ರೆಡ್ಡಿ ಎಲ್ಲರನ್ನೂ ಎಳೆದುಕೊಂಡೇ ಹಳ್ಳಕ್ಕೆ ಬಿದ್ದ!

ಅದೇ ತರಹದ ಕೆಲಸ ಮಾಡಿ ಕುಮಾರಸ್ವಾಮಿ ಸಿಕ್ಕು ಬಿದ್ದಿರುವುದು ವಿನೋದ್ ಗೋಯಲ್ ನ 'ಜಂತಕಲ್ ಮೈನ್ಸ್ ಪರವಾನಗಿ' ಹಗರಣದಲ್ಲಿ. ಅಕ್ರಮ ಗಣಿಗಾರಿಕೆ ಹಾಗೂ ಅದಿರು ಕಳ್ಳ ಸಾಗಾಣಿಕೆ ಹಗರಣದಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿರುವುದು ಹೌದಾದರೆ, ಆತನ ಪಕ್ಕದ ಬ್ಯಾರಕ್ ಗಳಲ್ಲಿ ಸಾಲುಸಾಲಾಗಿ ಯಡಿಯೂರಪ್ಪ, ಅನಿಲ್ ಲಾಡ್, ಕುಮಾರಸ್ವಾಮಿ, ವಿಜಯೇಂದ್ರ, ರಾಘವೇಂದ್ರ, ಗುಮ್ಮನೂರು ನಾಗೇಂದ್ರ... ಹೀಗೆ ಅನೇಕರು ಹೋಗಿ ಕೂಡುತ್ತಾರೆ. ಕೂಡ ಬೇಕು.
ಗಣಿ ದುಡ್ಡು ಎಂಬುದು ಇಡೀ ರಾಜ್ಯ ರಾಜಕಾರಣವನ್ನೇ ಬದಲಿಸಿತು, ದಿಕ್ಕು ತಪ್ಪಿಸಿತು. ಜನಾರ್ದನ ರೆಡ್ಡಿಯ 'ಸಿರಿವಂತಿಕೆ'ಯಲ್ಲಿ ಪಾಲು ತಿನ್ನಲು ಹೋಗಿ ಅನೇಕರು ಸಿಕ್ಕು ಬಿದ್ದರು. ಗಾಲಿ ಜನಾರ್ದನ ರೆಡ್ಡಿ ಎಲ್ಲರನ್ನೂ ಎಳೆದುಕೊಂಡೇ ಹಳ್ಳಕ್ಕೆ ಬಿದ್ದ. ಇವತ್ತು ಬಳ್ಳಾರಿ ಜಿಲ್ಲೆಯ ಗಣಿ ಮಾಲೀಕರು ಜನಾರ್ದನ ರೆಡ್ಡಿಯನ್ನು ಎಲ್ಲವುದಕ್ಕೂ ಕಾರಣ ಎಂದು ದೂಷಿಸಿ ನಿಟ್ಟುಸಿರಾಗುತ್ತಿದ್ದಾರೆ. ಆತನ ಶಿಷ್ಯರಾದ ಗುಮ್ಮನೂರು ನಾಗೇಂದ್ರ, ಸುರೇಶ್ ಬಾಬು, ಅಲೀಖಾನ್, ಖಾರಪುಡಿ ಮಹೇಶರಂಥವರಿಂದಾಗಿ ಕೆಲವು ಅಮಾಯಕರ ಬಾಯಿಗೂ ಮೊಸರನ್ನ ಮೆತ್ತಿಕೊಂಡಿದೆ.
ರಾಜಕಾರಣ ಬಲ್ಲ ಎಲ್ಲರೂ ಅಂದುಕೊಂಡಿದ್ದೆಂದರೆ, ಸಿಬಿಐ ಎಂಬ ಸಶಕ್ತ ಖಡ್ಗವನ್ನು ಬಳಸುವ ಮೂಲಕ ಸೋನಿಯಾ ಗಾಂಧಿ ಮೊದಲು ಜಗನ್ ಮೋಹನ ರೆಡ್ಡಿಯನ್ನು ಹಣಿಯುತ್ತಾಳೆ, ಆ ನಂತರ ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿಯನ್ನು ಮುಟ್ಟುತ್ತಾರೆ. ಹಾಗಂತಲೇ ಬಹುಶಃ ಜನಾರ್ದನ ರೆಡ್ಡಿಯೂ ಅಂದುಕೊಂಡಿದ್ದಿರಬೇಕು. ಆದರೆ ಮೊದಲ ಬೀಸು ಆತನಿಗೇ ಬಿದ್ದಿದೆ. ಇದು ಮುಂದೆ ಜರುಗಲಿರುವ 'ಜಗನ್ ಪರಾಭವ' ಪರ್ವದ ಮುನ್ನುಡಿಯಷ್ಟೇ.
ಇನ್ನು ರೆಡ್ಡಿ ತಂಡ ರಾಜಕೀಯವಾಗಿ, ನೈತಿಕವಾಗಿ, ಕಾನೂನು ರೀತ್ಯಾ ಬಳ್ಳಾರಿಯಲ್ಲಿ ಚೇತರಿಸಿಕೊಳ್ಳುವುದು ಕಷ್ಟವಿದೆ. ಸದ್ಯದಲ್ಲೇ ಚುನಾವಣಾ ನಿಯಮಗಳೂ ಬಿಗಿಯಾಗಿ ಬಿಟ್ಟರೆ ಅಲ್ಲಿಗೆ ಹಣ ಚೆಲ್ಲುವುದೂ ನಿಂತು ಹೋಗಿ ಗಣಿ ಸಾಮ್ರಾಜ್ಯ ಧೂಳು ಪಾಲಾಗಲಿದೆ. ಇಂದು ನಾಳೆಯೊಳಗಾಗಿ ಜನಾರೆಡ್ಡಿ ಜಾಮೀನು ಪಡೆದು ಹೊರಬರುವುದೂ ಅನುಮಾನವೇ. ಇನ್ನು ಬಳ್ಳಾರಿಯಲ್ಲಿ ಹಳೆಯ ಹಂತಕರನ್ನೂ, ಹೊಸ ಕಳ್ಳರನ್ನೂ ವಿರೋಧಿಸುವಂಥ ಮೂರನೆಯ ಶಕ್ತಿಯೊಂದು ಹೊರ ಹೊಮ್ಮಬೇಕಿದೆ. ಅದು ಸಾಧ್ಯವೇ? [ಸ್ನೇಹಸೇತು : ಹಾಯ್ ಬೆಂಗಳೂರು]
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications