ಕೋಟಿ ತಿಂದವರೇ ರೆಡ್ಡಿಯನ್ನು ಹೂತು ಹಾಕಿದರು

ಎಂಥ ಪರಿಸ್ಥಿತಿ ನಿರ್ಮಾಣವಾಯಿತೆಂದರೆ, ರಾಜ್ಯದ ಇಡೀ ಲಿಂಗಾಯತ ಸಮೂಹ ಬಿಜಿಪಿಗೆ ಅಧಿಕಾರ ಕೈಯೆತ್ತಿ ಕೊಡಲು ಸಿದ್ಧವಾಗಿತ್ತು. ಧಾರಾಳವಾಗಿ ದುಡ್ಡು ಚೆಲ್ಲಲು ರೆಡ್ಡಿಗಳು ಸಿದ್ಧವಾಗಿದ್ದರು. ಅವರಿಂದ ಸಾವಿರಾರು ಕೋಟಿ ತಂದುಕೊಂಡು ಸಿಂಹಾಸನವೇರಲು ಯಡಿಯೂರಪ್ಪ ತಹತಹಿಸುತ್ತಿದ್ದ. ಅದೆಲ್ಲದರ ಅಂತಿಮ ಪರಿಣಾಮವೆಂದರೆ-ಯಡಿಯೂರಪ್ಪನಿಗೆ ಕುರ್ಚಿ, ಕುಮಾರಸ್ವಾಮಿಗೆ ಕಸದ ಬುಟ್ಟಿ, ಕಾಂಗ್ರೆಸ್ಸಿಗೆ ದೈನೇಸಿ ಸ್ಥಿತಿ ಮತ್ತು ರೆಡ್ಡಿಗೆ ಕುಬೇರನ ತಿಜೋರಿಯ ಕೀಲಿ ಕೈ ಸಂದಾಯವಾದವು. ಬಳ್ಳಾರಿ ಜಿಲ್ಲೆಯನ್ನು ತುಂಡು ಗುತ್ತಿಗೆ ಆಧಾರದ ಮೇಲೆ ಜನಾರ್ದನ ರೆಡ್ಡಿಯ ಕೈಗೆ ಬಿಟ್ಟು ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ ಅದರಿಂದ ಕೋಟ್ಯಾಂತರ ರೂಪಾಯಿ ಗೋರಿಕೊಂಡ. ಅಷ್ಟೇ ಅಲ್ಲ; ಆತ ರೆಡ್ಡಿಗಳಿಂದ ಹೊಸ ರಾಜಕೀಯ ಪಾಠ ಕಲಿತುಕೊಂಡ. ಪಾಠದ ಹೆಸರೇ ದುಡ್ಡು. ದುಡ್ಡಿದ್ದರೆ ಮಾತ್ರ ರಾಜಕಾರಣ ಮಾಡಬಹುದು ಮತ್ತು ದುಡ್ಡೊಂದಿದ್ದರೆ ಏನು ಬೇಕಾದರೂ ಮಾಡಬಹುದು! ಹಾಗಂತ ರೆಡ್ಡಿಗಳೇ ತೋರಿಸಿ ಕೊಟ್ಟಿದ್ದರು.
ತಮಾಷೆ ಕೇಳಿ : ಇವತ್ತು ಲೋಕಾಯುಕ್ತರು ಯು.ವಿ.ಸಿಂಗ್ ಅಥವಾ ಸಿ.ಬಿ.ಐ ಅಧಿಕಾರಿಗಳು ಏನೇನು ಸಾಕ್ಷ್ಯ ಸಂಗ್ರಹಿಸಿದ್ದೇವೆ ಅಂತ ಹೇಳಿಕೊಳ್ಳುತ್ತಿದ್ದಾರೋ, ಅವೆಲ್ಲವನ್ನೂ ಮೊದಲಬಾರಿಗೆ ಸಂಪಾದಿಸಿದ್ದು ಇನ್ ಕಮ್ ಟ್ಯಾಕ್ಸ್ ಇಂಟಲಿಜೆನ್ಸ್ ವಿಭಾಗದ ಒಬ್ಬ ನಿಸ್ಪೃಹ ಅಧಿಕಾರಿ ಗುರುಪ್ರಸಾದ್ ಎಂಬವರು. ರೆಡ್ಡಿ ಮತ್ತು ಅವರ ಆಸುಪಾಸಿನವರ ವಿರುದ್ಧ ಈ ತನಕ ನಡೆಯುತ್ತಿರುವ ತನಿಖೆಯ ಬೇರುಗಳಿರುವುದೇ ಟ್ಯಾಕ್ಸ್ ಅಧಿಕಾರಿ ಗುರುಪ್ರಸಾದ್ ನಡೆಸಿದ ದಾಳಿ ಮತ್ತು ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ. ಜನಾರ್ದನ ರೆಡ್ಡಿಯನ್ನು ಹಣಿಯಲಿಕ್ಕಾಗಿ ಸಲೀಸಾಗಿ ಸಿಕ್ಕಿರುವ ಎರಡು ಆಯುಧಗಳೆಂದರೆ ರೆಡ್ಡಿಯ ಆಪ್ತ ಸಿಬ್ಬಂದಿಯವನೇ ಆದ ಅಲೀಖಾನ್ ಮತ್ತು ಹೊಸಪೇಟೆಯ ಪರಮ ಕುಖ್ಯಾತ ಟ್ರಾನ್ಸ್ ಪೋರ್ಟರ್ ಖಾರಪುಡಿ ಮಹೇಶ. ಇವರಿಬ್ಬರವೂ ಕಂತೆ ಕಂತೆ ದಾಖಲೆಗಳು, ಹಣದ ವಹಿವಾಟಿನ ವಿವರಗಳು ಸಿಕ್ಕುಬಿದ್ದಿವೆ. ಇವರಿಗಿಂತ ದೊಡ್ಡಮಟ್ಟದಲ್ಲಿ ಗಾಲಿ ಜನಾರ್ದನ ರೆಡ್ಡಿಯ ವಿರುದ್ಧ ಸಾಕ್ಷ್ಯ ದೊರಕಿರುವುದು ಕೂಡ್ಲಗಿಯ ಶಾಸಕ ಗುಮ್ಮನೂರು ನಾಗೇಂದ್ರನ ಬ್ಯಾಂಕ್ ವಹಿವಾಟಿನಲ್ಲಿ. ಕೊನೆಯದಾಗಿ ಜನಾರ್ದನ ರೆಡ್ಡಿಯನ್ನು ಸಿಕ್ಕಿ ಹಾಕಿಸಬಲ್ಲ ಹುಡುಗನೆಂದರೆ, ಕಂಪ್ಲಿಯ ಶಾಸಕ ಸುರೇಶ್ ಬಾಬು. ಬೆರಳೆಣಿಕೆಯಷ್ಟೇ ಜನರಿರುವ ಒಂದು ಪಟಾಲಂ ಜನಾರ್ದನ ರೆಡ್ಡಿಯನ್ನು ಕಾನೂನಿನ ಚಕ್ರಸುಳಿಗೆ ಸಿಲುಕಿಸಿ ಮುಳುಗಿಸಲಿದೆ.
ನಿಮಗೆ ಆಶ್ಚರ್ಯವೆನ್ನಿಸಬಹುದು. ಗಣಿಗಾರಿಕೆಯ ವ್ಯವಹಾರದಲ್ಲಿ ಜನಾರ್ದನ ರೆಡ್ಡಿ ತುಂಬ ಹಿಂದೆಯೇ ತನ್ನ ಸೋದರರಾದ ಸೋಮಶೇಖರ ರೆಡ್ಡಿ ಹಾಗೂ ಕರುಣಾಕರ ರೆಡ್ಡಿಯನ್ನು ದೂರವಿರಿಸಿದ್ದ. ಈ ಸೋದರರು ಅಕ್ಷರಶಃ ಕುಟುಂಬದ ಆಸ್ತಿ ಪಾಲುಮಾಡಿಕೊಂಡು ವ್ಯವಹಾರಿಕವಾಗಿ ದೂರವಾಗಿದ್ದಾರೆ. ರಾಜಕೀಯದ ವಿಷಯಕ್ಕೆ ಬಂದರೆ ಶ್ರೀರಾಮುಲುವೂ ಸೇರಿದಂತೆ ಎಲ್ಲರೂ ಬಳ್ಳಾರಿ ಬ್ರದರ್ಸ್ ಅಥವಾ ರೆಡ್ಡಿ ಬ್ರದರ್ಸ್ ಅಂತಲೇ ಗುರುತಿಸಲ್ಪಡುತ್ತಾರೆ. ಮಾನಸಿಕವಾಗಿ ಅವರು ಒಟ್ಟಿಗಿದ್ದಾರೆಯೇ ಗೊತ್ತಿಲ್ಲ. ಒಬ್ಬರನ್ನೊಬ್ಬರು ಬಿಟ್ಟುಕೊಡುವುದಿಲ್ಲ ಎಂಬುದಂತೂ ನಿಜ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications