Get Updates
Get notified of breaking news, exclusive insights, and must-see stories!

ಪ್ರತಿ ಕ್ಷಣವನ್ನೂ ಸಂಭ್ರಮದಿಂದಲೇ ಕಳೆಯಬೇಕು

Ashok Kashyap, Cinematographer
ಇಂಥದೇ ಅನುಭವ ಅಶೋಕ್ ಕಶ್ಯಪ್‌ಗೂ ಆದದ್ದು ಕಿದ್ವಾಯಿ ಆಸ್ಪತ್ರೆಯಲ್ಲಿ. ಏನಾಯಿತೆಂದರೆ, ಅದೊಂದು ದಿನ ರೇಖಾ-ಅಶೋಕ್ ಚೆಕಪ್‌ಗೆ ನಿಂತಿದ್ದ ಸಾಲಿನಲ್ಲಿಯೇ ಗಂಡ-ಹೆಂಡತಿ ಹಾಗೂ ಅವರ ಪುಟಾಣಿ ಮಗಳೂ ಇದ್ದರಂತೆ. ಆ ಮಗುವಿಗೆ ಬರೀ ಮೂರು ವರ್ಷ. ಈ ಗಂಡ-ಹೆಂಡಿರಲ್ಲಿ ಒಬ್ಬರಿಗೆ ಕ್ಯಾನ್ಸರ್ ಇರಬೇಕು. ಪಾಪ ಛೇ, ಎಂದುಕೊಂಡೇ ಇವರಿಬ್ಬರೂ ಹತ್ತಿರ ಹೋಗಿ- ನಿಮ್ಮಿಬ್ಬರಲ್ಲಿ ಯಾರಿಗೆ ಕಾಯಿಲೆ' ಎಂದು ಕೇಳಿದ್ದಾರೆ. ಆಗ ಆ ದಂಪತಿ ಕಂಬನಿ ಸುರಿಸುತ್ತಾ- ಆ ದೇವರು ನಮ್ಮ ಕಂದಮ್ಮನಿಗೇ ಬ್ಲಡ್ ಕ್ಯಾನ್ಸರ್ ಕೊಟ್ಟಿದ್ದಾನೆ. ಇನ್ನು ಆರೇ ತಿಂಗಳು ಬದುಕೋದು ಅಂತ ಡಾಕ್ಟರ್ ಹೇಳಿಬಿಟ್ಟಿದ್ದಾರೆ. ಆದ್ರೂ ಆಸೆ ನೋಡಿ, ಹಾಗಾಗಿ ಚಿಕಿತ್ಸೆಗೆ ಬಂದಿದೀವಿ. ಈ ಬಂಗಾರದ ಗೊಂಬೆಯಂಥ ಮಗೂನ ಮುಂದಿನ ಆರು ತಿಂಗಳು ತೃಪ್ತಿಯಾಗುವಂತೆ ನೋಡಿಬಿಡ್ತೀವಿ' ಅಂದರಂತೆ. ಅವರು ಹಾಗೆಲ್ಲ ಮಾತಾಡುವಾಗ, ಆ ಕಂದಮ್ಮ ಇವರನ್ನೇ ನೋಡುತ್ತಾ ಸಂಭ್ರಮದಿಂದ ಕಿಲಕಿಲನೆ ನಕ್ಕಿತಂತೆ.

ಹಾಲುಗಲ್ಲದ ಹಸುಳೆಗೂ ಕ್ಯಾನ್ಸರ್ ಎಂಬ ಮಾತು ಕೇಳಿ ಅಶೋಕ್-ರೇಖಾ ಮಾತೇ ಹೊರಡದೆ ನಿಂತುಬಿಟ್ಟಿದ್ದಾರೆ. ಅರ್ಧ ಗಂಟೆಯ ನಂತರ ಚೇತರಿಸಿಕೊಂಡ ಅಶೋಕ್, ಬಾಳಗೆಳತಿಯ ಕೈ ಹಿಡಿದು ಹೇಳಿದರಂತೆ : ನೋಡು ರೇಖಾ, ಆ ಮಗೂಗೆ ಹೋಲಿಸಿದರೆ ನಾನು ತುಂಬ ಪುಣ್ಯವಂತ. ಯಾಕೆಂದರೆ ನಾನು ಭರ್ತಿ 40 ವರ್ಷ ಬದುಕು ನೋಡಿದೀನಿ. ನನಗಿಂತ ನೊಂದವರು ತುಂಬಾ ಜನ ಇದ್ದಾರೆ ಅಂಥ ಅರ್ಥವಾಯ್ತು ನಂಗೆ. ಈಗಿಂದ ನನ್ನ ಯುದ್ಧ ನಾನೇ ಮಾಡ್ತೇನೆ. ಸಾರಥಿಯ ಥರಾ ನೀನು ನನ್ನೊಂದಿಗಿರು. ಆಲ್ ದಿ ಬೆಸ್ಟ್ ಅಂತ ಒಂದು ಮಾತು ಹೇಳು, ಪ್ಲೀಸ್...'

***

ಪ್ರಿಯ ಓದುಗರೆ, ಈಗ ಏನಾಗಿದೆ ಅಂದರೆ- ಒಂದೊಂದು ಕ್ಷಣವನ್ನೂ ಸಂಭ್ರಮದಿಂದಲೇ ಕಳೆಯಬೇಕು ಎಂಬ ಛಲದಿಂದಲೇ ಅಶೋಕ್ ಬದುಕುತ್ತಿದ್ದಾರೆ. ಅವರಿಗೆ ಬ್ಲಡ್ ಕ್ಯಾನ್ಸರ್ ಇದೆ ಎಂದು ಗೊತ್ತಾದ ನಂತರ ಗಾಂಧಿನಗರದ ಜನರೂ ಸ್ವಲ್ಪ ಬದಲಾಗಿದ್ದಾರೆ. ಕರೆದು ಕೆಲಸ ಕೊಡುತ್ತಿದ್ದಾರೆ. ಒಂದಷ್ಟು ವಿಶೇಷ ಅನುಕೂಲಗಳನ್ನೂ ಒದಗಿಸಿದ್ದಾರೆ. ಸಂಭಾವನೆಯ ವಿಷಯದಲ್ಲೂ ಚೆನ್ನಾಗಿ ನೋಡಿಕೊಂಡಿದ್ದಾರೆ. ಕಿದ್ವಾಯಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಗೋವಿಂದಬಾಬು, ಸಾಕ್ಷಾತ್ ದೇವರಿಗಿಂತ ಹೆಚ್ಚಾಗಿ ಅಶೋಕ್ ರಕ್ಷಣೆಗೆ ನಿಂತುಬಿಟ್ಟಿದ್ದಾರೆ. ಊರ ತುಂಬಾ ಇರುವ ಗೆಳೆಯರು, ಬಂಧುಗಳು ರೇಖಮ್ಮನಿಗೆ ಮನೋಬೆಂಬಲ ನೀಡಿದ್ದಾರೆ. ಹೊಸ ಧಾರಾವಾಹಿ ಮಾಡಿಕೊಡಲು ರೇಖಾ-ಅಶೋಕ್‌ಗೆ ಚಾನೆಲ್ ಒಂದರಿಂದ ಆಹ್ವಾನವೂ ಬಂದಿದೆ.

ಅಂದ ಹಾಗೆ, ಈಗಲೂ ಅಶೋಕ್‌ಗೆ ಕ್ಯಾನ್ಸರ್ ಇದೆ ನಿಜ. ಆದರೆ ಆತಂಕಕ್ಕೆ ಕಾರಣವಿಲ್ಲ. ಪ್ರತಿದಿನವೂ ಒಂದೊಂದು ಮಾತ್ರೆ ನುಂಗುತ್ತಲೇ (ಒಂದು ಮಾತ್ರೆಯ ಬೆಲೆ 4000 ರೂ. ಒಂದು ತಿಂಗಳಿಗೆ, ಕೇವಲ ಮಾತ್ರೆಗಳಿಗೆ ಅಶೋಕ್-ರೇಖಾ ದಂಪತಿ ಖರ್ಚು ಮಾಡುತ್ತಿರುವ ಹಣ 1 ಲಕ್ಷ 20 ಸಾವಿರ ರೂ! ಅವರು ಬದುಕಿನುದ್ದಕ್ಕೂ ಈ ದುಬಾರಿ ಮಾತ್ರೆಯನ್ನು ನುಂಗುತ್ತಲೇ ಇರಬೇಕು) ಅಶೋಕ್ ಸಂಭ್ರಮದಿಂದ ಬದುಕುತ್ತಿದ್ದಾರೆ. ಕ್ಯಾನ್ಸರ್ ಇದೆ ಅಂದಾಕ್ಷಣ ಹೆದರಬಾರದು. ಹೆದರಿಕೆ ಮನುಷ್ಯನ ಅತಿ ದೊಡ್ಡ ಶತ್ರು. ದುಡ್ಡನ್ನು ಬೇಕಾದ್ರೆ ಸಾಲ ತರಬಹುದು. ಆದರೆ ಧೈರ್ಯವನ್ನು ಸಾಲ ತರೋಕಾಗಲ್ಲ. ಹಾಗಾಗಿ ಯಾವತ್ತೂ ಯಾರೂ ಧೈರ್ಯ ಕಳ್ಕೋಬೇಡಿ ಎಂಬುದಷ್ಟೇ ನನ್ನ ಮನವಿ. ಈವರೆಗೂ ನನ್ನ ಆರೋಗ್ಯದ ವಿಷಯದಲ್ಲಿ ತುಂಬ ಕಾಳಜಿ ತೋರಿದ ಎಲ್ಲ ಸಹೃದಯೀ ಬಂಧುಗಳಿಗೂ ಋಣಿ ಅನ್ನುತ್ತಾರೆ ಅಶೋಕ್.

ಈಗ ಯುದ್ಧ ಗೆದ್ದ ಸಂಭ್ರಮದಲ್ಲಿರೋದು ನಮ್ಮ ರೇಖಮ್ಮ. ತಾನೇ ಸಂಕಟದ ಕುಲುಮೆಯಲ್ಲಿ ಬೇಯುತ್ತಿದ್ದರೂ, ಯಾರಿಗಾದ್ರೂ ತೊಂದರೆ ಅಂದರೆ ಏನಾದ್ರೂ ಹೆಲ್ಪ್ ಬೇಕಾ ಎಂದು ಕಳಕಳಿಯಿಂದ ಕೇಳುವ ತಾಯಿ ಮನಸ್ಸು ಆಕೆಯದು. ಯಮನೊಂದಿಗೆ ದಿನವೂ ಮುಖಾಮುಖಿಯಾಗುತ್ತಿದ್ದರೂ ಆಕೆ ದುರ್ಯೋಧನ ಛಲದಿಂದಲೇ ಬದುಕುತ್ತಿದ್ದಾರೆ. ಅವರಿಗೆ ಪ್ರೀತಿ, ಅಭಿನಂದನೆ, ನಮಸ್ಕಾರ.

ಅಂದಹಾಗೆ 98456 90927 ನಂಬರಿನಲ್ಲಿ ನಮ್ಮ ರೇಖಮ್ಮ ಸಿಕ್ಕುತ್ತಾಳೆ- ಮಾತಿಗೆ, ಹರಟೆಗೆ, ಕಷ್ಟ ಸುಖ ಹಂಚಿಕೊಳ್ಳಲಿಕ್ಕೆ. ಒಮ್ಮೆ ಮಾತಾಡಿ...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+