ನಿನ್ನೆದೆ ತಾವರೆ ಮೊಗ್ಗುಗಳು ನಾವೂ ಅರಳಿದೆವೆಂದು ನನ್ನ ಕಣ್ಣುಗಳಿಗೆ ಹೇಳಿದವು
ಸುಮ ಸೌರಭದ ಮನದ ಶಕುಂತಲೇ,
ಶಕು ಅನ್ನೋ ಅಡ್ಡ ಹೆಸರು ನಿನಗೆ ಹೊಂದುವುದಿಲ್ಲ ಎಂದು ನನಗೂ ಅನಿಸಿದೆ. ಇದು ಚೆಲವರಾಯಡುವಿಗೂ ಗೊತ್ತು. ಆದರೂ ಅವನ ಕೋಲಾರು ಕೊಂಟೆ (ತುಂಟ)ಬುದ್ಧಿ ಎಲ್ಲಿ ಹೋದೀತು? ಕೀಟಲೆ ಅವನ ಗುಣಗಳಲ್ಲಿ ಒಂದು. ಅದನ್ನು ಅವನು ಕಣ್ಣು ಮಿಟುಕಿಸಿದ್ದೇ ಹೇಳುತ್ತದೆ.
ಅವನು ಯಾರಿಗೂ ಖುಷಿ ಕೊಡಬಲ್ಲ. ಈ ಗುಣವನ್ನು ಮೆಚ್ಚಿಯೇ ಜಾನಕಿ ಲೈನು ಹೊಡೆದು, ಬುಟ್ಟಿಗೆ ಹಾಕಿಕೊಂಡಿದ್ದು ಎಂದು ಹೇಳಿದ್ದ. ಅವಳ ಪ್ರೀತಿಯಲ್ಲೂ ತುಂಟತನ ತುಳುಕುತ್ತದಂತೆ. ನೀನು ಅವಳೊಂದಿಗೆರಡು ದಿನವಿದ್ದು, ಕಲಿತುಕೊಳ್ಳಬಹುದು. ಮುನಿಯ ಬೇಡ ಮಾರಾಯ್ತಿ, ನಿನ್ನನ್ನು ರೇಗಿಸಲು ಹೇಳಿದೆ.
ನಿನ್ನಲ್ಲಿ ತುಂಟತನಕ್ಕೇನೂ ಬರವಿಲ್ಲ. ಅವಳ ಮಾತಿನಲ್ಲಿ ತುಂಟತನವಿದ್ದರೆ, ನಿನ್ನ ಕಣ್ಣು, ತುಟಿ, ಮೂಗು, ಕೆನ್ನೆ, ಕೈಗಳಲ್ಲೆಲ್ಲ ಅದೇ ಲಾಸ್ಯವಿದೆ. ನಿನ್ನ ಈ ರೀತಿಯ ತುಂಟತನ ನನಗೆ ಬಹಳ ಇಷ್ಟ.

ಚೆಲುವರಾಯುಡು ಅತ್ತ ಹೋದ ಮೇಲೆ ಕನಕಾಂಬರ ಗಿಡಕ್ಕೆ ಗಾಯದ ನೀರು ಹಾಕಿ, ತೋಟವನ್ನು ಒಂದು ಸುತ್ತು ಹಾಕಿದೆ. ಗಿಳಿಗಳು ಅಂದು ದಾರಿ ಬದಲಿಸಿದಂತಿತ್ತು. ಒಂದರ ಸುಳಿವೂ ಇರಲಿಲ್ಲ. ಕನಕಾಂಬರ ಗಿಡ ವರ್ಷಗಟ್ಟಲೆ ಬದುಕಿರುವುದಿಲ್ಲ. ನಮ್ಮ ತೋಟದಲ್ಲಿ ನನ್ನ ಶಕುಂತಲೆಯ ನೆನಪಿನದು ಅನೇಕ ವರುಷಗಳ ಕಾಲ ಉಳಿದಿರಬೇಕು. ಅದು ಮೃದು ಕೋಮಲದ್ದಾಗಿರಬೇಕು. ಎಂಬ ಆಲೋಚನೆ ಬಂದಿತು.
ಏನೆಂದು ತೋಚಲಿಲ್ಲ. ಪಕ್ಕದ ತೋಟದ ಲಕ್ಕೀಮರದಲ್ಲಿ ಕೋಗಿಲೆ ಕೂಗಿತು. ನಾವು ದಾರಿ ಬದಲಿಸಿಲ್ಲವೆಂದು ಸಾರುತ್ತ ಗಿಳಿವಿಂಡು ಬಂದಿತು. ಅವುಗಳನ್ನು ಅಟ್ಟುತ್ತ ಪೂರ್ವ ದಿಕ್ಕಿನ ಬದುವಿಗೆ ಹೋದೆ. ಅದರ ಕೆಳ ಬಾಗದಲ್ಲಿ ನಮ್ಮದೇ ಗದ್ದೆಗಳು. ತೋಟದ ಅಂಚಿನ ಗದ್ದೆಯ ಕೆಸರಿನಲ್ಲಿ ಎಮ್ಮೆ ಮಲಗಿ ಹೊರಳಾಡಿ, ತನ್ನ ಹೊಟ್ಟೆಯಾಕಾರದ ಗುಳಿಯನ್ನು ನಿರ್ಮಿಸಿತ್ತು. ಅದರಲ್ಲಿ ಜಿನುಗು ನೀರು ತುಂಬಿತ್ತು.
ಅದನ್ನು ನೋಡಿದಾಗ, ಗದ್ದೆಯ ಕಾಲು ಭಾಗದಲ್ಲಿ ಹಳ್ಳ ತೋಡಿ, ತಾವರೆಯನ್ನೇಕೆ ನೆಡಬಾರದು ಎಂಬ ಆಲೋಚನೆ ಬಂದಿತು. ಇದು ಪ್ರಿಯ ಶಕುಂತಲೆಗೆ ಉತ್ತಮ ಕೊಡುಗೆ ಅನ್ನಿಸಿತು. ಕಲ್ಪನೆಯ ನವಿಲು ಮನದಲ್ಲಿ ರೆಕ್ಕೆ ಬಿಚ್ಚಿ ಕುಣಿತು. ಸೂರ್ಯ ರಶ್ಮಿ ನೆಲವ ಚುಂಬಿಸುತ್ತಲೆ ಕೊಳದ ತಾವರೆಗೆ ಮುತ್ತು ಕೊಟ್ಟಿತು. ಅದು ಒಂದೊಂದು ಮೊಗ್ಗು ದಳ ಬಿಚ್ಚತ್ತ ಅರಳುತ್ತಿದ್ದವು.
ನೀನು ಮೀನು ಖಂಡಗಳ ಮೇಲಕ್ಕೆ ಸೀರೆಯೆತ್ತಿ, ಬಾಗಿ ಅರಳು ತಾವರೆಯ ಕೀಳುತ್ತಿರುವಾಗ ನಿನ್ನೆದೆ ತಾವರೆ ಮೊಗ್ಗುಗಳು ನಾವೂ ಅರಳದೆವೆಂದು ನನ್ನ ಕಣ್ಣುಗಳಿಗೆ ಹೇಳಿದವು. ತಲೆಯೆತ್ತಿ ನನ್ನ ಮುಖ ನೋಡಿದ ನೀನು, ನನ್ನ ನೋಟದ ಗತಿಯನ್ನು ಗುರುತಿಸಿದೆ. ಥಟ್ಟನೆ ಜಾರು ಸೆರಗನ್ನು ಹೊದೆದು, ಥೂ ಪೋಲಿ ಎಂದಾಗ ನಾಚಿದ ನಿನ್ನ ಮುಖ ಕೆಂದಾವರೆಯಂತಾಗಿತ್ತು.
ಕೊಳದಲ್ಲಿ ಕಮಲ, ಅವುಗಳ ನಡುವೆ ನಾಚಿ ನಿಂತ ಜಲಜಮುಖಿ ನನ್ನ ಶಕುಂತಲೆ! ಯಾವ ಜನುಮದ ಸೌಂದರ್ಯ ಭಾಗ್ಯದ ಪುಣ್ಯಫಲವೋ ಈ ಜನ್ಮದಲಿ ಹೀಗೆ ಫಲಿಸಿತ್ತು.
ಇದೇ ಗುಂಗಿನಲ್ಲಿ ಮನೆಗೆ ಹೋದೆ. ಊಟ ಮಾಡುವಾಗ ತಾವರೆ ಕೊಳ ಕಟ್ಟುವ ಮನದ ಇಂಗಿತವನ್ನು ಹೇಳಿದೆ. ಅದಕ್ಕೆ 'ನಿನಗೇನು ಅಡ್ಡಿ, ಅಷ್ಟು ಜಾಗದಲ್ಲಿ ಬೆಳೆದು ದೊಡ್ಡ ರಾಳಿ ಹಾಕುವುದೇನಿದೆ?' ಎಂದು ನಿಸರ್ಗಪ್ರಿಯ ರೈತ ಅಪ್ಪ ಒಪ್ಪಿಗೆ ಕೊಟ್ಟ. 'ಇದು ಶಕುಂತಲೆಯ ಮಾತೋ?' ಎಂದು ಅಮ್ಮ ನವಿರಾಗಿ ಚುಚ್ಚಿ ನಕ್ಕಳು.
ಮಾರನೇ ದಿನವೇ ಗದ್ದೆಗಿಳಿಗಿದೆ. ಸಹಾಯಕ್ಕೆ ಕೆಂಚಪ್ಪ ಬಂದ. ಇಬ್ಬರೂ ಮುಸ್ಸಂಜೆ ಹೊತ್ತಿಗೆ ಕೊಳ ನಿರ್ಮಾಣ ಮಾಡಿದೆವು. ಕೆಂಪುದೋ, ಬಿಳೀದೋ? ಎಂದು ತಲೆಗೆ ಚಿಂತೆ ತಂದ. 'ಕೆಂಪುದು ಹಾಕಿ. ನಾಳೆ ಬೆಳಿಗ್ಗೆಯೇ ಕಡತೂರು ಕೆರೆಗೆ ಹೋಗಿ ಗೆಡ್ಡೆಗಳನ್ನ ತರುತ್ತೇನೆ. ಕೆಂಚನ ತಾವರೆಕೊಳ ಅಂತ ಹೆಸರಿಡಿ. ನನ್ನ ನೆನಪಿರುತ್ತೆ' ಅಂದ ಕಿಲಾಡಿ.
ಕೊಳದಲ್ಲಿ ಕೆಂದಾವರೆಯ ಬಿತ್ತನೆಯಾಗಿದೆ ಶಕುಂತಲೆ. ಅದರ ದಂಟಿಟ್ಟು ನೀರ ಮೇಲೆ ಎಲೆ ಹರಡಿ, ಮೊಗ್ಗಿಟ್ಟು ಹೂ ಅರಳುವ ದಿನಕೆ ಕಾಯುತಿದೆ ಮನಸು. ಕೊಳಕ್ಕೆ ಅಮ್ಮನೇ 'ಶಕುಂತಲೆಯ ಕೆಂದಾವರೆ ಕೊಳ' ಎಂದು ನಾಮಕರಣ ಮಾಡಿದ್ದಾಳೆ. ಈಗಲೇ ನಿಮ್ಮಿಬ್ಬರ ನಡುವೆ ಇಷ್ಟೊಂದು ಹೊಂದಾಣಿಕೆ. ನಿನ್ನನ್ನು ಮನೆ ತುಂಬಿಸಿಕೊಂಡ ಮೇಲೆ 'ಅಮ್ಮ ನಿಮ್ಮ ಮಗ ಕರೀತಿದ್ದಾರೆ. ರೂಮಿಗೆ ಹೋಗಲೇ' ಎಂದು ಕೇಳುವಿಯೇನೊ!? ಹಾಗೇನಾದರೂ ಮಾಡೀಯ ಮಾರಾಯ್ತಿ. ಬೇಡ ಇಲ್ಲಿಯೇ ಮಲಗು ಅಂದುಬಿಡುತ್ತಾಳೆ. ಅವಳು ಬಲು ತುಂಟಿ.'
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications