ಐ ಲವ್ ಯೂ ಅಂತ ಹೇಳಿಬೇಕಿದ್ದರೆ...

ಒಲವೆಂಬುದು ಹೀಗೆ, ಯುಮುನೆಯಂತೆ ಹರಿಯುತ್ತಿದ್ದಾಗಲೇ ಆಕೆ ಮೆಲುವಾಗಿ ಮೈ ನೇಮ್ ಈಸ್ ಗೀತಾಂಜಲಿ?.' ಅಂದಳು. ಮಣಿ ಹಿಯರ್' ಅಂದ ಈ ಭೂಪ. ಆ ನಂತರವೂ ಅವರಿಬ್ಬರೂ ಮಾತೇ ಆಡದೆ ನಿಂತಾಗ ಆ ಅಂಗಡಿಯಲ್ಲಿ ಹಾಡೊಂದು ತೇಲಿಬಂತು! ಹೃದಯದಲಿ ಇದೇನಿದೂ... ನದಿಯೊಂದು ಓಡಿದೇ? ಅಂದಿನಿಂದ ವೀರಮಣಿ ದಿನವೂ ಆ ಮ್ಯೂಸಿಕ್ ಅಂಗಡಿಗೆ ಹೋಗಲು ಶುರುವಿಟ್ಟ. ಪ್ರತಿ ದಿನವೂ ಯಾವುದಾದರೊಂದು ಸಿ.ಡಿ. ಖರೀದಿಸುತ್ತಿದ್ದ, ಗೀತಾಂಜಲಿಯನ್ನು ನೋಡಿದರೆ ಸಾಕು, ಆತನ ಎದೆ ಹಗುರಾಗುತ್ತಿತ್ತು. ಮನಸು ನದಿಯಾಗುತ್ತಿತ್ತು. ಒಲವೆಂಬ ಲತೆ ಜತೆಗೇ ನಿಲ್ಲುತ್ತಿತ್ತು. ಅದೆಷ್ಟೋ ಬಾರಿ ಐ ಲವ್ ಯೂ' ಎಂಬ ಮಾತು ಬಾಯ್ತುದಿಗೆ ಬಂದು ನಿಂತು ಹೋಗುತ್ತಿತ್ತು.
![]() | |
| ಯಾರಿಗೇ ಆಗಲಿ, ಹೇಳಬೇಕು ಅನಿಸಿದ್ದನ್ನು ನೇರವಾಗಿ ಹೇಳಿಬಿಡಿ! | |
![]() | |
ಹೀಗಿದ್ದಾಗಲೇ ಅದೊಮ್ಮೆ ಅನಿವಾರ್ಯವಾಗಿ ಮಣಿ ಚೆನ್ನೈಗೆ ಹೋಗಬೇಕಾಗಿ ಬಂತು. ಹೋಗುವ ಮುನ್ನ ಆತ ಗೀತಾಂಜಲಿಯನ್ನು ಕಂಡ. ವಿಷಯ ತಿಳಿಸಿದ. ಮೂರೇ ದಿನ ಅಷ್ಟೆ. ನಾಲ್ಕನೇ ದಿನ ನಿನ್ನ ಬಳಿಗೆ ಹಾರಿ ಬರ್ತೀನಿ, ದಿನಾದಿನ ಫೋನ್ ಮಾಡ್ತಿರು ಅಂದು ಫೋನ್ ನಂಬರು ಕೊಟ್ಟ. ಆತ ಹೋಗಿ ಒಂದು ದಿನ ಕಳೆದಿತ್ತು, ಅಷ್ಟೆ. ಗೀತೆಯಂಥ ಗೀತಾಂಜಲಿಗೆ ಅವನಿಲ್ಲದ ಕ್ಷಣ ಅಸಹನೀಯ ಅನ್ನಿಸಿತು. ಆಕೆ ಅವಸರದಿಂದ ಫೋನ್ ಮಾಡಿದಳು. ಅವನು ಹಲೋ' ಅಂದಾಕ್ಷಣ ಮಣೀ, ತುಂಬ ಒಂಟಿ ಅನ್ನಿಸ್ತಿದೆ ನಂಗೆ, ಐ ಮಿಸ್ ಯೂ ಕಣೋ?' ಅಂದು ಬಿಕ್ಕಿದಳು. ಮಣಿ ಗಾಬರಿಯಾದ. ಬಿಟ್ಟ ಬಾಣದಂತೆ ಬೆಂಗಳೂರಿಗೆ, ಅಲ್ಲಲ್ಲ, ಜಯನಗರದ ಅದೇ ಸಿ.ಡಿ. ಅಂಗಡಿಗೆ ಓಡಿಬಂದ. ಅವನನ್ನು ಕಂಡದ್ದೇ ಗೀತಾಂಜಲಿಯ ಎದೆಯಲ್ಲಿ ಗುಲಾಬಿ ಅರಳಿತ್ತು. ದೊಡ್ಡ ಸಂಭ್ರಮದಿಂದ ಅವನೆದುರು ನಿಂತಾಗ ಇಬ್ಬರ ಎದೆಯಲ್ಲೂ ಮಿಡಿದದ್ದು ಒಂದೇ ಹಾಡು: "ಮೆಲ್ಲುಸಿರೀ ಸವಿಗಾನ, ಎದೆ ಝಲ್ಲೆನೆ ಹೂವಿನ ಬಾಣ..."
'ಯಾಕೋಪ್ಪ, ಚೆನ್ನೈನಿಂದ ಬಂದ ವಾರದ ನಂತರ ಮಣಿ ಮಂಕಾದ. ವಿಪರೀತ ಕೆಮ್ಮುತ್ತಿದ್ದ. ತಲೆನೋವೆಂದು ನರಳುತ್ತಿದ್ದ. ಈ ಅನಾರೋಗ್ಯದ ಮಧ್ಯೆಯೂ ತಪ್ಪದೆ ಸಿ.ಡಿ. ಖರೀದಿಸುತ್ತಿದ್ದ. ಗೀತಾಂಜಲಿಯನ್ನು ನಗಿಸುತ್ತಿದ್ದ. ತಾನೂ ನಲಿಯುತ್ತಿದ್ದ. ಆಗಲೂ ಗೀತಾಂಜಲಿ ಒಂದೊಂದು ಸಿ.ಡಿ.ಗೂ ಒಂದೊಂದು ಪುಟ್ಟ ಪತ್ರ ಹಾಕಿ ಪ್ಯಾಕ್ ಮಾಡುತ್ತಿದ್ದಳು, ಮೋಹಕವಾಗಿ ನಗುತ್ತಾ...
ಅವತ್ತು ಮಂಗಳವಾರ. ಮಣಿ ಕೆಲಸ ಮುಗಿಸಿ, ಸಿ.ಡಿ. ಖರೀದಿಸಿ ರೂಮಿಗೆ ಬಂದು ಅರ್ಧ ಗಂಟೆಯೂ ಕಳೆದಿರಲಿಲ್ಲ. ಇದ್ದಕ್ಕಿದ್ದಂತೆ ಕೆಮ್ಮು ವಿಪರೀತವಾಯಿತು. ಮಣಿ ಆಸ್ಪತ್ರೆಗೆ ಹೋದ. ಅವನನ್ನು ಎರಡೆರಡು ಬಾರಿ ಪರೀಕ್ಷಿಸಿದ ವೈದ್ಯರು ಬೆಚ್ಚಿ ಉದ್ಗರಿಸಿದರು: ಮೈ ಗಾಡ್, ಕ್ಯಾನ್ಸರ್! ಡಾಕ್ಟರ್ ಮಾತು ಕೇಳಿ ಮಣಿ ಕಂಗಲಾದ. ನಂತರ, ಛೆ, ನನಗೆ ಕ್ಯಾನ್ಸರ್ ಇರಲಾರದು ಎಂದುಕೊಂಡ. ಹತ್ತಾರು ವೈದ್ಯರಲ್ಲಿ ಪರೀಕ್ಷೆ ಮಾಡಿಸಿದ. ಎಲ್ಲರೂ ಒಂದೇ ರೀತಿಯ ರಿಪೋರ್ಟ್ ಕೊಟ್ಟರು. ಹೆಚ್ಚು ದಿನ ಬದುಕಲಾರೆ ಅನಿಸಿದ್ದೇ ತಡ, ಮಣಿ ಮೌನವಾದ. ಈ ಕೆಟ್ಟ ಸುದ್ದಿ ತಿಳಿಸಿ ಹೂವಿನಂಥ ಹುಡುಗಿ ಗೀತಾಂಜಲಿಗೆ ನೋವು ಕೊಡುವುದೇ ಬೇಡ. ಆಕೆ ಹೂವಿನಂಥವಳು. ದೇವರಂಥವಳು. ಅಮ್ಮನಂಥ ಪ್ರೀತಿಯವಳು. ನನ್ನ ಪ್ರೀತಿ ಅವಳಿಗೆ ಗೊತ್ತಾಗುವುದೇ ಬೇಡ. ನನ್ನ ಸಂಕಟದಿಂದ ಆಕೆ ಡಿಸ್ಟರ್ಬ್ ಆಗುವುದೂ ಬೇಡ. ಆಕೆ ಚನ್ನಾಗಿರಲಿ ಅಂದುಕೊಂಡವನೇ ಯಾರಿಗೂ ಹೇಳದೆ ಕೇಳದೆ ಚೆನ್ನೈಗೆ ಬಂದುಬಿಟ್ಟ.
ಅವನ ಜತೆಯಿಲ್ಲದೆ ವಾರವಾಯಿತು. ತಿಂಗಳೂ ಕಳೆಯಿತು. ಗೀತಾಂಜಲಿ ಕೊರಗಿ, ಸೊರಗಿ, ಕರಗಿ, ಹುಚ್ಚಿಯಂತಾದಳು. ಕಡೆಗೆ ಅವನ ನಂಬರಿಗೆ ಫೋನು ಮಾಡಿ ಮಣೀ, ಐಲವ್ಯೂ' ಎಂದು ಚೀರಿದಳು. ಆ ಕಡೆಯಿಂದ ಉತ್ತರ ಬರಲಿಲ್ಲ. ಈ ಹುಡುಗಿ ಗಡಿಬಿಡಿಯಿಂದ ಸೀದಾ ಚೆನ್ನೈಗೇ ಧಾವಿಸಿದಳು. ಹರಸಾಹಸ ಮಾಡಿ ಚೆನ್ನೈ ರೈಲು ನಿಲ್ದಾಣದಿಂದ ಎಂಟೂವರೆ ಕಿಲೋಮೀಟರ್ ದೂರದ ಮೈಲಾಪುರದಲ್ಲಿದ್ದ ಅವನ ಮನೆ ಹುಡುಕಿದರೆ ಅಲ್ಲೇನಿದೆ ? ಮಣಿ ಸತ್ತುಹೋಗಿದ್ದ. ಗೀತಾಂಜಲಿ ನೀಡಿದ್ದ ಸಿ.ಡಿ.ಗಳೆಲ್ಲ ಚೆನ್ನೈನ ಅವನ ಮನೆಯಲ್ಲಿದ್ದವು. ಅವುಗಳನ್ನು ಆತ ಬಿಚ್ಚಿರಲೇ ಇಲ್ಲ. ಬದಲಿಗೆ, ಒಪ್ಪವಾಗಿ ಜೋಡಿಸಿಟ್ಟು ಅವುಗಳ ಮೇಲೊಂದು ಚೀಟಿ ಇರಿಸಿದ್ದ. ಅದರಲ್ಲಿ ಗೆಳತಿ, ನಿನ್ನೊಂದಿಗೆ ಬದುಕುವ ಆಸೆಯಿತ್ತು. ಆದರೆ ಅದನ್ನು ಹೇಳುವ ಧೈರ್ಯವಿರಲಿಲ್ಲ. ನಿನ್ನ ನೆನಪು ನನ್ನ ಜತೆಗಿರಬೇಕು ಅನ್ನಿಸಿತು. ಹಾಗೆಂದೇ ಈ ಸಿ.ಡಿ.ಗಳನ್ನು ಒಡೆಯಲೇ ಇಲ್ಲ. ಇಲ್ಲೆಲ್ಲ ನಿನ್ನ ಅಂಗೈನ ಗುರುತಿದೆ. ಈ ಸಿಡಿಗಳನ್ನು ಬಿಚ್ಚಿದರೆ, ನಿನ್ನ ಮೃದು ಅಂಗೈ ಗುರುತು ಅಳಿಸಿ ಹೋಗುತ್ತೆ ಅನ್ನಿಸಿತು. ಹಾಗಾಗಿ ಅವುಗಳನ್ನು ಹಾಗೆಯೇ ಉಳಿಸಿಕೊಂಡಿದೀನಿ. ಈ ಬದುಕಿಗೆ ಗುಡ್ಬೈ ಹೇಳುವ ಮುನ್ನ ಕಡೆಯ ಮಾತು ಹೇಳುವುದಿದೆ-ಐ ಲವ್ ಯೂ?.
ಅಂದಹಾಗೆ, ನಿನ್ನಿಂದ ಐ ಲವ್ಯೂ' ಅನ್ನಿಸ್ಕೋಬೇಕು ಅನ್ನೋ ಹಿರಿಯಾಸೆಯಿದೆ! ನಿಂಗೆ ಇಷ್ಟವಿಲ್ಲದಿದ್ರೂ?. ಪ್ಲೀಸ್, ನನ್ನ ಸಮಾಧಾನಕ್ಕಾಗಿ ಒಂದ್ಸಲ, ಒಂದೇ ಒಂದ್ಸಲ ಐ ಲವ್ ಯೂ ಅಂತೀಯ ಗೀತಾ? ಈ ಪತ್ರ ಓದಿ ಗೀತಾಂಜಲಿ ಬಿಕ್ಕಿದಳು. ಬಿಕ್ಕುತ್ತಲೇ ಅಂದಳು-ಮಣೀ, ನಾನೂ ಅಷ್ಟೇ ಕಣೋ... ನಿನ್ನನ್ನು ಮೌನವಾಗಿ ಪ್ರೀತಿಸುತ್ತಿದ್ದೆ. ನಿಂಗೆ ದಿನಕ್ಕೊಂದು ಪ್ರೇಮ ಪತ್ರ ಬರೀತಿದ್ದೆ. ಅದನ್ನು ದಿನಾಲೂ ಸಿ.ಡಿ. ಒಳಕ್ಕೆ ಹಾಕ್ತಾ ಇದ್ದೆ. ಈ ಬದುಕು ನಿನಗಾಗಿ ಅಂದುಕೊಂಡೇ ಉಳಿದಿದ್ದೆ. ಆದರೆ,?
ನೀತಿ: ಯಾರಿಗೇ ಆಗಲಿ, ಹೇಳಬೇಕು ಅನಿಸಿದ್ದನ್ನು ನೇರವಾಗಿ ಹೇಳಿಬಿಡಿ! ಹೇಳಿದರೆ ಏನಾಗಿಬಿಡುತ್ತೋ ಎಂಬ ಯೋಚನೆಗೆ ನಿಂತರೆ, ಮುಂದೆ ಬದುಕಿಡೀ ಸಂಕಟದಿಂದಲೇ ಉಳಿವ ಪರಿಸ್ಥಿತಿ ಎದುರಾಗಬಹುದು...
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು














Click it and Unblock the Notifications