ಕಾಲಲ್ಲಿ ಬರೆದ ಚಿತ್ರಕ್ಕೆ ಲಕ್ಷ ಲಕ್ಷ!

ದುರಂತವೆಂದರೆ, ಹೆಚ್ಚಿನ ಸಂದರ್ಭದಲ್ಲಿ ಯಾವ ತಾಯ್ತಂದೆಯೂ ಆ ಅಂಗವಿಕಲ ಮಗುವಿನಲ್ಲಿ ಆತ್ಮವಿಶ್ವಾಸ ಬೆಳೆಸುವ ಗೋಜಿಗೇ ಹೋಗಿರುವುದಿಲ್ಲ. ಹುಟ್ಟಿನಿಂದಲೇ ಬರುವ ಅಂಗವೈಕಲ್ಯಗಳು ಹರಕೆ ಕಟ್ಟಿಕೊಂಡರೆ, ಅಥವಾ ಹೋಮ ಮಾಡಿಸಿದರೆ ಸರಿ ಹೋಗುವುದಿಲ್ಲ ಎಂಬ ಪ್ರಾಥಮಿಕ ಅರಿವು ಕೂಡ ಬಹಳ ಜನಕ್ಕೆ ಇರುವುದಿಲ್ಲ. ಪರಿಣಾಮ, ಅಂಗವಿಕಲ ಮಗು ಹುಟ್ಟಿದೆ ಎಂದು ಗೊತ್ತಾದ ನಂತರ -ದೇವರು, ಜಪ, ತಪ, ಪೂಜೆಯ ಕಡೆಗೇ ಹೆಚ್ಚಿನವರು ವಾಲಿಕೊಳ್ಳುತ್ತಾರೆ. ಬಂಧುಗಳು, ಗೆಳೆಯರ ಮುಂದೆ ತಮ್ಮ ಮಗುವಿನ ಅವಸ್ಥೆಯ ಕುರಿತು ಸಂಕಟದಿಂದ ಮಾತಾಡುತ್ತಾರೆ. ಹತ್ತು ಮಂದಿಯ ಅನುಕಂಪ ಬಯಸುತ್ತಾರೆ. ನಂತರ, ಕೈ-ಕಾಲು ಇಲ್ಲದ ಮಕ್ಕಳಿಂದ ಏನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಾವೇ ಹೇಳಿಕೊಳ್ಳುತ್ತಾರೆ. ಆ ಮಗುವನ್ನು ಬಂಧುಗಳಿಂದ, ಗೆಳೆಯರಿಂದ, ಪರಿಚಿತರಿಂದ ಹಾಗೂ ಶಿಕ್ಷಣದಿಂದ ದೂರವೇ ಉಳಿಸುತ್ತಾರೆ!
ಮತ್ತು, ಹೀಗೆ ಮಾಡುವ ಮೂಲಕ ನನ್ನಿಂದ ಯಾವ ಸಾಧನೆಯೂ ಸಾಧ್ಯವಿಲ್ಲ ಎಂಬ ಭಾವನೆ ಅಂಗವಿಕಲ ಮಗುವಿಗೂ ಬಂದುಬಿಡುವಂತೆ ಮಾಡಿಬಿಡುತ್ತಾರೆ! ಪರಿಣಾಮ ಏನಾಗುತ್ತದೆ ಅಂದರೆ- ಅದೆಷ್ಟೋ ಅಂಗವಿಕಲ ಮಕ್ಕಳ ಸುಪ್ತ ಪ್ರತಿಭೆಯ ಪರಿಚಯ ಹೊರಜಗತ್ತಿಗೆ ಆಗುವುದೇ ಇಲ್ಲ! ಅಥವಾ ಒಂದು ವೇಳೆ ಒಂದು ರಾಜ್ಯವೇ ಮೆಚ್ಚುವಂಥ ಸಾಧನೆಯನ್ನು ಅಂಗವಿಕಲನೊಬ್ಬ ಮಾಡಿದರೂ ಅದನ್ನು ತುಂಬ ಸಂಭ್ರಮದಿಂದ ಒಪ್ಪುವಂಥ ಮನಸುಗಳು ನಮ್ಮ ಮಧ್ಯೆಯೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಈ ಕಾರಣದಿಂದಲೇ ಹುಟ್ಟು ಅಂಧನಾಗಿದ್ದರೂ ಭರತನಾಟ್ಯದ ದೊರೆ ಅನ್ನಿಸಿಕೊಂಡಿರುವ ಬುಸೇಗೌಡ, ಎರಡೂ ಕಾಲಿಲ್ಲದೆಯೂ ಮಹತ್ವದ್ದನ್ನು ಸಾಧಿಸಿರುವ ನಾಗನರೇಶ್ ಮುಂತಾದವರ ಬಗ್ಗೆ ನೂರು ಮಂದಿಯಲ್ಲಿ ವಿಚಾರಿಸಿದರೂ ಎರಡು ಪುಟಗಳ ಮಾಹಿತಿ ಸಿಗುವುದಿಲ್ಲ.
ಯಾರು ಏನೇ ಹೇಳಲಿ; ಈ ವಿಷಯದಲ್ಲಿ ವಿದೇಶಿಯರು ಅದರಲ್ಲೂ ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯದ ಜನರನ್ನು ನೋಡಿ ಕಲಿಯಬೇಕು. ಅಂಗವಿಕಲನೊಬ್ಬ ಮಹತ್ವದ ಸಾಧನೆಗೆ ತೊಡಗಿದ್ದಾನೆ ಎಂದು ಗೊತ್ತಾದರೆ ಸಾಕು, ಆ ದೇಶಗಳಲ್ಲಿ ಅವನ ಪರವಾಗಿ ಪ್ರಚಾರ ಮಾಡುವ ಜನ ಹುಟ್ಟಿಕೊಳ್ಳುತ್ತಾರೆ. ಅವನ ಚಿಕ್ಕದೊಂದು ಗೆಲುವನ್ನೂ ಮಹತ್ಸಾಧನೆ ಎಂದು ಬಣ್ಣಿಸಲು ಪತ್ರಿಕೆಗಳು ಪಣತೊಡುತ್ತವೆ. ವಿಕಲಾಂಗನೊಬ್ಬ ತನ್ನ ಅಂಗವೈಕಲ್ಯವನ್ನು ಮೆಟ್ಟಿ ನಿಂತದ್ದು ಹೇಗೆ? ಬದುಕಿನ ಹಾದಿನಲ್ಲಿ ಅವನಿಗೆ ಎದುರಾದ ಸಂಕಷ್ಟಗಳು ಎಂಥವು? ಈ ಹೋರಾಟದಲ್ಲಿ ಅವನ ಬೆನ್ನಿಗೆ ನಿಂತವರು ಯಾರು? ಎಂಬಿತ್ಯಾದಿ ವಿವರಗಳೆಲ್ಲ ಪತ್ರಿಕೆ ಹಾಗೂ ವೆಬ್ಸೈಟ್ಗಳಲ್ಲಿ ಮೇಲಿಂದ ಮೇಲೆ ಪ್ರಕಟವಾಗುತ್ತಲೇ ಇರುತ್ತವೆ.
ಪರಿಣಾಮ ಏನಾಗುತ್ತದೆ ಎಂದರೆ, ನಾನು ಅಂಗವಿಕಲ ಎಂಬ ಭಾವನೆ ಅಂಗವಿಕಲ ವ್ಯಕ್ತಿಗೆ ಬರುವುದೇ ಇಲ್ಲ. ಬದಲಿಗೆ, ನಾನು ವಿಶೇಷ ಸಾಧನೆ ಮಾಡಲಿಕ್ಕೆಂದೇ ಹುಟ್ಟಿದವನು. ನಾನು ಯಾರಿಗೇನು ಕಡಿಮೆ ಎಂಬ ಭಾವವೇ ಅಂಗವಿಕಲ ವ್ಯಕ್ತಿಗಳ ರಕ್ತದ ಕಣಕಣದಲ್ಲಿ ತುಂಬಿ ಹೋಗುತ್ತದೆ.
ಮುಂದೆ ಓದಿ : ಕಾಲಿಲ್ಲದ ಕಲಾವಿದನ ಚಿತ್ರಕಾವ್ಯಕ್ಕೆ ನಮಸ್ಕಾರ »
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications