ನಗುವವರಿಗಾಗಿ ಮಾತ್ರ ಈ ಕನ್ನಡ ಕಚಗುಳಿ

ನನಗೆ ನೆನಪಿರುವಂತೆ, ಹಿಂದೆಲ್ಲ ದೈನಿಕಗಳಲ್ಲಿ ಶುಕ್ರವಾರ ಸಿನೆಮಾ ಪುರವಣಿ ಪ್ರತ್ಯೇಕವಾಗಿರಲಿಲ್ಲ. ಬೇರೆ ದಿನ ಕೇವಲ ಎಂಟು ಪುಟ ಹೊಂದಿರುತ್ತಿದ್ದ ಪ್ರಜಾವಾಣಿಯಂತವು ಆ ದಿನ ಮಾತ್ರ 10 ಪುಟ ಹೊಂದಿರುತ್ತಿತ್ತು. ಅದರಲ್ಲೂ ಬಹುಷಃ ಒಂದು ಪುಟ ಮಾತ್ರ ಸಿನೆಮಾ ಸುದ್ದಿ. ಹೀಗೆ ಹೆಚ್ಚು ಪುಟ ಕೊಡುತ್ತಿದ್ದ ಭಾನುವಾರ ಹಾಗೂ ಶುಕ್ರವಾರ ಪತ್ರಿಕೆಯ ಬೆಲೆಯಲ್ಲಿ ಕೆಲ ಪೈಸೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ದೈನಿಕ ಪತ್ರಿಕೋದ್ಯಮ ಪುಟ ಸಂಖ್ಯೆಯ ಮೇಲೆ ನಿಂತಿಲ್ಲ. ಬಣ್ಣದ ಮುದ್ರಣ ಸರ್ವೇ ಸಾಮಾನ್ಯ. ಆದರೆ ದೈನಿಕಗಳು ಇವತ್ತಿಗೂ ಈ ಎರಡು ದಿನ ಹೆಚ್ಚು ಬೆಲೆ ನಿಗದಿ ಪಡಿಸುವ ಹಳೆಯ ಸಂಪ್ರದಾಯವನ್ನು ಮಾತ್ರ ಮುಂದುವರೆಸಿದ್ದು ಸೂಕ್ತವೇ?
ದಿ ಹಿಂದೂ ಪತ್ರಿಕೆ ಭಾನುವಾರ ನಿಜಕ್ಕೂ ಅರ್ಥವತ್ತಾದ ಸ್ಪೆಷಲ್ ಪುಟಗಳನ್ನು ಕೊಡುವುದರಿಂದ ಹೆಚ್ಚಿನ ಬೆಲೆಯನ್ನು ಸಮರ್ಥಿಸಿಕೊಳ್ಳಬಹುದೇನೋ. ಕನ್ನಡದ ಪತ್ರಿಕೆಗಳು ಸಾಪ್ತಾಹಿಕ ಪುರವಣಿಯಲ್ಲಿ ಕೊಡುತ್ತಿದ್ದ ಎಂಟು ಪುಟಗಳನ್ನು ಆರಕ್ಕೆ ಇಳಿಸಿದ್ದೊಂದೇ ಸಾಧನೆ! ನನ್ನ ವಾದ ಇಷ್ಟೇ, ಹೆಚ್ಚಿನ ಏನೂ ಇಲ್ಲದ ಈ ಎರಡು ದಿನಗಳ ಸಂಚಿಕೆಗಳ ಬೆಲೆಯೂ ಉಳಿದ ಐದು ದಿನಗಳಷ್ಟೇ ಇರಬೇಕು. ತಿಂಗಳ ವೆಚ್ಚ ಲೆಕ್ಕ ಹಾಕುವುದೂ ಆಗ ಸುಲಭ! ನೀವೇನಂತೀರಿ?
ಕನ್ನಡದಲ್ಲಿ ಹಾಸ್ಯಕ್ಕೆ ಮೀಸಲಾದ ಪತ್ರಿಕೆಗಳು ಕಡಿಮೆ. ಹೆಸರಿಸಹೊರಟರೆ ಬಾಗಿಲು ಮುಚ್ಚಿದ ಕೊರವಂಜಿ'ಯಂತ ಪತ್ರಿಕೆಗಳನ್ನೇ ಹೇಳಬೇಕಾಗುವುದು ದುರಂತ. ಆದರೂ ಇವತ್ತಿಗೂ ವಿನೋದ' ಚಾಲ್ತಿಯಲ್ಲಿದೆ. ಹಾಗೆಯೇ ಕಾರ್ಟೂನ್, ಜೋಕ್ಸ್, ನಗೆಬರಹಗಳಿಗೆ ಮೀಸಲಿರುವ ಪತ್ರಿಕೆಯೊಂದು ಪುಸ್ತಕದ ಅಂಗಡಿಗಳಲ್ಲಿ ಲಭ್ಯ, ಅದುವೇ ಕಚಗುಳಿ'. ಮನರಂಜನೆಯೊಂದೇ ಅದರ ಧ್ಯೇಯ!
ಶುಷ್ಕವಾಗಿ ಕೆಲವು ಮಾಹಿತಿಗಳನ್ನು ಒದರಿಬಿಡುತ್ತೇನೆ. 60 ಪುಟಗಳ ಈ ಮಾಸಪತ್ರಿಕೆಗೆ ತುಸು ದುಬಾರಿ ಬೆಲೆ, 20 ರೂಪಾಯಿ. ಈಗಾಗಲೇ 85 ಸಂಚಿಕೆಗಳನ್ನು ಈ ಪತ್ರಿಕೆ ಪೂರೈಸಿದೆ. ಅರ್ಥಾತ್ ಏಳು ವರ್ಷಗಳು!
ಕೆಲವರಿಗಾದರೂ ಬೆಂಗಳೂರಿನ ಅನುರಾಗ್ ಕ್ರಿಯೇಷನ್ಸ್ ಗೊತ್ತಿರಬೇಕು. ಅದು ಸ್ಪರ್ಧಾ ಜಗತ್ತು, ಆರೋಗ್ಯ ಮತ್ತು ಸೈಕಾಲಜಿ & ಪರ್ಸನಾಲಿಟಿ ಡೆವಲೆಪ್ಮೆಂಟ್ ಎಂಬ ದೀರ್ಘ ಹೆಸರಿನ ಪತ್ರಿಕೆಯೂ ಸೇರಿದಂತೆ ಒಂದು ಡಜನ್ ನಿಯತಕಾಲಿಕಗಳನ್ನು ಪ್ರಕಟಿಸುತ್ತಿದೆ. ಆ ಪ್ರಕಾಶನದ ಮಾಲಿಕ ಆರ್. ಬಾಲಕೃಷ್ಣರೇ ಈ ಕಚಗುಳಿ'ಯ ಸಂಪಾದಕರು.
ನಿಜ, ಇಲ್ಲಿನ ಎಲ್ಲ ಜೋಕ್ಸ್, ಕಾರ್ಟೂನ್ಗಳು ಗುಣಮಟ್ಟವನ್ನು ನೀಡುವುದಿಲ್ಲ ಎನ್ನಿಸಬಹುದು. ಆದರೆ ನಗುವವರ ಮನಸ್ಥಿತಿಯ ಮೇಲೆ ಅವು ಮಾಡುವ ಪರಿಣಾಮ ನಿರ್ಧಾರಿತವಾಗಿರುವುದರಿಂದ ಇದಮಿತ್ಥಂ ಹೇಳುವುದು ಕಷ್ಟ. ನೀವೇ ನೋಡಿ, ಟೆನಿಸ್ ಕೃಷ್ಣನ ಹಾಸ್ಯಕ್ಕೆ ನೀವು ನಗಬಹುದು, ಮತ್ತೊಬ್ಬಾತ, ಛೆ, ಅಸಹ್ಯ ಎಂದುಬಿಡಬಹುದು. ಬಸ್ನಲ್ಲಿ, ಸುಮ್ಮನೆ ರಿಫ್ರೆಶ್ಗೆ ಎಂದು ಕುಳಿತುಕೊಳ್ಳುವವರಿಗೆ ಇದು ಆಪ್ತ! ಒಮ್ಮೆ ಓದಿ ನೋಡಿ....
ವಿಳಾಸ : ಕಚಗುಳಿ ಮಾಸಪತ್ರಿಕೆ
737, ಡಾ.ರಾಜ್ಕುಮಾರ್ ರಸ್ತೆ,
ಧಮಧಸ್ಥಳ ಶ್ರೀ ಮಂಜುನಾಥ ಕಲಾಭವನದ ಎದುರು, 6ನೇ ಬ್ಲಾಕ್, ರಾಜಾಜಿ ನಗರ, ಬೆಂಗಳೂರು - 560 010.
ಫೋನ್ - 080-23401654, 23203282
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications