ಬಾಯಿಲ್ಲಿ ಸಂಭವಿಸುವವರು ಯಾರು?

ಆನಂತರದ ಹಾಡು 'ಇಳಿದು ಬಾ ತಾಯೆ ಇಳಿದು ಬಾ' ಹಾಡುತ್ತಿದ್ದರೆ ಗಂಗೆ ಧರೆಗಿಳಿದು ಬರಲೇಬೇಕು. ಎಂಡ ಎಂಬ ಶಬ್ದ ಕೇಳಿದರೆ ಇರಿಸುಮುರುಸು ಪಟ್ಟುಕೊಳ್ಳುವ ರಸಿಕ ವರ್ಗಕ್ಕೆ ಅಂಬಿಕಾತನಯದತ್ತರ ಗೀತೆ ಆಲಿಸಿದ ನಂತರವೇ ಎಂಡದ ಮೈಲಿಗೆಯಿಂದ ಮುಕ್ತಿ.
ರಾಯರು ಕಾಲವಾದನಂತರ ಆ ಸ್ಥಾನವನ್ನು ತುಂಬಿದವರು ಮೈಸೂರು ಅನಂತಸ್ವಾಮಿಗಳು. ರತ್ನನ ಪದಗಳಿಗೆ ಜೀವ ಮತ್ತು ಜೀವಾತ್ಮ ತುಂಬಿದ ಗಾಯಕರು ಅವರು. ಹಾರ್ಮೋನಿಯಂ ನುಡಿಸುತ್ತಾ ಎದೆ ತುಂಬಿ ಹಾಡುತ್ತಿರುವ ಸ್ವಾಮಿಗಳ ಚಿತ್ರ ನಮ್ಮ ಕಣ್ಣುಂದೆ ಹಾಗೇ ಇರುತ್ತದೆ. ರಾಜು ಅನಂತಸ್ವಾಮಿಯವರು ಖಾಲಿಯಾದ ತಂದೆಯ ಸ್ಥಾನವನ್ನು ಇನ್ನೇನು ತುಂಬಿದರು ಎನ್ನುವಾಗಲೇ ಮದಿರೆಯ ಪಾಲಾಗಿದ್ದು ವಿಧಿ ನಿಯಾಮಕ.
ಕನ್ನಡದ ಪದ್ಯಗಳಿಗೆ ರಾಗ ಮಾಧುರ್ಯ ಬೆರೆಸುವ ಅನೇಕ ಸುಗಮ ಸಂಗೀತ ಗಾಯಕ ಗಾಯಕಿಯರು ನಮ್ಮೊಡನಿದ್ದಾರೆ. ಆದರೆ ಸಮಕಾಲೀನ ಸಂದರ್ಭದಲ್ಲಿ ಅವರ್ಯಾರೂ ಅಶ್ವಥ್ ಅವರು ಏರಿದ ಎತ್ತರಕ್ಕೆ ಏರಲಿಲ್ಲ. ಅದಕ್ಕೆ ಕಾರಣಗಳು ಕನಿಷ್ಠ ಮೂರು. ಶಿಶುನಾಳಾಧೀಶರನ್ನು ಅವರು ಕನ್ನಡಿಗರ ಮನೆಗೆ ಕರೆತಂದದ್ದು, ಇನ್ನೊಂದು ಉಳುವ ಯೋಗಿಯ ರೇರೇರೇ ರಾ ಕಂಚಿನ ಕಂಠ. ಮತ್ತೊಂದು ಅಶ್ವಥ್ ಅವರು ತಮಗೆ ತಾವೇ ಕೊಟ್ಟುಕೊಂಡ ನೆಗೆಟಿವ್ ಟಚ್.
ಅವರ ಹಾಡುಗಳನ್ನು ಜನ ಇಷ್ಟಪಟ್ಟು ಕೇಳುತ್ತಿದ್ದರು ನಿಜ, ಆದರೆ ಅವರ ಕೆಲವು ಮಾತುಗಳು, ಕೆಲವು ಸ್ಟೇಟ್ ಮೆಂಟುಗಳು ಚರ್ಚೆಗೆ ವಸ್ತುಗಳಾಗುತ್ತಿದ್ದವು. ಅನೇಕ ವೇಳೆ ಅಶ್ವಥ್ ಅವರು ಖಡಾಖಂಡಿತವಾಗಿ ಮಾತನಾಡುತ್ತಿದ್ದರು. ಅವರ ಮಾತುಗಳಲ್ಲೇ ವೈರುಧ್ಯಗಳೂ ತಾಂಡವವಾಡುತ್ತಿದ್ದವು. ಹಾಗಾಗಿ ಅವರು ಡಿಬೇಟಬಲ್ ಆದರು, ಸುಗಮ ಸಂಗೀತದ ಮಾಳಿಗೆಯಮೇಲೆ ಇನ್ ಎವಿಟಬಲ್ ಆದರು.
ಮುಂದೆ ಇಲ್ಲಿ ಬಾಯಿಲ್ಲಿ ಸಂಭವಿಸುವವರು ಯಾರು?
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications