ಚೆಂದದ ವಿನ್ಯಾಸದ ಮಾಸಪತ್ರಿಕೆ ವಿವೇಕಪ್ರಭ

ಪುಟ ವಿನ್ಯಾಸ ನನಗೆ ಸದಾ ಆಸಕ್ತಿಯ ವಿಷಯ. ಸುಧಾ-ಮಯೂರಗಳ ಸಾಹಿತ್ಯಿಕ ಮೌಲ್ಯದ ಜೊತೆಗೆ ಅದರ ಇಂದಿನ ವಿನ್ಯಾಸ ಆಕರ್ಷಕ. ದುರಂತವೆಂದರೆ, ಸಾಮಾನ್ಯವಾಗಿ ಧಾರ್ಮಿಕ ಪತ್ರಿಕೆಗಳಲ್ಲಿ ಲೇಔಟ್ಗೆ ಕನಿಷ್ಟ ಆದ್ಯತೆ. ಅಲ್ಲೇನಿದ್ದರೂ ಉದ್ದುದ್ದದ ಲೇಖನಗಳು, ಪುಟ ತುಂಬುವ ಸರ್ಕಸ್. ಅಂತವು ಎಂದು ಒಂದೆರಡನ್ನು ಹೆಸರಿಸುವುದು ಬೇಡ. ಆದರೆ ವಿವೇಕಪ್ರಭ' ಮಾತ್ರ ಅಕ್ಷರಶಃ ವಿಭಿನ್ನ.
ಮೈಸೂರಿನ ಶ್ರೀರಾಮಕೃಷ್ಣ ಆಶ್ರಮ[ಯಾದವಗಿರಿ, ಮೈಸೂರು -570 020]ದ ವಿವೇಕಪ್ರಭ ವಿಭಾಗ ಪ್ರಕಟಿಸುತ್ತಿರುವ ಈ ಮಾಸಿಕದಲ್ಲಿ ಮೊತ್ತಮೊದಲು ನನ್ನ ಗಮನ ಸೆಳೆದಿದ್ದು ಲೇಔಟ್. ಈಗ 10 ವಸಂತಗಳನ್ನು ಪೂರೈಸಿದ ಹೆಮ್ಮೆ ಇದಕ್ಕೆ. ಅದಕ್ಕೋ ಏನೋ, ಕಳೆದ ಎರಡು ಸಂಚಿಕೆಗಳಿಂದ ಪತ್ರಿಕೆಯ ಪ್ರತಿ ಪುಟವೂ ಬಣ್ಣ ಬಣ್ಣದಲ್ಲಿ ಪ್ರಕಟವಾಗುತ್ತಿದೆ.
ಇದೇ ಪತ್ರಿಕೆಯಲ್ಲಿ ಮೂಡಿದ ಮಾಹಿತಿಯಂತೆ, ಇದರ ವ್ಯವಸ್ಥಾಪಕ ಸಂಪಾದಕರು ಸ್ವಾಮಿ ನಿತ್ಯಸ್ಥಾನಂದರು. ರಾಮಕೃಷ್ಣ ಮಹಾಸಂಘದ ಏಕೈಕ ಮಾಸಪತ್ರಿಕೆ ಎಂಬ ಅಗ್ಗಳಿಕೆಯ ವಿವೇಕಪ್ರಭ'ದ ಸಂಪಾದಕೀಯ ಸಲಹಾ ಮಂಡಳಿಯಲ್ಲಿ ಗುರುಗಳಾದ ಡಾ.ನಿರಂಜನ ವಾನಳ್ಳಿಯವರೂ ಇದ್ದಾರೆ. 42 ಪುಟಗಳ ಪತ್ರಿಕೆಯ ಬಿಡಿ ಪ್ರತಿ ಬೆಲೆ 10 ರೂಪಾಯಿ. ವಾರ್ಷಿಕ ಚಂದಾ 100 ರೂ. ಮೂರು ವರ್ಷಕ್ಕೆ 250 ರೂ. 25 ವರ್ಷಕ್ಕೆ ಕೇವಲ ಒಂದೂವರೆ ಸಾವಿರ ರೂ. ಹೆಚ್ಚಿನ ಚಂದಾ ವಿವರಕ್ಕೆ 0821-2417444 ಅಥವಾ 2412424ನ್ನು ಸಂಪರ್ಕಿಸಬಹುದು.
ಇನ್ನೊಂದು ಹೇಳಲೇಬೇಕಾದ ಮಾಹಿತಿಯಿದೆ. ವಿವೇಕಪ್ರಭ ಉಳಿದ ಪತ್ರಿಕೆಗಳಂತೆ ಸಂಕೀರ್ಣ ವಾಕ್ಯಗಳ ಒಣ ಲೇಖನಗಳ ಮೂಲಕ ಧರ್ಮ, ವೇದಾಂತ, ಉಪನಿಷತ್ ಎನ್ನುತ್ತ ಬರೆಯುವುದಿಲ್ಲ. ತುಂಬಾ ಸರಳವಾಗಿ ಮತ್ತು ಅಷ್ಟೇ ಆಕರ್ಷಕ ನಿರೂಪಣೆಯಲ್ಲಿ ಲೇಖನಗಳಿರುತ್ತವೆ. ಮುಖ್ಯವಾಗಿ ರಾಮಕೃಷ್ಣ, ವಿವೇಕಾನಂದ, ಶ್ರೀಮಾತೆ ಕುರಿತಂತೆ ಘಟನೆಗಳನ್ನಾಧರಿಸಿದ ಬರಹಗಳು ಇರುವುದು ಚೆನ್ನ. ದೊಡ್ಡವರೇಕೆ ಸಣ್ಣ ಮಕ್ಕಳೂ ಕೂಡ ಓದುವಂತಿರುತ್ತವೆ. ಕಥೋಪದೇಶ, ವಿದ್ಯಾರ್ಥಿ ಪ್ರಭ ಮತ್ತು ಸಣ್ಣ ಪುಟ್ಟ ತುಣುಕುಗಳ ಮಾಹಿತಿ ಅಲ್ಲಲ್ಲಿ ಇರುವುದು ನಿಜಕ್ಕೂ ಚೆಂದ ಚೆಂದ.
ಮಾದರಿ ಪ್ರತಿ ಕಳಿಸಿಕೊಡುವರೋ ಇಲ್ಲವೋ ಗೊತ್ತಿಲ್ಲ. [email protected] ಮೂಲಕವೂ ತಾವು ವಿಚಾರಿಸಬಹುದು. ನಮ್ಮ ವೀಣಾ ಸ್ಮಾರಕ ಮಾವಿನಮನೆ ವಾಚನಾಲಯ'ಕ್ಕೆ ಉಚಿತವಾಗಿ ಕಳಿಸಿಕೊಡುತ್ತಿರುವುದಕ್ಕೆ ನಾನು ವಿವೇಕಪ್ರಭ ಬಳಗಕ್ಕೆ ಸದಾ ಕೃತಜ್ಞ.
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications