ಪ್ರತಿ ಕ್ಷಣವನ್ನೂ ಸಂಭ್ರಮದಿಂದಲೇ ಕಳೆಯಬೇಕು

ಹಾಲುಗಲ್ಲದ ಹಸುಳೆಗೂ ಕ್ಯಾನ್ಸರ್ ಎಂಬ ಮಾತು ಕೇಳಿ ಅಶೋಕ್-ರೇಖಾ ಮಾತೇ ಹೊರಡದೆ ನಿಂತುಬಿಟ್ಟಿದ್ದಾರೆ. ಅರ್ಧ ಗಂಟೆಯ ನಂತರ ಚೇತರಿಸಿಕೊಂಡ ಅಶೋಕ್, ಬಾಳಗೆಳತಿಯ ಕೈ ಹಿಡಿದು ಹೇಳಿದರಂತೆ : ನೋಡು ರೇಖಾ, ಆ ಮಗೂಗೆ ಹೋಲಿಸಿದರೆ ನಾನು ತುಂಬ ಪುಣ್ಯವಂತ. ಯಾಕೆಂದರೆ ನಾನು ಭರ್ತಿ 40 ವರ್ಷ ಬದುಕು ನೋಡಿದೀನಿ. ನನಗಿಂತ ನೊಂದವರು ತುಂಬಾ ಜನ ಇದ್ದಾರೆ ಅಂಥ ಅರ್ಥವಾಯ್ತು ನಂಗೆ. ಈಗಿಂದ ನನ್ನ ಯುದ್ಧ ನಾನೇ ಮಾಡ್ತೇನೆ. ಸಾರಥಿಯ ಥರಾ ನೀನು ನನ್ನೊಂದಿಗಿರು. ಆಲ್ ದಿ ಬೆಸ್ಟ್ ಅಂತ ಒಂದು ಮಾತು ಹೇಳು, ಪ್ಲೀಸ್...'
***
ಪ್ರಿಯ ಓದುಗರೆ, ಈಗ ಏನಾಗಿದೆ ಅಂದರೆ- ಒಂದೊಂದು ಕ್ಷಣವನ್ನೂ ಸಂಭ್ರಮದಿಂದಲೇ ಕಳೆಯಬೇಕು ಎಂಬ ಛಲದಿಂದಲೇ ಅಶೋಕ್ ಬದುಕುತ್ತಿದ್ದಾರೆ. ಅವರಿಗೆ ಬ್ಲಡ್ ಕ್ಯಾನ್ಸರ್ ಇದೆ ಎಂದು ಗೊತ್ತಾದ ನಂತರ ಗಾಂಧಿನಗರದ ಜನರೂ ಸ್ವಲ್ಪ ಬದಲಾಗಿದ್ದಾರೆ. ಕರೆದು ಕೆಲಸ ಕೊಡುತ್ತಿದ್ದಾರೆ. ಒಂದಷ್ಟು ವಿಶೇಷ ಅನುಕೂಲಗಳನ್ನೂ ಒದಗಿಸಿದ್ದಾರೆ. ಸಂಭಾವನೆಯ ವಿಷಯದಲ್ಲೂ ಚೆನ್ನಾಗಿ ನೋಡಿಕೊಂಡಿದ್ದಾರೆ. ಕಿದ್ವಾಯಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಗೋವಿಂದಬಾಬು, ಸಾಕ್ಷಾತ್ ದೇವರಿಗಿಂತ ಹೆಚ್ಚಾಗಿ ಅಶೋಕ್ ರಕ್ಷಣೆಗೆ ನಿಂತುಬಿಟ್ಟಿದ್ದಾರೆ. ಊರ ತುಂಬಾ ಇರುವ ಗೆಳೆಯರು, ಬಂಧುಗಳು ರೇಖಮ್ಮನಿಗೆ ಮನೋಬೆಂಬಲ ನೀಡಿದ್ದಾರೆ. ಹೊಸ ಧಾರಾವಾಹಿ ಮಾಡಿಕೊಡಲು ರೇಖಾ-ಅಶೋಕ್ಗೆ ಚಾನೆಲ್ ಒಂದರಿಂದ ಆಹ್ವಾನವೂ ಬಂದಿದೆ.
ಅಂದ ಹಾಗೆ, ಈಗಲೂ ಅಶೋಕ್ಗೆ ಕ್ಯಾನ್ಸರ್ ಇದೆ ನಿಜ. ಆದರೆ ಆತಂಕಕ್ಕೆ ಕಾರಣವಿಲ್ಲ. ಪ್ರತಿದಿನವೂ ಒಂದೊಂದು ಮಾತ್ರೆ ನುಂಗುತ್ತಲೇ (ಒಂದು ಮಾತ್ರೆಯ ಬೆಲೆ 4000 ರೂ. ಒಂದು ತಿಂಗಳಿಗೆ, ಕೇವಲ ಮಾತ್ರೆಗಳಿಗೆ ಅಶೋಕ್-ರೇಖಾ ದಂಪತಿ ಖರ್ಚು ಮಾಡುತ್ತಿರುವ ಹಣ 1 ಲಕ್ಷ 20 ಸಾವಿರ ರೂ! ಅವರು ಬದುಕಿನುದ್ದಕ್ಕೂ ಈ ದುಬಾರಿ ಮಾತ್ರೆಯನ್ನು ನುಂಗುತ್ತಲೇ ಇರಬೇಕು) ಅಶೋಕ್ ಸಂಭ್ರಮದಿಂದ ಬದುಕುತ್ತಿದ್ದಾರೆ. ಕ್ಯಾನ್ಸರ್ ಇದೆ ಅಂದಾಕ್ಷಣ ಹೆದರಬಾರದು. ಹೆದರಿಕೆ ಮನುಷ್ಯನ ಅತಿ ದೊಡ್ಡ ಶತ್ರು. ದುಡ್ಡನ್ನು ಬೇಕಾದ್ರೆ ಸಾಲ ತರಬಹುದು. ಆದರೆ ಧೈರ್ಯವನ್ನು ಸಾಲ ತರೋಕಾಗಲ್ಲ. ಹಾಗಾಗಿ ಯಾವತ್ತೂ ಯಾರೂ ಧೈರ್ಯ ಕಳ್ಕೋಬೇಡಿ ಎಂಬುದಷ್ಟೇ ನನ್ನ ಮನವಿ. ಈವರೆಗೂ ನನ್ನ ಆರೋಗ್ಯದ ವಿಷಯದಲ್ಲಿ ತುಂಬ ಕಾಳಜಿ ತೋರಿದ ಎಲ್ಲ ಸಹೃದಯೀ ಬಂಧುಗಳಿಗೂ ಋಣಿ ಅನ್ನುತ್ತಾರೆ ಅಶೋಕ್.
ಈಗ ಯುದ್ಧ ಗೆದ್ದ ಸಂಭ್ರಮದಲ್ಲಿರೋದು ನಮ್ಮ ರೇಖಮ್ಮ. ತಾನೇ ಸಂಕಟದ ಕುಲುಮೆಯಲ್ಲಿ ಬೇಯುತ್ತಿದ್ದರೂ, ಯಾರಿಗಾದ್ರೂ ತೊಂದರೆ ಅಂದರೆ ಏನಾದ್ರೂ ಹೆಲ್ಪ್ ಬೇಕಾ ಎಂದು ಕಳಕಳಿಯಿಂದ ಕೇಳುವ ತಾಯಿ ಮನಸ್ಸು ಆಕೆಯದು. ಯಮನೊಂದಿಗೆ ದಿನವೂ ಮುಖಾಮುಖಿಯಾಗುತ್ತಿದ್ದರೂ ಆಕೆ ದುರ್ಯೋಧನ ಛಲದಿಂದಲೇ ಬದುಕುತ್ತಿದ್ದಾರೆ. ಅವರಿಗೆ ಪ್ರೀತಿ, ಅಭಿನಂದನೆ, ನಮಸ್ಕಾರ.
ಅಂದಹಾಗೆ 98456 90927 ನಂಬರಿನಲ್ಲಿ ನಮ್ಮ ರೇಖಮ್ಮ ಸಿಕ್ಕುತ್ತಾಳೆ- ಮಾತಿಗೆ, ಹರಟೆಗೆ, ಕಷ್ಟ ಸುಖ ಹಂಚಿಕೊಳ್ಳಲಿಕ್ಕೆ. ಒಮ್ಮೆ ಮಾತಾಡಿ...
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications