ಬಾಯಿಲ್ಲಿ ಸಂಭವಿಸುವವರು ಯಾರು?

ಆನಂತರದ ಹಾಡು 'ಇಳಿದು ಬಾ ತಾಯೆ ಇಳಿದು ಬಾ' ಹಾಡುತ್ತಿದ್ದರೆ ಗಂಗೆ ಧರೆಗಿಳಿದು ಬರಲೇಬೇಕು. ಎಂಡ ಎಂಬ ಶಬ್ದ ಕೇಳಿದರೆ ಇರಿಸುಮುರುಸು ಪಟ್ಟುಕೊಳ್ಳುವ ರಸಿಕ ವರ್ಗಕ್ಕೆ ಅಂಬಿಕಾತನಯದತ್ತರ ಗೀತೆ ಆಲಿಸಿದ ನಂತರವೇ ಎಂಡದ ಮೈಲಿಗೆಯಿಂದ ಮುಕ್ತಿ.
ರಾಯರು ಕಾಲವಾದನಂತರ ಆ ಸ್ಥಾನವನ್ನು ತುಂಬಿದವರು ಮೈಸೂರು ಅನಂತಸ್ವಾಮಿಗಳು. ರತ್ನನ ಪದಗಳಿಗೆ ಜೀವ ಮತ್ತು ಜೀವಾತ್ಮ ತುಂಬಿದ ಗಾಯಕರು ಅವರು. ಹಾರ್ಮೋನಿಯಂ ನುಡಿಸುತ್ತಾ ಎದೆ ತುಂಬಿ ಹಾಡುತ್ತಿರುವ ಸ್ವಾಮಿಗಳ ಚಿತ್ರ ನಮ್ಮ ಕಣ್ಣುಂದೆ ಹಾಗೇ ಇರುತ್ತದೆ. ರಾಜು ಅನಂತಸ್ವಾಮಿಯವರು ಖಾಲಿಯಾದ ತಂದೆಯ ಸ್ಥಾನವನ್ನು ಇನ್ನೇನು ತುಂಬಿದರು ಎನ್ನುವಾಗಲೇ ಮದಿರೆಯ ಪಾಲಾಗಿದ್ದು ವಿಧಿ ನಿಯಾಮಕ.
ಕನ್ನಡದ ಪದ್ಯಗಳಿಗೆ ರಾಗ ಮಾಧುರ್ಯ ಬೆರೆಸುವ ಅನೇಕ ಸುಗಮ ಸಂಗೀತ ಗಾಯಕ ಗಾಯಕಿಯರು ನಮ್ಮೊಡನಿದ್ದಾರೆ. ಆದರೆ ಸಮಕಾಲೀನ ಸಂದರ್ಭದಲ್ಲಿ ಅವರ್ಯಾರೂ ಅಶ್ವಥ್ ಅವರು ಏರಿದ ಎತ್ತರಕ್ಕೆ ಏರಲಿಲ್ಲ. ಅದಕ್ಕೆ ಕಾರಣಗಳು ಕನಿಷ್ಠ ಮೂರು. ಶಿಶುನಾಳಾಧೀಶರನ್ನು ಅವರು ಕನ್ನಡಿಗರ ಮನೆಗೆ ಕರೆತಂದದ್ದು, ಇನ್ನೊಂದು ಉಳುವ ಯೋಗಿಯ ರೇರೇರೇ ರಾ ಕಂಚಿನ ಕಂಠ. ಮತ್ತೊಂದು ಅಶ್ವಥ್ ಅವರು ತಮಗೆ ತಾವೇ ಕೊಟ್ಟುಕೊಂಡ ನೆಗೆಟಿವ್ ಟಚ್.
ಅವರ ಹಾಡುಗಳನ್ನು ಜನ ಇಷ್ಟಪಟ್ಟು ಕೇಳುತ್ತಿದ್ದರು ನಿಜ, ಆದರೆ ಅವರ ಕೆಲವು ಮಾತುಗಳು, ಕೆಲವು ಸ್ಟೇಟ್ ಮೆಂಟುಗಳು ಚರ್ಚೆಗೆ ವಸ್ತುಗಳಾಗುತ್ತಿದ್ದವು. ಅನೇಕ ವೇಳೆ ಅಶ್ವಥ್ ಅವರು ಖಡಾಖಂಡಿತವಾಗಿ ಮಾತನಾಡುತ್ತಿದ್ದರು. ಅವರ ಮಾತುಗಳಲ್ಲೇ ವೈರುಧ್ಯಗಳೂ ತಾಂಡವವಾಡುತ್ತಿದ್ದವು. ಹಾಗಾಗಿ ಅವರು ಡಿಬೇಟಬಲ್ ಆದರು, ಸುಗಮ ಸಂಗೀತದ ಮಾಳಿಗೆಯಮೇಲೆ ಇನ್ ಎವಿಟಬಲ್ ಆದರು.
ಮುಂದೆ ಇಲ್ಲಿ ಬಾಯಿಲ್ಲಿ ಸಂಭವಿಸುವವರು ಯಾರು?
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications