ಸ ರಘುನಾಥ ಅಂಕಣ; ಬೇಸ್ತವಾರದ ಸಭೆಯಲ್ಲಿ...
ಬೇಸ್ತವಾರ ನಸುಕಿಗೆ ಇಡಿ ಊರೇ ಲಬುಬಗೆಯಿಂದ ಕೂಡಿತ್ತು. ಮೊದಲಿಗೆ ಸಂತೆಗೆ ಹೋಗುವ ತರಾತುರಿ. ಸಂಜೆಗೆ ಚಲ್ಲಾಪುರಮ್ಮನ ಗುಡಿ ಒಪ್ಪಾರದಲ್ಲಿ ಸಭೆ. ಯಾರು ಯಾರು ಪಾತ್ರ ಬಯಸುತ್ತಾರೆ? ಯಾರಿಗೆ ಯಾವ ಪಾತ್ರ ಕೊಡಬಹುದು? ಬೇಡವೆನ್ನುವವರಾರು? ಮುನಿಸಿಕೊಳ್ಳುವವರಾರು? ಯಾರು ಯಾರನ್ನು ಸಮಾಧಾನಪಡಿಸಲು ಮುಂದಾಗುವರು? ಸೀನರಿಗಳನ್ನು ಎಲ್ಲಿಂದ ತರಿಸುವರು? ಸ್ಟೇಜು ಹಾಕುವುದೆಲ್ಲಿ? ಊರ ಮುಂದಿನ ಅರಳಿಕಟ್ಟೆ ಮುಂದೋ? ಚಲ್ಲಾಪುರಮ್ಮನ ಗುಡಿ ಮುಂದೋ?
ನೀರುಬಾವಿ ದಾರಿಯಲ್ಲೊ? ಸ್ಟೇಜಿನ ಮುಖ ಹೊತ್ತು ಹುಟ್ಟೋ ಕಡೆಗೊ, ಹೊತ್ತು ಮುಳುಗೊ ಕಡೆಗೊ? ಈವರೆಗೆ ಉತ್ತರಕ್ಕೆ, ದಕ್ಷಿಣಕ್ಕೆ ಇಟ್ಟಿದ್ದಿಲ್ಲ. ಆವತ್ತಿಗೆ ಎದುರು ಚುಕ್ಕೆ ಯಾವ ಕಡೆಗಿರುತ್ತೊ ನೋಡಬೇಕಲ್ಲ? ಈ ಸಾರಿ ಪೂಜಾರಿ ಶೇಷಪ್ಪ ನೋಡ್ತಾನೊ, ಅಪ್ಪಯ್ಯನೇ ನೋಡ್ತಾನೊ ಅಥವಾ ನರಸಿಂಗರಾಯನೊ? ತಬಲ ಏನೋ ಮೋಟಪ್ಪಂದೇ. ಲೆಗ್ಗಾರ್ಮನೀನೊ, ಕೈಯಾರ್ಮನೀನೊ? ಪಿಟೀಲು ತಲಕಾಯಿ ರಾಮಣ್ಣಂದೊ, ಆಚೆಯಿಂದ ಕರೆಸುತ್ತಾರೊ? ಖರ್ಚು ಊರ ಮುಖ್ಯ ಕುಳಗಳದೊ, ಪಾರ್ಟುದಾರರೂ ಕೊಡಬೇಕೊ? ಮನೆಗಿಷ್ಟು ಅಂತಾಗುತ್ತೊ? ಹೊರಟ ಉತ್ತರಗಳು ತಾಳೆಯಾಗಿ, ನಾನು ಅಂದುಕೊಂಡಂತೇ ಆಯಿತು ಎಂದು ಬೀಗಲು ಸಂಜೆ ಸಭೆ ಸೇರಿ, ಮಾತು ನಡೆದು, ತೀರ್ಮಾನವಾಗಲು ರಾತ್ರಿಯಾಗಬೇಕು.
ಹಿಂದೆ ಪಾರ್ಟು ಕಟ್ಟಿದೋರಲ್ಲಿ ಯಾರು ಯಾರು ಖಾಯಿಷು ಉಳಿಸಿಕೊಂಡಿದ್ದೀರ? ನನಗೆ ಬೇಡ ಅನ್ನೋರು ಯಾರಾದ್ರು ಇದ್ದಾರ ಅಂತ ಮೊದಲು ಗೊತ್ತಾಗಲಿ ಎಂದು ದುಗ್ಗಪ್ಪ ಸಭೆಯ ಮೊದಲ ಮಾತಾಡಿದ. ನಮ್ಮ ಪಾರ್ಟು ನಮಗಿರಲಿ ಅಂದವರು ಮುನಿಕೃಷ್ಣಪ್ಪ, ನಾರಾಯಣಪ್ಪ ಮಾತ್ರ. ನಾಲ್ಕೈದು ಮಂದಿ ನಮ್ಮ ಪಾರ್ಟುಗಳು ನಮ್ಮ ಹುಡುಗರಿಗಿರಲಿ ಎಂದರು. ಬೀರಣ್ಣ ನಿಂದೇನು? ಅಂದ ತಬಲ ಮೋಟಪ್ಪ. ನನ್ನ ಪಾರ್ಟುನ ನಮ್ಮ ಸೋಮೇಶನಿಗೆ ಅಂದ್ಕೊಂಡಿದ್ದೆ. ಆದ್ರೆ ಅವನಿಗೆ ಬೇಡ ಅಂದ. ಯಾಕೆ ಬೇಡ ಅಂದ ಅನ್ನೋದು ಕೆಲವರಿಗೆ ಅರ್ಥವಾಯಿತು.

ಬೇಡ ಅನ್ನೋದ್ಯಾಕೆ? ಉಮೇಶ ಪಾರ್ಟು ಮಾಡಲಿ ಅಂದ ನರಸಿಂಗರಾಯ. ಬೋಡೆಪ್ಪ, ಪಿಲ್ಲಣ್ಣರ ಹಲ್ಲುಗಳು ಕಟಕಟ ಅಂದದ್ದು ನರಸಿಂಗರಾಯನಿಗೆ ಕೇಳಿಸಿತು. ಕಣ್ಣಲ್ಲೇ ಏನೋ ಹೇಳಿದ. ಅವರಿಗೆ ಅರ್ಥವಾಗಿ ಸುಮ್ಮನಾದರು. ಲಕ್ಷ್ಮೀನಾರಾಯಣ ಬಾಯಿ ತೆಗೆದ. ನರಸಿಂಗರಾಯ ಅವನ ತೊಡೆ ಚಿವುಟಿದ. ಬೀರಣ್ಣನಿಗೆ ಆಶ್ಚರ್ಯ. ಅಪ್ಪಯ್ಯನ ಮುಖದಲ್ಲಿ ನಿನ್ನದು ಅಧಿಕಪ್ರಸಂಗವಾಯಿತು ನರಸಿಂಗ ಎಂಬ ಭಾವ. ಮುನೆಕ್ಕನಿಗೆ ಎದ್ದು ಹೋಗುವಷ್ಟು ಅಸಹನೆ. ಆದರೆ ಅಪ್ಪಯ್ಯನ ಭಯ.
ನರಸಿಂಗರಾಯ ಎಲ್ಲವನ್ನೂ ಗಮನಿಸುತ್ತ ನಟರ ಹೆಸರುಗಳನ್ನು ಬರೆದುಕೊಳ್ಳುತ್ತಿದ್ದ. ಮುನಿಕೃಷ್ಣಪ್ಪ, ನಾರಾಯಣಪ್ಪರನ್ನು ಬಿಟ್ಟರೆ ಉಳಿದವರೆಲ್ಲ ಹೊಸಬರೇ. ಯಾರಿಗೆ ಯಾವ ಪಾರ್ಟು ಅನ್ನೋದನ್ನ ಅಪ್ಪಯ್ಯ, ಮೋಟಪ್ಪ, ನರಸಿಂಗ ತೀರ್ಮಾನಿಸಲಿ. ಇದಕ್ಕೆ ಒಪ್ಪಿಗೇನ ಎಂದ ದುಗ್ಗಪ್ಪ. ಎಲ್ಲರೂ 'ಓ' ಎಂದರು. 'ಸದಾರಮೆ ಪಾರ್ಟೋ?' ಅಂದ ಉಮೇಶನ ಬಾಲವಾಗಿದ್ದ ರಂಗ. ಅವನ ಬಾಲ ಸಿದ್ಧ, 'ಅವಳಲ್ಲ ನರಸಿಂಗನ...' ಅನ್ನುತ್ತಿರುವಾಗಲೆ ಮೇಲೆದ್ದ ಬೀರಣ್ಣ, 'ಊರಾಗ ಕಿಚ್ಚು ಮಡುಗೋ ತಿರುಬೋಕಿಗಳು' ಅಂದು ಆ ಇಬ್ಬರಿಗೂ ರಪರಪ ನಾಲ್ಕು ಬಾರಿಸಿಬಿಟ್ಟ.
ರಂಗ ಕೋಪದಿಂದ 'ಮಗನಿಗೆ ಪಾರ್ಟು ಕೊಟ್ಟ ಅಂತ ಹಿಂದಿನದನ್ನ...' ಅನ್ನುತ್ತಿರುವಾಗಲೇ ಇನ್ನೆರಡು ಏಟು ಬಿತ್ತು. ಸಭೆ ಹೋ ಎಂದಿತು. ಹಿರಿಯರು ಕೂಡಿ ಸಭೆಯನ್ನು ತಹಬಂದಿಗೆ ತಂದರು. ಹಣಕಾಸಿನ ವಿಚಾರವನ್ನು ಎತ್ತಿಕೊಂಡರು. ಬೀರಣ್ಣ ತನ್ನದು ಹತ್ತು ಸಾವಿರ ಇರಲಿ ಎಂದ. ಅಂದಾಜಿನ ಲೆಕ್ಕದ ಪ್ರಕಾರ ಇನ್ನು ಇಪ್ಪತ್ತು, ಇಪ್ಪತ್ತೈದು ಸಾವಿರ ಬೇಕಾಗುತ್ತೆ ಅಂದ ಅಪ್ಪಯ್ಯ. ಊರಲ್ಲಿರೋದು ಎಂಬತ್ತು ಮನೆ. ಅನುಕೂಲಸ್ಥರು ಅನ್ನೋವು ಹತ್ತು ಅಂದುಕೊಳ್ಳೋಣ. ಅವರು ಸಾವಿರ ಸಾವಿರ ಕೊಡಬೋದು. ಉಳಿದ ಎಪ್ಪತ್ತು ಮನೆಗಳೋರು ನೂರುನೂರು ಕೊಡಲಿ. ಇಪ್ಪತ್ತೇಳು ಸಾವಿರ ಆಗುತ್ತೆ ನಂದು ಮೂರುಸಾವಿರ ಸೇರಿಸಿ. ಮುವ್ವತ್ತಾಗುತ್ತೆ. ಮುನೆಕ್ಕ ವಸೂಲಿ ಮಾಡಲಿ ಎಂದ ದುಗ್ಗಪ್ಪ. ಶೇಷಪ್ಪ ಚಲ್ಲಾಪುರಮ್ಮನಿಗೆ ಮಂಗಳಾರತಿ ಮಾಡಿ, ಶ್ರೀಮದ್ರಮಾರಮಣ ಗೋವಿಂದೋ... ಅಂದ ಜನ 'ಗೋವಿಂದ' ಎಂದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications