ಕೆಂಡಸಂಪಿಗೆ ಬ್ಲಾಗ್ ಪುನರಾರಂಭ

ವ್ಯಾಪಾರಿ ಉದ್ದೇಶವಿಲ್ಲದೆ ಕೇವಲ ಕನ್ನಡ ಬರಹಗಳ ಮಮತೆಯಿಂದ ಆರಂಭವಾದ ಪತ್ರಿಕೆ ಕೆಂಡಸಂಪಿಗೆ. ಅದೇ ಮಮತೆಯಿಂದಾಗಿಯೇ ಪ್ರಕಟಣೆಯನ್ನು ನಿಲ್ಲಿಸಬೇಕಾಗಿ ಬಂದ ಪತ್ರಿಕೆಯೂ ಹೌದು. ಈ ಆನ್ ಲೈನ್ ಪತ್ರಿಕೆಯನ್ನು ಹತ್ತಿರ ಹತ್ತಿರ ಎರಡುವರ್ಷ ನಡೆಸಿದ ಕನ್ನಡಧೀರ, ಉದ್ಯಮಿ ಶಶಿಕಿರಣ್ ಮುಳ್ಳೂರ್. ಅವರಿಗೆ ಮತ್ತು ಲೆಮನ್ ಟ್ರೀ ಮೀಡಿಯಾ ಪ್ರೈವೇಟ್ ಲಿಮಿಟೆಡ್ ತಂಡಕ್ಕೆ ಹೊಸ ವರ್ಷ 2010ರ ಹಾರ್ದಿಕ ಶುಭಾಶಯಗಳು.
ಮೂರು ಕಾಸು ಉತ್ಪತ್ತಿ ಇಲ್ಲದೆ ಕನ್ನಡ ಅಕ್ಷರ ಸೇವೆ ಮಾಡುವ ಶಶಿಕಿರಣ್ ಅವರ ಸಾಹಸ ಮೆಚ್ಚಬೇಕಾ ಬೇಡವಾ ನನಗಂತೂ ತಿಳಿಯದು. ಆದರೆ, ಕೆಂಡಸಂಪಿಗೆ ನಿಂತು ಹೋದದ್ದರಿಂದ ಅನೇಕ ಬರಹಗಾರರಿಗೆ, ಚಾರಣಿಗರಿಗೆ ನಿರಾಶೆ ಆಗಿದ್ದು ಅವರೆಲ್ಲರ ಒತ್ತಾಯದ ಮೇರೆಗೆ ಮತ್ತೆ ಪತ್ರಿಕೆ ಆರಂಭವಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.
ಆನ್ ಲೈನ್ ಪತ್ರಿಕೆಯ ಸಂಪಾದಕ ರಶೀದ್ ಅವರು ಭಾವಜೀವಿ ಮತ್ತು ಅಕ್ಷರ ಜೀವಿ. ಕಥೆ ಕವಿತೆ ಬರೆಯುವುದರಲ್ಲಿ ಪಳಗಿದ ಲೇಖನಿ. ಕೇಂದ್ರ ಸರಕಾರದ ಒಡೆತನದ ಆಕಾಶವಾಣಿ ಮಡಿಕೇರಿ ಕೇಂದ್ರದಲ್ಲಿ ಉದ್ಯೋಗ. ಸೇವಾ ನಿಯಮಗಳ ಪ್ರಕಾರ ಅವರು ಇನ್ನೊಂದು ಲಾಭದಾಯಕ ವೃತ್ತಿಯನ್ನು ಕೈಗೊಳ್ಳುವಂತಿಲ್ಲ. ಸರಕಾರಿ ನೌಕರಿಯ ಸಂಬಳ ಹೊರತುಪಡಿಸಿದರೆ ಕನ್ನಡ ಪತ್ರಿಕೋದ್ಯಮವನ್ನು ವಾಣಿಜ್ಯ ಉದ್ದೇಶಗಳೊಂದಿಗೆ ಸರಿದೂಗಿಸಿ ಪತ್ರಿಕೆ ಸ್ವಾವಲಂಬಿಯನ್ನಾಗಿಸುವ ಕೌಶಲ್ಯವನ್ನು ಅವರು ಪ್ರದರ್ಶಿಸುವಂತಿಲ್ಲ. ಅವರೇ ಒಪ್ಪಿಕೊಳ್ಳುವ ಪ್ರಕಾರ ಆ ವಿದ್ಯೆ ಅವರ ಜಾಯಮಾನಕ್ಕೆ ಒಗ್ಗಿಬರುವುದಿಲ್ಲ.
ಅಂತೂ ಕೆಂಡಸಂಪಿಗೆಯ ಸೆಕೆಂಡ್ ಇನಿಂಗ್ಸ್ ಆರಂಭವಾಗುತ್ತಿದೆ. ಅಕ್ಷರ ಸಮಾರಾಧನೆ ಆಗಲಿ. ಸೋಲು ಗೆಲುವಿನ ಪ್ರಶ್ನೆ ಬೇಕಿಲ್ಲ. ಪಂದ್ಯ ಡ್ರಾ ಆಗುತ್ತದೆಂಬ ಎಣಿಕೆಯಲ್ಲಿ ನಿಮ್ಮ ಇಂಟರ್ನೆಟ್ ವಿಶ್ವಾಸಿ, ಶಾಮ್. [ರಶೀದ್ ಅವರ ಭಾವಚಿತ್ರ ಕೃಪೆ sotosay.wordpress.com/]
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications