Get Updates
Get notified of breaking news, exclusive insights, and must-see stories!

ಸ ರಘುನಾಥ ಅಂಕಣ; ಜಗ್ಗುನಕ ಜಗ್ಗುರೇ ಜಣಕು ನಕ ಜಣಾರೇ...

ಹುಣ್ಣಿಮೆ ದಿನ ರಾತ್ರಿ ಒಂಬತ್ತಕ್ಕೆ ಭಜನೆ. ಗೋಪಾಲಸ್ವಾಮಿ ಗುಡಿಯ ಮುಂದೆ ಊರಿನ ಜನ. ಸಿದ್ಧಪ್ಪ ಸಂಜೆಯೇ ಬಂದು ಬೀರಣ್ಣನ ಮನೆಯಲ್ಲಿ ಕುಳಿತಿದ್ದ. ಅವನ ಊರಿನದೂ ಕೆರೆ ಹೂಳಿನ ಸಮಸ್ಯೆ. ಇಲ್ಲಿ ಏನಾಗುವುದೊ ತಿಳಿದು, ತನ್ನ ಊರಿನಲ್ಲೂ ಮಾಡಿಸುವ ಮನಸ್ಸು ಅವನದು.

ಊಟ ಮುಗಿದ ಜನ ಗುಡಿಯತ್ತ ಹೆಜ್ಜೆ ಹಾಕಿದರು. ತಬಲ ಮುಂದಿಟ್ಟು ಮೋಟಪ್ಪ ಕುಳಿತಿದ್ದರೆ, ನರಸಿಂಗರಾಯನ ಬದಲಿಗೆ ಅಪ್ಪಯ್ಯ ಹಾರ್ಮೋನಿಯಂ ಹಿಡಿದಿದ್ದ. ತಲಕಾಯಿ ರಾಮಣ್ಣನ ಕೈಲಿ ಕೊಳಲಿತ್ತು. ಭಜನೆಯವರು ಅಣಿಯಾಗಿ ಕುಳಿತು ಸೂಚನೆಗಾಗಿ ಕಾಯುತ್ತಿದ್ದರು. ನರಸಿಂಗರಾಯ ಅವರಿಗೆ ಏನೋ ಹೇಳುತ್ತಿದ್ದ. ಅವರು ಆಯ್ತು ಅನ್ನುವಂತೆ ತಲೆಯಾಡಿಸುತ್ತಿದ್ದರು. ಅವರ ಬಳಿಯಿಂದ ಬಂದು ಸಭಿಕರ ಮುಂದೆ ನಿಂತ ನರಸಿಂಗರಾಯ, ಶ್ರೀಮದ್ರಮಾರಮಣ ಗೋವಿದಾ ಹರೇ ಅಂದ.

ಜನ ಜೈ ಹರಹರ ಮಹಾದೇವ ಅಂದರು. ಕೂಡಲೆ ಅವನು 'ಹೆಹ್ಹೆಹೇ ಹಯ್ಯ' ಎಂದು ಕೂಗಿದ್ದೆ ತಡ ಬಿಳಿವಸ್ತ್ರಧಾರಿಗಳಾದ ಹನ್ನೆರಡು ಮಕ್ಕಳು 'ಜೈರೇ ಜೈಜೈರೇ ಹಹ್ಹಹಾ ತಾಂ ತದಿಕಿಟ ತಾಂ' ಎಂದು ಕೆರೆಗೆ ಬರುವ ಕೊಕ್ಕರೆಗಳಂತೆ ಜನರ ಮಧ್ಯದಿಂದೆದ್ದು ನರಸಿಂಗರಾಯನ್ನು ಸುತ್ತುವರೆದರು. ಅವನ ಮೂರನೇ ಶಿಳ್ಳಿಗೆ ಮಕ್ಕಳು ಲಯಬದ್ಧವಾಗಿ ಚಪ್ಪಾಳೆ ಇಕ್ಕುತ್ತ, ಗೆಜ್ಜೆ ಕಾಲುಗಳನ್ನು ಕುಣಿಸುತ್ತ ಅವನ ಸುತ್ತ ಸುತ್ತತೊಡಗಿರು. ಆಹ್ಹ ಆಹ್ಹ ಹೈಯ್ಯ ಹೈಯ್ಯ ಆಹ ಚಲ್ ಚಲ್ ಎಂದು ಚಕ್ಕಭಜನೆ ಧಾಟಿಯಲ್ಲಿ ಉಲಿದ. ಮಕ್ಕಳು ಹಾಡನ್ನು ಎತ್ತಿಕೊಂಡರು.

Villagers Decided To Remove Silt From Lake By Themselves

ತಿಳಿದಿರಲಿಲ್ಲ ತಿಳಿದಿರಲಿಲ್ಲ ಸೀತಾರಾಮನಿಗೆ
ಕಟ್ಟುವುದೆಂದು ಸೇತುವೆಯನ್ನು ಲಂಕಾ ಪಟ್ಟಣಕೆ

ವಾನರರೆಲ್ಲ ಕಲ್ಲನು ಹೊತ್ತು ಕಡಲಿಗೆ ಎಸೆದು ಎಸೆದು
ಕಟ್ಟುತ್ತಿರಲು ತೋರುತ ಒಗ್ಗಟ್ಟು ಹೈಯ್ಯ ಆಹಾ ಹೈಯ್ಯ
ಅಳಿಲು ಕಡಲಲಿ ಮುಳುಗಿ ಮರಳಲಿ ಹೊರಳಿ
ಸೇತುವೆ ಮೇಲೆ ಮೈ ಕೊಡವಿ ಕೊಡವಿ ಹೈಯ್ಯ ಹೈಯ್ಯ ಆಹ ಆಹ
ಸುಂದರ ಸೇತುವೆ ಲಂಕೆಯವರೆಗೆ ತದ್ದಿಕ್ಕು ತಾಂ ಥೈ ಧಿಮಕಿ ಧಿಮಕಿ

ಮುರಳಿಕೃಷ್ಣ ಮುರಳಿಯನೂದಲು ಗೊಲ್ಲರ ಹಿಂಡೇ ಧಾವಿಸಿ ಬಂದಿತು
ಕಡಲಿನ ನಡೆವೆ ದ್ವಾರಕೆ ಎದ್ದಿತು ತಾತಾ ತದಿಕಿಟ ತದಿಕಿಟ ತೋಂ
ನಾಲ್ವಡಿ ಒಡೆಯ ವಿಶ್ವೇಶ್ವರಯ್ಯ ಕಟ್ಟದೆ ಬಿಟ್ಟರೆ ಕಷ್ಟ ಎಂದು
ನಾಡೇ ಮೆಚ್ಚಿದ ಕನ್ನಂಬಾಡಿ ಹರಹರ ಎಂದು ಹೈಯ್ಯ ಹಯ್ಯ
ಕಡಿಮೆಯೆ ನಾವು ಊರಿನ ಜನರು ಮನೆಗೊಂದಾಳು
ಇರುವುದೆ ಕೆರೆಯಲಿ ಕುಳಿತಾ ಹೂಳು ಹೇಳ್ ಹೇಳ್ ಏಳ್ ಏಳ್ ಹೈಯ್ಯ ಹೈಯ್ಯ
ಮುನಿನಾರಾಯಣಿ ಹಾಕೊ ಹಲಗೆ
ಜಗ್ಗುನಕ ಜಗ್ಗುರೇ ಜಣಕು ನಕ ಜಣಾರೇ

ಮುನಿನಾರಾಯಣಿಯೊಂದಿಗೆ ನರಸಿಂಗರಾಯ, ಮಕ್ಕಳು ಕುಣಿದದ್ದೇ ಕುಣಿದದ್ದು. ಭಜನೆಯ ಗುರು ರಾಮಾಂಜನಿ ಪೀಪಿಯೂದಿದ. ಕುಣಿತ ನಿಂತಿತು. 'ಗಜಾನನ ಓಂ ಗಜಾನನ, ಪಾರ್ವತಿ ತನಯ ಗಜಾನನ' ಪ್ರಾರ್ಥನೆಯೊಂದಿಗೆ ಶುರುವಾದ ಭಜನೆ ನಿಂತಾಗ ರಾತ್ರಿ ಹನ್ನೆರಡು ಗಂಟೆ.

ಸಿದ್ಧಪ್ಪ ಹೂಳೆತ್ತುವ ಮಾತಿಗೆ ಬಂದ. ನಿಮ್ಮೂರನ್ನು ನೋಡಿಕೊಂಡು ನಮ್ಮೂರಿನಲ್ಲಿ ಜನ ಮುಂದಾಗೋರಿದ್ದಾರೆ. ನೀವು ಏನು ಮಾಡೋರಿದ್ದೀರಿ? ಎಂದು ಪ್ರಶ್ನಿಸಿದ. ನಾವು ಮನೆಗೊಂದಾಳು ಸಿದ್ಧ ಎಂದ ಬೀರಣ್ಣ. ಆಗಲೆ ತಕರಾರಿನ ಧ್ವನಿ ಕೇಳಿಸಿತು. 'ಜಮೀನು ಇರೋರ್ಗೆ ಇದರಿಂದ ಅನುಕೂಲ, ಲಾಭ. ಕೂಲಿ ಮಾಡೋರಿಗೆ ಏನು ಬರುತ್ತೆ?' ಕೆರೇಲಿ ನೀರಿದ್ರೆ ನಿಮಗೆಲ್ಲ ಕೆಲಸ ಸಿಗೊಲ್ವ ಅಂದ ಮುನೆಂಕಟೇಗೌಡ. ಅದು ಇಲ್ಲ ಅನ್ನೊಲ್ಲ.

ಒಂದು ವಾರ ಹೂಳೆತ್ತಬೇಕಾಗುತ್ತೆ ಅಂತೀರ. ಕೂಲಿ ಮಾಡಿ ದಿನ ಕಳೆಯೋರಿಗಿದಾಗುತ್ತ? ಅನ್ನೋ ಮಾತು ಬಂದಿತು. ಇದನ್ನು ದುಗ್ಗಪ್ಪನಾದಿಯಾಗಿ ಕೆಲವರು ನಿರೀಕ್ಷಿಸಿದ್ದರು. ಉತ್ತರವೂ ಸಿದ್ಧವಿತ್ತು. ಅಂಥವರಿಗೆ ದವಸ ಕೊಡೋದು ಅಂತಾಗಿದೆ ಅಂದ ದುಗ್ಗಪ್ಪ. ಇದಕ್ಕೆ ಆಕ್ಷೇಪಣೆಗಳೆಲ್ಲ ಅಡಗಿದವು.

ತೂಬಿನಿಂದ ಹಿಂದಕ್ಕೆ ಹದಿನೈದಡಿ ತನಕ ಮೂರಡಿ ಆಳಕ್ಕೆ ಹೂಳೆತ್ತೋದು. ಅಲ್ಲಿಂದ ಮುಂದಕ್ಕೆ ಎರಡಡಿ ಎತ್ತಿದರೆ ಸಾಕು. ಬೇಕಿದ್ದವರು ಮಣ್ಣನ್ನು ಹೊಲಗದ್ದೆಗಳಿಗೆ ಹೊಡೆದುಕೊಳ್ಳಬಹುದು. ಉಳಿದ ಮಣ್ಣನ್ನು ರಸ್ತೆಯ ಹಳ್ಳಗಳಿಗೆ, ಕಟ್ಟೆಗೆ ಹಾಕೋದು ಎಂಬ ತೀರ್ಮಾನಕ್ಕೆ ಎಲ್ಲರು ಸಮ್ಮತವಾಗಿ ಹೋ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+