ಅರಿಶಿಣದ ಮೈಯ ನನ್ನ ಶಕುಂತಲೆ ಬರುವಳು ನಾಚುತ್ತ ಹಸೆಗೆ
ಸುಳಿಬಾಳೆ ಎಲೆ ಬಾಲೆ
ಸರಸಿ ಸುಂದರಿ ಶಕುಂತಲೇ
ಕುಶಲವೆ?
ಕಾಗದದ ತುಂಬ ನಿನ್ನ ರೂಪ ಕಾಂತಿಯೇ ತುಂಬಿ ಅಕ್ಷರ ಮಸುಕಾಗಿ, ಓದಲಾಗದೆ ಹೋದೆ ಕೈ ಸೇರಿದೊಡನೆ. ಹಾಗಾಗಿ ಓಲೆ ಬರೆಯದಾದೆ ಒಡನೆ. ದೀನನಾಗಿ ಕ್ಷಮೆ ಬೇಡುವೆ. ಇರಲಿ ಈ ಬಡಪಾಯಿಯ ಮೇಲೆ ಕರುಣೆ.
ನಿನ್ನ ಕನಸು ಹತ್ತಿರದ ದಿನಗಳಲ್ಲಿ ನಿಜವಾಗಲಿದೆ. ನಿಮ್ಮವರ ಒಪ್ಪಿಗೆಯಲ್ಲಿ ಅಪ್ಪ ಮುಹೂರ್ತ ನಿಶ್ಚಯಿಸಿ ಬಂದಿರುವ. ಸಿದ್ಧತೆಯಲ್ಲಿ ತೊಡಗಿರುವಳು ಅಮ್ಮ. ಮುಂದಿನ ವಾರವೇ ನಮ್ಮಿಬ್ಬರ ಮನೆಗಳಲ್ಲಿ ಮೊಳಗಲಿದೆ ಓಲಗ. ನಂತರ ಏನೇನೆಂದು ಹೇಳಲೇನಿದೆ? ಹಾಲು ಸಕ್ಕರೆ ಬೆರೆಯಲಿದೆ. ನೀನು ಹಾಲು, ನಾನು ಸಕ್ಕರೆ. ರುಚಿ ನಮ್ಮ ಒಲವಿಗೆ.

ನಮ್ಮ ತೋಟದ ತೆಂಗಿನ ಗರಿಯ ಚಪ್ಪರ. ನಮ್ಮ ಮನೆಯಂಗಳದ ಮಾಮರದ ಚಿಗುರೆಲೆಯ ತೋರಣ. ಗೊನೆ ಜೋತ ಬಾಳೆ ಸ್ವಾಗತದ ಕಮಾನು. ತಣ್ಣನೆಯ ಸಿಹಿ ಎಳನೀರು ದಾಹಕ್ಕೆ. ನಮ್ಮ ಗದ್ದೆಯ ಕಬ್ಬು ಆಲೆಯಾಡಿದ ಬೆಲ್ಲ ದಿಬ್ಬಣದಿ ಪಾನಕಕೆ. ದವನ ಮರುಗದ ಜೊತೆಗೆ ಮಲ್ಲಿಗೆಯ ಸಿಂಗಾರ ಮದುವೆ ಮಂಟಪಕೆ.
ಬಿಳಿಯ ರೇಷಿಮೆ ಸೀರೆ ರವಿಕೆಯಲಿ ಅರಿಶಿಣದ ಮೈಯ ನನ್ನ ಶಕುಂತಲೆ ಬರುವಳು ನಾಚುತ್ತ ಹಸೆಗೆ. ಪಕ್ಕ ನಿಲ್ಲುವಳು ನನಗೆ ಒರಗಿಯೂ ಒರಗದಂತೆ. ನನ್ನ ಓರೆ ನೋಟಕ್ಕೆ ಕಾಣುವಳು ವೇಂಕಟೇಶನ ಬದಿ ನಿಂತ ಅಲಮೇಲುಮಂಗಳಂತೆ.
'ಹಸಿರು ತೋರಣ
ನಿತ್ಯ ಕಲ್ಯಾಣ
ಆಗಲಿ ನಮ್ಮ ಸೀತಾ ಶ್ರೀರಾಮರಿಗೆ' ಎಂದು ಹಿರಿ ಮತ್ತೈದೆಯರು ಹರಸಿ ಆರತಿ ಬೆಳಗಿದಾಗ, ನೀ ಪಿಸುಗುಡುವೆ ಕಿವಿಯಲ್ಲಿ, ಸೀತೆಗೆ ವನವಾಸವಾಯ್ತು. ಸರಿಯಲ್ಲ ಈ ಹಾಡು. ರುಕ್ಮಣಿ ಕೃಷ್ಣರಿಗೆ ಎಂದಿದ್ದರೆ ಚೆನ್ನ ಎಂದು.
ನಾನಾಗ, ರುಕ್ಮಿಣಿಗೆ ಸವತಿಯರು. ನೀನು ಸಿದ್ಧವೇ ಅನ್ನುವೆ. ನಿನ್ನಲ್ಲಿ ಸಿಟ್ಟು ನನಗಷ್ಟೇ ಕಾಣುವಂತೆ. ಆಗೆಷ್ಟು ಅಂದವೋ ನಿನ್ನ ಮುಖ, ಮತ್ತೆ ಮತ್ತೆ ನೋಡುತಿರಬೇಕು ಅನ್ನಿಸುವಂತೆ. ನಿನ್ನ ಕಿವಿಯಲ್ಲಿ ಹೇಳುವೆನು, ಕಾಂತೆ ನಿನಗೆ ವನವಾಸವೂ ಇರದು, ಸವತಿಯಂತೂ ಬರಳು. ಹೀಗೆ ಹಾಡುವುದು ಸಂಪ್ರದಾಯಕ್ಕೆ. ಹರಕೆಯಾಚೆಗೆ ಅರ್ಥ ಹಚ್ಚದಿರು. ನಕ್ಕುಬಿಡು ಒಮ್ಮೆ ಈ ಹಗಲಿನಲಿ ಬೆಳದಿಂಗಳಿಳಿದಂತೆ. ಅಂತೆ ನೀನಗುವೆ.
ಇದು ನನ್ನ ಕನಸೂ ಹೌದು, ಕಲ್ಪನೆಯೂ ಹೌದು ಶಕುಂತಲೆ. ಇಂಥ ಭಾವನೆಗಳಿಂದಲೇ ನಾವು ಕಟ್ಟುವುದು ಮುಂದಿನ ಬಾಳಿನ ಅಂದದ ಮನೆ. ಇಂದು ನಾವು ಕಟ್ಟಿದ ಈ ಕನಸುಗಳ ಜೊತೆಗೆ ನಾಳೆ ಇಬ್ಬರೂ ಕಾಣುವ ಕನಸುಗಳು ಕೂಡಿ ಬದುಕಿನಲಿ ಬೀಸುವುದು ಸುಖದ ತಂಗಾಳಿ. ಎದೆಯ ಹಾಡುತಿದೆ ನಲ್ಲೆ ಶಕುಂತಲೆ, 'ನಮ್ಮ ಪುಣ್ಯವೇ ಪ್ರೇಮದಲಿ ಪಲ್ಲವಿಸಿ, ನಮ್ಮಿಬ್ಬರನು ಹೀಗೆ ಒಂದುಗೂಡಿಸಿತೋ ಸಮರಸದ ಸಮ ಜೀವನಕೆ.'
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications