ರೆಡ್ಡಿ ಎಲ್ಲರನ್ನೂ ಎಳೆದುಕೊಂಡೇ ಹಳ್ಳಕ್ಕೆ ಬಿದ್ದ!

ಅದೇ ತರಹದ ಕೆಲಸ ಮಾಡಿ ಕುಮಾರಸ್ವಾಮಿ ಸಿಕ್ಕು ಬಿದ್ದಿರುವುದು ವಿನೋದ್ ಗೋಯಲ್ ನ 'ಜಂತಕಲ್ ಮೈನ್ಸ್ ಪರವಾನಗಿ' ಹಗರಣದಲ್ಲಿ. ಅಕ್ರಮ ಗಣಿಗಾರಿಕೆ ಹಾಗೂ ಅದಿರು ಕಳ್ಳ ಸಾಗಾಣಿಕೆ ಹಗರಣದಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿರುವುದು ಹೌದಾದರೆ, ಆತನ ಪಕ್ಕದ ಬ್ಯಾರಕ್ ಗಳಲ್ಲಿ ಸಾಲುಸಾಲಾಗಿ ಯಡಿಯೂರಪ್ಪ, ಅನಿಲ್ ಲಾಡ್, ಕುಮಾರಸ್ವಾಮಿ, ವಿಜಯೇಂದ್ರ, ರಾಘವೇಂದ್ರ, ಗುಮ್ಮನೂರು ನಾಗೇಂದ್ರ... ಹೀಗೆ ಅನೇಕರು ಹೋಗಿ ಕೂಡುತ್ತಾರೆ. ಕೂಡ ಬೇಕು.
ಗಣಿ ದುಡ್ಡು ಎಂಬುದು ಇಡೀ ರಾಜ್ಯ ರಾಜಕಾರಣವನ್ನೇ ಬದಲಿಸಿತು, ದಿಕ್ಕು ತಪ್ಪಿಸಿತು. ಜನಾರ್ದನ ರೆಡ್ಡಿಯ 'ಸಿರಿವಂತಿಕೆ'ಯಲ್ಲಿ ಪಾಲು ತಿನ್ನಲು ಹೋಗಿ ಅನೇಕರು ಸಿಕ್ಕು ಬಿದ್ದರು. ಗಾಲಿ ಜನಾರ್ದನ ರೆಡ್ಡಿ ಎಲ್ಲರನ್ನೂ ಎಳೆದುಕೊಂಡೇ ಹಳ್ಳಕ್ಕೆ ಬಿದ್ದ. ಇವತ್ತು ಬಳ್ಳಾರಿ ಜಿಲ್ಲೆಯ ಗಣಿ ಮಾಲೀಕರು ಜನಾರ್ದನ ರೆಡ್ಡಿಯನ್ನು ಎಲ್ಲವುದಕ್ಕೂ ಕಾರಣ ಎಂದು ದೂಷಿಸಿ ನಿಟ್ಟುಸಿರಾಗುತ್ತಿದ್ದಾರೆ. ಆತನ ಶಿಷ್ಯರಾದ ಗುಮ್ಮನೂರು ನಾಗೇಂದ್ರ, ಸುರೇಶ್ ಬಾಬು, ಅಲೀಖಾನ್, ಖಾರಪುಡಿ ಮಹೇಶರಂಥವರಿಂದಾಗಿ ಕೆಲವು ಅಮಾಯಕರ ಬಾಯಿಗೂ ಮೊಸರನ್ನ ಮೆತ್ತಿಕೊಂಡಿದೆ.
ರಾಜಕಾರಣ ಬಲ್ಲ ಎಲ್ಲರೂ ಅಂದುಕೊಂಡಿದ್ದೆಂದರೆ, ಸಿಬಿಐ ಎಂಬ ಸಶಕ್ತ ಖಡ್ಗವನ್ನು ಬಳಸುವ ಮೂಲಕ ಸೋನಿಯಾ ಗಾಂಧಿ ಮೊದಲು ಜಗನ್ ಮೋಹನ ರೆಡ್ಡಿಯನ್ನು ಹಣಿಯುತ್ತಾಳೆ, ಆ ನಂತರ ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿಯನ್ನು ಮುಟ್ಟುತ್ತಾರೆ. ಹಾಗಂತಲೇ ಬಹುಶಃ ಜನಾರ್ದನ ರೆಡ್ಡಿಯೂ ಅಂದುಕೊಂಡಿದ್ದಿರಬೇಕು. ಆದರೆ ಮೊದಲ ಬೀಸು ಆತನಿಗೇ ಬಿದ್ದಿದೆ. ಇದು ಮುಂದೆ ಜರುಗಲಿರುವ 'ಜಗನ್ ಪರಾಭವ' ಪರ್ವದ ಮುನ್ನುಡಿಯಷ್ಟೇ.
ಇನ್ನು ರೆಡ್ಡಿ ತಂಡ ರಾಜಕೀಯವಾಗಿ, ನೈತಿಕವಾಗಿ, ಕಾನೂನು ರೀತ್ಯಾ ಬಳ್ಳಾರಿಯಲ್ಲಿ ಚೇತರಿಸಿಕೊಳ್ಳುವುದು ಕಷ್ಟವಿದೆ. ಸದ್ಯದಲ್ಲೇ ಚುನಾವಣಾ ನಿಯಮಗಳೂ ಬಿಗಿಯಾಗಿ ಬಿಟ್ಟರೆ ಅಲ್ಲಿಗೆ ಹಣ ಚೆಲ್ಲುವುದೂ ನಿಂತು ಹೋಗಿ ಗಣಿ ಸಾಮ್ರಾಜ್ಯ ಧೂಳು ಪಾಲಾಗಲಿದೆ. ಇಂದು ನಾಳೆಯೊಳಗಾಗಿ ಜನಾರೆಡ್ಡಿ ಜಾಮೀನು ಪಡೆದು ಹೊರಬರುವುದೂ ಅನುಮಾನವೇ. ಇನ್ನು ಬಳ್ಳಾರಿಯಲ್ಲಿ ಹಳೆಯ ಹಂತಕರನ್ನೂ, ಹೊಸ ಕಳ್ಳರನ್ನೂ ವಿರೋಧಿಸುವಂಥ ಮೂರನೆಯ ಶಕ್ತಿಯೊಂದು ಹೊರ ಹೊಮ್ಮಬೇಕಿದೆ. ಅದು ಸಾಧ್ಯವೇ? [ಸ್ನೇಹಸೇತು : ಹಾಯ್ ಬೆಂಗಳೂರು]
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications