ಆ ಬಡ್ಡೀಮಗಂದು ಧೈರ್ಯ ಅಂತಾರಲ್ಲ?

ಪ್ರೈವೇಟ್ ನರ್ಸಿಂಗ್ ಹೋಂಗಳಲ್ಲಿ ಮಾತ್ರ ಚೆನ್ನಾಗಿ ನೋಡ್ತಾರೆ ಎಂಬ ನಂಬಿಕೆ ನಮ್ಮಲ್ಲಿ ಹಲವರಿಗಿದೆ. ರೇಖಮ್ಮನಿಗೂ ಅಂಥದೇ ಮನೋಭಾವ ಇತ್ತಂತೆ. ಹಾಗೆಂದೇ ಅವರು ಅಶೋಕ್ ಜತೆ ಒಂದೊಂದೇ ನರ್ಸಿಂಗ್ ಹೋಂಗೆ ಹೋಗಿಬಂದರು. ಅಲ್ಲಿನ ಜನ ಯಾವ್ಯಾವುದೋ ಚಿಕಿತ್ಸೆಯ ನೆಪದಲ್ಲಿ ಅಲ್ಲಿಂದಿಲ್ಲಿಗೆ-ಇಲ್ಲಿಂದಲ್ಲಿಗೆ ಲೆಫ್ಟ್-ರೈಟ್ ಮಾಡಿಸಿದರು. ನಾಲ್ಕೈದು ಬಾರಿ ಸುತ್ತಾಡುವ ವೇಳೆಗೆ ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಸುಲಿಗೆ ಡಾಕ್ಟರ್ಗಳ ಚೈನ್ಲಿಂಕ್ ವ್ಯವಸ್ಥೆ ಇದೆ ಎಂಬುದು ರೇಖಾ-ಅಶೋಕ್ ಅರಿವಿಗೆ ಬಂತು. ಮುಂದೇನು ಮಾಡುವುದು ಎಂದು ಯೋಚಿಸುತ್ತಿದ್ದಾಗ ಮತ್ತದೇ ಪ್ರತಿಭಾ ನಂದಕುಮಾರ್ ಫೋನ್ ಮಾಡಿ ಹೇಳಿದರಂತೆ : ರೇಖಮ್ಮ, ಸುಮ್ನೆ ಯಾವ್ಯಾವುದೋ ಆಸ್ಪತ್ರೆ ಸುತ್ತಬೇಡ. ಮೊದಲು ಡಾ. ಆಶಾ ಬೆನಕಪ್ಪ ಅವರನ್ನು ಭೇಟಿ ಮಾಡು'.
ಬೆಂಗಳೂರಿನ ಖ್ಯಾತ ಶಿಶುತಜ್ಞೆ ಡಾ. ಆಶಾ ಬೆನಕಪ್ಪ. ಮಮತೆ' ಎಂಬ ಮಾತಿಗೆ ಇನ್ನೊಂದು ಉದಾಹರಣೆಯಂತಿರುವ ಈಕೆ ಅದೆಷ್ಟೋ ಮಂದಿಗೆ ಅಕ್ಕರೆಯ ಅಮ್ಮ. ಎಂಥ ಸಂಕಟದ ಸಂದರ್ಭದಲ್ಲೂ ಧೈರ್ಯ ಹೇಳುವ ಅಕ್ಕ. ನಾನಿದ್ದೀನಿ, ಹೆದರಬೇಡ ಎಂದು ಹೆಗಲು ತಟ್ಟುವ ಆತ್ಮಬಂಧು. ರೇಖಾರಾಣಿಯ ಫೋನ್ ಬರುವ ವೇಳೆಗೆ ಅವರಿವರಿಂದ ವಿಷಯ ತಿಳಿದಿದ್ದ ಆಶಾ ಬೆನಕಪ್ಪ ನಿರ್ಧಾರದ ದನಿಯಲ್ಲಿ ಹೇಳಿದರಂತೆ : ನಾಡಿದ್ದು ಅಶೋಕ್ ಕಶ್ಯಪ್ನ ಕರ್ಕೊಂಡು ಕಿದ್ವಾಯಿ ಆಸ್ಪತ್ರೆಗೆ ಬಾ. ಅಲ್ಲಿ ನನ್ನ ಪರಿಚಯದ ವೈದ್ಯರಿದ್ದಾರೆ...'
***
ಯಾವುದೋ ಒಂದು ಕತೆಯಲಿ ಹೀಗಾಗುತ್ತೆ: ಅವನೊಬ್ಬ ಅಪಾರ ದೈವಭಕ್ತ. ಆದರೆ ತುಂಬ ಬಡವ. ದೇವರ ದರ್ಶನಕ್ಕೆಂದು ಅದೊಮ್ಮೆ ಮಟಮಟ ಮಧ್ಯಾಹ್ನ ದೇವಸ್ಥಾನಕ್ಕೆ ಬರುತ್ತಾನೆ. ಬಿಸಿಲಲ್ಲಿ ನಡೆದೂ ನಡೆದೂ ಕಾಲು ಚುರುಗುಟ್ಟಿರುತ್ತದೆ. ಆಗಲೇ ಅವನು ದೇವರನ್ನು ಕೇಳುತ್ತಾನೆ. ಭಗವಂತಾ, ನಿನ್ನನ್ನು ನೋಡಲೆಂದು ಅದೆಷ್ಟೋ ಮೈಲಿ ದೂರದಿಂದ ನಡೆದು ಬಂದೆ ನಾನು. ನನಗೆ ಒಂದು ಜತೆ ಚಪ್ಪಲಿಗೆ ಆಗುವಷ್ಟು ಹಣವನ್ನೂ ನೀನು ದಯಪಾಲಿಸಲಿಲ್ಲವಲ್ಲ? ನೀನು ಯಾವ ಸೀಮೆಯ ದೇವರು? ಸಣ್ಣದೊಂದು ಸಹಾಯವನ್ನೂ ಮಾಡದ ನಿನ್ನನ್ನು ಅನಾಥರಕ್ಷಕ ಎಂದು ಯಾಕಾದ್ರೂ ಕರೆಯಬೇಕು?
ಈ ಭಕ್ತ ಸಿಡಿಮಿಡಿಯಿಂದ ಹೀಗೆ ಕೇಳಿ ನಾಲ್ಕು ನಿಮಿಷ ಕಳೆದಿರುವುದಿಲ್ಲ. ಆಗಲೇ ದೇವಾಲಯದ ಮುಂದೆ ಒಬ್ಬ ಅಂಗವಿಕಲ ತೆವಳಿಕೊಂಡು ಬರುತ್ತಾನೆ. ಅವನಿಗೆ ಎರಡೂ ಕಾಲುಗಳಿರುವುದಿಲ್ಲ. ಹಾಗಿದ್ದರೂ ಅವನು ದೇವರಿಗೆ ಭಕ್ತಿಯಿಂದ ನಮಸ್ಕರಿಸಿ ಹೋಗುತ್ತಾನೆ. ಇದನ್ನು ಕಂಡ ಭಕ್ತ- ದೇವಾ, ನನ್ನ ಪ್ರಶ್ನೆಗೆ ಎಂಥ ಉತ್ತರ ಕೊಟ್ಟೆಯಲ್ಲ ನೀನು? ನನಗಾದರೋ ಕಾಲುಗಳಿಗೆ ಚಪ್ಪಲಿ ಇಲ್ಲ, ಅಷ್ಟೇ. ಆದರೆ, ಆ ನತದೃಷ್ಟನಿಗೆ ಕಾಲುಗಳೇ ಇಲ್ಲ. ಅವನಿಗಿಂತ ನನ್ನ ಪರಿಸ್ಥಿತಿ ಸಾವಿರಪಟ್ಟು ಚೆನ್ನಾಗಿದೆ. ನನ್ನ ಕಣ್ತೆರೆಸಿದ್ದಕ್ಕೆ ನಿನಗೆ ಋಣಿ' ಎನ್ನುತ್ತಾನೆ.
ಮುಂದೆ ಓದಿ : ಪ್ರತಿ ಕ್ಷಣವನ್ನೂ ಸಂಭ್ರಮದಿಂದಲೇ ಕಳೆಯಬೇಕು »
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications