ಅರಿಶಿಣದ ಮೈಯ ನನ್ನ ಶಕುಂತಲೆ ಬರುವಳು ನಾಚುತ್ತ ಹಸೆಗೆ
ಸುಳಿಬಾಳೆ ಎಲೆ ಬಾಲೆ
ಸರಸಿ ಸುಂದರಿ ಶಕುಂತಲೇ
ಕುಶಲವೆ?
ಕಾಗದದ ತುಂಬ ನಿನ್ನ ರೂಪ ಕಾಂತಿಯೇ ತುಂಬಿ ಅಕ್ಷರ ಮಸುಕಾಗಿ, ಓದಲಾಗದೆ ಹೋದೆ ಕೈ ಸೇರಿದೊಡನೆ. ಹಾಗಾಗಿ ಓಲೆ ಬರೆಯದಾದೆ ಒಡನೆ. ದೀನನಾಗಿ ಕ್ಷಮೆ ಬೇಡುವೆ. ಇರಲಿ ಈ ಬಡಪಾಯಿಯ ಮೇಲೆ ಕರುಣೆ.
ನಿನ್ನ ಕನಸು ಹತ್ತಿರದ ದಿನಗಳಲ್ಲಿ ನಿಜವಾಗಲಿದೆ. ನಿಮ್ಮವರ ಒಪ್ಪಿಗೆಯಲ್ಲಿ ಅಪ್ಪ ಮುಹೂರ್ತ ನಿಶ್ಚಯಿಸಿ ಬಂದಿರುವ. ಸಿದ್ಧತೆಯಲ್ಲಿ ತೊಡಗಿರುವಳು ಅಮ್ಮ. ಮುಂದಿನ ವಾರವೇ ನಮ್ಮಿಬ್ಬರ ಮನೆಗಳಲ್ಲಿ ಮೊಳಗಲಿದೆ ಓಲಗ. ನಂತರ ಏನೇನೆಂದು ಹೇಳಲೇನಿದೆ? ಹಾಲು ಸಕ್ಕರೆ ಬೆರೆಯಲಿದೆ. ನೀನು ಹಾಲು, ನಾನು ಸಕ್ಕರೆ. ರುಚಿ ನಮ್ಮ ಒಲವಿಗೆ.

ನಮ್ಮ ತೋಟದ ತೆಂಗಿನ ಗರಿಯ ಚಪ್ಪರ. ನಮ್ಮ ಮನೆಯಂಗಳದ ಮಾಮರದ ಚಿಗುರೆಲೆಯ ತೋರಣ. ಗೊನೆ ಜೋತ ಬಾಳೆ ಸ್ವಾಗತದ ಕಮಾನು. ತಣ್ಣನೆಯ ಸಿಹಿ ಎಳನೀರು ದಾಹಕ್ಕೆ. ನಮ್ಮ ಗದ್ದೆಯ ಕಬ್ಬು ಆಲೆಯಾಡಿದ ಬೆಲ್ಲ ದಿಬ್ಬಣದಿ ಪಾನಕಕೆ. ದವನ ಮರುಗದ ಜೊತೆಗೆ ಮಲ್ಲಿಗೆಯ ಸಿಂಗಾರ ಮದುವೆ ಮಂಟಪಕೆ.
ಬಿಳಿಯ ರೇಷಿಮೆ ಸೀರೆ ರವಿಕೆಯಲಿ ಅರಿಶಿಣದ ಮೈಯ ನನ್ನ ಶಕುಂತಲೆ ಬರುವಳು ನಾಚುತ್ತ ಹಸೆಗೆ. ಪಕ್ಕ ನಿಲ್ಲುವಳು ನನಗೆ ಒರಗಿಯೂ ಒರಗದಂತೆ. ನನ್ನ ಓರೆ ನೋಟಕ್ಕೆ ಕಾಣುವಳು ವೇಂಕಟೇಶನ ಬದಿ ನಿಂತ ಅಲಮೇಲುಮಂಗಳಂತೆ.
'ಹಸಿರು ತೋರಣ
ನಿತ್ಯ ಕಲ್ಯಾಣ
ಆಗಲಿ ನಮ್ಮ ಸೀತಾ ಶ್ರೀರಾಮರಿಗೆ' ಎಂದು ಹಿರಿ ಮತ್ತೈದೆಯರು ಹರಸಿ ಆರತಿ ಬೆಳಗಿದಾಗ, ನೀ ಪಿಸುಗುಡುವೆ ಕಿವಿಯಲ್ಲಿ, ಸೀತೆಗೆ ವನವಾಸವಾಯ್ತು. ಸರಿಯಲ್ಲ ಈ ಹಾಡು. ರುಕ್ಮಣಿ ಕೃಷ್ಣರಿಗೆ ಎಂದಿದ್ದರೆ ಚೆನ್ನ ಎಂದು.
ನಾನಾಗ, ರುಕ್ಮಿಣಿಗೆ ಸವತಿಯರು. ನೀನು ಸಿದ್ಧವೇ ಅನ್ನುವೆ. ನಿನ್ನಲ್ಲಿ ಸಿಟ್ಟು ನನಗಷ್ಟೇ ಕಾಣುವಂತೆ. ಆಗೆಷ್ಟು ಅಂದವೋ ನಿನ್ನ ಮುಖ, ಮತ್ತೆ ಮತ್ತೆ ನೋಡುತಿರಬೇಕು ಅನ್ನಿಸುವಂತೆ. ನಿನ್ನ ಕಿವಿಯಲ್ಲಿ ಹೇಳುವೆನು, ಕಾಂತೆ ನಿನಗೆ ವನವಾಸವೂ ಇರದು, ಸವತಿಯಂತೂ ಬರಳು. ಹೀಗೆ ಹಾಡುವುದು ಸಂಪ್ರದಾಯಕ್ಕೆ. ಹರಕೆಯಾಚೆಗೆ ಅರ್ಥ ಹಚ್ಚದಿರು. ನಕ್ಕುಬಿಡು ಒಮ್ಮೆ ಈ ಹಗಲಿನಲಿ ಬೆಳದಿಂಗಳಿಳಿದಂತೆ. ಅಂತೆ ನೀನಗುವೆ.
ಇದು ನನ್ನ ಕನಸೂ ಹೌದು, ಕಲ್ಪನೆಯೂ ಹೌದು ಶಕುಂತಲೆ. ಇಂಥ ಭಾವನೆಗಳಿಂದಲೇ ನಾವು ಕಟ್ಟುವುದು ಮುಂದಿನ ಬಾಳಿನ ಅಂದದ ಮನೆ. ಇಂದು ನಾವು ಕಟ್ಟಿದ ಈ ಕನಸುಗಳ ಜೊತೆಗೆ ನಾಳೆ ಇಬ್ಬರೂ ಕಾಣುವ ಕನಸುಗಳು ಕೂಡಿ ಬದುಕಿನಲಿ ಬೀಸುವುದು ಸುಖದ ತಂಗಾಳಿ. ಎದೆಯ ಹಾಡುತಿದೆ ನಲ್ಲೆ ಶಕುಂತಲೆ, 'ನಮ್ಮ ಪುಣ್ಯವೇ ಪ್ರೇಮದಲಿ ಪಲ್ಲವಿಸಿ, ನಮ್ಮಿಬ್ಬರನು ಹೀಗೆ ಒಂದುಗೂಡಿಸಿತೋ ಸಮರಸದ ಸಮ ಜೀವನಕೆ.'
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications