ಕನ್ನಡ ಮಗುವನ್ನು ದತ್ತು ಪಡೆದ ಮಲ್ಲು

ಈ ಕನ್ನಡನಾಡಿನಲ್ಲಿ ಮಕ್ಕಳ ಚಲನಚಿತ್ರಗಳು ಬರಕತ್ತಾಗುವುದಿಲ್ಲ. ಮೊನ್ನೆ ಟೈಂಸ್ ಆಫ್ ಇಂಡಿಯಾ ಮಾಡಿದ ಒಂದು ಚಿತ್ರವರದಿಯ ಪ್ರಕಾರ ಬೆಂಗಳೂರಿನ ಬಾಲವನಗಳು ಹಾಳುಹಂಪೆಗಳಾಗಿವೆ. ಅಲ್ಲಿ ಹಾವು ಚೇಳು ಓತಿಕ್ಯಾತಗಳ ಕಾಟವೋ ಕಾಟ!
ನಮ್ಮಲ್ಲಿ ಮಕ್ಕಳಿಗಾಗಿಯೇ ಪತ್ರಿಕೆಗಳು ಹೊರಬಂದಿದ್ದವು, ನಿಜ. ಈ ಹಿಂದೆ ಆರಂಭಿಸಿದ ಬಾಲಮಿತ್ರ, ಬೊಂಬೆಮನೆ, ಪುಟಾಣಿ ಮುಂತಾದ ಎಳೆಯರ ನಿಯತಕಾಲಿಕಗಳು ಉಸಿರು ಕಳೆದುಕೊಂಡ ಉದಾಹರಣೆಗಳೂ ನಮ್ಮ ಮುಂದಿವೆ. ಆದರೆ ಕನ್ನಡದವರಲ್ಲದ ಪ್ರಕಟನ ಸಂಸ್ಥೆ ಮಾತ್ರ ಕರ್ನಾಟಕದಲ್ಲಿ ಒಂದಲ್ಲ ಮೂರು ಮಕ್ಕಳ ಪತ್ರಿಕೆಯನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ!
ಇದು ನಿಜ, ಮೂಲ ಕೇರಳದ 'ಮಂಗಳಂ ಪಬ್ಲಿಕೇಷನ್ಸ್" ಕನ್ನಡದಲ್ಲಿ ಬಾಲಮಂಗಳ ಮತ್ತು ಬಾಲಮಂಗಳ ಚಿತ್ರಕಥಾ ಎಂಬ ಎರಡು ಪಾಕ್ಷಿಕವನ್ನು ಮಕ್ಕಳಿಗಾಗಿ ಹತ್ತಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಅವರು ಕೆ.ಜಿ. ಮಕ್ಕಳಿಗಾಗಿ ಶುರುಹಚ್ಚಿರುವ 'ಗಿಳಿವಿಂಡು" (ಮಾಸಿಕ) ವ್ಯಾಪಾರೀ ಉದ್ದೇಶಗಳನ್ನು ಮೀರಿ ನಿಲ್ಲುವ ಒಂದು ಸುಂದರ ಪ್ರಯತ್ನ.
ಇದು ನಿಜ, ಮೊನ್ನೆ ಓರ್ವ ಒಂಭತ್ತನೇ ತರಗತಿಯ ಹುಡುಗಿ ನಮ್ಮ ವಾಚನಾಲಯದಲ್ಲಿ ಗಿಳಿವಿಂಡುವನ್ನು ಓದುತ್ತಿದ್ದಾಗ ಹೇಳುತ್ತಿದ್ದಳು: ನನಗಿದು ತುಂಬಾ ಇಷ್ಟ! ಹಾಗಾದರೆ ಏನಿದೆ ಅದರಲ್ಲಿ? ನಾನೂ ಕಣ್ಣಾಡಿಸಿದೆ. ಪುಟ್ಟ ಮಕ್ಕಳಿಗೆ ಏನು ಬೇಕೋ ಅದೆಲ್ಲವೂ ಪ್ರತಿ ಪುಟದಲ್ಲಿ ಅಡಗಿಕುಳಿತಿದೆ. ಚಿತ್ರ ನೋಡಿ ಪ್ರಾಣಿ ಗುರ್ತಿಸಿ, ದಾರಿ ಯಾವುದು, ವ್ಯತ್ಯಾಸ ಹುಡುಕಿ, ಇಂಗ್ಲಿಷ್ ಶಬ್ಧಬಂಧ, ಚಿತ್ರಕ್ಕೆ ಬಣ್ಣ ಹಾಕಿ, ಪುಟ್ಟ ಪುಟ್ಟ ಲೆಕ್ಕ.. ಇನ್ನು ಇವೆಲ್ಲ ಬೇಡ ಎನ್ನುವವರಿಗೆ ಚಿಕ್ಕದಾದ ನೀತಿ ಕತೆಗಳೂ ಇವೆ.
ಮೂರರಿಂದ ಆರರವರೆಗಿನ ಮಕ್ಕಳಿಗೆ ಏನಾದರು ಅಮೂಲ್ಯವಾದುದನ್ನು ಕೊಡಿಸಬೇಕೆಂದಿದ್ದರೆ ಮುದ್ದಾಂ ಗಿಳಿವಿಂಡು ಕೊಡಿಸಿ. ಈ ಮಾತಿನಲ್ಲಿ ಲವಲೇಶದ ಉತ್ಪ್ರೇಕ್ಷೆಯೂ ಇಲ್ಲ, ಮಕ್ಕಳಾಣೆ!
ಇದುನೂ ನಿಜ, 34 ಪುಟಗಳ ಬಣ್ಣಬಣ್ಣದ ಗಿಳಿವೀಡುವಿಗೆ ಬರೀ ಏಳು ರೂಪಾಯಿ. ಪುಟ್ಟ ಮಕ್ಕಳಿಗೆ ಜ್ಞಾನ ಸರ್ಕಸ್ ಮಾಡಿಸುವ ಪುಸ್ತಕಗಳನ್ನು ಮಾರುಕಟ್ಟೆಯಲ್ಲಿ ಕೇಳಿ ನೋಡಿ, ಅವು 20, 30 ರೂ.ಗಿಂತ ಕಮ್ಮಿಗೆ ಸಿಗುವುದು ಸಾಧ್ಯವೇ ಇಲ್ಲ. ಪತ್ರಿಕೆಯ ನಿರ್ವಾಹಕ ಸಂಪಾದಕರು ಮನುಪ್ರತಾಪ್. ಪತ್ರಿಕೆ ಬಹುಷಃ ಎಲ್ಲ ಬುಕ್ಸ್ಟಾಲ್ ಅಂಗಡಿಯಲ್ಲಿ ಸಿಕ್ಕುತ್ತದೆ. ಹಾಗಾಗಿ ವಿಳಾಸ ಹೇಳುತ್ತಿಲ್ಲ. ಸಿಕ್ಕದಿದ್ದರೆ ಮಂಗಳ ವಿಳಾಸದಲ್ಲಿ ವಿಚಾರಿಸಿ.
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications