ಮೈ ವೀಣೆಯಲಿ ಕಂಪನ, ಜೇನ ತುಟಿಗೆ ದುಂಬಿ ಚುಂಬನ
ಮುಳುಗು ಸೂರ್ಯಕಾಂತಿ ತಂಗಾಳಿಯೊಡಗೂಡಿ ತಂಪಾಗಿ ಹಾಡಿತು ಯುಗಳಗೀತೆ. ಅಂಗಳದ ಮರುಗ, ಕೀಳುವ ಕೈಗಳಿಗೆ ಸಿಗದೆ, ಮರದ ಕೊಂಬೆಗಳ ಕೊನೆಗಳಲಿ ಅರಳಿ ಉಳಿದ ಸಂಪಿಗೆ, ಯಾರ ಮನೆ ತೋಟದ ಸೇವಂತಿಗೆಯೋ ಗಮಲಿನ ಅಮಲಿನ ಶೃಂಗಾರದ ವೃಂದಗಾನ ಮಾಡಿ ಸ್ವಾಗತಿಸಿದವು ಇರುಳ. ಅದು ಶ್ರಾವಣದ ಮೊದಲ ರಾತ್ರಿ. ವಿರಹ ಮಾಸದಲಿ ಅಗಲಿದ್ದ ದಂಪತಿಗಳ ಮಿಲನದ ರಾತ್ರಿ. ಒಲಿದ ಜೀವಗಳ ಮನದಲ್ಲಿ ಸಂಲಗ್ನ ರತಿ ಮದನ ನರ್ತನ ಕೇಳಿ.
ಅಪ್ಪುಗೆಗೆ ಅಪ್ಪುಗೆ, ಮುತ್ತಿಗೆ ಮುತ್ತು, ಆಲಿಂಗನಕೆ ಆಲಿಂಗನ, ಬಿಸಿಯುಸಿರಿಗೆ ಬಿಸಿಯುಸಿರು, ಮೈ ಬೆವರಿಸೆನೆಂದು ಸುಳಿದು ಬಂದ ತಂಗಾಳಿಗೆ ಸೋಲು. ಕಚಗುಳಿಯಿಟ್ಟು ಕುಲುಕಿಸಬೇಡ. ನಲುಗೀತು ಮುಡಿದ ಕನಕಾಂಬರ, ಉದುರಿ ಬಾಡೀತು ನಿತ್ಯಮಲ್ಲಿಗೆ ಎಂದು ಕೋಣೆಯ ಮಂದಕಾಂತಿ ಹೇಳುತ್ತಿದ್ದರೂ ಕೇಳಿಸಿಕೊಳ್ಳದು ಕಿವಿ.
ಅದು ಎಂತಹ ಮೋಹವೋ, ಎಂಥ ಅಮಲೋ ಕಾಣೆ. ಥಟ್ಟನೆ ಆವರಿಸಿದ ಮೈಮರೆವು. ಓರೆ ನೋಟದ ಕೆಣಕು, ಕರೆವ ತುಟಿ ಕೆಂಪು. ಬಳಿ ಸಾರೆ ಪರಚುವ ಹೆದರಿಕೆ ತರುವ ಚಿಗುರು ಉಗುರಿನ ಮೊನಚು. ಅದನ್ನೂ ಮೀರಿ ಸೆಳೆವ ಗೋರಂಟಿ ರಂಗು. ಕಾಡಿಗೆ ಕತ್ತಲಲ್ಲಿ ಹೊಳೆವ ಬಟ್ಟಲಗಣ್ಣ ಮಿಟುಕು ಕರೆ. ಗಗನ ನಡುವಿನ ನಿತ್ಯಪುಷ್ಪ ಹೊಮ್ಮಿಸುವ ಕಾಂತಿ. ರತಿ ಕಾತರದಲ್ಲಿ ಹಣೆ ಮೇಲೆ ನಿಂತ ಹನಿ ಮುತ್ತುಗಳ ಸಾಲು.

ಮೊದಲು ಹೂ ಬಾಣ ಹೂಡಿ ಕಾಡಿದ ಮದನ ಮನ ಹೊಕ್ಕು ಹಾಡಿದಾಗ ರತಿಗಾನ, ಮೈ ವೀಣೆಯಲಿ ಕಂಪನ. ಜೇನ ತುಟಿಗೆ ದುಂಬಿ ಚುಂಬನ. ರತಿ ಹಾಡಿದಳು:
ಮದನ ಮಾರ ಪರಿಮಳ ವದನ ರತಿ ಕೇಳಿ ಸದನ
ಬಾ ಬಾರ ಕಾದಿದೆ ಬಾಹು ತೋರಣ
ಮೂಗುತಿಯ ಮುತ್ತು ಹೊಳೆದಿದೆ
ಅದುರುವ ಕೆಂದುಟಿಯ ಮೇಲೆ
ಹರಿದರೆ ತಡವೆಂದು ನುಗ್ಗಿ, ಧುಮುಕಿ, ಉಕ್ಕಿ ಪ್ರವಾಹವಾದ ಸುಖನದಿ. 'ಹಾ! .....' ಎಷ್ಟೋ ದಿನಗಳ ತನು ಮನದ ತಾಪ ಪ್ರವಾಹದಲಿ ಕೊಚ್ಚಿ ಕೊಚ್ಚಿ ಕೊಚ್ಚಿ ಹೋದಾಗ ಬೆವರ ಹನಿಮುತ್ತುಗಳಲ್ಲಿ ಬಾನ ಚುಕ್ಕಿಗಳು ಹೊಳೆದವು.
ಮಂಚದಲಿ ಚಂದ್ರರಶ್ಮಿ ಸೋಕಿದ ನೈದಿಲೆ. ದಣಿದು ಎದೆಯ ಮೇಲೆ ತಲೆಯಿಟ್ಟ ಕೃಷ್ಣನ ಕಿವಿಯಲ್ಲಿ ಏನೋ ಪಿಸುಗುಟ್ಟಿ ನಗುವಳು ಸತ್ಯಭಾಮೆ.
ಕೃಷ್ಣ ಹೇಳುವ, "ಸತ್ಯಾ, ಹಣೆಯ ಸಿಂಗರಿಸಿರುವ ಸಾಲು ಮುತ್ತುಗಳ ಮುಂಗುರುಳು ಒಡೆಯುವ ಮೊದಲು ಆರಿಸಿಕೊಳ್ಳಬೇಕು ನಾನು. ಆದರೆ ಹೇಗೆಂದು ತಿಳಿಯದು. ಹೇಳು ನೀನು". ಅನುರಾಗದ ಸುಖದ ಶ್ರುತಿಯಲ್ಲಿ ಹೇಳಿದಳು ಸತ್ಯಭಾಮೆ, "ನಿನ್ನ ತುಟಿಗಳಿಗೆ ಹೇಳಿಬಿಡು."
ವಸಂತನ ಅಪ್ಪುಗೆಯಲ್ಲಿ ಶಕುಂತಲೆ, ಅವಳ ತೆಕ್ಕೆಯಲ್ಲಿ ವಸಂತ. ಕೂಡಿ ಹಾಡಿದ ಮೋಹನ ರಾಗಕ್ಕೆ ರಾತ್ರಿ ರಾಣಿ ಅರಳಿ ಪರಿಮಳಿಸಿದಳು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications