ಜೇನಾಗಿ ನಿನ್ನ ಬಳಿ ಬರುವೆನೆಂಬ ಮಾತು ಒಪ್ಪಿ ಬೆಪ್ಪನಾದೆನೇ ಶಕುಂತಲಾ!
ಹೃದಯ ಪ್ರಿಯೆ ಶಕುಂತಲೇ,
ತವರಿನಲಿ ಹೇಗಿರುವೆ?
ಇಲ್ಲಿ ನಾನಿರುವೆ ಕೆಲಸಗಳ ನಡುವೆ ಸಿಗುವ ಬಿಡುವುಗಳಲ್ಲಿ ನಿನ್ನ ನೆನಪಿನಲ್ಲಿ. ನಾವೀಗ ನಿನ್ನಿಂದ ತಿಂಗಳಿನಷ್ಟು ದೂರದಲ್ಲಿದ್ದೇವೆ. ಈ ತಿಂಗಳೆಂದರೆ ಚಂದಿರ. ನೋಡಲು ಹತ್ತಿರ, ಯೋಚಿಸಿದರೆ ಎಷ್ಟೊಂದು ದೂರ! ನೀನು ನೆನಪಿನಲ್ಲಿರುವೆ ಹತ್ತಿರ.
ಅಗಲಿಕೆಯಲ್ಲಿ ಆ ಚಂದ್ರನಷ್ಟು ದೂರ. ಈ ಮಾತಿಗೆ ನೀನು ಮದುವೆಗೆ ಮುಂಚೆ ನಿಮ್ಮೂರು ನನಗೆ ಎಷ್ಟು ದೂರವಿತ್ತೋ ಈಗ ನಮ್ಮೂರು ನಿನಗೆ ಅಷ್ಟೇ ದೂರವೆಂದು ಹೇಳುತ್ತಿಯೆಂದು ಬಲ್ಲೆ. ಕೊಂಚ ಹುಬ್ಬಿಳಿಸಿ ನೋಡು. ಅಳತೆಯ ದೂರ ನೀನಂದಂತೆ ಸರಿ. ಈಗ ಹಾಗಲ್ಲ ಮನಸ್ಸಿಗೆ ನೀನು ಅತಿ ದೂರದಲ್ಲಿರುವೆ ಅನ್ನಿಸುವುದು. ಇದು ವಿರಹ ಮಾಸದ ಭಾವದೂರ ಶಕುಂತಲೆ.
ಆಷಾಢವೆಂದು ನೀನು ಊರಿಗೆ ಹೋದೆ. ನನ್ನ ಹೊರತು ನೀನು ಹೋದುದು ಬಹು ದೂರವೆಂದು ಯಾರಿಗೂ ತಿಳಿದಿಲ್ಲ. ನನ್ನ ಅಗಲಿ ಹೋಗುವುದೆಂದಾಗ ನಿನ್ನ ಹೃದಯದ ಭಾರ ನನಗೆ ತಿಳಿದಿತ್ತು. ಹೊರಟ ಮೇಲೆ ತವರಿನ ಪ್ರೀತಿ ನಿನ್ನೆದೆಯಲ್ಲಿ ತುಳುಕಿ ನೀನು ಗೆಲುವಾಗಿದ್ದೆ. ಹೊರಡುವ ಹಾಗೂ ಹೊರಟ ಕಾಲದ ನಡುವಿನ ಕೆಲ ನಿಮಿಷಗಳಲ್ಲಿ, 'ವಸಂತ ರಾಜಾ, ಶ್ರಾವಣಕೆ ಜೇನಾಗಿ ನಿನ್ನ ಬಳಿ ಬರಲು ಈಗ ಹೋಗುವುದು ಬೇಡವೆ' ಎಂದು ರಮಿಸಿದಾಗ ಸರಿಯೆಂದು ತೋರಿತ್ತು.

ಅಂದು ರಾತ್ರಿ ಮಂಚ ಹೇಳಿತು, 'ಪೆದ್ದೇ ಜೇನಾಗಿ ಬರಲು ನಿನ್ನವಳಲ್ಲಿ ಎಲ್ಲಿ ಬತ್ತಿತ್ತು ಜೇನು? ಶಕುಂತಲೆಯ ಮಾತಿಗೆ ಮರುಳಾದಿಯಲ್ಲೋ ಗಂಡೆ.' ಹೊರಡುವ ಮೊದಲ ಮೂರು ದಿನಗಳಲ್ಲಿ ನಿನ್ನ ಒಂದೊಂದು ಪರಿಯ ಒಯ್ಯಾರದಲ್ಲಿ ಆಷಾಢದ ಸಂಚು ಹೀಗಿರುತ್ತದೆಂದು ಅರಿವಾಗಲಿಲ್ಲ. ಈಗ ಅರಿವಾಗುತ್ತಿದೆ. ಆದರೆ ಪ್ರಯೋಜನವಿಲ್ಲ.
ಈ ಕಾಗದ ಬರೆಯುತ್ತಿರುವ ಸಮಯ ರಾತ್ರಿ ಹನ್ನೆರಡು ಗಂಟೆ. ಮನಸ್ಸಿನ ತುಂಬಾ 'ವಿರಹ ನೂರು ನೂರು ತರಹ' ಹಾಡು. ನನಗೆ ಮಾತ್ರ ಅದು ನೂರು ನೂರು ತರಹದ್ದಲ್ಲ. ಶಕುಂತಲೆ ಇಲ್ಲದ್ದು ಒಂದೇ. ನಂತರ ತಿಳಿಯಿತು ಶಕುಂತಲೇ ಇರದಿರುವುದರಲ್ಲೇ ಆ ನೂರು ನೂರು ತರಹದ್ದಾಗಿದೆ ಎಂದು.
'ಬಂತದೋ ಶೃಂಗಾರ ಮಾಸ' ಹಾಡು ನಿದ್ದೆಯಿಂದೆಬ್ಬಿಸಿತು. ಕಳೆದು ಹೋಯಿತೇ ಆಷಾಢ ಮಾಸ? ಮಲಗಿದ್ದೆನೆ ಇಡೀ ತಿಂಗಳು? ರೈಲಿನ ಕೂಗು ಕೇಳಿಸಿತು. ಹೇಳಿದಂತೆ ಜೇನಾಗಿ ಬಂದು ಬಿಟ್ಟಳೇ ಶಕುಂತಲೆ? ಬರಮಾಡಿಕೊಳ್ಳಲು, ತೋಳುಗಳಲ್ಲಿ ತಬ್ಬಿ ತುಂಬಿಕೊಳ್ಳುವುದು ತಡವಾಯಿತೆ ಎಂದು, ನಿದ್ದೆಯನ್ನು ಹಾಳಾದ್ದು ಎಂದು ತೆಗಳಿ, ದಡಬಡಿಸಿ ಎದ್ದೆ. ಬೆಳಗಿನ ಜಾವ, ಕನಸು.
'ಬಂತದೋ ಶೃಂಗಾರ ಮಾಸ' ಮತ್ತೆ ಎದೆಗೆ ಬಂದಿತು ಹಾಡು. ನೆನಪಾಯಿತು 'ಜೇನಾಗಿ ಬರುವೆ' ಎಂದ ನಿನ್ನ ಮಾತು. ಆಷಾಢವನ್ನು ಜಪಿಸುತ್ತ, ನಿಂದಿಸುತ್ತ, ವಿರಹದಲಿ ಬೇಯುವುದಕ್ಕಿಂತ ನೀ ತವರಿಂದ ಹೊರಟ ಸುದ್ದಿಯ ಗೆಜ್ಜೆ ಕಾಲಿನ ನಾದಕ್ಕಾಗಿ ಕಾಯುವುದರಲ್ಲಿ ಸುಖವಿದೆ ಅನ್ನಿಸಿದಾಗ-
'ಬರುತಲಿದೆ ಶೃಂಗಾರ ಮಾಸ
ಮಂದಹಾಸ ತುಂಬಿ ಬರುವ
ಶಕುಂತಲೆಯ ಕರೆತರುತ
ಬರುತಲಿದೆ ಶೃಂಗಾರ ಮಾಸ'
ಎಂದು ಹಾಡು ಕಟ್ಟಿ ಹಾಡಿಕೊಂಡಾಗ, ಹಾಡಿಕೊಳ್ಳುವಾಗ ಸುಖಾನಂದ ಅನ್ನಿಸಿದರೂ 'ವಿರಹಮಾಸ'ದ ವಿರಹಿ ನಾನೆಂಬುದು ವಿರಹದ ಆಣೆ ನಿಜ ಶಂಕುತಲೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications