ಹರಕೆಯಾಚೆಗೆ ಆರ್ಥ ಹಚ್ಚದಿರು, ನಕ್ಕು ಬಿಡು ಒಮ್ಮೆ ಹಗಲಿನಲಿ ಬೆಳದಿಂಗಳಂತೆ
ಸುಳಿಬಾಳೆ ಎಲೆ ಬಾಲೆ
ಸರಸಿ ಸುಂದರಿ ಶಕುಂತಲೇ
ಕುಶಲವೆ?
ಕಾಗದದ ತುಂಬ ನಿನ್ನ ರೂಪ ಕಾಂತಿಯೇ ತುಂಬಿ, ಅಕ್ಷರ ಮಸುಕಾಗಿ ಓದಲಾಗದೆ ಹೋದೆ ಕೈ ಸೇರಿದೊಡನೆ. ಹಾಗಾಗಿ ಓಲೆ ಬರೆಯದಾದೆ ಒಡನೆ. ದೀನನಾಗಿ ಕ್ಷಮೆ ಬೇಡುವೆ. ಇರಲಿ ಈ ಬಡಪಾಯಿಯ ಮೇಲೆ ಕರುಣೆ.
ನಿನ್ನ ಕನಸು ಹತ್ತಿರದ ದಿನಗಳಲ್ಲಿ ನಿಜವಾಗಲಿದೆ. ನಿಮ್ಮವರ ಒಪ್ಪಿಗೆಯಲ್ಲಿ ಅಪ್ಪ ಮುಹೂರ್ತ ನಿಶ್ಚಯಿಸಿ ಬಂದಿರುವ. ಸಿದ್ಧತೆಯಲ್ಲಿ ತೊಡಗಿರುವಳು ಅಮ್ಮ. ಮುಂದಿನ ವಾರವೇ ನಮ್ಮಿಬ್ಬರ ಮನೆಗಳಲ್ಲಿ ಮೊಳಗಲಿದೆ ಓಲಗ. ನಂತರ ಏನೇನೆಂದು ಹೇಳಲೇನಿದೆ? ಹಾಲು ಸಕ್ಕರೆ ಬೆರೆಯಲಿದೆ. ನೀನು ಹಾಲು, ನಾನು ಸಕ್ಕರೆ. ರುಚಿ ನಮ್ಮ ಒಲವಿಗೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಮ್ಮ ತೋಟದ ತೆಂಗಿನ ಗರಿಯ ಚಪ್ಪರ. ನಮ್ಮ ಮನೆಯಂಗಳದ ಮಾಮರದ ಚಿಗುರೆಲೆಯ ತೋರಣ. ಗೊನೆ ಜೋತ ಬಾಳೆ ಸ್ವಾಗತದ ಕಮಾನು. ತಣ್ಣನೆಯ ಸಿಹಿ ಎಳನೀರು ದಾಹಕ್ಕೆ. ನಮ್ಮ ಗದ್ದೆಯ ಕಬ್ಬು ಆಲೆಯಾಡಿದ ಬೆಲ್ಲ ದಿಬ್ಬಣದಿ ಪಾನಕಕೆ. ದವನ ಮರುಗದ ಜೊತೆಗೆ ಮಲ್ಲಿಗೆಯ ಸಿಂಗಾರ ಮದುವೆ ಮಂಟಪಕೆ.

ಬಿಳಿಯ ರೇಷಿಮೆ ಸೀರೆ ರವಿಕೆಯಲಿ ಅರಿಶಿಣದ ಮೈಯ ನನ್ನ ಶಕುಂತಲೆ ಬರುವಳು ನಾಚುತ್ತಾ ಹಸೆಗೆ. ಪಕ್ಕ ನಿಲ್ಲುವಳು ನನಗೆ ಒರಗಿಯೂ ಒರಗದಂತೆ. ನನ್ನ ಓರೆ ನೋಟಕ್ಕೆ ಕಾಣುವಳು ವೇಂಕಟೇಶನ ಬದಿ ನಿಂತ ಅಲಮೇಲುಮಂಗಳಂತೆ.
'ಹಸಿರು ತೋರಣ
ನಿತ್ಯ ಕಲ್ಯಾಣ
ಆಗಲಿ ನಮ್ಮ
ಸೀತಾ ಶ್ರೀರಾಮರಿಗೆ'
ಎಂದು ಹಿರಿ ಮತ್ತೈದೆಯರು ಹರಸಿ ಆರತಿ ಬೆಳಗಿದಾಗ, ನೀ ಪಿಸುಗುಡುವೆ ಕಿವಿಯಲ್ಲಿ, ಸೀತೆಗೆ ವನವಾಸವಾಯ್ತು. ಸರಿಯಲ್ಲ ಈ ಹಾಡು. ರುಕ್ಮಣಿ ಕೃಷ್ಣರಿಗೆ ಎಂದಿದ್ದರೆ ಚೆನ್ನ ಎಂದು. ನಾನಾಗ, ರುಕ್ಮಿಣಿಗೆ ಸವತಿಯರು. ನೀನು ಸಿದ್ಧವೇ ಅನ್ನುವೆ. ನಿನ್ನಲ್ಲಿ ಸಿಟ್ಟು ನನಗಷ್ಟೇ ಕಾಣುವಂತೆ. ಆಗೆಷ್ಟು ಅಂದವೋ ನಿನ್ನ ಮುಖ, ಮತ್ತೆ ಮತ್ತೆ ನೋಡುತಿರಬೇಕು ಅನ್ನಿಸುವಂತೆ.
ನಿನ್ನ ಕಿವಿಯಲ್ಲಿ ಹೇಳುವೆನು, ಕಾಂತೆ ನಿನಗೆ ವನವಾಸವೂ ಇರದು, ಸವತಿಯಂತೂ ಬರಳು. ಹೀಗೆ ಹಾಡುವುದು ಸಂಪ್ರದಾಯಕ್ಕೆ. ಹರಕೆಯಾಚೆಗೆ ಅರ್ಥ ಹಚ್ಚದಿರು. ನಕ್ಕುಬಿಡು ಒಮ್ಮೆ ಈ ಹಗಲಿನಲಿ ಬೆಳದಿಂಗಳಿಳಿದಂತೆ. ಅಂತೆ ನೀ ನಗುವೆ.
ಇದು ನನ್ನ ಕನಸೂ ಹೌದು, ಕಲ್ಪನೆಯೂ ಹೌದು ಶಕುಂತಲೆ. ಇಂಥ ಭಾವನೆಗಳಿಂದಲೇ ನಾವು ಕಟ್ಟುವುದು ಮುಂದಿನ ಬಾಳಿನ ಅಂದದ ಮನೆ. ಇಂದು ನಾವು ಕಟ್ಟಿದ ಈ ಕನಸುಗಳ ಜೊತೆಗೆ ನಾಳೆ ಇಬ್ಬರೂ ಕಾಣುವ ಕನಸುಗಳು ಕೂಡಿ ಬದುಕಿನಲಿ ಬೀಸುವುದು ಸುಖದ ತಂಗಾಳಿ. ಎದೆಯ ಹಾಡುತಿದೆ ನಲ್ಲೆ ಶಕುಂತಲೆ, 'ನಮ್ಮ ಪುಣ್ಯವೇ ಪ್ರೇಮದಲಿ ಪಲ್ಲವಿಸಿ, ನಮ್ಮಿಬ್ಬರನು ಹೀಗೆ ಒಂದು ಗೂಡಿಸಿತೋ ಸಮರಸದ ಸಮ ಜೀವನಕೆ.'
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications