುಮಾಡುವ ಮುನ್ನ ಕರವಸ್ತ್ರವನ್ನು ಕೈಯಲ್ಲಿಟ್ಟುಕೊಂಡಿದ್ದರೆ ಕ್ಷೇಮ. ಯಾಕೆಂದರೆ, ಇದು ತಾಯಿಯ ಪ್ರೀತಿ ಮತ್ತು ತ್ಯಾಗವನ್ನು ಕಂಡುಂಡು ಕಡುಬಡತನದಲ್ಲಿ ಬೆಳೆದ ಕನ್ನಡ ಮಕ್ಕಳಿಗೆ ಮಾತ್ರ. ಸಿರಿ ಉಕ್ಕಿ ಮದ ಹೊಕ್ಕಿದವರಿಗಿಲ್ಲ. ಅಂಕಣಕಾರ : ಎ.ಆರ್. ಮಣಿಕಾಂತ್ ತುಂಬಾ ದೂರ ಅಲ್ಲ ಸಾರ್, ಇಲ್ಲೇ, ಬೆಂಗಳೂರು ತುಮಕೂರಿನ ಮಧ್ಯೆ ನೆಲಮಂಗಲ 765http://kannada.oneindia.com/img/2009/10/24-manikanth1.jpg38243manikanthಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38243manikanthಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg38243manikanthಪ್ರೀತಿಯ ತಂದೆಗೆ ಮಗಳ ಪತ್ರ.../column/manikanth/2009/0109-letter-from-daughter-to-beloved-father.htmlಮಕ್ಕಳು ಜೀವನದಲ್ಲಿ ಎಡವದಿರಲೆಂದು ಮುದ್ದು ಮಾಡಿ ಬೆಳೆಸಿದ ಅಪ್ಪ ಅಮ್ಮಂದಿರು ಹೇಗೆ ಅಪೇಕ್ಷಿಸುತ್ತಾರೋ, ಅರಿವಿದ್ದೋ, ಅರಿವಿಲ್ಲದೆಯೋ ಎಡವಿ ಬಿದ್ದಾಗ ಮಕ್ಕಳು ಕೂಡ ಪ್ರೀತಿಯ ಅಪ್ಪ ಮತ್ತು ಅಮ್ಮ ತಮ್ಮ ಕಿರುಬೆರಳು ಹಿಡಿದು ಎಬ್ಬಿಸುತ್ತಾರೆಂದು ಅಪೇಕ್ಷಿಸುತ್ತವೆ. ಸೋತಾಗ ಕೈಹಿಡಿದು ಎಬ್ಬಿಸಿ, ಗೆದ್ದಾಗ ಬೆನ್ನುತಟ್ಟಿ ಪ್ರೋತ್ಸಾಹಿಸುವುದು ಪ್ರತಿ ಪಾಲಕರ ಕರ್ತವ್ಯ.* ಎ.ಆರ್. ಮಣಿಕಾಂತ್ಮಗಳ ವರ್ತನೆ ಯಾಕೋ ಸರಿಯಾಗಿಲ್ಲ. ಇಂಥದೊಂದು ಅನುಮಾನ 33978http://kannada.oneindia.com/img/2009/01/09-daughter-father-love1.jpg38243manikanthಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg38244ಮಣಿಕಾಂತ್ಅಮ್ಮ ಹೇಳಿದ ಎಂಟು ಸುಳ್ಳುಗಳು/column/manikanth/2008/0918-eight-lies-of-my-mothers.htmlಸೂಚನೆ : ಈ ಸುಳ್ಳುಗಳನ್ನು ಓದುವುದಕ್ಕೆ ಶುರುಮಾಡುವ ಮುನ್ನ ಕರವಸ್ತ್ರವನ್ನು ಕೈಯಲ್ಲಿಟ್ಟುಕೊಂಡಿದ್ದರೆ ಕ್ಷೇಮ. ಯಾಕೆಂದರೆ, ಇದು ತಾಯಿಯ ಪ್ರೀತಿ ಮತ್ತು ತ್ಯಾಗವನ್ನು ಕಂಡುಂಡು ಕಡುಬಡತನದಲ್ಲಿ ಬೆಳೆದ ಕನ್ನಡ ಮಕ್ಕಳಿಗೆ ಮಾತ್ರ. ಸಿರಿ ಉಕ್ಕಿ ಮದ ಹೊಕ್ಕಿದವರಿಗಿಲ್ಲ. ಅಂಕಣಕಾರ : ಎ.ಆರ್. ಮಣಿಕಾಂತ್ ತುಂಬಾ ದೂರ ಅಲ್ಲ ಸಾರ್, ಇಲ್ಲೇ, ಬೆಂಗಳೂರು ತುಮಕೂರಿನ ಮಧ್ಯೆ ನೆಲಮಂಗಲ 765http://kannada.oneindia.com/img/2009/10/24-manikanth1.jpg38244ಮಣಿಕಾಂತ್ಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38244ಮಣಿಕಾಂತ್ಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg38244ಮಣಿಕಾಂತ್ಹೊಸ ನಿರ್ದೇಶಕರ ಕಥೆಗಳ ಕಗ್ಗೊಲೆ/movies/headlines/2009/01/08-young-kannada-movie-director-speaks-satyam.htmlನಾನು ಒಬ್ಬ ಸಿನೆಮಾ ನಿರ್ದೇಶಕ. ನಿಮ್ಮ ವೆಬ್ಬಿನಲ್ಲಿ ಬಂದ 'ಹೊಸ ನಿರ್ದೇಶಕರಿಗೆ ಕಿವಿಮಾತು' ಲೇಖನವನ್ನು ಓದಿ ಅದಕ್ಕೆ ಪ್ರತಿಕ್ರಿಯಿಸಿದ್ದೇನೆ. ನೀವು ನಿಷ್ಪಕ್ಷಪಾತವಾಗಿ ನನ್ನ ಅಭಿಪ್ರಾಯವನ್ನು ಪ್ರಕಟಿಸುತ್ತೀರೆಂದು ನಂಬಿದ್ದೇನೆ.ಇಂತು ವಿಶ್ವಾಸಿವಿಜಯ್ಸ್ವಾಮಿ. ನಿಮ್ಮ ಕಿವಿಮಾತಿಗೆ ಧನ್ಯವಾದಗಳು. ಆದರೆ ಇಲ್ಲಿ ಕೆಲವೊಂದು ಅಂಶ ನಿಮ್ಮ ಗಮನ ಬಿಟ್ಟು ಹೋಗಿರುವಂತೆ ಕಾಣುತ್ತದೆ. ಅದನ್ನೂ ಹೇಳಿ ಬಿಡೋಣ ಅಂತ ಬರೀತಿದೇನೆ. ನನ್ನದು ತಪ್ಪಾದರೆ ಕ್ಷಮಿಸಿಬಿಡಿ. 33951http://kannada.oneindia.com/img/2009/01/08-director-cut-action1e.jpg38244ಮಣಿಕಾಂತ್ಪ್ರೀತಿಯ ತಂದೆಗೆ ಮಗಳ ಪತ್ರ.../column/manikanth/2009/0109-letter-from-daughter-to-beloved-father.htmlಮಕ್ಕಳು ಜೀವನದಲ್ಲಿ ಎಡವದಿರಲೆಂದು ಮುದ್ದು ಮಾಡಿ ಬೆಳೆಸಿದ ಅಪ್ಪ ಅಮ್ಮಂದಿರು ಹೇಗೆ ಅಪೇಕ್ಷಿಸುತ್ತಾರೋ, ಅರಿವಿದ್ದೋ, ಅರಿವಿಲ್ಲದೆಯೋ ಎಡವಿ ಬಿದ್ದಾಗ ಮಕ್ಕಳು ಕೂಡ ಪ್ರೀತಿಯ ಅಪ್ಪ ಮತ್ತು ಅಮ್ಮ ತಮ್ಮ ಕಿರುಬೆರಳು ಹಿಡಿದು ಎಬ್ಬಿಸುತ್ತಾರೆಂದು ಅಪೇಕ್ಷಿಸುತ್ತವೆ. ಸೋತಾಗ ಕೈಹಿಡಿದು ಎಬ್ಬಿಸಿ, ಗೆದ್ದಾಗ ಬೆನ್ನುತಟ್ಟಿ ಪ್ರೋತ್ಸಾಹಿಸುವುದು ಪ್ರತಿ ಪಾಲಕರ ಕರ್ತವ್ಯ.* ಎ.ಆರ್. ಮಣಿಕಾಂತ್ಮಗಳ ವರ್ತನೆ ಯಾಕೋ ಸರಿಯಾಗಿಲ್ಲ. ಇಂಥದೊಂದು ಅನುಮಾನ 33978http://kannada.oneindia.com/img/2009/01/09-daughter-father-love1.jpgnews"> ಮೆದುಳು ಶಸ್ತ್ರಚಿಕಿತ್ಸಾ ತಜ್ಞ ಆಲ್‌ಫ್ರೆಡೋ ಕ್ವಿನಾನ್ಸ್ | Alfredo Quinones Hinojosa | Neurologist | Dirty Mexican | Brain surgeon | ಆಲ್‌ಫ್ರೆಡೋ ಕ್ವಿನಾನ್ಸ್ ಹಿನಾಜೋಸಾ | ಮೆದುಳು ಶಸ್ತ್ರಚಿಕಿತ್ಸಾ ತಜ್ಞ | ಯಶೋಗಾಥೆ - Kannada Oneindia

ಮೆದುಳು ಶಸ್ತ್ರಚಿಕಿತ್ಸಾ ತಜ್ಞ ಆಲ್‌ಫ್ರೆಡೋ ಕ್ವಿನಾನ್ಸ್

Alfredo Quinones Hinojosa
(ಮುಂದುವರಿದಿದೆ)

ಅವನ ಶ್ರದ್ಧೆಯ ಮುಂದೆ ವಿಜ್ಞಾನವೂ ಸೋತಿತು

ಮರುದಿನವೇ ಮೆಕ್ಸಿಕೋಗೆ ಮರಳಿದ ಕ್ವಿನಾನ್ಸ್ ಶಾಲೆಗೆ ಸೇರಿಕೊಂಡ. ಹಾಗೂ ಹೀಗೂ ಪ್ರಾಥಮಿಕ ಶಿಕ್ಷಣ ಮುಗಿಸಿದ. ಪ್ರೌಢಶಾಲಾ ಶಿಕ್ಷಣ ಮುಗಿಸಲು ಹಣದ ತೊಂದರೆ ಎದುರಾಯಿತು. ಆಗ ಒಂದು ವರ್ಷ ಸ್ಕೂಲು ಬಿಡಲು ಕ್ವಿನಾನ್ಸ್ ನಿರ್ಧರಿಸಿದ. ಹಾಗೆ ಶಾಲೆ ಬಿಟ್ಟವನು ಸೀದಾ ಅಮೆರಿಕಾದ ಫಾರ್ಮ್ ಹೌಸ್‌ಗೆ ಬಂದ. ತೋಟದ ಮಾಲಿ ಕೆಲಸಕ್ಕೆ ಸೇರಿಕೊಂಡ. ಊಟ ಮಾಡಿದರೆ ದುಡ್ಡು ಖರ್ಚಾಗಿ ಹೋಗುತ್ತದೆ ಎಂದುಕೊಂಡು ಒಂದಿಡೀ ವರ್ಷ (ತೋಟದ ಮಾಲೀಕರಿಗೆ ಗೊತ್ತಾಗದಂತೆ) ಟೊಮೆಟೋ, ಮೂಲಂಗಿ, ಕೋಸು, ಬೀನ್ಸ್ ತಿಂದುಕೊಂಡೇ ಬದುಕಿಬಿಟ್ಟ.

ಹೀಗೆ, ಒಂದು ವರ್ಷ ದುಡಿದ ಹಣವನ್ನು ಜತೆಗಿಟ್ಟುಕೊಂಡು ಮೆಕ್ಸಿಕೋಗೆ ಮರಳಿ, ಹೈಸ್ಕೂಲು ಶಿಕ್ಷಣಕ್ಕೆ ಸೇರಿಕೊಂಡನಲ್ಲ ಆಗ ಕ್ವಿನಾನ್ಸ್‌ನ ದಾರಿ ಸುಗಮವಿರಲಿಲ್ಲ. ಆತ ವಾಸವಿದ್ದ ಊರಿನಿಂದ ಶಾಲೆ ತುಂಬಾ ದೂರವಿತ್ತು. ಪರಿಣಾಮವಾಗಿ, ಬೆಳಗ್ಗೆ ನಾಲ್ಕು ಗಂಟೆಗೇ ಆತ ಏಳಬೇಕಿತ್ತು. ಅವಸರದಿಂದಲೇ ಬಸ್ಸು ಹಿಡಿಯಬೇಕಿತ್ತು. ಮಧ್ಯಾಹ್ನ ಮನೆಗೆ ವಾಪಸಾಗಲು ಬಸ್ ಇರಲಿಲ್ಲ. ಹಾಗಾಗಿ ಭರ್ತಿ ಎಂಟು ಮೈಲಿ ದೂರವನ್ನು ಆತ ನಡೆದೇ ಬರಬೇಕಿತ್ತು. ವರ್ಷವಿಡೀ ಬಿರುಬಿಸಿಲು ಅಥವಾ ಜಡಿ ಮಳೆ ಯಾವುದಾದರೊಂದು ಸದಾ ಕ್ವಿನಾನ್ಸ್‌ಗೆ ಕಾಟ ಕೊಡುತ್ತಲೇ ಇತ್ತು.

ಈ ಸಂಕಟದ ಮಧ್ಯೆಯೂ ಕ್ವಿನಾನ್ಸ್ ಡಿಸ್ಟಿಂಕ್ಷನ್‌ನಲ್ಲಿ ಪಾಸಾದ. ಈ ಸಂದರ್ಭದಲ್ಲಿಯೇ-ಮೆಕ್ಸಿಕೋದಲ್ಲಿಯೇ ಉಳಿದರೆ, ಯಾವುದಾದರೂ ಕಂಪನಿಯಲ್ಲಿ ಗುಮಾಸ್ತನಾಗಬಹುದೇ ಹೊರತು ಅದಕ್ಕಿಂತ ದೊಡ್ಡ ಹುದ್ದೆಗೆ ಹೋಗುವುದು ಸಾಧ್ಯವಿಲ್ಲ ಎಂದು ಕ್ವಿನಾನ್ಸ್‌ಗೆ ಅರ್ಥವಾಗಿ ಹೋಯಿತು. ಆತ ತಕ್ಷಣವೇ ಅಮೆರಿಕದ ಹಾದಿ ಹಿಡಿದ. ಅಮೆರಿಕದಲ್ಲಿ ಬದುಕಬೇಕೆಂದರೆ ಅಲ್ಲಿನ ಇಂಗ್ಲಿಷ್ ಕಲೀಬೇಕು ಅನ್ನಿಸಿದಾಗ ಒಂದಿಷ್ಟು ಡಿಕ್ಷನರಿ ಜತೆಗಿಟ್ಟುಕೊಂಡು ಕೆಲವೇ ದಿನಗಳಲ್ಲಿ ಅಮೆರಿಕನ್ ಇಂಗ್ಲಿಷು ಕಲಿತೇಬಿಟ್ಟ. ನಂತರ ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿಕೊಂಡ. ಈ ಸಂದರ್ಭದಲ್ಲಿ ಕ್ವಿನಾನ್ಸ್ ಮಾಡಿದ ಜಾಣತನದ ಕೆಲಸವೆಂದರೆ, ಸಂಜೆ ಕಾಲೇಜಿಗೆ ಸೇರಿಕೊಂಡದ್ದು.

ವಿಜ್ಞಾನದ ವಿಷಯ ಆಯ್ದುಕೊಂಡ ಕ್ವಿನಾನ್ಸ್, ಕಾಲೇಜು ಮುಗಿದ ತಕ್ಷಣ ಲೈಬ್ರರಿ ಸೇರಿಕೊಳ್ಳುತ್ತಿದ್ದ. ಆತನ ಕಣ್ಮುಂದಿನ ಗುರಿ ನಿಚ್ಚಳವಿತ್ತು. ಇವತ್ತಲ್ಲ ನಾಳೆ, ಇಡೀ ಅಮೆರಿಕದ ಜನ ತನ್ನತ್ತ ಬೆರಗಿನಿಂದ ನೋಡುವಂಥ ಸಾಧನೆ ಮಾಡಬೇಕೆಂಬ ಮಹದಾಸೆ ಅವನೊಳಗಿತ್ತು. ಈ ಹಠದಿಂದಲೇ ಓದಲು ಕೂರುತ್ತಿದ್ದ. ಕಡೆಗೊಂದು ದಿನ, ಅವನ ಶ್ರದ್ಧೆಯ ಮುಂದೆ ವಿಜ್ಞಾನವೂ ಸೋತಿತು. ಪರಿಣಾಮ, ಉನ್ನತ ದರ್ಜೆಯಲ್ಲಿ ಆತ ಡಿಗ್ರಿ ಪಡೆದ. ನಂತರ ಶಿಕ್ಷಕನಾಗಿ ಕೆಲಸಕ್ಕೆ ಸೇರಿಕೊಂಡ. ಈ ಕೆಲಸದಿಂದ ಸಿಗುವ ಸಂಬಳದಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಿಲ್ಲ ಅನ್ನಿಸಿದಾಗ, ಬಟ್ಟೆ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿಕೊಂಡ. ಖಾಸಗಿಯಾಗಿ ಟ್ಯೂಶನ್ ಹೇಳುವುದಕ್ಕೂ ಮುಂದಾದ.

ಹೀಗೆ, ಪೈಸೆಗೆ ಪೈಸೆ ಸೇರಿಸಿಕೊಂಡು ಕನಸಿನ ಹಿಂದೆ ಬಿದ್ದಿದ್ದಾಗಲೇ ಅಮೆರಿಕದ ಸಾವಿರಾರು ವಿದ್ಯಾರ್ಥಿಗಳು ಡ್ರಗ್ಸ್‌ನ ದಾಸರಾಗಿರುವ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಯಿತು. ತಕ್ಷಣವೇ, ಡ್ರಗ್ಸ್ ಸೇವನೆಯಿಂದ ಮೆದುಳಿನ ಮೇಲಾಗುವ ದುಷ್ಪರಿಣಾಮಗಳು ಎಂಬ ವಿಷಯವಾಗಿ ಕ್ವಿನಾನ್ಸ್ ಒಂದು ಪ್ರಬಂಧ ಬರೆದು ಪ್ರಕಟಿಸಿದ. ಈ ಸಂಶೋಧನೆಗೆ ಪ್ರೊ. ಹೋಗೋ ಮೋರಾ ಎಂಬಾತ ಗೈಡ್ ಆಗಿದ್ದರು. ಕ್ವಿನಾನ್ಸ್‌ನ ಪ್ರಬಂಧವನ್ನು ಕಂಡ ಅವರು, ಇದಕ್ಕಿಂತ ಚೆನ್ನಾಗಿ ಬರೆಯಲು ನನ್ನಿಂದ ಕೂಡ ಸಾಧ್ಯವಿಲ್ಲ. ಮಾನವ ದೇಹದ ಅತಿ ಸೂಕ್ಷ್ಮ ಅಂಗವೆಂದರೆ ಮೆದುಳು. ಅದರ ಬಗ್ಗೆ, ಅದರ ಕಾರ್ಯ ಚಟುವಟಿಕೆ, ಅದಕ್ಕೆ ಬರುವ ಕಾಯಿಲೆ, ಅದಕ್ಕೆ ಪರಿಹಾರ... ಮುಂತಾದ ವಿಷಯದ ಬಗ್ಗೆ ಅಕಾರಯುತವಾಗಿ ಮಾತಾಡಲು ತುಂಬ ತಿಳಿವಳಿಕೆ ಇರಬೇಕು. ಅಂಥ ಬುದ್ಧಿ ನಿನಗಿದೆ. ನೀನು ಯಾಕೆ ಡಾಕ್ಟರಾಗಬಾರದು? ನೀನೇಕೆ ಮೆದುಳು ಶಸ್ತ್ರಚಿಕಿತ್ಸಾ ತಜ್ಞ ಆಗಬಾರದು? ಎಂದರು. ಅಷ್ಟಕ್ಕೇ ಸುಮ್ಮನಾಗದೆ ಹಾರ್ವರ್ಡ್‌ನ ಮೆಡಿಕಲ್ ಕಾಲೇಜಿಗೆ ಶಿಷ್ಯನ ಪ್ರಬಂಧವನ್ನು ಕಳಿಸಿಕೊಟ್ಟರು. ಅವನಿಗೆ ವೈದ್ಯ ಶಿಕ್ಷಣಕ್ಕೆ ಸೀಟು ಕೊಡುವಂತೆಯೂ ಆಗ್ರಹಿಸಿದರು. ಕ್ವಿನಾನ್ಸ್‌ನ ಪ್ರಬಂಧ ಕಂಡದ್ದೇ ಹಾರ್ವರ್ಡ್ ವಿವಿಯ ಎಲ್ಲರೂ ಬೆರಗಾದರು. ಆತನಿಗೆ ರತ್ನಗಂಬಳಿಯ ಸ್ವಾಗತ ಕೊಟ್ಟರು. ಕೆಲವೇ ವರ್ಷಗಳ ಹಿಂದೆ ಕ್ವಿನಾನ್ಸ್‌ನಿಂದ ಜೀತ ಮಾಡಿಸಿಕೊಂಡಿದ್ದ ಅಮೆರಿಕ ಸರಕಾರ, ತಾನೇ ಮುಂದಾಗಿ ಅವನಿಗೆ ಅಮೆರಿಕನ್ ಪೌರತ್ವ ನೀಡಿತು. ಸ್ಕಾಲರ್‌ಶಿಪ್ ನೀಡಿತು. ವಾಸಕ್ಕೆ ಮನೆ ಕೊಟ್ಟಿತು. ಷರತ್ತಿಲ್ಲದೆ ಸಾವಿರಾರು ಡಾಲರ್ ಸಾಲ ನೀಡಿತು.

ಹಳೆಯ ಗಾಯ, ಹಳೆಯ ಅವಮಾನ- ಈ ಎರಡನ್ನೂ ನೆನಪಿಟ್ಟುಕೊಂಡೇ ಕ್ವಿನಾನ್ಸ್ ಓದು ಮುಂದುವರಿಸಿದ. ಈ ಅಮೆರಿಕನ್ನರಿಂದ ಗೌರವ ಪಡೆಯಲೇಬೇಕು ಎಂಬ ಹಠದಿಂದಲೇ ಅಧ್ಯಯನಕ್ಕೆ ತೊಡಗಿಸಿಕೊಂಡ. ಕಡೆಗೂ ಅವನ ಛಲವೇ ಗೆದ್ದಿತು. ನರರೋಗ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ಕ್ವಿನಾನ್ಸ್ ನಂತರದ ಎರಡೇ ವರ್ಷದಲ್ಲಿ ಅಮೆರಿಕದ ಅತ್ಯುತ್ತಮ ಮೆದುಳು ಶಸ್ತ್ರ ಚಿಕಿತ್ಸಾ ತಜ್ಞ' ಎಂದು ಹೆಸರು ಮಾಡಿದ.

***
ಈಗ, ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ ಜಾನ್ಸ್‌ಹಾಫ್‌ಕಿನ್ಸ್ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದಾನೆ ಕ್ವಿನಾನ್ಸ್. ಮೆದುಳು ಕ್ಯಾನ್ಸರ್‌ಗೆ ತುತ್ತಾದವರನ್ನು ಬದುಕಿಸುವ ಮಹಾವೈದ್ಯ ಎಂದೇ ಅವನಿಗೆ ಹೆಸರಿದೆ. ಬದುಕುವುದೇ ಇಲ್ಲ ಎಂಬ ಹಂತಕ್ಕೆ ಹೋಗಿದ್ದ ರೋಗಿಗಳೆಲ್ಲ ಕ್ವಿನಾನ್ಸ್‌ನ ಕೈ ಚಳಕದಿಂದ ಹೊಸ ಬದುಕು ಕಂಡಿದ್ದಾರೆ. ಅಮೆರಿಕ ಸರಕಾರ, ಅವನಿಗೆ ಎಲ್ಲ ಅತ್ಯುನ್ನತ ಪ್ರಶಸ್ತಿಗಳನ್ನೂ ನೀಡಿ ಗೌರವಿಸಿದೆ. ಆ ಮೂಲಕ ತನ್ನ ಖ್ಯಾತಿಯನ್ನೂ ಹೆಚ್ಚಿಸಿಕೊಂಡಿದೆ.

ಇವತ್ತು, ಖ್ಯಾತಿಯ ಗೌರಿಶಂಕರದಲ್ಲಿ ಕುಳಿತಿದ್ದರೂ 40ರ ಹರೆಯದ ಕ್ವಿನಾನ್ಸ್ ಬದಲಾಗಿಲ್ಲ. ಮೈಮರೆತಿಲ್ಲ. ಅಹಮಿಕೆಗೆ ಬಲಿಯಾಗಿಲ್ಲ. ಆತ ಹೇಳುತ್ತಾನೆ: ಒಂದು ಕಾಲದಲ್ಲಿ ಇದೇ ಅಮೆರಿಕದಲ್ಲಿ ಭಿಕ್ಷುಕನಂತೆ ಬದುಕಿದೆ. ಈ ಊರಲ್ಲಿ ತಲೆಎತ್ತಿಕೊಂಡು, ಅಮೆರಿಕನ್ನರಿಗೆ ಸರಿಸಮನಾಗಿ ಬದುಕಬೇಕೆಂಬ ಆಸೆಯಿತ್ತು. ಅದೀಗ ನನಸಾಗಿದೆ. ಅಮೆರಿಕದ ಹುಡುಗಿಯನ್ನೇ ಮದುವೆಯಾಗಿದ್ದೇನೆ. ನನಗೆ ಭವಿಷ್ಯದಲ್ಲಿ ನಂಬಿಕೆಯಿಲ್ಲ. ಇವತ್ತೇ ಕಡೆಯ ದಿನ ಅಂದುಕೊಂಡೇ ಕೆಲಸ ಶುರುಮಾಡ್ತೀನಿ. ಮೆದುಳಿನ ಶಸ್ತ್ರಚಿಕಿತ್ಸೆ ಅಂದರೆ ಸಾವಿನೊಂದಿಗೆ ಸರಸ ಇದ್ದಂತೆ. ಅದು ದೇವರ ಜತೆಗಿನ ಹೋರಾಟ. ನನ್ನ ಕೈ ಚಳಕದ ಸತ್ವ ಪರೀಕ್ಷೆ. ಅದರಲ್ಲಿ ಗೆಲ್ಲಲೇಬೇಕು ಅಂದುಕೊಂಡೇ ಕೆಲಸ ಶುರು ಮಾಡ್ತೀನಿ. ಜೀಸಸ್, ನಿನ್ನ ವಿರುದ್ಧವೇ ಹೋರಾಡ್ತಾ ಇದೀನಿ. ನನಗೆ ಗೆಲುವಾಗುವಂತೆ ಆಶೀರ್ವದಿಸು ಎಂದು ಪ್ರಾರ್ಥಿಸಿದ ನಂತರವೇ ಆಪರೇಷನ್ ಥಿಯೇಟರಿಗೆ ನಡೆದುಹೋಗ್ತೀನಿ. ಮುದ್ದೆ ಮುದ್ದೆಯಂಥ, ಅಮೀಬಾದ ಚಿತ್ರದಂಥ ಮೆದುಳನ್ನು ಕಂಡಾಗ, ಅದರಲ್ಲಿ ಅತಿ ಸೂಕ್ಷ್ಮ ಭಾಗವೊಂದನ್ನು ಕತ್ತರಿಸಿ ತೆಗೆಯಬೇಕಾಗಿ ಬಂದಾಗ ನನಗೂ ಜೀವ ಝಲ್ ಅನ್ನುತ್ತೆ ನಿಜ. ಆದರೆ, ಆಗೆಲ್ಲ ನನಗೆ ನಾನೇ ಧೈರ್ಯ ಹೇಳಿಕೊಂಡು ಕೆಲಸ ಮಾಡ್ತೀನಿ. ಅದೃಷ್ಟ, ಸ್ವಪ್ರಯತ್ನ, ರೋಗಿಯ ಮನೋಸ್ಥೈರ್ಯ ಹಾಗೂ ಜೀಸಸ್‌ನ ಕರುಣೆಯಿಂದ ಪ್ರತಿ ಸಂದರ್ಭದಲ್ಲೂ ನಾನು ಗೆದ್ದಿದೀನಿ ಎನ್ನುತ್ತಾನೆ ಕ್ವಿನಾನ್ಸ್.

****
ಒಂದು ಕಾಲದಲ್ಲಿ ನಿನ್ನ ಮೆದುಳೇ ಖಾಲಿ ಕಣೋ ಎಂದು ಅಣಕಿಸಿದ್ದ ಅಮೆರಿಕದ ಜನರಿಂದಲೇ ಶ್ರೇಷ್ಠ ಮೆದುಳು ಶಸ್ತ್ರಚಿಕಿತ್ಸಾ ತಜ್ಞ ಎಂದು ಕರೆಸಿಕೊಂಡನಲ್ಲ ಕ್ವಿನಾನ್ಸ್? ಅವನಿಗೆ ಲಾಲ್‌ಸಲಾಮ್ ಎನ್ನುವ ಆಸೆಯಾಗುತ್ತದೆ. ಹಿಂದೆಯೇ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಚೀರಿ ಹೇಳಬೇಕೆನಿಸುತ್ತದೆ. ಅಲ್ಲವೇ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+