Get Updates
Get notified of breaking news, exclusive insights, and must-see stories!

ಜಾನಪದ ಕಲಾವಿದರ ಬದುಕಿಗೆ ಭಿಕ್ಷಾಟನೆಯೇ ಅಂತಿಮವೇ?

'ಏನಿಮಿಷಾನಿಕಿ ಏಮಿ ಜರುಗುನೋ ಎವರೂಹಿಂಚೆದದೋ, ಭಲೆ ಮಂಚಿ ರೋಜು ಪಸಂದೈನ ರೋಜು...' ಹಾಡು ಕಿವಿಗೆ ಬಿದ್ದಾಗ ಯಾರಪ್ಪಾ ಈ ಕೊರೊನಾ ದರ್ಬಾರಿನ ದಿನಗಳಲ್ಲಿ ಹಾಡಲು ಬಂದಿರುವುದೆಂದು ಕುತೂಹಲದಿಂದ ಹೆಜ್ಜೆ ಹಾಕಿದಾಗ, ಶ್ರೀನಿವಾಸಪುರದ ರಾಮಕೃಷ್ಣ ರಸ್ತೆಯ ಟೀ ಅಂಗಡಿಯ ಮುಂದೆ ಇಬ್ಬರು ತಬಲ, ಹಾರ್ಮಣಿಯೊಂದಿಗೆ ಹಾಡುತ್ತಿದ್ದರು. ಧ್ವನಿ ಭಿಕ್ಷುಕರ ಧ್ವನಿಯಂತೆ ಒಡಕೊಡಕಾಗಿರಲಿಲ್ಲ. ನನ್ನ ಅನುಭವದಂತೆ ಅವರು ಬಿದಿಭಾಗವತರೋ, ತೊಗಲು ಗೊಂಬೆಯವರೋ, ದಬ್ಬ ಬೈಸ್ಕೋಪಿನವರ ಮನೆತನದವರೋ, ಜಾನಪದ ರೂಕಗಳನ್ನು ಹಾಡುತ್ತಿದ್ದವರೋ ಆಗಿರಬೇಕೆಂದು, ಅವರಿಗೆ ಟೀ ಕುಡಿಸಿ ಪರಿಚಯಮಾಡಿಕೊಂಡು ಮಾತಿಗೆಳೆದೆ. ಅವರು ಪಾವಗಡದಿಂದ ಹಾಡುತ್ತ ಊರಿಂದೂರಿಗೆ ಬಂದ ತೊಗಲುಗೊಂಬೆ ಕಲಾವಿದರಾಗಿದ್ದರು.

ಅವರ ಹಿರಿಯರು ಕೋಲಾರ ಜಿಲ್ಲೆಯಲ್ಲಿದ್ದು, ಆಟ ಸಿಗದೆ ಪಾವಗಡಕ್ಕೆ ಹೋಗಿ ನೆಲೆಸಿದ್ದರು. ಸಂಬಂಧಿಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೊಮ್ಮಲಾಟಪುರ, ಗುಡಿಬಂದೆ, ಆಂಧ್ರದ ಅನಂತಪುರಂನ ಲೇಪಾಕ್ಷಿ, ನಿಮ್ಮಲಕುಂಟದಲ್ಲಿದ್ದಾರೆ. ಗೌನಿಪಲ್ಲಿಯಲ್ಲಿ ಮಾರಪ್ಪನವರ ಮರಣದ ನಂತರ ಒಂದೂ ಕುಟುಂಬವಿಲ್ಲ.

ಬೊಮ್ಮಲಾಟಪುರದ ಶಂಕರಪ್ಪ - ಆಂಜಮ್ಮ (ಎಲ್.ಬಸವರಾಜು ಪ್ರತಿಷ್ಠಾನ (2016) ಪ್ರಶಸ್ತಿ ಪಡೆದಾಕೆ), ಶ್ರೀನಿವಾಸ - ಸುಮಲತಾ ಮತ್ತು ನಾಕಾರು ಕುಟುಂಬಗಳು ಸಂಕ್ರಾಂತಿ ಮುಗಿದೊಡನೆ ತೊಗಲು ಗೊಂಬೆಗಳನ್ನು ಹೊತ್ತು ಶ್ರೀನಿವಾಸಪುರ ತಾಲೂಕಿನ ಹಳ್ಳಿಗಳಲ್ಲಿ ಪ್ರದರ್ಶನಕ್ಕಾಗಿ ತಿರುಗಾಡುವುದುಂಟು. ಅದೃಷ್ಟವಿದ್ದು ಆಟ ಕೊಟ್ಟಲ್ಲಿ ಪ್ರದರ್ಶನ, ಬೆಳಿಗ್ಗೆ ಮನೆಗಳ ಮುಂದೆ ದವಸಾಟನೆ. ಇವರ ಹಾಗು ಪಾವಗಡದಿಂದ ಬಂದಿದ್ದವರ ಕ್ರಿಯೆಯಲ್ಲಿ ಯಾವ ವ್ಯತ್ಯಾಸವೂ ಇರದು.

Our So Many Artists In Villages Begging To Lead Their Life

ಪಾವಗಡದಿಂದ ಬಂದ ಬೊಮ್ಮಲಾಟಲ ಜಗದೀಶ, ಮುತ್ಯಲುರು 'ಪೆದ್ದ ಬಾಲಶಿಕ್ಷ' ಓದಿಕೊಂಡವರು ಕುಲವೃತ್ತಿಯನ್ನು ಕೈ ಹಿಡಿದು ಕಲೆಯೊಂದಿಗೆ ಬಡತನವನ್ನು ಹೊದ್ದವರು. 'ಮೇಮು ಇಕ್ಕಡಿ ತಳಾದಾರ್ಲು' (ನಾವು ಇಲ್ಲಿನ ಸ್ಥಳೀಕರು)' ಅದಕ್ಕಾಗಿಯೇ ಬರುತ್ತೇವೆ ಎನ್ನುವ ಇವರು ಇಲ್ಲಿ ಅಲೆದಾಡಿದಷ್ಟು ದಿನ ಹಾಡುತ್ತ ಭಿಕ್ಷೆ ಬೇಡುತ್ತಾರೆ. ಮಳೆಗಾಲದ ಹೊತ್ತಿಗೆ ಊರು ಸೇರಿಕೊಳ್ಳುತ್ತಾರೆ. ಇವರಲ್ಲಿ ಅನೇಕರು ಇಂದಿಗೂ ಮನೆಮಾರು ಇಲ್ಲದವರು.
Our So Many Artists In Villages Begging To Lead Their Life

ಇವರಂತೆ ಹಾಡಿ ತಿರುಪೆ ಪಡೆಯುವವರು ಮದನಪಲ್ಲೆ, ಕೃಷ್ಣಗಿರಿ, ಹೊಸೂರು, ಬೇರಿಕಿ ಕಡೆಗಳಿಂದಲೂ ಬರುತ್ತಾರೆ. ಇವರು ಹೆಚ್ಚಿಗೆ ಹಾಡುವುದು ಘಂಟಸಾಲ ಅವರ ಹಾಡುಗಳನ್ನು. ಇವರು, ಬಹುಮಂದಿ ಭಿಕ್ಷುಕರು ಘಂಟಸಾಲರನ್ನು 'ಪಾಟಲ ದೇವುಡು' ಎಂದು ಭಕ್ತಿ ಗೌರವದಿಂದ ಸ್ಮರಿಸುತ್ತಾರೆ. ಹೆಂಗಸರು ಜೊತೆಗಿದ್ದರೆ ಘಂಟಸಾಲ- ಪಿ.ಸುಶೀಲ ಅವರ ಹಾಡುಗಳನ್ನೇ ಹಾಡುವುದು. ಇಂಥವರೂ ಸುಲಭವಾಗಿ ಹಾಡುವಂತಹ ನೂರಾರು ಹಾಡುಗಳನ್ನು ಅವರು ಹಾಡಿರುವುದರಿಂದಲೇ ಅವರು ಇವರಿಗೆ ದಶಕಗಳಿಂದ 'ಪಾಟಲ ದೇವುಡು' ಆಗಿ ಜೀವಂತವಾಗಿದ್ದಾರೆ.
Our So Many Artists In Villages Begging To Lead Their Life

ಘಂಟಸಾಲ ಇಂತಹವರಿಗೆ, ತಿರುಪೆಯವರಿಗೆ ಹಾಡುಗಳನ್ನು ಕೊಟ್ಟು ಋಣ ತೀರಿಸಿಕೊಂಡರು. ಆದರೆ ನಾವು ಇವರನ್ನು ಭಿಕ್ಷೆಗೆ ಬಿಟ್ಟು, ಆಟ ಪ್ರದರ್ಶಿಸುವ ಅವಕಾಶಗಳನ್ನೂ ಕುಗ್ಗಿಸುತ್ತ ಭಿಕ್ಷಕ ಬದುಕಿಗೆ ದೂಡುತ್ತಿದ್ದೇವೆ. ಇಂತಹ ಕಲಾವಿದರ ಬದುಕಿಗೆ ಭಿಕ್ಷಾಟನೆಯೇ ಅಂತಿಮವೇ? ಎಂಬ ಪ್ರಶ್ನೆಯ ಉತ್ತರವನ್ನು ಮುಂದೂಡುತ್ತಲೇ ಇದ್ದೇವೆ. ಜಾನಪದದ ಹೆಸರಿನ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ವೈಭವಗಳನ್ನು ಇಂತಹ ಜಾನಪದ ಕಲಾವಿದರ ದೀನ ಬದುಕುಗಳು ಬೀದಿ ಬೀದಿಗಳಲ್ಲಿ ಅಣಕಿಸುತ್ತಿವೆ.
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+