ತಂಗಳು ಅಲ್ಲದ ‘ತಿಂಗಳು’

ಮಾಸಪತ್ರಿಕೆಯ ಅನ್ವರ್ಥನಾಮವೇ ಅದರ ಹೆಸರೂ ಕೂಡ ಆಗಿದೆ ಇಲ್ಲಿ. ಪತ್ರಿಕೋದ್ಯಮದಲ್ಲಿ, ಪ್ರಮುಖವಾಗಿ ಪ್ರಜಾವಾಣಿಯಲ್ಲಿ ದುಡಿದ ಜಿ.ಪಿ.ಬಸವರಾಜು 'ತಿಂಗಳು" ಸಂಪಾದಕರು. ಅವರ ಸಂಪರ್ಕ ಅಗಾಧವಾಗಿದೆ ಎಂಬುದಕ್ಕೆ ಬರೀ ನಾಲ್ಕು ಸಂಚಿಕೆಗಳನ್ನಷ್ಟೇ ಕಂಡರೂ ಖ್ಯಾತ ಬರಹಗಾರರ ಬಳಗವೇ ಬರೆಯುತ್ತಿರುವುದನ್ನು ಸಾಕ್ಷಿಯಾಗಿ ಹೇಳಬಹುದು. 'ಮಲ್ಲಿಗೆ" ಮಾಸಪತ್ರಿಕೆಯ ಆಕಾರ, ವಿನ್ಯಾಸವನ್ನು ಇದು ತುಸು ಹೋಲುತ್ತದೆ. ತಿಂಗಳ ಹೂರಣ ಮಾತ್ರ ಅದಕ್ಕಿಂತ ಹೆಚ್ಚು ಗಟ್ಟಿ. ಅದರಲ್ಲಿ ಬರೆದಿರುವ ಕೆಲವು ಲೇಖಕರ ಹೆಸರನ್ನು ಮಾತ್ರ ಬರೆದು ಇತರರಿಗೆ ಅಗೌರವ ಮಾಡುವುದು ಬೇಡ. ಗಂಭೀರ ಸಾಹಿತ್ಯ ಓದುವ ಕನಸು ಕಾಣುವವರು 164 ಪುಟಗಳ ಈ ಮಾಸಿಕವನ್ನು ಓದಲೇಬೇಕು. ಅಷ್ಟಕ್ಕೂ ಬಿಡಿ ಪ್ರತಿ ಬೆಲೆ ಕೇವಲ12 ರೂ.
ಈ ತರಹದ ಪತ್ರಿಕೆಗಳಲ್ಲಿ 'ತುಷಾರ"ವನ್ನು ಹೊರತುಪಡಿಸಿ 'ಮಯೂರ" ಹೊಸ ಉತ್ಸಾಹದಿಂದ ಪ್ರಕಟಗೊಳ್ಳುತ್ತಿದೆ. ಅದರ ಪುಟ ವಿನ್ಯಾಸವಂತೂ ಭವ್ಯವಾಗಿದೆ. ಆ ಮಟ್ಟಿಗೆ 'ತಿಂಗಳು" ಪ್ರಯತ್ನವೂ ಸಣ್ಣದಲ್ಲ. ಆರಂಭವಾಗಿ ಅರ್ಧ ವರ್ಷವೂ ಕಳೆಯದಿರುವ ಕ್ಲುಪ್ತ ಅವಧಿಯಲ್ಲಿ ಅದರದು ಗಮನ ಸೆಳೆಯುವ ಪ್ರಯತ್ನ. ಎರಡೂವರೆ ಸಹಸ್ರ ಪ್ರಥಮ ಬಹುಮಾನದ ಕಥಾ ಸ್ಪರ್ಧೆಯನ್ನು ಪ್ರತಿ ತಿಂಗಳೂ ನಡೆಸುವಂತ ಸಾಹಸಕ್ಕೂ ತಿಂಗಳು ಅಡಿಯಿಟ್ಟಿದೆ.
ತಿಂಗಳು ಬೇಕೆನ್ನುವವರು ಮೊಬೈಲ್ ಸಂಖ್ಯೆ 99805 60013ಕ್ಕೆ ಕರೆ ಮಾಡಿ. ವಾರ್ಷಿಕ ಚಂದಾ 150 ರೂಪಾಯಿಯನ್ನು : ಸಂಪಾದಕರು, ತಿಂಗಳು, ಅಭಿರುಚಿ ಪ್ರಕಾಶನ, 386, 14ನೇ ಮುಖ್ಯ ರಸ್ತೆ, 3ನೇ ಕ್ರಾಸ್, ಸರಸ್ವತೀ ಪುರಂ, ಮೈಸೂರು-570009ಕ್ಕೆ ತಲುಪಿಸಬಹುದು.
ಕೊನೆಮಾತು : ಈ ವ್ಯಾವಹಾರಿಕ ದಿನಗಳಲ್ಲಿ 'ತಿಂಗಳು"ವಿನ ಇನ್ನೊಂದು ಒಳ್ಳೆಯತನವನ್ನು ನೆನೆಯಲೇಬೇಕು. ಈ ಪತ್ರಿಕೆ ನಮ್ಮಲ್ಲಿನ ಸ್ಥಳೀಯ ಅಂಗಡಿಗಳಲ್ಲಿ ಲಭ್ಯವಾಗುತ್ತಿಲ್ಲ. ಇದನ್ನು ತಿಳಿಸಿದ ತಕ್ಷಣ ನನಗೆ ಅಂಚೆಯಲ್ಲಿ ಪತ್ರಿಕೆ ಬರಲಾರಂಭಿಸಿದೆ. ಅನಿವಾರ್ಯ ಕಾರಣಗಳಿಂದಾಗಿ ಇಂದಿಗೂ ಚಂದಾ ತಲುಪಿಸಲಾಗಿಲ್ಲ. ಊಹ್ಞೂ, ಪತ್ರಿಕೆ ಬರುವುದು ಮಾತ್ರ ನಿಂತಿಲ್ಲ. ಈ ವಿಶ್ವಾಸ ದೊಡ್ಡದು. ತಡವಾಗಿಯಾದರೂ ಚಂದಾ ಕಳುಹಿಸುವೆ. ಆದರೆ ನೀವು ಮಾತ್ರ ನನ್ನಂತೆ ಮಾಡದಿರಿ. ಚಂದಾವನ್ನು ಕಳಿಸಿ ಒಂದು ಒಳ್ಳೆಯ ಪತ್ರಿಕೆಯನ್ನು ಬೆಂಬಲಿಸಿ.
* ಅಂಕಣಕಾರರ ವಿಳಾಸ : ಮಾ.ವೆಂ.ಸ. ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ, ಸಾಗರ ತಾ. ಶಿವಮೊಗ್ಗ ಜಿಲ್ಲೆ. 577401. ಫೋನ್ 08183 236068, 296543, ಸೆಲ್ 98864 07592
ಇ ಮೇಲ್ : [email protected]
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications